ಅಪರಾಧ

ವಿದ್ಯಾರ್ಥಿನಿಗೆ ಕಿರುಕುಳ | ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ವಿದ್ಯಾರ್ಥಿನಿಯೋರ್ವರಿಗೆ ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಸುಬ್ರಹ್ಮಣ್ಯ ನಿವಾಸಿ ಕಿಶನ್ ಹಾಗೂ ಸಿಂಹವನ ನಿವಾಸಿ ರಿತೇಶ್ ಬಂಧಿತ ಆರೋಪಿಗಳು ಕುರಿಯ ಸೊಸೈಟಿಯೊಂದರ ಬಳಿ ವಿದ್ಯಾರ್ಥಿನಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆರೋಪಿಗಳು ಕಿರುಕುಳ ನೀಡಿ, ಕೈ ಹಿಡಿದು ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಗ್ರಾಮಾಂತರ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿದ್ಯಾರ್ಥಿನಿಗೆ ಕಿರುಕುಳ | ಇಬ್ಬರು ಆರೋಪಿಗಳ ಬಂಧನ Read More »

ವಿಷ ಸೇವಿಸಿದ್ದ ವಿದ್ಯಾರ್ಥಿನಿ ತ್ರಿಶಾ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು !

ಬೆಳ್ತಂಗಡಿ: ವಿಷ ಸೇವಿಸಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಧರ್ಮಸ್ಥಳದ ಪಿಜತ್ತಡ್ಕ ನಿವಾಸಿ ಕಿಶೋರ್ ಹಾಗೂ ಸೌಮ್ಯ ದಂಪತಿ ಪುತ್ರಿ ತ್ರಿಶಾ (16) ಮೃತ ವಿದ್ಯಾರ್ಥಿನಿ. ಬೆಳ್ತಂಗಡಿಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎನ್ನಲಾಗಿದೆ. ಫೆ.7 ರಂದು ವಿಷ ಸೇವಿಸಿದ್ದ ತ್ರಿಶಾಳನ್ನು ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದರೂ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಧರ್ಮಸ್ಥಳ ಠಾಣೆಯಲ್ಲಿ

ವಿಷ ಸೇವಿಸಿದ್ದ ವಿದ್ಯಾರ್ಥಿನಿ ತ್ರಿಶಾ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು ! Read More »

ಬೆಲೆಬಾಳುವ ಮೊಬೈಲ್‍ ನೊಂದಿಗೆ ಸಪ್ಲೈಯರ್ ಪರಾರಿ | ಪ್ರಕರಣ ದಾಖಲು

ಪುತ್ತೂರು: ನೆಹರುನಗರದ ಹೊಟೇಲ್ ಒಂದರಲ್ಲಿ ಸಪ್ಲೈಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾತ ಬೆಲೆಬಾಳುವ ಮೊಬೈಲ್‍ ನೊಂದಿಗೆ ಪರಾರಿಯಾದ ಘಟನೆ ಇಂದು ನಡೆದಿದೆ. ಸಪ್ಲೈಯರ್ ಗಣೇಶ್‍ ಎಂಬಾತ 69 ಸಾವಿರ ರೂ. ಮೌಲ್ಯದ ಮೊಬೈಲ್‍ ನೊಂದಿಗೆ ಪರಾರಿಯಾದಾತ. ಈತ ನೆಹರೂನಗರದ ಕೋಕೋಗುರು ಅಡುಗೆಮನೆಯಲ್ಲಿ ಕೆಲಸ ಮಾಡುತ್ತಿದ್ದು, ಮಧ್ಯಾಹ್ನ ಈತ ತಾನು ಕ್ಯಾಶ್ ಕೌಂಟರ್ ನೋಡಿಕೊಳ್ಳುವುದಾಗಿ ಹೇಳಿ ಕ್ಯಾಶಿಯರನ್ನು ಊಟಕ್ಕೆ ಕಳುಹಿಸಿದ್ದಾನೆ. ಕ್ಯಾಶಿಯರ್ ಊಟಕ್ಕೆ ತೆರಳುತ್ತಿದ್ದಂತೆ ಡ್ರವರ್‍ ನಲ್ಲಿದ್ದ ಬೆಲೆಬಾಳುವ ಮೊಬೈಲ್‍ ನೊಂದಿಗೆ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸಪ್ಲೈಯರ್ ನ ಈ ಕೃತ್ಯ

