ದ್ವಿಚಕ್ರ ವಾಹನ ಕಳವು : ಪ್ರಕರಣ ದಾಖಲು
ಬೆಳ್ತಂಗಡಿ: ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವಿಗೆ ಸಂಬಂಧಿಸಿದಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಬೇಕರಿಯೊಂದರ ಸಮೀಪದ ಹೊಂಡಾ ಯೂನಿಕಾರ್ನ್ ದ್ವಿಚಕ್ರ ವಾಹನವನ್ನು ಉಜಿರೆಯ ರಾಜು ಎಂಬವರು ನಿಲ್ಲಿಸಿದ್ದರು. ಒಂದು ಗಂಟೆ ಬಳಿಕ ಬಂದು ನೋಡಿದಾಗ ವಾಹನ ಕಳವಾಗಿರುವುದು ಬೆಳಕಿಗೆ ಬಂದಿದೆ. ಸುತ್ತಮುತ್ತಲು ಹುಡುಕಾಡಿದರೂ ಎಲ್ಲೂ ಸಿಗದಿದ್ದ ಹಿನ್ನಲೆಯಲ್ಲಿ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.
ದ್ವಿಚಕ್ರ ವಾಹನ ಕಳವು : ಪ್ರಕರಣ ದಾಖಲು Read More »







