ಅಪರಾಧ

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ | ಐದನೇ ಆರೋಪಿ ಬಂಧನ

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ಮತ್ತೊಬ್ಬ ಶಂಕಿತನನ್ನು ಬಂಧಿಸಿದೆ.  ಲಷ್ಕರ್-ಎ- ತೊಯ್ಯಾ (ಎಲ್ಇಟಿ) ಪ್ರಕರಣದ ಮಾಜಿ ಅಪರಾಧಿ, ಕರ್ನಾಟಕದ ಹುಬ್ಬಳ್ಳಿ ಮೂಲದ ಶೋಯೆಬ್ ಅಹ್ಮದ್ ಮಿರ್ಜಾ (35) ಬಂಧಿತ ಐದನೇ ವ್ಯಕ್ತಿ. ಈ ಹಿಂದೆ ಎಲ್ಇಟಿ ಬೆಂಗಳೂರು ಪಿತೂರಿ ಪ್ರಕರಣದಲ್ಲಿ ಅಪರಾಧಿಯಾಗಿದ್ದ ಮಿರ್ಜಾ ಜೈಲಿನಿಂದ ಹೊರಬಂದ ನಂತರ ಹೊಸ ಸಂಚಿನಲ್ಲಿ ಭಾಗಿಯಾಗಿದ್ದಾನೆ ಎಂದು ಎನ್ಐಎ ತನಿಖೆಗಳು ಬಹಿರಂಗಪಡಿಸಿವೆ. ಎನ್ಐಎ ಅಧಿಕಾರಿಗಳು ಮೂರು ದಿನಗಳ ಹಿಂದಷ್ಟೇ ರಾಮೇಶ್ವರಂ ಕೆಫೆ ಸ್ಫೋಟ […]

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ | ಐದನೇ ಆರೋಪಿ ಬಂಧನ Read More »

ಬಾಂಗ್ಲಾ ದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ನ ಹತ್ಯೆ ಮಾಡಿ ಚರ್ಮ ಸುಲಿದ ಹಂತಕರು | ಪ್ರಮುಖ ಆರೋಪಿ ಬಂಧನ

ಹೊಸದಿಲ್ಲಿ: ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ಅವರನ್ನು ಬಾಂಗ್ಲಾದೇಶದಲ್ಲಿ ಬರ್ಬರವಾಗಿ ಕೊಲೆ ಮಾಡಿದ ವಿಚಾರ ತನಿಖೆಯಿಂದ ಬಯಲಾಗಿದ್ದು, ಹತ್ಯೆಯ ಪ್ರಮುಖ ಆರೋಪಿ ಬಾಂಗ್ಲಾ ದೇಶದ ಅಕ್ರಮ ವಲಸಿಗ ಜಿಹಾದ್ ಹವಾಲ್ದಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಸಂಸದರನ್ನು ಕತ್ತು ಹಿಸುಕಿ, ಚರ್ಮ ಸುಲಿದು ಕತ್ತರಿಸಿ ಹಾಕಲಾಗಿತ್ತು. ಸಿಐಡಿ ಮೂಲಗಳ ಪ್ರಕಾರ, ಕೋಲ್ಕತ್ತಾದ ನ್ಯೂಟೌನ್‌ನಲ್ಲಿರುವ ಫ್ಲಾಟ್‌ನಲ್ಲಿ ಕೊಲೆ ಮಾಡಿ ಸಂಸದರ ದೇಹವನ್ನು ತುಂಡು ತುಂಡಾಗಿಸಿ ವಿಕೃತಿ ಮೆರೆದಿರುವ ಬಗ್ಗೆ ಜಿಹಾದ್ ಹವಾಲ್ದಾ‌ರ್ ಒಪ್ಪಿಕೊಂಡಿದ್ದಾನೆ.

ಬಾಂಗ್ಲಾ ದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ನ ಹತ್ಯೆ ಮಾಡಿ ಚರ್ಮ ಸುಲಿದ ಹಂತಕರು | ಪ್ರಮುಖ ಆರೋಪಿ ಬಂಧನ Read More »

ಮಹಿಳೆಯ ಬ್ಯಾಗ್‍ ನಿಂದ ಲಕ್ಷಾಂತರ ಮೌಲ್ಯದ ಚಿನ್ನ ಕಳವು : ದೂರು ದಾಖಲು | ಕಳ್ಳರ ತಾಣವಾಗುತ್ತಿರುವ ಬಿ.ಸಿ.ರೋಡು ಬಸ್ ನಿಲ್ದಾಣ

