ಅಪರಾಧ

ಸಮುದ್ರ ಬೀಚ್‌ನಲ್ಲಿ ಜೋಡಿ ಮೃತದೇಹ ಪತ್ತೆ!

ಮಂಗಳೂರು: ಇಲ್ಲಿನ ಪಣಂಬೂರು ಬೀಚ್‌ನಲ್ಲಿ ಬೆಂಗಳೂರಿನ ಜೋಡಿ ಶವ ಗುರುವಾರ ಬೆಳಿಗ್ಗೆ ಪತ್ತೆಯಾಗಿದೆ. ಮೃತರನ್ನು ಲಕ್ಷ್ಮಿ(40) ಮತ್ತು ಬೋರಲಿಂಗಯ್ಯ (45) ಎಂದು ಗುರುತ್ತಿಸಲಾಗಿದ್ದು, ಇವರಿಬ್ಬರೂ ಬೆಂಗಳೂರು ಮೂಲದವರು. ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ. ಬುಧವಾರ ಬೆಂಗಳೂರಿನಿಂದ ಆಗಮಿಸಿದ್ದ ಈ ಜೋಡಿ, ಗುರುವಾರ ಮುಂಜಾನೆ 5 ಗಂಟೆ ಸುಮಾರಿಗೆ ಪಣಂಬೂರಿಗೆ ಬಂದು ಸಮುದ್ರಕ್ಕೆ ಧುಮುಕಿದ್ದರು ಎನ್ನಲಾಗಿದೆ. ಸಮುದ್ರಕ್ಕೆ ಹಾರುವ ಮುಂಚೆ ತಮ್ಮ ಮೊಬೈಲ್ ಮತ್ತಿತರ ಸೊತ್ತುಗಳನ್ನು ತೀರದಲ್ಲೇ ಬಿಟ್ಟಿದ್ದರಿಂದ ಪೊಲೀಸರು ಸಂಬಂಧಿಕರನ್ನು ಸಂಪರ್ಕಿಸಿ ಮಾಹಿತಿ ನೀಡಿದರು. […]

ಸಮುದ್ರ ಬೀಚ್‌ನಲ್ಲಿ ಜೋಡಿ ಮೃತದೇಹ ಪತ್ತೆ! Read More »

ನಟಿ ರಾಧಿಕಾ ಮನೆಯ ಕೆಲಸದಾಳು ನಾಪತ್ತೆ!

ವಿಟ್ಲ: ಚಲನಚಿತ್ರ ನಟಿ ರಾಧಿಕಾ ಅವರ ಅಮ್ಟೂರು ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವಳು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು‌ ದಾಖಲಾಗಿದೆ. ಮೂಲತಃ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಾದನಗಿರಿ ನಿವಾಸಿ ಮಹಾದೇವ ಮಾರಿಪಟಗಾರ್ ಅವರ ಪತ್ನಿ ನಾಗರತ್ನ (33) ಕಾಣೆಯಾದ ಮಹಿಳೆ. ‌ತಾಲೂಕಿನ‌ ಅಮ್ಟೂರು ಗ್ರಾಮದ ರಾಯಪ್ಪನಕೋಡಿ ಎಂಬಲ್ಲಿ ಚಲನ ಚಿತ್ರ ನಟಿ ರಾಧಿಕ ಅವರ ಎಸ್ಟೇಟ್‌ ನಲ್ಲಿ ಕಳೆದ ಆರು ತಿಂಗಳ ಹಿಂದೆ ಕೆಲಸಕ್ಕೆ ಸೇರಿದ ನಾಗರತ್ನ ಇದೀಗ ಕಾಣೆಯಾಗಿದ್ದಾರೆ. ನಾಗರತ್ನ

ನಟಿ ರಾಧಿಕಾ ಮನೆಯ ಕೆಲಸದಾಳು ನಾಪತ್ತೆ! Read More »

