ಅಪರಾಧ

ಬ್ಯಾಂಡ್, ಚೆಂಡೆಯೊಂದಿಗೆ ಬಿಜೆಪಿ ಕಾರ್ಯಕರ್ತನ ಮನೆಗೆ ನುಗ್ಗಿ ದಾಂಧಲೆ | ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಗಡಿಪಾರು ಮಾಡುವಂತೆ ಬಿಜೆಪಿಯಿಂದ ಮನವಿ

ಪುತ್ತೂರು : ಬಿಜೆಪಿ ಕಾರ್ಯಕರ್ತ ಜಯಾನಂದ ಅವರ ಮನೆಗೆ ಅಕ್ರಮ ಪ್ರವೇಶ ಮಾಡಿ ದಾಂಧಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಗಡಿಪಾರು ಮಾಡುವಂತೆ ಪುತ್ತೂರು ಬಿಜೆಪಿ ವತಿಯಿಂದ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಕ್ಷೇತ್ರದ ಶಾಸಕರು ಸುಮಾರು 1400 ಕೋಟಿ ರೂ. ಅನುದಾನವನ್ನು ತಂದು ಅಭಿವೃದ್ಧಿ ಕೆಲಸಗಳು ನಡೆಯುತ್ತಿರುವ ಕುರಿತು ಜಯಾನಂದರು ಇದನ್ನು ಪ್ರಶ್ನಿಸಿ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದರು. ಈ ಹಿನ್ನಲೆಯಲ್ಲಿ ತಂಡವೊಂದು ಅವರ ಮನೆಗೆ ಚೆಂಡೆ, […]

ಬ್ಯಾಂಡ್, ಚೆಂಡೆಯೊಂದಿಗೆ ಬಿಜೆಪಿ ಕಾರ್ಯಕರ್ತನ ಮನೆಗೆ ನುಗ್ಗಿ ದಾಂಧಲೆ | ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಗಡಿಪಾರು ಮಾಡುವಂತೆ ಬಿಜೆಪಿಯಿಂದ ಮನವಿ Read More »

ಸೌಜನ್ಯ ನ್ಯಾಯಕ್ಕಾಗಿ ಪುತ್ತಿಲ ಪರಿವಾರದಿಂದ ಪ್ರತಿಭಟನೆ | ಅರುಣ್ ಕುಮಾರ್ ಸಹಿತ ಪುತ್ತಿಲ ಪರಿವಾರದ ಐದು ಮಂದಿಗೆ ನೋಟೀಸ್ ಜಾರಿ

ಪುತ್ತೂರು: ಪುತ್ತಿಲ ಪರಿವಾರದಿಂದ ಬೆಳ್ತಂಗಡಿ ಸೌಜನ್ಯ ಕೊಲೆ ಪ್ರಕರಣದ ನ್ಯಾಯಕ್ಕಾಗಿ 11 ವರ್ಷಗಳ ಹಿಂದೆ ನಡೆದ ಪ್ರತಿಭಟನೆ ಹಿನ್ನಲೆಯಲ್ಲಿ ಕೇಸು ದಾಖಲಾಗಿದ್ದು, ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಐದು ಮಂದಿಗೆ ನೋಟೀಸ್ ಜಾರಿಯಾಗಿದೆ. 2023 ಆಗಸ್ಟ್ 14 ರಂದು ಪುತ್ತಿಲ ಪರಿವಾರದ ವತಿಯಿಂದ ಸೌಜನ್ಯ ಕೊಲೆ ಪ್ರಕರಣದ ನ್ಯಾಯಕ್ಕಾಗಿ ದರ್ಬೆ ವೃತ್ತದಿಂದ ಬಸ್ ನಿಲ್ದಾಣದ ವರೆಗೆ ಕಾಲ್ನಡಿಗೆ ಜಾಥಾ ನಡೆಸಿ ಪ್ರತಿಭಟನೆ ನಡೆದಿತ್ತು. ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಅರುಣ್ ಕುಮಾರ್

