ಅಪರಾಧ

ಚಾರ್ವಕದ ಯುವಕ ತಾರನಾಥ ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು: ಕಡಬ ತಾಲೂಕಿನ ಚಾರ್ವಕ ನಿವಾಸಿಯೊಬ್ಬರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಚಾರ್ವಕ ನಿವಾಸಿ ತಾರಾನಾಥ (39) ಎಂಬವರೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಕಡಬ ತಾಲೂಕಿನ ಬೊಮ್ಮಳಿಕೆ ಪದ್ಮನಾಭ ಗೌಡ ಎಂಬವರ ಪುತ್ರರಾಗಿರುವ ತಾರನಾಥ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ತನ್ನ ರೂಮ್ ನಲ್ಲೇ ನ.3ರಂದು ರಾತ್ರಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಚಾರ್ವಕದ ಯುವಕ ತಾರನಾಥ ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ Read More »

ಜಗಳ ತಾರಕಕ್ಕೇರಿ ವಿಷ ಸೇವಿಸಿದ ಗಂಡ-ಹೆಂಡತಿ :  ಹೆಂಡತಿ ಮೃತ್ಯು

ಕಡಬ: ಗಲಾಟೆ ಮಾಡಿಕೊಂಡ ಗಂಡ-ಹೆಂಡತಿ ಜಗಳ ವಿಪರೀತಕ್ಕೇರಿ ಕೊನೆಗೆ ಸಾವಿನಲ್ಲಿ ಅಂತ್ಯವಾದ ಘಟನೆ ಕಡಬ ತಾಲೂಕಿನ ಕುದ್ಮಾರು ಗ್ರಾಮದಲ್ಲಿ ಶನಿವಾರ ರಂದು ಸಂಜೆ ನಡೆದಿದೆ. ಗಂಡ-ಹೆಂಡಿರ ಗಲಾಟೆಯಲ್ಲಿ ಹೆಂಡತಿ ಕುಸುಮ (39) ಮೃತಪಟ್ಟವರು.ಕುಸುಮ ಮತ್ತು ಆಕೆಯ ಪತಿ ಸಂಜೀವರ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಅಂತೆಯೇ ಶನಿವಾರ ಕೂಡ ಮಾತಿಗೆ ಮಾತು ಬೆಳೆದಿದೆ. ಕೋಪದ ಭರದಲ್ಲಿ ಇಬ್ಬರು ಕೂಡ ವಿಷ ಸೇವಿಸಿದ್ದಾರೆ. ಈ ವಿಚಾರ ಸ್ಥಳೀಯರಿಗೆ ತಿಳಿದು ತಕ್ಷಣ ಅವರ ಸಂಬಂಧಿಕರಿಗೆ ವಿಚಾರವನ್ನು ತಿಳಿಸಿರುತ್ತಾರೆ. ಅವರು ಬಂದು

ಜಗಳ ತಾರಕಕ್ಕೇರಿ ವಿಷ ಸೇವಿಸಿದ ಗಂಡ-ಹೆಂಡತಿ :  ಹೆಂಡತಿ ಮೃತ್ಯು Read More »

ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿ ವಂಚಿಸಿದ ಭೂಪ : ಬರೋಬ್ಬರಿ 30 ಲಕ್ಷ ವಂಚನೆ

ಉಡುಪಿ: ವ್ಯಕ್ತಿಯೊಬ್ಬ ತಾನು ಕೊಲ್ಲೂರು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿಕೊಂಡು ಬೆಂಗಳೂರು ಮೂಲದ ಭಕ್ತರ ಕುಟುಂಬವೊಂದಕ್ಕೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡುವುದಾಗಿ ಹೇಳಿ 30.73 ಲಕ್ಷ ರೂ. ಹಣ ಪಡೆದು ವಂಚಿಸಿದ ಘಟನೆ ನಡೆದಿದೆ. ಕೊಲ್ಲೂರು ನಿವಾಸಿ ಸುಧೀರ್ ಕುಮಾರ್ ಎಂಬಾತನೇ ಕುಟುಂಬಕ್ಕೆ ವಂಚಿಸಿದ ವ್ಯಕ್ತಿ. ಬೆಂಗಳೂರಿನ ದಿಲ್ಲಾ ತನ್ನ ಗಂಡ ಮತ್ತು ಕುಟುಂಬ ಸದಸ್ಯರ ಜತೆ ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ವೇಳೆ ತನ್ನ ಅಣ್ಣ ದಿಲೀಶ್ ಅವರಿಗೆ ಪರಿಚಯವಿದ್ದ ಸುಧೀರ್ ಕುಮಾರ್ ಎಂಬಾತ ಪರಿಚಯ

ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿ ವಂಚಿಸಿದ ಭೂಪ : ಬರೋಬ್ಬರಿ 30 ಲಕ್ಷ ವಂಚನೆ Read More »