ಬೆಲೆಬಾಳುವ ಮೊಬೈಲ್‍ ನೊಂದಿಗೆ ಸಪ್ಲೈಯರ್ ಪರಾರಿ | ಪ್ರಕರಣ ದಾಖಲು Read More »

ಅಡ್ಯನಡ್ಕ ಕರ್ನಾಟಕ ಬ್ಯಾಂಕ್‍ ನಲ್ಲಿ ಕೋಟ್ಯಾಂತರ ನಗ-ನಗದು ಕಳ್ಳತನ | ಇಬ್ಬರು ಪೊಲೀಸ್ ವಶಕ್ಕೆ

ವಿಟ್ಲ : ಕರ್ನಾಟಕ ಬ್ಯಾಂಕ್‌  ಅಡ್ಯನಡ್ಕ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿಸಿದು ಬಂದಿದೆ. ಕಳೆದ ವಾರದಲ್ಲಿ ಕರ್ನಾಟಕ ಬ್ಯಾಂಕ್‍ ನ ಕಿಟಕಿಯನ್ನು ತುಂಡರಿಸಿ ಒಳನುಗ್ಗಿದ ಕಳ್ಳರು ಕೋಟ್ಯಾಂತರ ನಗ-ನಗದು ಕಳ್ಳತನ ಮಾಡಿ ಪರಾರಿಯಾಗಿದ್ದರು. ಬಳಿಕ ತನಿಖೆ ಕೈಗೆತ್ತಿಕೊಂಡ ಪೊಲೀಸ್‌ ಇಲಾಖೆಯ ವಿಶೇಷ ತಂಡ ಬ್ಯಾಂಕ್ ಹಾಗೂ ಅಕ್ಕಪಕ್ಕ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದೆ. ಈ ಆಧಾರದಲ್ಲಿ ಕಳ್ಳತನಕ್ಕೆ ಆಗಮಿಸಿದ್ದ ವಾಹನದ ಸುಳಿವು ಸಿಕ್ಕಿದ್ದು, ಮತ್ತಷ್ಟು ವಾಹನ ನಿಖರತೆಗಾಗಿ

ಅಡ್ಯನಡ್ಕ ಕರ್ನಾಟಕ ಬ್ಯಾಂಕ್‍ ನಲ್ಲಿ ಕೋಟ್ಯಾಂತರ ನಗ-ನಗದು ಕಳ್ಳತನ | ಇಬ್ಬರು ಪೊಲೀಸ್ ವಶಕ್ಕೆ Read More »

ನೇಣು ಬಿಗಿದು ಯುವತಿ ಆತ್ಮಹತ್ಯೆ !

ಬೆಳ್ತಂಗಡಿ: ಯುವತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಗುರುವಾರ ನಡೆದಿದೆ. ಕಾಯರ್ತಡ್ಕ ಕುರುಂಬುಡೇಲು ನಿವಾಸಿ ವನಿತಾ ಯಾನೆ ರೇವತಿ (30) ಆತ್ಮಹತ್ಯೆ ಮಾಡಿಕೊಂಡವರು. ಮಂಗಳೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ವನಿತಾ ಅನಾರೋಗ್ಯ ಹಿನ್ನಲೆಯಲ್ಲಿ ಒಂದು ತಿಂಗಳು ಮನೆಯಲ್ಲಿದ್ದರು. ಬುಧವಾರ ಮುಂಜಾನೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಡೆತ್ ನೋಟ್ ದೊರಕಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದೆ. ಧರ್ಮಸ್ಥಳ ಪೊಲೀಸರು

ನೇಣು ಬಿಗಿದು ಯುವತಿ ಆತ್ಮಹತ್ಯೆ ! Read More »

ಅಡ್ಯನಡ್ಕ ಬ್ಯಾಂಕ್‍ ದರೋಡೆ | ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಭೇಟಿ | ಘಟನೆ ಕುರಿತು ಮಾಹಿತಿ ನೀಡಿದ ಎಸ್.ಪಿ. ರಿಷ್ಯಂತ್