ಬಂಟ್ವಾಳ: ಬಿಸಿರೋಡಿನ ಬಸ್ ನಿಲ್ದಾಣ ಪಿಕ್ ಪಾಕೆಟ್ ತಾಣವಾಗಿ, ಕಳ್ಳರ ಕೇಂದ್ರವಾಗಿ ಮಾರ್ಪಾಡು ಹೊಂದಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಬಸ್ ಗೆ ಹತ್ತುವ ಮಹಿಳೆಯರ ನಗನಗದು ಕಳವು ನಡೆಯುತ್ತಿದ್ದು, ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಕಳ್ಳರು ಹಿಡಿಯುವಲ್ಲಿ ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಇದೀಗ ಮತ್ತೆ ನಿನ್ನೆ ಬೆಳಿಗ್ಗೆ ಗಂಡ ಮತ್ತು ಮಗುವಿನ ಜೊತೆ ಬಸ್ ಹತ್ತುವ ವೇಳೆ ಬ್ಯಾಗಿನೊಳಗಿದ್ದ ಲಕ್ಷಾಂತರ ರೂ ಮೌಲ್ಯದ ಚಿನ್ನ ಕಳವಾದ

ಮಹಿಳೆಯ ಬ್ಯಾಗ್‍ ನಿಂದ ಲಕ್ಷಾಂತರ ಮೌಲ್ಯದ ಚಿನ್ನ ಕಳವು : ದೂರು ದಾಖಲು | ಕಳ್ಳರ ತಾಣವಾಗುತ್ತಿರುವ ಬಿ.ಸಿ.ರೋಡು ಬಸ್ ನಿಲ್ದಾಣ Read More »

ಕಾಂಬೋಡಿಯಾದಲ್ಲಿ ಉದ್ಯೋಗ ಮೋಸದ ಜಾಲಕ್ಕೆ ಸಿಲುಕಿದ ಭಾರತೀಯರ ರಕ್ಷಣೆ

ಹೊಸದಿಲ್ಲಿ: ಕಾಂಬೋಡಿಯಾದಲ್ಲಿ ಉದ್ಯೋಗದ ಮೋಸದ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರನ್ನು ಅಲ್ಲಿನ ಭಾರತೀಯ ರಾಯಭಾರ ಕಚೇರಿ ರಕ್ಷಣೆ ಮಾಡಿದೆ. ರಕ್ಷಣೆ ಮಾಡಿದ ಬೆನ್ನಲ್ಲೇ 60 ಮಂದಿಯ ಮೊದಲ ಬ್ಯಾಚ್ ಭಾರತಕ್ಕೆ ಮರಳಿದೆ ಎಂದು ರಾಯಭಾರ ಕಚೇರಿ ತಿಳಿಸಿದೆ. ಕಾಂಬೋಡಿಯಾ ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಸಿಹಾನೌಕ್ವಿಲೈನಲ್ಲಿ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಜಿನ್ ಬೆ-4 ಎಂಬ ಸ್ಥಳದಲ್ಲಿ ಭಾರತೀಯರನ್ನು ರಕ್ಷಣೆ ಮಾಡಿದ್ದಾರೆ. ಇನ್ನು ಮುಂದೆ ಉದ್ಯೋಗಕ್ಕಾಗಿ ಕಾಂಬೋಡಿಯಾಕ್ಕೆ ಬರುವ ಭಾರತೀಯರು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅನುಮೋದಿಸಿದ ಅಧಿಕೃತ

ಕಾಂಬೋಡಿಯಾದಲ್ಲಿ ಉದ್ಯೋಗ ಮೋಸದ ಜಾಲಕ್ಕೆ ಸಿಲುಕಿದ ಭಾರತೀಯರ ರಕ್ಷಣೆ Read More »

ಕಳ್ಳತನ : ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

ಮಂಗಳೂರು : ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಂಕನಾಡಿ ನಗರ ಠಾಣಾ ಪೊಲೀಸರ ತಂಡ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಬಂಧಿಸಿದೆ. ಕೊಡಗು ಜಿಲ್ಲೆ ವೀರಾಜಪೇಟೆ ಬೆಳ್ಳುರು ಗ್ರಾಮ ನಿವಾಸಿ ಸಚಿನ್ ಮತ್ತು ಕೊಡಗು ಜಿಲ್ಲೆ ಬಾಡಗಾ ಗ್ರಾಮ ನಿವಾಸಿ ನಿಶಾಂತ್ ಬಂಧಿತ ಆರೋಪಿಗಳು. ಮಂಗಳೂರು ನಗರದ ಕುಲಶೇಖರ ದ.ಕ ಸಹಕಾರಿ ಹಾಲು ಒಕ್ಕೂಟದ ಬಳಿಯ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ 87.5 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ

ಕಳ್ಳತನ : ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ Read More »

ಕಾಂಚನ ಈಶ್ವರ ಭಟ್ ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಪುತ್ತೂರು: ಸುದಾನ ಸಂಗೀತ ಕಲಾ ಶಾಲಾ ನಿರ್ದೇಶಕ ವಿದ್ವಾನ್ ಕಾಂಚನ ಈಶ್ವರ ಭಟ್ ಅವರ ಪಡೀಲು ವಿಜಯನಗರ ಬಡವಾಣೆಯಲ್ಲಿರುವ ಮನೆಗೆ ಕಳ್ಳರು ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಕುರಿತು ಇಂದು ಬೆಳಕಿಗೆ ಬಂದಿದೆ. ವಿದ್ವಾನ್ ಕಾಂಚನ ಈಶ್ವರ ಭಟ್ ಅವರು ಸಂಗೀತ ಕಾರ್ಯಕ್ರಮಕ್ಕೆ ಮೈಸೂರಿಗೆ ಹೋಗಿದ್ದು, ಅವರ ಪುತ್ರ ಬೆಂಗಳೂರಿಗೆ ಹೋಗಿದ್ದರು. ಇಂದು ಮನೆಗೆ ಹಿಂದಿರುಗಿದಾಗ ಕಳವಾದ ಕುರಿತು ಬೆಳಕಿಗೆ ಬಂದಿದೆ. ಅವರು ಮನೆಗೆ ಬಂದಾಗ ಮನೆಯ ಎದುರಿನ ಬಾಗಿಲ ಬೀಗ ಮುರಿದು

ಕಾಂಚನ ಈಶ್ವರ ಭಟ್ ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು Read More »

ಅಕ್ರಮ ಗೋ ಸಾಗಾಟ : ಸ್ಥಳೀಯರಿಂದ ದಿಗ್ಬಂಧನ

ಪುತ್ತೂರು: ಅಕ್ರಮ ಗೋವುಗಳನ್ನು ಪಿಕಪ್ ನಲ್ಲಿ ಸಾಗಾಟ ಮಾಡುತ್ತಿದ್ದರು ಎಂಬ ಆರೋಪದಡಿ ಸ್ಥಳೀಯರು ವಾಹನವನ್ನು ಅಡ್ಡಗಟ್ಟಿದ ಮತ್ತು ಜೀಪು ಚಾಲಕ  ಹಾಗೂ ಇನ್ನೋರ್ವರಿಗೆ ದಿಗ್ಭಂಧನ ವಿಧಿಸಿದ ಘಟನೆ ಎಲಿಮಲೆಯ ಅಂಬೆಕಲ್ಲಿನಲ್ಲಿ ನಡೆದಿದೆ. ಪಡ್ಡಾಯರಿನ ಹರೀಶ್ ಮತ್ತು ಕೋಣಾಜೆಯ ಇಬ್ರಾಹಿಂ ಎಂಬವರು ದಿಗ್ಭಂಧನಕ್ಕೆ ಒಳಗಾದವರು. ಸುಳ್ಯದ ಎಲಿಮಲೆಯ ಅಂಬೆಕಲ್ಲು ಕಡೆಯಿಂದ ಇಂದು ಮುಂಜಾನೆ 4 ದನಗಳನ್ನು ಪಿಕಪ್ ವಾಹನದಲ್ಲಿ ತುಂಬಿಸಿ ಸಾಗಾಟ ಮಾಡುತ್ತಿರುವ ಆರೋಪದಲ್ಲಿ ಎಲಿಮಲೆ ಅಂಬೆಕಲ್ಲು ರಸ್ತೆಯ ಕಲ್ಪಣೆ ಎಂಬಲ್ಲಿ ಸ್ಥಳೀಯರು ವಾಹನವನ್ನು ಅಡ್ಡ ಗಟ್ಟಿದರು. ಈ

ಅಕ್ರಮ ಗೋ ಸಾಗಾಟ : ಸ್ಥಳೀಯರಿಂದ ದಿಗ್ಬಂಧನ Read More »

ಮಾಜಿ ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ | ಆರೋಪಿ ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲು

ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಪ್ರಜ್ವಲ್ ರೈ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ.17 ರಂದು ವಾಟ್ಸಾಪ್ ಸಾಮಾಜಿಕ ಜಾಲತಾಣದಲ್ಲಿ ಪ್ರಜ್ವಲ್ ರೈ ಎಂಬಾತ ಕೀಳು ಮಟ್ಟದ ಅವಮಾನಕಾರಕ ಪದಗಳನ್ನು ಬಳಸಿ ತೇಜೋವಧೆ ಮಾಡಿದ್ದು, ಸಾಮಾಜಿಕ ಜಾಲತಾಣದ ಮುಖಾಂತರ ರೋಡಿನಲ್ಲಿ “ಕಲ್ಲೇಟು ಬೀಳುವುದು ಖಚಿತ ” ಎಂಬುದಾಗಿ ಜೀವ ಬೆದರಿಕೆ ಹಾಕಿದ್ದ. ಈ ಹಿನ್ನಲೆಯಲ್ಲಿ ಮಾಜಿ ಶಾಸಕರು ಪುತ್ತೂರು ನಗರ ಠಾಣೆಗೆ

ಮಾಜಿ ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ | ಆರೋಪಿ ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲು Read More »

ಶಾಸಕ ಹರೀಶ್ ಪೂಂಜ ಬಂಧನ ಸಾಧ್ಯತೆ | ವಕೀಲರ ತಂಡ ಭೇಟಿ

ಬೆಳ್ತಂಗಡಿ : ಹರೀಶ್ ಪೂಂಜ ಬಂಧನ ಸಾಧ್ಯತೆಯಿದ್ದು, ಈ ಹಿನ್ನಲೆಯಲ್ಲಿ ಹರೀಶ್ ಪೂಂಜ ಅವರ ನಿವಾಸಕ್ಕೆ ವಕೀಲರ ತಂಡ ಇಂದು ಭೇಟಿ ನೀಡಿದೆ. ಶಾಸಕ ಹರಿಶ್ ಪೂಂಜ ನಿವಾಸಕ್ಕೆ ಬೇಟಿ ನೀಡಿರುವ ವಕೀಲರ ತಂಡ ಪೊಲೀಸರ ಜೊತೆ ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಮನೆಯ ಹೊರಗಡೆ ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದಾರೆ. ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿಯು ನಡೆಯುತ್ತಿದೆ ಎನ್ನಲಾಗಿದೆ.

ಶಾಸಕ ಹರೀಶ್ ಪೂಂಜ ಬಂಧನ ಸಾಧ್ಯತೆ | ವಕೀಲರ ತಂಡ ಭೇಟಿ Read More »

ಪ್ಲಾಸ್ಟಿಕ್ ಬಳಕೆ ಪರಿಶೀಲನೆ | ವಿವಿಧ ಅಂಗಡಿ ಮಳಿಗೆಗೆ ದಾಳಿ ಮಾಡಿದ ನಗರಸಭೆ

ಪುತ್ತೂರು: ಪ್ಲಾಸ್ಟಿಕ್ ಬಳಕೆ ಪರಿಶೀಲನೆ ಕುರಿತು ವಿವಿಧ ವಾಣಿಜ್ಯ ಮಳಿಗೆಗಳಿಗೆ ನಗರಸಭೆ ಇಂದು ದಾಳಿ ಮಾಡಿದೆ. ಕೋರ್ಟ್ ರೋಡ್, ಮುಖ್ಯ ರಸ್ತೆ ಹಾಗೂ ದರ್ಬೆಯ ಕೆಲವು ಅಂಗಡಿ ಮಳಿಗೆಗೆ ದಾಳಿ ಮಾಡಿದ ಅಧಿಕಾರಿಗಳು ವಿವಿಧ ಅಂಗಡಿ ಮಳಿಗೆಗಳಿಂದ ಸುಮಾರು 40 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗರಸಭಾ ಸಹಾಯಕ ಕಾರ್ಯಪಾಲಕ ಅಭಿಯಂತರ ಶಬರಿನಾಥ್ ರೈ, ಕಂದಾಯ ಅಧಿಕಾರಿ ಪಕೀರ ಮೂಲ್ಯ, ಹಿರಿಯ ಆರೋಗ್ಯ ನಿರೀಕ್ಷಕ ರಾಮಚಂದ್ರ ಕೆ, ಕಂದಾಯ ವಿಭಾಗದ ಸಿಬ್ಬಂದಿ ಪುರುಷೋತ್ತಮ್ ಹಾಗೂ ಸ್ವಚ್ಛತಾ

ಪ್ಲಾಸ್ಟಿಕ್ ಬಳಕೆ ಪರಿಶೀಲನೆ | ವಿವಿಧ ಅಂಗಡಿ ಮಳಿಗೆಗೆ ದಾಳಿ ಮಾಡಿದ ನಗರಸಭೆ Read More »

error: Content is protected !!
Scroll to Top