ಅಪರಾಧ

ನೈತಿಕ ಪೊಲೀಸ್‍ ಗಿರಿ ! | ಮೂವರು ಪೊಲೀಸರ ವಶಕ್ಕೆ

ಅನ್ಯಕೋಮಿನ ಯುವಕ ಯುವತಿಗೆ  ಹಿಂದೂ ಸಂಘಟನೆ ಕಾರ್ಯಕರ್ತರು ತಡೆದು ಕಿರಿಕ್ ಮಾಡುವ ಮೂಲಕ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಮಂಗಳೂರಿನ ಪ್ರವಾಸಿ ತಾಣವಾದ ಪಣಂಬೂರು ಬೀಚ್ ನಲ್ಲಿ ನಡೆದಿದೆ. ಕೇರಳದ ಯುವಕ ಹಾಗೂ ಬೆಂಗಳೂರಿನ ಯುವತಿ ಪಣಂಬೂರು ಬೀಚ್ ಗೆ ಬಂದಿದ್ದರು. ಈ ವೇಳೆ ಅಲ್ಲಿಗೆ ಬಂದ  ಹಿಂದೂ ಸಂಘಟನೆ ಕಾರ್ಯಕರ್ತರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.  ಈ ಸಂದರ್ಭದಲ್ಲಿ  ಸ್ಥಳಕ್ಕೆ ಆಗಮಿಸಿದ ಪೊಲೀಸರು ಅನ್ಯಜೋಡಿ ಹಾಗೂ ಹಿಂದೂ ಕಾರ್ಯಕರ್ತರನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ನಂತರ ಈ […]

ನೈತಿಕ ಪೊಲೀಸ್‍ ಗಿರಿ ! | ಮೂವರು ಪೊಲೀಸರ ವಶಕ್ಕೆ Read More »

ಅಕ್ರಮ ಗೋಮಾಂಶ ವಶ | ಇಬ್ಬರು ಪೊಲೀಸರ ವಶಕ್ಕೆ

ಬಿ.ಸಿ.ರೋಡು: ಅಕ್ರಮ ಗೋಮಾಂಸವನ್ನು ಪತ್ತೆಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಕಲ್ಲಡ್ಕದಲ್ಲಿ ಇಂದು ಮುಂಜಾನೆ ನಡೆದಿದೆ. ಬಜರಂಗದಳ ಕಲ್ಲಡ್ಕ ಪ್ರಖಂಡದ ಮಾಹಿತಿ ಮೇರೆಗೆ ಇಂದು ಮುಂಜಾನೆ ಕಲ್ಲಡ್ಕ ಮದಕ ಬಳಿ ಬಿಸಿ ರೋಡ್ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಂದಾಜು 2 ಕಿಂಟ್ಟಾಲ್ ಗೋ ಮಾಂಸ, ಒಂದು ಆಟೋ , ಆಲ್ಟೋ ಕಾರು ಹಾಗೂ ಬೈಕ್ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಆರೋಪಿಗಳ ಪೈಕಿ ಓರ್ವ ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಅಕ್ರಮ ಗೋಮಾಂಶ ವಶ | ಇಬ್ಬರು ಪೊಲೀಸರ ವಶಕ್ಕೆ Read More »

ಅಕ್ರಮ ವೇಶ್ಯಾವಾಟಿಕೆ ದಂಧೆ : ಮೂವರು ಪೊಲೀಸ್ ವಶಕ್ಕೆ

ಮಣಿಪಾಲ: ಅಕ್ರಮವಾಗಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರನ್ನು ಮಣಿಪಾಲ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಪವನ್, ಚೇತನ್ ಸಿ.ಬಿ. ಹಾಗೂ ಪಂಜು ಬಂಧಿತ ಆರೋಪಿಗಳು ಮಹಿಳೆಯರನ್ನು ಪುಸಲಾಯಿಸಿ ಕರೆ ತಂದು ಅಕ್ರಮ ವೇಶ್ಯಾವಾಟಿಕೆಗೆ ಕಳುಹಿಸಿಕೊಡುತ್ತಿರುವ ಕುರಿತು ಬಂದ ಮಾಹಿತಿಯಂತೆ ಸ್ಥಳಕ್ಕೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಮೊದಲಿಗೆ ಆರೋಪಿ ಪವನ್‌ ಎಂಬವನನ್ನು ವಶಕ್ಕೆ ಪಡೆದಿದ್ದಾರೆ. ಪವನ್ ಹೇಳಿಕೆಯಂತೆ ಉಡುಪಿ ತಾಲೂಕು ಬೊಮ್ಮರಬೆಟ್ಟು ಮನೆಗೆ ದಾಳಿ ನಡೆಸಿ ಆರೋಪಿ ಚೇತನ್‌ ಸಿ.ಬಿ. ಹಾಗೂ ಆರೋಪಿ ಪಂಜು ಎಂಬವರನ್ನು ವಶಕ್ಕೆ