ಸೌಜನ್ಯ ನ್ಯಾಯಕ್ಕಾಗಿ ಪುತ್ತಿಲ ಪರಿವಾರದಿಂದ ಪ್ರತಿಭಟನೆ | ಅರುಣ್ ಕುಮಾರ್ ಸಹಿತ ಪುತ್ತಿಲ ಪರಿವಾರದ ಐದು ಮಂದಿಗೆ ನೋಟೀಸ್ ಜಾರಿ Read More »

ವೀಸಾ ಕೊಡಿಸುವುದಾಗಿ ವಂಚನೆ | ಪ್ರಕರಣ ದಾಖಲು

ಬೆಳ್ತಂಗಡಿ: ಪೋಲಂಡ್ ದೇಶದಲ್ಲಿ ಕೆಲಸ ಕೊಡಿಸುವುದಾಗಿ ವ್ಯಕ್ತಿಯೊಬ್ಬರಿಗೆ ವಂಚಿಸಿದ ಘಟನೆ ನಡೆದಿದೆ. ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ನಿವಾಸಿ ರೆಜಿ ಕೆ.ಎ ಅವರ ಪುತ್ರ ಆಲ್ವಿನ್ ಕೆ.ಆರ್‍. ಅವರಿಗೆ ಮನೋಜ್ ಎಂಬಾತ ವೀಸಾ ಕೊಡುವುದಾಗಿ ವಂಚಿಸಿರುವುದಾಗಿ ತಿಳಿದು ಬಂದಿದೆ. ಆರೋಪಿ ವೀಸಾ ಕೊಡಿಸುವುದಾಗಿ 2023 ಮೇ ತಿಂಗಳಿನಿಂದ 2024 ಮಾ.19 ರ ತನಕ ವಿವಿಧ ಕಾರಣ ನೀಡಿ ಹಂತ ಹಂತವಾಗಿ 2.50 ಲಕ್ಷ ರೂ. ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡು ವೀಸಾ ಕೊಡಿಸದೇ ವಮಚಿಸಿರುವುದಾಗಿ ಧರ್ಮಸ್ಥಳ ಠಾಣೆಗೆ ನೀಡಿದ

ವೀಸಾ ಕೊಡಿಸುವುದಾಗಿ ವಂಚನೆ | ಪ್ರಕರಣ ದಾಖಲು Read More »

ಸಾಮಾಜಿಕ ಜಾಲತಾಣದ ವಿಚಾರದಲ್ಲಿ ಜೀವ ಬೆದರಿಕೆ|ಆರೋಪಿಗಳ ಬಿಡುಗಡೆ ಸರಿಯಲ್ಲ: ಸಂಜೀವ ಮಠಂದೂರು

ಪುತ್ತೂರು: ಶಾಸಕರ ಬೆಂಬಲಿಗರು ಅಕ್ರಮವಾಗಿ ಮನೆ ಅಂಗಳಕ್ಕೆ ಪ್ರವೇಶಿಸಿ ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ  ಪ್ರಕೋಷ್ಟ ಸದಸ್ಯರಾದ ಜಯಾನಂದ ಬಂಗೇರ ರವರ  ಮನೆ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ ಜೀವ ಬೆದರಿಕೆ ಒಡ್ಡಿ ಪುಂಡಾಟಿಗೆ ಮೆರೆದ ಆರೊಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿರುವುದು ಸರಿಯಲ್ಲ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ  ಆರೋಪಿಗಳನ್ನು ದೇಶದಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಆರೋಪಿಗಳನ್ನು ಬಂಧನ ಮಾಡಿ ಯಾವ ಆದರದ ಮೇಲೆ ಬಿಡುಗಡೆಗೊಳಿಸಿದ್ದೀರಿ ಎಂದು ಪುತ್ತೂರು ನಗರ ಠಾಣಾ  ಇನ್ಸ್ಪೆಕ್ಟರ್ ಗೆ

ಸಾಮಾಜಿಕ ಜಾಲತಾಣದ ವಿಚಾರದಲ್ಲಿ ಜೀವ ಬೆದರಿಕೆ|ಆರೋಪಿಗಳ ಬಿಡುಗಡೆ ಸರಿಯಲ್ಲ: ಸಂಜೀವ ಮಠಂದೂರು Read More »

ನೇತ್ರಾವತಿ ನದಿಗೆ ಬಿದ್ದು ಯುವಕ ಮೃತ್ಯು !

