ಅಪರಾಧ

ಪತ್ನಿ, ಮಗಳಿಂದಲೇ ರಾಜ್ಯದ ಮಾಜಿ ಪೊಲೀಸ್‌ ಮಹಾನಿರ್ದೇಶಕ ಭೀಕರ ಹತ್ಯೆ

ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ನಿವೃತ್ತ ಪೊಲೀಸ್‌ ಉನ್ನತಾಧಿಕಾರಿಯ ಕೊಲೆ ಬೆಂಗಳೂರು : ರಾಜ್ಯದ ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ (68) ಹತ್ಯೆ ಪ್ರಕರಣ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಹತ್ಯೆ ಸಂಬಂಧ ಅವರ ಪತ್ನಿ ಹಾಗೂ ಮಗಳನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ತನಿಖಾಧಿಕಾರಿಗಳ ಎದುರು ಓಂ ಪ್ರಕಾಶ್ ಪತ್ನಿ ಪಲ್ಲವಿ ಅವರು ಅನೇಕ ಸ್ಫೋಟಕ ಅಂಶಗಳನ್ನು ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪತ್ನಿ ಪಲ್ಲವಿ ಹಾಗೂ ಮಗಳು ಕೃತಿ ಸದ್ಯ ಪೊಲೀಸರ […]

ಪತ್ನಿ, ಮಗಳಿಂದಲೇ ರಾಜ್ಯದ ಮಾಜಿ ಪೊಲೀಸ್‌ ಮಹಾನಿರ್ದೇಶಕ ಭೀಕರ ಹತ್ಯೆ Read More »

ಪುನೀತ್‌ ಕೆರೆಹಳ್ಳಿಯನ್ನು ತಡೆದ ತಿಮರೋಡಿ ಬೆಂಬಲಿಗರ ಮೇಲೆ ಕೇಸ್‌

ಸೋಷಿಯಲ್‌ ಮೀಡಿಯಾದಲ್ಲಿ ನಡೆದ ಜಟಾಪಟಿಯ ಪರಿಣಾಮ ಬೆಳ್ತಂಗಡಿ: ಶನಿವಾರ ರಾಮೋತ್ಸವದಲ್ಲಿ ಭಾಗವಹಿಸಲು ಉಜಿರೆಗೆ ಆಗಮಿಸಿದ್ದ ಹಿಂದು ಪರ ಹೋರಾಟಗಾರ ಪುನೀತ್‌ ಕೆರೆಹಳ್ಳಿ ಅವರನ್ನು ತಡೆದು ನಿಲ್ಲಿಸಿ ವಾಪಸು ಹೋಗಲು ಹೇಳಿದ ಘಟನೆಗೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಉಜಿರೆ ನಿವಾಸಿಗಳಾದ ಅನಿಲ್ ಅಂತರ, ಮನೋಜ್ ಕುಂಜರ್ಪ, ಪ್ರಜ್ವಲ್ ಗೌಡ, ಪ್ರಭಾಕರ, ಗಣೇಶ್ ಹಾಗೂ ಇತರರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯ ಎಸ್‌ಐ ಮುರಳೀಧರ ನಾಯ್ಕ್ ಕೆ.ಜಿ. ಅವರ

ಪುನೀತ್‌ ಕೆರೆಹಳ್ಳಿಯನ್ನು ತಡೆದ ತಿಮರೋಡಿ ಬೆಂಬಲಿಗರ ಮೇಲೆ ಕೇಸ್‌ Read More »