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕತ್ತು ಹಿಸುಕಿ ಬಾವಿಗೆ ಹಾಕಿದ ಪತಿ

ಬೆಳ್ತಂಗಡಿ:  ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕಿರಾತಕ ಪತಿರಾಯನೇ ಕತ್ತು ಹಿಸುಕಿ ಬಾವಿಗೆ ಹಾಕಿ ಕೊಂದ ಅಮಾನುಷ ಘಟನೆ ಬೆಳ್ತಂಗಡಿ ತಾಲೂಕು, ಬೆಳಾಲು ಗ್ರಾಮದ ಕೆಂಪನೊಟ್ಟು ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಬೆಳಾಲು ನಿವಾಸಿ ಶಶಿಕಲಾ (27) ಎಂದು  ಗುರುತಿಸಲಾಗಿದ್ದು, ಆರೋಪಿ ಕಿರಾತಕ ಪತಿಯನ್ನು ಸುಧಾಕರ ಎಂದು ಗುರುತಿಸಲಾಗಿದೆ. ಸುಧಾಕರ ಏಳು ವರ್ಷಗಳ ಹಿಂದೆ ಶಶಿಕಲಾಳನ್ನು ಪ್ರೀತಿಸಿ ಮದುವೆಯಾಗಿದ್ದು, ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆಂಪನೊಟ್ಟು ಎಂಬಲ್ಲಿ 6 ವರ್ಷದ ಮಗಳೊಂದಿಗೆ ವಾಸವಾಗಿದ್ದರು. ಸುಧಾಕರನಿಗೆ

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕತ್ತು ಹಿಸುಕಿ ಬಾವಿಗೆ ಹಾಕಿದ ಪತಿ Read More »

ಇಲಿ ಜ್ವರದಿಂದ ಮಹಿಳೆ ಮೃತ್ಯು

ಉಜಿರೆ: ಇಲಿ ಜ್ವರದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಜಿರೆ ಗ್ರಾಮದ ಬೆಳಾಲುನಲ್ಲಿ ನಡೆದಿದೆ. ಬೆಳಾಲು ಗ್ರಾಮದ ತುರ್ಕೆರೊಟ್ಟು ಮನೆಯ ಆಶಾ (27) ಮೃತಪಟ್ಟವರು. ಇಲಿ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗಿದೆ ಮಂಗಳೂರಿನ ದೇರಳಕಟ್ಟೆ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಇಲಿ ಜ್ವರದಿಂದ ಮಹಿಳೆ ಮೃತ್ಯು Read More »

ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ಅಂಗಡಿಗಳಲ್ಲಿ ಸರಣಿ ಕಳ್ಳತನ | ನಗದು ದೋಚಿದ ಕಳ್ಳರು

ಉಪ್ಪಿನಂಗಡಿ: 34 ನೆಕ್ಕಿಲಾಡಿ ಹಾಗೂ ಉಪ್ಪಿನಂಗಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಅಂಗಡಿ, ಪೆಟ್ರೋಲ್ ಪಂಪ್‌ಗಳಲ್ಲಿ ಸರಣಿ ಕಳ್ಳತನ ನಡೆದ ಘಟನೆ ಶನಿವಾರ ಮುಂಜಾನೆ ಬೆಳಕಿಗೆ ಬಂದಿದೆ. ಗಾಂಧಿಪಾರ್ಕ್ ಬಳಿ ಜಗದೀಶ್ ನಾಯಕ್ ಎಂಬವರಿಗೆ ಸೇರಿದ ಟೈಲ್ಸ್ ಅಂಗಡಿಯ ಶಟರ್‌ನ ಬೀಗ ಮುರಿದು ಒಳನುಗ್ಗಿದ ಕಳ್ಳ ಕ್ಯಾಶ್ ಡ್ರಾವರ್‌ನಲ್ಲಿದ್ದ ಸುಮಾರು 20 ಸಾವಿರದಷ್ಟು ನಗದನ್ನು ಕಳ್ಳರು ಕದ್ದೊಯ್ದಿದ್ದಾರೆ. ಅಲ್ಲೇ ಪಕ್ಕದ ಗುಜಿರಿ ಅಂಗಡಿಗೂ ನುಗ್ಗಿದ ಕಳ್ಳ ಅಲ್ಲಿ ಇದ್ದ ತಾಮ್ರದ ಬೆಲೆ ಬಾಳುವ ಸೊತ್ತುಗಳನ್ನು ಕಳವು ಮಾಡಿ, ಪಕ್ಕದ

ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ಅಂಗಡಿಗಳಲ್ಲಿ ಸರಣಿ ಕಳ್ಳತನ | ನಗದು ದೋಚಿದ ಕಳ್ಳರು Read More »