ಬಂಟ್ವಾಳ: ನೇತ್ರಾವತಿ ನದಿಗೆ ಬಿದ್ದು ಯುವಕ ಮೃತಪಟ್ಟ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಮಂಜೊಟ್ಟಿ ನಿವಾಸಿ ಲೋಹಿತಾಶ್ವ (30) ಮೃತ ಯುವಕ. ಲೋಹಿತಾಶ್ವ ಅವರು ಕಾರಿನಲ್ಲಿ ಊರಿನ ನಾಲ್ವರು ಸ್ನೇಹಿತರ ಜೊತೆ ಶಂಭೂರಿಗೆ ಬಂದಿದ್ದು, ಸ್ನೇಹಿತರು ಸ್ನಾನ ಮಾಡುವುದಕ್ಕೆ ನೀರಿಗೆ ಇಳಿದಿದ್ದರು, ಆದರೆ ಲೋಹಿತಾಶ್ವ ನದಿ ಕಿನಾರೆಯಲ್ಲೇ ಕುಳಿತ್ತಿದ್ದರು ಎನ್ನಲಾಗಿದೆ. ಆದರೆ ಸ್ನೇಹಿತರು ಸ್ನಾನ ಮುಗಿಸಿ ಬರುವ ವೇಳೆ ಲೋಹಿತಾಶ್ವ ಅವರು ನೀರಿನಲ್ಲಿ ಬಿದ್ದಿದ್ದರು. ನದಿ ಕಿನಾರೆಯಲ್ಲಿ ಕುಳಿತಿದ್ದ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದು

ನೇತ್ರಾವತಿ ನದಿಗೆ ಬಿದ್ದು ಯುವಕ ಮೃತ್ಯು ! Read More »

ಅಂಗನವಾಡಿಗೆ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನುಗ್ಗಿದ ಕಳ್ಳರು | ಅಂಗನವಾಡಿಯಲ್ಲಿ ದಾಸ್ತಾನಿರಿಸಿದ್ದ ಮೊಟ್ಟೆಗಳನ್ನು ಆಮ್ಲೆಟ್ ಮಾಡಿ ತಿಂದು ಕಾಲ್ಕಿತ್ತ ಕಳ್ಳರು

ಪುತ್ತೂರು: ನಗರದ ಕೆಎಸ್‍ ಆರ್‍ ಟಿಸಿ ಬಸ್ ನಿಲ್ದಾಣದ ಬಳಿ ಇರುವ ನೆಲ್ಲಿಕಟ್ಟೆ ಅಂಗನವಾಡಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳ್ಳರು ನುಗ್ಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಂಗನವಾಡಿಯ ಬೀಗ ಒಡೆದು ನುಗ್ಗಿದ ಕಳ್ಳರು ಅಂಗನವಾಡಿಯಲ್ಲಿ ದಾಸ್ತಾನಿರಿಸಿದ್ದ ಸುಮಾರು 25 ಕ್ಕೂ ಅಧಿಕ ಮೊಟ್ಟೆಗಳನ್ನು ಆಮ್ಲೆಟ್ ಮಾಡಿ ತಿಂದು, ಪಾತ್ರೆಗಳನ್ನು ಬೆಂಕಿಯಲ್ಲಿ ಕರಟಿದ್ದಾರೆ. ಬಿಸಿಯೂಟದ ಪಾತ್ರೆಗಳನ್ನು ಕಳವು ಮಾಡಿದ್ದಾರೆ. ಅಲ್ಲದೆ ಟಾಯ್ಲೆಟ್ ಬೇಸಿನ್‍ ಗೆ ಮಣ್ಣು ತುಂಬಿಸಿ ಹೋಗಿದ್ದಾರೆ ಎನ್ನಲಾಗಿದೆ. ಅಷ್ಟಕ್ಕೂ ಬಿಡದ ಕಳ್ಳರು ಪ್ರಾಥಮಿಕ