ಅಂಗಡಿ ಶಟರ್ ಮುರಿದು ಕಳ್ಳತನ : ಆರೋಪಿ ಬಂಧನ

ಬಂಟ್ವಾಳ: ಅಂಗಡಿಯ ಶಟರ್ ಮುರಿದು ಒಳನುಗ್ಗಿ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪುದು ಗ್ರಾಮದ ಪರಂಗಿಪೇಟೆಯಲ್ಲಿರುವ ವಿಶ್ವಾಸ ಸಿಟಿ ಸೆಂಟರ್ ನ ವೈಟ್ ಲೈನ್ ಕಿಡ್ಸ್ ವರ್ಲ್ಡ್ ಬಟ್ಟೆ ಅಂಗಡಿಗೆ ದಿನಾಂಕ ಏ. 11ರಂದು ರಾತ್ರಿ ಕಳ್ಳರು ಅಂಗಡಿಯ ಶಟರ್ ಗೆ ಅಳವಡಿಸಿದ ಬೀಗವನ್ನು ಮುರಿದು ಒಳಪ್ರವೇಶಿಸಿ ಕ್ಯಾಶ್ ಕೌಂಟರ್ ನಲ್ಲಿದ್ದ ನಗದನ್ನು ಕಳವುಗೈದ ಘಟನೆ ನಡೆದಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 42/2025

ಅಂಗಡಿ ಶಟರ್ ಮುರಿದು ಕಳ್ಳತನ : ಆರೋಪಿ ಬಂಧನ Read More »

ಮಂಗಳೂರು ಜೋಡಿ ಕೊಲೆ ಪ್ರಕರಣದ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಕಳ್ಳ ಸಾಗಾಟದ ಚಿನ್ನದ ಲಾಭ ಹಂಚಿಕೊಳ್ಳುವ ತಕರಾರಿನ ಹಿನ್ನೆಲೆಯಲ್ಲಿ ಮಾಡಿದ್ದ ಹತ್ಯೆ ಮಂಗಳೂರು: ವಿದೇಶದಿಂದ ಕಳ್ಳ ಮಾರ್ಗದಲ್ಲಿ ತಂದ ಚಿನ್ನದ ಲಾಭವನ್ನು ಹಂಚಿಕೊಳ್ಳುವ ವಿಚಾರದಲ್ಲಿ ಉಂಟಾದ ತಕರಾರಿನ ನಗರದ ಅತ್ತಾವರದಲ್ಲಿ 2014ರಲ್ಲಿ ಸಂಭವಿಸಿದ್ದ ಜೋಡಿ ಕೊಲೆ ಪ್ರಕರಣದ ಮೂವರು ಅಪರಾಧಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೇರಳ ಕಾಸರಗೋಡಿನ ಚೆರ್ಕಳ ಎಂಬಲ್ಲಿನ ಮುಹಜೀರ್ ಸನಾಫ್ (25), ಕಾಸರಗೋಡು ವಿದ್ಯಾನಗರದ ಇರ್ಷಾದ್ (24) ಹಾಗೂ ಸಫ್ವಾನ್ (24)

ಮಂಗಳೂರು ಜೋಡಿ ಕೊಲೆ ಪ್ರಕರಣದ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ Read More »

ಪ್ರತಿಭಟನೆಕಾರರನ್ನು ಸಾಗಿಸಿಲ್ಲ, ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ಸಾಗಿಸಿದ ವೀಡಿಯೊ : ಪೊಲೀಸ್‌ ಕಮಿಷನರ್‌ ಸ್ಪಷ್ಟನೆ

ವಕ್ಫ್‌ ಕಾನೂನು ವಿರುದ್ಧ ನಡೆದ ಪ್ರತಿಭಟನೆ ವೇಳೆ ವೈರಲ್‌ ಆದ ವೀಡಿಯೊ ಮಂಗಳೂರು: ವಕ್ಫ್ ತಿದ್ದುಪಡಿ ಕಾನೂನು ವಿರೋಧಿಸಿ ಮಂಗಳೂರಿನಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ವಾಹನದಲ್ಲೇ ಪ್ರತಿಭಟನೆಕಾರರಿಗೆ ಡ್ರಾಪ್‌ ಕೊಡಲಾಗಿತ್ತು ಎಂಬ ವೀಡಿಯೊ ವೈರಲ್‌ ಆಗಿತ್ತು. ಹೆದ್ದಾರಿ ಬಂದ್ ಮಾಡಿದ ಪ್ರತಿಭಟನೆಕಾರರನ್ನು ಎಸಿಪಿ ವಾಹನದಲ್ಲೇ ಕರೆದೊಯ್ದಿದ್ದಾರೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಆರೋಪಿಸಲಾಗಿತ್ತು. ಆದರೆ ಇದು ಪ್ರತಿಭಟನೆಕಾರರಿಗೆ ಡ್ರಾಪ್‌ ಕೊಟ್ಟದ್ದಲ್ಲ, ಗಾಯಗೊಂಡ ಓರ್ವ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ವೀಡಿಯೊ ಎಂದು ಪೊಲೀಸರು ಸ್ಪಷ್ಟನೆ ಕೊಟ್ಟಿದ್ದಾರೆ. ಕಾರ್ಯಕ್ರಮ