ಅಡ್ಯನಡ್ಕ : ಕರ್ನಾಟಕ ಬ್ಯಾಂಕ್‍ ಗೆ ಕಳ್ಳರು ನುಗ್ಗಿ ಕೋಟ್ಯಾಂತರ ಮೌಲ್ಯದ ನಗ-ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕು ಪಡೆದುಕೊಂಡಿದ್ದು, ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಬ್ಯಾಂಕ್‌ಗೆ ನಿನ್ನೆ ರಾತ್ರಿ ದರೋಡೆಕೋರರು ಒಳನುಗ್ಗಿದ್ದು, ಇಂದು ಮುಂಜಾನೆ ಎಂದಿನಂತೆ ಬ್ಯಾಂಕ್ ಸಿಬ್ಬಂದಿ ಬ್ಯಾಂಕ್ ತೆರೆದು ಒಳಗೆ ಹೋದಾಗ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಬಂದು

ಅಡ್ಯನಡ್ಕ ಬ್ಯಾಂಕ್‍ ದರೋಡೆ | ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಭೇಟಿ | ಘಟನೆ ಕುರಿತು ಮಾಹಿತಿ ನೀಡಿದ ಎಸ್.ಪಿ. ರಿಷ್ಯಂತ್ Read More »

ದ್ಚಿಚಕ್ರ ವಾಹನ ಕಳವು | ಪ್ರಕರಣ ದಾಖಲು

ಉಪ್ಪಿನಂಗಡಿ: ಗ್ರಾಮ ಪಂಚಾಯಿತಿ ನೀರು ನಿರ್ವಾಹಕ ಉಮೇಶ್ ನಾಯಕ್ ಅವರ  ದ್ವಿಚಕ್ರ ವಾಹನವನ್ನು ಕಳವುಗೈದ ಕುರಿತು ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಉಮೇಶ್ ನಾಯಕ್ ಅವರು ಗಾಂಧೀ ಪಾರ್ಕ್ ನ ಹೈ ಮಾಸ್ಕ್ ವಿದ್ಯುತ್ ಕಂಬದ ಬಳಿ ಹೊಂಡಾ ಆ್ಯಕ್ಟಿವಾವನ್ನು ನಿಲ್ಲಿಸಿದ್ದರು. ಬಳಿಕ ಅದೇ ಸ್ಥಳಕ್ಕೆ ಬಂದಾಗ ವಾಹನ ಕಳವುಗೈದಿರುವ ಕುರಿತು ಗಮನಕ್ಕೆ ಬಂದಿದೆ. ತಕ್ಷಣ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ದ್ಚಿಚಕ್ರ ವಾಹನ ಕಳವು | ಪ್ರಕರಣ ದಾಖಲು Read More »

ಕರ್ನಾಟಕ ಬ್ಯಾಂಕ್‍ ಅಡ್ಯನಡ್ಕ ಶಾಖೆಗೆ ನುಗ್ಗಿದ ಕಳ್ಳರು | ಲಕ್ಷಾಂತರ ಮೌಲ್ಯದ ನಗ, ನಗದು ಕಳವು

ವಿಟ್ಲ: ಅಡ್ಯನಡ್ಕ ಕರ್ನಾಟಕ ಬ್ಯಾಂಕ್‍ಗೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನ, ಹಣ ಕಳವು ಮಾಡಿ ಪರಾರಿಯಾದ ಘಟನೆ ಬುಧವಾರ ತಡರಾತ್ರಿ ನಡೆದಿದೆ. ವಿಟ್ಲ ಅಡ್ಯನಡ್ಕದಲ್ಲಿ ಕಾರ್ಯಾಚರಿಸುತ್ತಿದ್ದ ಸುಮಾರು 20 ವರ್ಷ ಹಳೆಯ ಕಟ್ಟಡದಲ್ಲಿರುವ ಕರ್ನಾಟಕ ಬ್ಯಾಂಕ್ ಶಾಖೆಯ ಕಿಟಕಿಗಳನ್ನು ಮುರಿದು ಕಳ್ಳರು ಒಳನುಗ್ಗಿದ್ದಾರೆ. ಯಾವುದೇ ಭದ್ರತೆಯಿಲ್ಲದ ಈ ಬ್ಯಾಂಕ್ ನಿಂದ ಕಳ್ಳತನಕ್ಕೆ ಅಜಾಗರೂಕತೆಯೇ ಕಾರಣ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಕಳವಾದ ಸೊತ್ತುಗಳ ನಿಖರವಾದ ಮೌಲ್ಯ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.