ಅಂಗನವಾಡಿಗೆ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನುಗ್ಗಿದ ಕಳ್ಳರು | ಅಂಗನವಾಡಿಯಲ್ಲಿ ದಾಸ್ತಾನಿರಿಸಿದ್ದ ಮೊಟ್ಟೆಗಳನ್ನು ಆಮ್ಲೆಟ್ ಮಾಡಿ ತಿಂದು ಕಾಲ್ಕಿತ್ತ ಕಳ್ಳರು Read More »

ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ | ಒಂಭತ್ತು ಮಂದಿ ಪೊಲೀಸರ ವಶಕ್ಕೆ | ಜಾಮೀನಿನ  ಮೇಲೆ ಬಿಡುಗಡೆ

ಪುತ್ತೂರು: ಸಾಮಾಜಿಕ ಜಾಲತಾಣ ವಿಚಾರಕ್ಕೆ ಸಂಬಂಧಿಸಿ ಅಪಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರ ಮನೆ ವಠಾರಕ್ಕೆ ಅಕ್ರಮ ಪ್ರವೇಶ ಮಾಡಿ ಜೀವ ಬೆದರಿಕೆ ಒಡ್ಡಿದ ಘಟನೆ ಸಂಬಂಧಿಸಿದಂತೆ ಒಂಭತ್ತು ಮಂದಿಯನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕಡಬ ತಾಲೂಕಿನ ಪಾತಾಜೆ ನಿವಾಸಿ ಪ್ರಜ್ವಲ್ ರೈ, ವಿಟ್ಲ ಕಂಬಳಬೆಟ್ಟು ನಿವಾಸಿ ಸುಶಾಂತ್ ಶೆಟ್ಟಿ, ಪುತ್ತೂರಿನ ಆರ್ಯಾಪು ನಿವಾಸಿ ಸನತ್ ರೈ, ಬಲ್ನಾಡು ನಿವಾಸಿ ರೋಹಿತ್ ನಾಯ್ಕ್, ಸಾಮೆತಡ್ಕ ನಿವಾಸಿ ಅಖಿಲ್, ಆರ್ಯಾಪು ನಿವಾಸಿ ಕೀರ್ತನ್ ರೈ,

ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ | ಒಂಭತ್ತು ಮಂದಿ ಪೊಲೀಸರ ವಶಕ್ಕೆ | ಜಾಮೀನಿನ  ಮೇಲೆ ಬಿಡುಗಡೆ Read More »

ಸೂಕ್ತ ದಾಖಲೆ ಪತ್ರ ಇಲ್ಲದೆ ಸಾಗಿಸುತ್ತಿದ್ದ 1.32 ಲಕ್ಷ ರೂ. | ವಶಕ್ಕೆ ಪಡೆದ ಚುನಾವಣಾಧಿಕಾರಿಗಳು

ಪುತ್ತೂರು: ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.32 ಲಕ್ಷ ರೂ. ನಗದನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದ ಘಟನೆ ಮಂಗಳೂರು ಹೊರವಲಯದ ಬಡಗ ಎಡಪದವು ಎಂಬಲ್ಲಿ ನಡೆದಿದೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾದ ಕಾರಣ ಅಕ್ರಮ ಹಣ ವಹಿವಾಟಿನ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದ್ದರೂ ಈ ನಡುವೆ ಮಂಗಳೂರು ಹೊರವಲಯದ ಬಡಗ ಎಡಪದವು ಚೆಕ್‍ ಪೋಸ್ಟ್‍  ನಲ್ಲಿ ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದಾಗ ನಗದನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಭಾನುವಾರ ತಡರಾತ್ರಿ ಕೈಕಂಬ ನಿವಾಸಿಯೊಬ್ಬರು ಹುಂಡೈ

ಸೂಕ್ತ ದಾಖಲೆ ಪತ್ರ ಇಲ್ಲದೆ ಸಾಗಿಸುತ್ತಿದ್ದ 1.32 ಲಕ್ಷ ರೂ. | ವಶಕ್ಕೆ ಪಡೆದ ಚುನಾವಣಾಧಿಕಾರಿಗಳು Read More »