ಪ್ರತಿಭಟನೆಕಾರರನ್ನು ಸಾಗಿಸಿಲ್ಲ, ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ಸಾಗಿಸಿದ ವೀಡಿಯೊ : ಪೊಲೀಸ್‌ ಕಮಿಷನರ್‌ ಸ್ಪಷ್ಟನೆ Read More »

ರಿಕ್ಕಿ ರೈ ಮೇಲೆ ಫೈರಿಂಗ್‌ : ಮಲತಾಯಿ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌

ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾಗಿದ್ದ ರಿಕ್ಕಿ ರೈ ರಾಮನಗರ : ಮುತ್ತಪ್ಪ ರೈಯವರ ಪುತ್ರ ರಿಕ್ಕಿ ರೈ ಮೇಲೆ ನಿನ್ನೆ ಮಧ್ಯರಾತ್ರಿ ರಾಮನಗರ ತಾಲೂಕಿನ ಬಿಡದಿಯ ಅವರ ಮನೆ ಬಳಿ ನಡೆದ ಗುಂಡಿನ ದಾಳಿಗೆ ಸಂಬಂಧಿಸಿ ನಾಲ್ಕು ಮಂದಿಯ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ರಿಕ್ಕಿ ರೈಗೆ ಚಿಕಿತ್ಸೆ ನಡೆಯುತ್ತಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ರಾಮನಗರ ತಾಲೂಕಿನ ಬಿಡದಿ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ. ಘಟನೆ ವೇಳೆ ಚಾಲಕ ಬಸವರಾಜ್​​ ಕಾರು ಚಾಲನೆ

ರಿಕ್ಕಿ ರೈ ಮೇಲೆ ಫೈರಿಂಗ್‌ : ಮಲತಾಯಿ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌ Read More »

ಬಾಂಗ್ಲಾದೇಶದಲ್ಲಿ ಇನ್ನೋರ್ವ ಹಿಂದೂ ಮುಖಂಡನ ಭೀಕರ ಹತ್ಯೆ

ಅಪಹರಿಸಿ ಮನಬಂದಂತೆ ಥಳಿಸಿ ಕೊಂದು ಹಾಕಿದ ದುಷ್ಕರ್ಮಿಗಳು ಢಾಕಾ : ಬಾಂಗ್ಲಾದೇಶದಲ್ಲಿ ಮತ್ತೋರ್ವ ಹಿಂದೂ ನಾಯಕನನ್ನು ಮತಾಂಧರು ಭೀಕರವಾಗಿ ಸಾಯಿಸಿದ್ದಾರೆ. ಬಾಂಗ್ಲಾದೇಶ ಪೂಜಾ ಉದ್ಜಪನ್ ಪರಿಷತ್‌ನ ಬಿರಾಲ್ ಘಟಕದ ಉಪಾಧ್ಯಕ್ಷರಾಗಿದ್ದ ಭಾಬೇಶ್‌ ಚಂದ್ರ ಅವರನ್ನು ನಿನ್ನೆ ಭೀಕರವಾಗಿ ಕೊಲೆ ಮಾಡಲಾಗಿದೆ. ಭಾಬೇಶ್‌ ಚಂದ್ರ ಅವರನ್ನು ದಿನಾಜ್‌ಪುರದ ಬಳಿ ಅಪಹರಿಸಿ, ಮನಬಂದಂತೆ ಥಳಿಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ಧಾರೆ.ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಭಾಬೇಶ್‌ ಚಂದ್ರ ಅವರನ್ನು ಅಪಹರಣ ಮಾಡಿ ಬಿರಾಲ್‌ನಿಂದ ದಿನಾಜ್‌ಪುರ್‌ ಮಾರ್ಗವಾಗಿ ನರಾಬರಿ