ಅಕ್ರಮ ವೇಶ್ಯಾವಾಟಿಕೆ ದಂಧೆ : ಮೂವರು ಪೊಲೀಸ್ ವಶಕ್ಕೆ Read More »

ಮಹಿಳೆಯಿಂದ ಚಿನ್ನದ ಸರ ಸುಲಿಗೆ | ಇಬ್ಬರು ಆರೋಪಿಗಳ ಬಂಧನ

ಬೆಳ್ಳಾರೆ: ಚಿನ್ನದ ಸರ ಸುಲಿಗೆ ಮಾಡಿದ ಇಬ್ಬರು ಅಪರಿಚಿತ ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇರಳ ನಿವಾಸಿ ಚಂದ್ರಮೋಹನ್ (42) ಹಾಗೂ ನರಿಮೊಗರು ನಿವಾಸಿ ನೌಶಾದ್ ಬಿ.ಎ. (36) ಬಂಧಿತ ಆರೋಪಿಗಳು ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಜ.11 ರಂದು ಇಬ್ಬರು ಅಪರಿಚಿತರು ಮಹಿಳೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರ ಎಳೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಶೀಘ್ರ ಪತ್ತೆಗಾಗಿ ವಿಶೇಷ ತನಿಖಾ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಇದೀಗ

ಮಹಿಳೆಯಿಂದ ಚಿನ್ನದ ಸರ ಸುಲಿಗೆ | ಇಬ್ಬರು ಆರೋಪಿಗಳ ಬಂಧನ Read More »

ಟಿಪ್ಪು ಭಾವಚಿತ್ರಕ್ಕೆ ಚಪ್ಪಲಿ ಹಾರ | ಕಿಡಿಗೇಡಿಗಳನ್ನು ಬಂಧಿಸುವಂತೆ ಪ್ರತಿಭಟನೆ

ರಾಯಚೂರು: ಕಿಡಿಗೇಡಿಗಳು ಟಿಪ್ಪುಸುಲ್ತಾನ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಪರಿಣಾಮ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಮುಸ್ಲಿಂ ಸಮುದಾಯ ರಸ್ತೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದೆ. ಸಿರವಾರ ಪಟ್ಟಣದ ಮಾರ್ಕೆಟ್ ಬಳಿ ಇರುವ ಟಿಪ್ಪು ಸರ್ಕಲ್ ನಲ್ಲಿ ಹಾಕಲಾಗಿದ್ದ ಟಿಪ್ಪು ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕುವ ಮೂಲಕ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿತ್ತು. ಆಕ್ರೋಶಗೊಂಡ ಪ್ರತಿಭಟನಾಕಾರರು ಚಪ್ಪಲಿ ಹಾರ ಹಾಕಿದವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದೆ. ಮಾಹಿತಿ ತಿಳಿದ ಪೊಲೀಸರು ಮುಖಂಡರ ಜತೆ

ಟಿಪ್ಪು ಭಾವಚಿತ್ರಕ್ಕೆ ಚಪ್ಪಲಿ ಹಾರ | ಕಿಡಿಗೇಡಿಗಳನ್ನು ಬಂಧಿಸುವಂತೆ ಪ್ರತಿಭಟನೆ Read More »

ಆರ್.ಎಸ್.ಎಸ್. ಕಾರ್ಯಕರ್ತನ ಹತ್ಯೆ ಪ್ರಕರಣ: 15 ಪಿ.ಎಫ್.ಐ. ಕಾರ್ಯಕರ್ತರಿಗೆ ಗಲ್ಲು!! | ಕೇರಳದ ಇತಿಹಾಸದಲ್ಲಿ ದೊಡ್ಡ ಸಂಖ್ಯೆಯ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಿದ್ದು ಇದೇ ಮೊದಲು!!