ಸಾಮಾಜಿಕ ಜಾಲತಾಣದ ವಿಚಾರ | ಮನೆ ವಠಾರಕ್ಕೆ ಅಕ್ರಮವಾಗಿ ಪ್ರವೇಶಿಸಿ ಜೀವ ಬೆದರಿಕೆ | ಪ್ರಕರಣ ದಾಖಲು

ಪುತ್ತೂರು: ಸಾಮಾಜಿಕ ಜಾಲತಾಣದ ಬರವಣಿಗೆ ವಿಚಾರದಲ್ಲಿ 15 ಅಧಿಕ ಜನರು ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ ಅವಾಚ್ಯವಾಗಿ ನಿಂಧಿಸಿ ಜೀವ ಬೆದರಿಕೆ ಹಾಕಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಜ್ವಲ್ ರೈ, ಸನತ್ ರೈ ಸಹಿತ 15 ಮಂದಿಯ ಮೇಲೆ ಪ್ರಕರಣದಾಖಲಾಗಿದೆ. ಬಿಜೆಪಿ ಸಾಮಾಜಿ ಜಾಲತಾಣ ಪ್ರಕೋಷ್ಠದ ಜಿಲ್ಲಾ ಸದಸ್ಯ ತಾರಿಗುಣ್ಣ ನಿವಾಸಿ ಜಯಾನಂದ ಕೆ. (41) ದೂರು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಬರೆದಿರುವ ಬ್ಯಾನರ್ ಪ್ರದರ್ಶಿಸಿಕೊಂಡು ಚೆಂಡೆಗಳನ್ನು ಜೋರಾಗಿ ಬಡಿಯುತ್ತಾ ಅಕ್ರಮವಾಗಿ

ಸಾಮಾಜಿಕ ಜಾಲತಾಣದ ವಿಚಾರ | ಮನೆ ವಠಾರಕ್ಕೆ ಅಕ್ರಮವಾಗಿ ಪ್ರವೇಶಿಸಿ ಜೀವ ಬೆದರಿಕೆ | ಪ್ರಕರಣ ದಾಖಲು Read More »

ಐದು ಗೋಣಿ ಸುಲಿದ ಅಡಿಕೆ ಕಳವು : ಪ್ರಕರಣ ದಾಖಲು

ಬೆಳ್ಳಾರೆ: ಸುಲಿದು ದಾಸ್ತಾನಿಟ್ಟಿದ್ದ ಐದು ಗೋಣಿ ಅಡಿಕೆ ಕಳವಾದ ಘಟನೆ ಸುಳ್ಯ ತಾಲೂಕಿನ ಕುಳ್ಳಂಪಾಡಿಯಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕಳವು ನಡೆದಿದ್ದು, ಕುಳ್ಳಂಪಾಡಿ ನಿವಾಸಿ ಹಿರಿಯಣ್ಣ ಗೌಡರು ಮೂರು ದಿನಗಳ ಹಿಂದೆ ಕುಟುಂಬ ಸಮೇತ ತನ್ನ ಅಕ್ಕನ ಮನೆಗೆ ಹೋದವರು ಮನೆಗೆ ಬಂದು ನೋಡಿದಾಗ ಸುಲಿದಿಟ್ಟಿದ್ದ ಅಡಿಕೆ ಐದು ಗೋಣಿ ಅಡಿಕೆ ಕಳವಾಗಿರುವುದು ಬೆಳಕಿ ಬಂದಿದೆ. ಕಳವಾದ ಅಡಿಕೆ ಮೌಲ್ಯ ಒಂದು ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಕುರಿತು ಬೆಳ್ಳಾರೆ ಠಾಣೆಗೆ ದೂರು

ಐದು ಗೋಣಿ ಸುಲಿದ ಅಡಿಕೆ ಕಳವು : ಪ್ರಕರಣ ದಾಖಲು Read More »

error: Content is protected !!
Scroll to Top