ಕರ್ನಾಟಕ ಬ್ಯಾಂಕ್‍ ಅಡ್ಯನಡ್ಕ ಶಾಖೆಗೆ ನುಗ್ಗಿದ ಕಳ್ಳರು | ಲಕ್ಷಾಂತರ ಮೌಲ್ಯದ ನಗ, ನಗದು ಕಳವು Read More »

ಬ್ಯಾಂಕ್‍ ಸಿಬ್ಬಂದಿಯೆಂದು ಒಟಿಪಿ ಪಡೆದು ಲಕ್ಷಾಂತರ ವಂಚನೆ | ಪ್ರಕರಣ ದಾಖಲು

ಪುತ್ತೂರು : ಕೆವೈಸಿ ಅಪ್‍ಡೇಟ್ ಇದೆ ಎಂದು ವ್ಯಕ್ತಿಯೊಬ್ಬರಿಂದ ಬ್ಯಾಂಕ್ ಸಿಬ್ಬಂದಿ ಎಂದು ಹೇಳಿಕೊಂಡು ಒಟಿಪಿ ಪಡೆದು ಖಾತೆಯಿಂದ ಲಕ್ಷಾಂತರ ರೂ. ವಂಚಿಸಿದ ಘಟನೆ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಂದ್ರಶೇಖರ ಭಟ್ (62) ಒಟಿಪಿ ನೀಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡವರು. ಮಂಗಳವಾರ ಚಂದ್ರಶೇಖರ ಭಟ್ ಅವರ ಮೊಬೈಲಿಗೆ ಕೆವೈಸಿ ಅಪ್‍ ಡೇಟ್ ಮಾಡುವ ಕುರಿತು ಸಂದೇಶ ಬಂದಿದೆ. ಸಂದೇಶದಲ್ಲಿ ತಿಳಿಸಿದ ದೂರವಾಣಿ ಸಂಖ್ಯೆಗೆ ಅವರು ಕರೆ ಮಾಡಿದಾಗ ನಿಮ್ಮ ಖಾತೆ ಬ್ಲಾಕ್ ಆಗಿದೆ.

ಬ್ಯಾಂಕ್‍ ಸಿಬ್ಬಂದಿಯೆಂದು ಒಟಿಪಿ ಪಡೆದು ಲಕ್ಷಾಂತರ ವಂಚನೆ | ಪ್ರಕರಣ ದಾಖಲು Read More »

ರಸ್ತೆ ಬದಿ ಮಾದಕ ವಸ್ತುಗಳ ಮಾರಾಟ | ಆರೋಪಿಗಳಿಬ್ಬರು ಪೊಲೀಸರ ವಶಕ್ಕೆ

ಮಂಗಳೂರು : ರಸ್ತೆ ಬದಿಯಲ್ಲಿ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೇಂದ್ರ ಉಪ-ವಿಭಾಗ ಆ್ಯಂಟಿ ಡ್ರಗ್ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಅತ್ತಾವರದ ಆದಿತ್ಯ ಕೆ (29), ಅಡ್ಯಾರ್ ಪದವು ನಿವಾಸಿ ರೋಹನ್‌ ಸಿಕ್ಕೇರಾ (33) ಬಂಧಿತ ಆರೋಪಿಗಳು. ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್ ಅಗ್ರವಾಲ್ ಅವರ ನಿರ್ದೇಶನದಂತೆ, ಉಪ ಪೊಲೀಸ್ ಆಯುಕ್ತ ಸಿದ್ದಾರ್ಥ್ ಗೋಯಲ್ ಐ.ಪಿ.ಎಸ್, ಉಪ ಪೊಲೀಸ್‌ ಆಯುಕ್ತ ದಿನೇಶ್ ಕುಮಾರ್ ಮಾರ್ಗದರ್ಶನದಲ್ಲಿ, ಕೇಂದ್ರ ಉಪ

ರಸ್ತೆ ಬದಿ ಮಾದಕ ವಸ್ತುಗಳ ಮಾರಾಟ | ಆರೋಪಿಗಳಿಬ್ಬರು ಪೊಲೀಸರ ವಶಕ್ಕೆ Read More »

error: Content is protected !!
Scroll to Top