ಕೇರಳ ನ್ಯಾಯಾಲಯ 15 ಮಂದಿ ಪಿ.ಎಫ್.ಐ. ಕಾರ್ಯಕರ್ತರಿಗೆ ಗಲ್ಲು ಶಿಕ್ಷೆ ವಿಧಿಸಿದೆ. 15 ಮಂದಿ ಅಪರಾಧಿಗಳಿಗೆ ಒಟ್ಟಿಗೆ ಗಲ್ಲು ಶಿಕ್ಷೆ ವಿಧಿಸಿರುವುದು ಕೇರಳದ ಇತಿಹಾಸದಲ್ಲೇ ಇದೇ ಮೊದಲು ಎಂದು ಹೇಳಲಾಗಿದೆ. ರಾಷ್ಟ್ರೀಯ ಸ್ವಯಂ ಸೇವಕ (ಆರ್‌ ಎಸ್‌ ಎಸ್)‌ ಸಂಘದ ಕಾರ್ಯಕರ್ತ, ಬಿಜೆಪಿ ನಾಯಕ ರಂಜಿತ್‌ ಶ್ರೀನಿವಾಸನ್‌ ಹತ್ಯೆ ಪ್ರಕರಣದಲ್ಲಿ ಕೇರಳ ನ್ಯಾಯಾಲಯ ಈ ತೀರ್ಪು ನೀಡಿದೆ. ಕೇರಳದ ಮಾವೇಲಿಕರ ಅಡಿಷನಲ್ ಸೆಷನ್ಸ್ ನ್ಯಾಯಾಲಯ ನ್ಯಾಯಧೀಶೆ ವಿಜಿ ಶ್ರೀದೇವಿ ತೀರ್ಪು ಪ್ರಕಟಿಸಿದ್ದಾರೆ. 2021ರ ಡಿಸೆಂಬರ್ 19ರಂದು ರಂಜಿತ್

ಆರ್.ಎಸ್.ಎಸ್. ಕಾರ್ಯಕರ್ತನ ಹತ್ಯೆ ಪ್ರಕರಣ: 15 ಪಿ.ಎಫ್.ಐ. ಕಾರ್ಯಕರ್ತರಿಗೆ ಗಲ್ಲು!! | ಕೇರಳದ ಇತಿಹಾಸದಲ್ಲಿ ದೊಡ್ಡ ಸಂಖ್ಯೆಯ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಿದ್ದು ಇದೇ ಮೊದಲು!! Read More »

ಸುಡುಮದ್ದು ಸ್ಫೋಟ ಪ್ರಕರಣ; ಮಾಲೀಕ ಸೈಯದ್ ಬಶೀರ್ ವಶಕ್ಕೆ

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಕುಕ್ಕೇಡಿ ಗ್ರಾಮದ ಕಡ್ತ್ಯಾರು ಪಟಾಕಿ ತಯಾರಿಕಾ ಗೋಡೌನ್ ನಲ್ಲಿ ಪಟಾಕಿ ತಯಾರಿಕೆ ವೇಳೆ ಜ.28 ರಂದು ಸಂಜೆ ಸ್ಫೋಟ ಸಂಭವಿಸಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಸೈಯದ್ ಬಶೀರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡಿದ ದೂರಿನ ಮೇರೆಗೆ ಸುಡುಮದ್ದು ತಯಾರಿಕಾ ಘಟಕದ ಮಾಲೀಕ ಬಶೀರ್‌ ಮೇಲೆ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ ಜಾಗ ಹಾಗೂ ಪಟಾಕಿ ತಯಾರಿಕಾ

ಸುಡುಮದ್ದು ಸ್ಫೋಟ ಪ್ರಕರಣ; ಮಾಲೀಕ ಸೈಯದ್ ಬಶೀರ್ ವಶಕ್ಕೆ Read More »

ಬೆಳ್ತಂಗಡಿ; ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟ! | ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

ಬೆಳ್ತಂಗಡಿ: ಕುಕ್ಕೇಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸುಡುಮದ್ದು ತಯಾರಿಸುವ ಘಟಕವೊಂದರಲ್ಲಿ ಸ್ಫೋಟ ಉಂಟಾಗಿ ಕನಿಷ್ಠ ಇಬ್ಬರು ಮೃತಪಟ್ಟಿರುವ ಘಟನೆ ರವಿವಾರ ನಡೆದಿದೆ. ಸ್ಫೋಟದ ತೀವ್ರತೆಗೆ ದೇಹಗಳು ಛಿದ್ರಗೊಂಡಿರುವುದಾಗಿ ತಿಳಿದು ಬಂದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ. ಘಟಕದ ಮಾಲಕ ಬಶೀರ್ ಸ್ಥಳದಿಂದ ಪರಾರಿಯಾಗಿದ್ದು, ಇನ್ನು ಹೆಚ್ಚಿನ ಸಾವು ಸಂಭವಿಸಿರುವ ಸಾಧ್ಯತೆ ಇದ್ದು ಹುಡುಕಾಟ ನಡೆಯುತ್ತಿದೆ. ವೇಣೂರು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇಬ್ಬರು ಸಾವನ್ನಪ್ಪಿರುವುದಾಗಿ ಪ್ರಾಥಮಿಕ ಮಾಹಿತಿಗಳು ಲಭ್ಯವಾಗುತ್ತಿದ್ದು, ಹೆಚ್ಚಿನ