ಬಾಂಗ್ಲಾದೇಶದಲ್ಲಿ ಇನ್ನೋರ್ವ ಹಿಂದೂ ಮುಖಂಡನ ಭೀಕರ ಹತ್ಯೆ Read More »

ಆಸ್ತಿ ವಿವಾದದ ಹಿನ್ನೆಲೆಯಲ್ಲಿ ನಡೆಯಿತಾ ರಿಕ್ಕಿ ರೈ ಮೇಲೆ ಫೈರಿಂಗ್‌?

ಮಂಗಳೂರಿನ ವ್ಯಕ್ತಿಯೊಬ್ಬರ ಮೇಲೂ ಇದೆ ಅನುಮಾನದ ನೋಟ ರಾಮನಗರ : ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಿನ್ನೆ ಮಧ್ಯರಾತ್ರಿ ನಡೆದಿದೆ. ಈ ದಾಳಿಯಲ್ಲಿ ರಿಕ್ಕಿ ರೈ ಅವರಿಗೆ ತೀವ್ರ ಗಾಯಗಳಾಗಿದ್ದು, ಅವರೊಂದಿಗಿದ್ದ ಒಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಿಕ್ಕಿ ರೈ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬೆನ್ನಿಗೆ ರಿಕ್ಕಿ ರೈ ಮೇಲೆ ದಾಳಿಯಾಗಲು ಕಾರಣ ಏನು ಎನ್ನುವ

ಆಸ್ತಿ ವಿವಾದದ ಹಿನ್ನೆಲೆಯಲ್ಲಿ ನಡೆಯಿತಾ ರಿಕ್ಕಿ ರೈ ಮೇಲೆ ಫೈರಿಂಗ್‌? Read More »

ನಾಲ್ಕು ಅಂತಸ್ತಿನ ಕಟ್ಟಡ ಕುಸಿತ : ನಾಲ್ವರು ಸಾವು

ನವದೆಹಲಿ: ದೆಹಲಿಯ ಮುಸ್ತಫಾಬಾದ್‌ ಪ್ರದೇಶದಲ್ಲಿ ಇಂದು ನಸುಕಿನ ಜಾವ 4 ಅಂತಸ್ತಿನ ಕಟ್ಟಡ ಕುಸಿದು ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯಲ್ಲಿ 18 ಮಂದಿಯನ್ನು ರಕ್ಷಿಸಲಾಗಿದ್ದು, ಇನ್ನೂ ಕೆಲವರು ಅವಶೇಷಗಳ ಅಡಿ ಸಿಲುಕಿರುವ ಶಂಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈಶಾನ್ಯ ದೆಹಲಿಯ ದಯಾಲ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ಚಾಂದಿನಿ, ದಾನಿಶ್, ರೇಷ್ಮಾ ಮತ್ತು ನವೀದ್ ಎಂದು ಗುರುತಿಸಲಾಗಿದೆ. ಕಟ್ಟಡ ಕುಸಿದಾಗ ಸುಮಾರು 24 ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು ಅವರಲ್ಲಿ 18 ಮಂದಿಯನ್ನ

ನಾಲ್ಕು ಅಂತಸ್ತಿನ ಕಟ್ಟಡ ಕುಸಿತ : ನಾಲ್ವರು ಸಾವು Read More »

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್‌

ರಾಮನಗರ: ಮಾಜಿ ಡಾನ್​​ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿರುವ ಘಟನೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ರಾತ್ರಿ 12.50ರ ಸುಮಾರಿಗೆ 2 ಸುತ್ತಿನ ಗುಂಡಿನ ದಾಳಿ ನಡೆದಿದೆ. ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಲಾಗಿದೆ. ರಿಕ್ಕಿ ರೈ, ಮೂಗು, ಕೈಗೆ ಗುಂಡು ತಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್‌ Read More »

error: Content is protected !!
Scroll to Top