ಕುಮಾರಧಾರದಲ್ಲಿ ಅಪರಿಚಿತ ಮೃತದೇಹ ಪತ್ತೆ

ಸವಣೂರು:  ಸವಣೂರು ಸಮೀಪ ಕುಮಾರಧಾರ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ಶನಿವಾರ ನಡೆದಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಬೆಳ್ಳಾರೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಕುಮಾರಧಾರದಲ್ಲಿ ಅಪರಿಚಿತ ಮೃತದೇಹ ಪತ್ತೆ Read More »

ಉಜಿರೆಯಲ್ಲಿ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆ

ಉಜಿರೆ: ವಿವಾಹಿತ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಉಜಿರೆ ಗ್ರಾಮದ ಗಡಿ ಪ್ರದೇಶವಾದ ಮಾಚಾರು ಸಮೀಪದ ಕೆಂಪನೊಟ್ಟುವಿನಲ್ಲಿ ಶುಕ್ರವಾರ ನಡೆದಿದೆ. ಮಾಚಾರು ನಿವಾಸಿ ಶಶಿಕಲಾ ಎಂಬವರ ಶವವೇ ಬಾವಿಯಲ್ಲಿ ಅನುಮಾನಾಸ್ಪದವಾಗಿ  ಪತ್ತೆಯಾಗಿರುವುದು. ಹತ್ಯೆ ಮಾಡಿ ಬಾವಿಗೆ ಹಾಕಿರುವ ಕುರಿತು ಆರೋಪಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ಇದು ಆಕಸ್ಮಿಕ ಘಟನೆಯೇ ಅಥವಾ ಕೊಲೆಯೇ ಎಂಬ ಬಗ್ಗೆ ಪೊಲೀಸ್ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಧರ್ಮಸ್ಥಳ ಠಾಣಾ ಪೊಲೀಸರು, ಉನ್ನತಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಉಜಿರೆಯಲ್ಲಿ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆ Read More »

ಉದ್ಯಮಿ ಸೊಸೆ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ವರದಕ್ಷಿಣ ಕಿರುಕುಳ ಆರೋಪದಲ್ಲಿ ಐವರ ಬಂಧನ

ಸುಳ್ಯ :ಸುಳ್ಯದ ಉದ್ಯಮಿ ಕಾಪಿಲ ಗಿರಿಯಪ್ಪ ಗೌಡರ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ರಾಜೇಶ್, ಅತ್ತೆ ಸೀತಾ, ಮಾವ ಗಿರಿಯಪ್ಪ ಗೌಡ ಕಾಪಿಲ, ಮೈದುನ, ಮೈದುನನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 5 ವರ್ಷಗಳ ಹಿಂದೆ ರಾಜೇಶ್ ಅವರನ್ನು ಐಶ್ವರ್ಯ ಮದುವೆಯಾಗಿದ್ದರು. ಐಶ್ವರ್ಯ ಯುಎಸ್ಎ ನಲ್ಲಿ ಎಂಬಿಎ ಮಾಡಿದ್ದರು. ಪತಿ ರಾಜೇಶ್, ಡೈರಿ ರಿಚ್ ಐಸ್ ಕ್ರೀಮ್ ಕಂಪನಿ ಮಾಲೀಕರಾಗಿದ್ದಾರೆ. ಇದೇ ಕಂಪನಿಯಲ್ಲಿ ಐಶ್ವರ್ಯ ತಂದೆ ಸುಬ್ರಮಣ್ಯ ಅವರ ತಂಗಿ ಗಂಡ ರವೀಂದ್ರ ಆಡಿಟರ್

ಉದ್ಯಮಿ ಸೊಸೆ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ವರದಕ್ಷಿಣ ಕಿರುಕುಳ ಆರೋಪದಲ್ಲಿ ಐವರ ಬಂಧನ Read More »

ಬೆಳ್ಳಾರೆ ಮಸೂದ್ ಕೊಲೆ ಪ್ರಕರಣ | ಜೈಲಿನಲ್ಲಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್‍ ನಿಂದ ಜಾಮೀನು

ಮಂಗಳೂರು: ಸುಳ್ಯದ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನೀಡಿದೆ. 2022 ರ ಜುಲೈಯಲ್ಲಿ ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ಮಸೂದ್ ಕೊಲೆ ಕೃತ್ಯ ನಡೆದಿತ್ತು. ಎಂಟು ಆರೋಪಿಗಳ ಪೈಕಿ ಅಭಿಲಾಷ್ ಮತ್ತು ಸುನಿಲ್ ಇವರಿಗೆ ಈಗ ಜಾಮೀನು ಲಭಿಸಿದೆ. ಆರು ಮಂದಿಗೆ ಈ ಮೊದಲೇ ಜಾಮೀನು ಸಿಕ್ಕಿತ್ತು. ಜಾಮೀನು ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ,

ಬೆಳ್ಳಾರೆ ಮಸೂದ್ ಕೊಲೆ ಪ್ರಕರಣ | ಜೈಲಿನಲ್ಲಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್‍ ನಿಂದ ಜಾಮೀನು Read More »

error: Content is protected !!
Scroll to Top