ಬೆಳ್ತಂಗಡಿ; ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟ! | ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ Read More »

ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಶಾಕೀರ್ ಬಗ್ಗೆ ಮುಂದುವರಿದ ತನಿಖೆ! | ಠಾಣೆ ಮುಂದೆ ಜಮಾಯಿಸಿದ್ದ ಜನರನ್ನು ಸಮಾಧಾನಿಸಿದ ಪುತ್ತಿಲ!

ಪುತ್ತೂರು: ಅಪ್ರಾಪ್ತ ಬಾಲಕಿಯೋರ್ವಳಿಗೆ ಯುವಕ ಶಾಕೀರ್ ಕಿರುಕುಳ ನೀಡಿದ ಘಟನೆ ಶನಿವಾರ ತಡರಾತ್ರಿ ಪುತ್ತೂರು ನಗರದಲ್ಲಿ ನಡೆದಿದೆ. ಆರೋಪಿಯನ್ನು ಕಡಬ ಮೂಲದ ಶಾಕೀರ್ ಎಂದು ಗುರುತಿಸಲಾಗಿದೆ. ಈತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಆತನ ಬಗ್ಗೆ ತನಿಖೆಯನ್ನು ಮುಂದುವರಿಸಿದ್ದಾರೆ. ಪುತ್ತೂರು ಮೂಲದ ಅಪ್ರಾಪ್ತ ಬಾಲಕಿಗೆ ದಾರಿ ಮಧ್ಯೆ ಆರೊಪಿ ದೌರ್ಜನ್ಯ ಎಸಗಿದ್ದಾನೆಂದು ಆರೋಪಿಸಲಾಗಿದೆ. ಇದೇ ಸಂದರ್ಭ ಆರೋಪಿಯನ್ನು ತಮ್ಮ ವಶಕ್ಕೆ ನೀಡಬೇಕೆಂದು ತಂಡವೊಂದು ಠಾಣೆಯ ಮುಂದೆ ಜಮಾಯಿಸಿತ್ತು. ಉದ್ರಿಕ್ತರನ್ನು ಹಿಂದೂ ಮುಖಂಡ ಅರುಣ್‌ ಕುಮಾರ ಪುತ್ತಿಲ ಅವರು ಸಮಾಧಾನಿಸಿದರು. 

ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಶಾಕೀರ್ ಬಗ್ಗೆ ಮುಂದುವರಿದ ತನಿಖೆ! | ಠಾಣೆ ಮುಂದೆ ಜಮಾಯಿಸಿದ್ದ ಜನರನ್ನು ಸಮಾಧಾನಿಸಿದ ಪುತ್ತಿಲ! Read More »

ಮಗನನ್ನೇ ಗುಂಡಿಟ್ಟು ಕೊಂದ ತಂದೆ!!

ವ್ಯಕ್ತಿಯೋರ್ವ ಕೋಪದ ಭರದಲ್ಲಿ ತನ್ನ ಮಗನನ್ನೇ ಗುಂಡಿಟ್ಟು ಕೊಂದಿರುವ ಆಘಾತಕಾರಿ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಬಳಿ ನಡೆದಿದೆ. ಮೃತರನ್ನು ಕರೆಕಲ್ಮನೆ ನಿವಾಸಿ 32 ವರ್ಷದ ನರ್ತನ್ ಬೋಪಣ್ಣ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ವಿಷಯವೊಂದಕ್ಕೆ ನರ್ತನ್ ಮತ್ತು ಅವರ ತಂದೆ ಸುರೇಶ್ ನಡುವೆ ಜಗಳ ಉಂಟಾಗಿದೆ. ಈ ಸಂದರ್ಭದಲ್ಲಿ ಕೋಪದ ಭರದಲ್ಲಿ ತಂದೆ ಮಗನನ್ನು ಹತೈಗೆದಿದ್ದಾರೆ. ಗುಂಡಿನ ಸದ್ದು ಕೇಳಿದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ನರ್ತನ್ ರಕ್ತದ ಮಡುವಿನಲ್ಲಿ ಬಿದ್ದಿರುವುದು

ಮಗನನ್ನೇ ಗುಂಡಿಟ್ಟು ಕೊಂದ ತಂದೆ!! Read More »

error: Content is protected !!
Scroll to Top