ಲಂಚ ಸ್ವೀಕಾರ : ಇಂಜಿನಿಯರ್ ಲೋಕಾಯುಕ್ತ ಬಲೆಗೆ

ಮಂಗಳೂರು : ಕಾಮಗಾರಿ ನಡೆದ ಬಳಿಕ ಸ್ಥಳದಲ್ಲಿರುವ ಮೆಟೀರಿಯಲ್ ಪರಿಶೀಲನೆ ನಡೆಸಿ ವರದಿ ನೀಡಲು ಗುತ್ತಿಗೆದಾರರೊಬ್ಬರಿಂದ ಲಂಚ ಬೇಡಿಕೆ ಇಟ್ಟಿದ್ದ ಮಂಗಳೂರು ಲೋಕೋಪಯೋಗಿ ಸಹಾಯಕ ಕಾರ್ಯಪಾಲ ಇಂಜಿನಿಯರ್ ಕಚೇರಿಯ ಗುಣ ಭರವಸೆ ಉಪವಿಭಾಗದ ಕಿರಿಯ ಇಂಜಿನಿಯರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಿರಿಯ ಇಂಜಿನಿಯರ್ -2 ಅಗಿರುವ ರೋನಾಲ್ಡ್ ಲೋಬೋ ಲೋಕಾಯುಕ್ತ ಬಲೆಗೆ ಬಿದ್ದವರು. ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಕಾಮಗಾರಿ ನಡೆಸಿದ ಬಳಿಕ ಸ್ಥಳದಲ್ಲಿದ್ದ ಮೆಟೀರಿಯಲ್ ಪರಿಶೀಲನೆಗೆ ಬೆಳ್ತಂಗಡಿಯ ಗುತ್ತಿಗೆದಾರರೊಬ್ಬರಿಂದ 20 ಸಾವಿರ ರೂ. ಲಂಚದ ಬೇಡಿಕೆ

ಲಂಚ ಸ್ವೀಕಾರ : ಇಂಜಿನಿಯರ್ ಲೋಕಾಯುಕ್ತ ಬಲೆಗೆ Read More »

ಕೆರೆಗೆ ಬಿದ್ದು ಮಹಿಳೆ ಮೃತ್ಯು

ಪುತ್ತೂರು: ಮಹಿಳೆಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಎಡಮಂಗಲ ಗ್ರಾಮದ ಕೇರ್ಪಡ ಎಂಬಲ್ಲಿ ಬುಧವಾರ ನಡೆದಿದೆ. ಕೇರ್ಪಡ ದಿ.ಹುಕ್ರ ಎಂಬವರ ಪತ್ನಿ ಗಿರಿಜಾ (50) ಮೃತಪಟ್ಟವರು. ಮೃತ ಗಿರಿಜಾ ಅವರ ಮನೆಯವರು ಅಡಿಕೆ ಹೆಕ್ಕಲು ಹೋದಾಗ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಗಿರಿಜಾ ಅವರು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೃತರು ಪುತ್ರ ಲೋಕೇಶ್ ಅವರನ್ನು ಅಗಲಿದ್ದಾರೆ.

ಕೆರೆಗೆ ಬಿದ್ದು ಮಹಿಳೆ ಮೃತ್ಯು Read More »

ರಕ್ಷಿತಾರಣ್ಯದಲ್ಲಿ ಅಕ್ರಮ ಜಾನುವಾರು ಮಾಂಸ: ಆರೋಪಿಗಳು ಪರಾರಿ

ನೆಲ್ಯಾಡಿ: ಜಾನುವಾರು ಕಡಿದು ಮಾಂಸ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿರುವ ಘಟನೆ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ನಡೆದಿದೆ. ದಾಳಿ ವೇಳೆ ನಾಲ್ವರು ಪರಾರಿಯಾಗಿರುವುದಾಗಿ ವರದಿಯಾಗಿದೆ. ಶಿರಾಡಿ-ಶಿಶಿಲ ರಕ್ಷಿತಾರಣ್ಯದ ನದಿ ಕಿನಾರೆಯಲ್ಲಿ ನದಿ ಕಿನಾರೆಯ ರಕ್ಷಿತಾರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಜಾನುವಾರನ್ನು ಕಡಿದು ಮಾಂಸ ಮಾಡಲಾಗಿತ್ತು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ನೆಲ್ಯಾಡಿ ಹೊರಠಾಣೆ ಪೊಲೀಸರು ದಾಳಿ ನಡೆಸಿದ್ದರು. ಪೊಲೀಸರು ದಾಳಿ ನಡೆಸುತ್ತಿದ್ದಂತೆ ಸ್ಥಳದಲ್ಲಿದ್ದ ನಾಲ್ವರು ಅಲ್ಲಿಂದ ಓಡಿ ಪರಾರಿಯಾಗಿದ್ದಾರೆ. ಪ್ಲಾಸ್ಟಿಕ್ ಚೀಲ, ಪ್ಲಾಸ್ಟಿಕ್ ಟರ್ಪಾಲು,

ರಕ್ಷಿತಾರಣ್ಯದಲ್ಲಿ ಅಕ್ರಮ ಜಾನುವಾರು ಮಾಂಸ: ಆರೋಪಿಗಳು ಪರಾರಿ Read More »

ಕಳವಾದ ದೇವಸ್ಥಾನದ ಆಭರಣದೊಂದಿಗೆ ಶರಣಾದ ಮಾಜಿ ಅಧ್ಯಕ್ಷ!

ಉಪ್ಪಿನಂಗಡಿ: ಡಿಸೆಂಬರ್ ತಿಂಗಳಲ್ಲಿ ನಡೆದ ಬ್ರಹ್ಮಕಲಶೋತ್ಸವ ವೇಳೆ ಪೆರ್ನೆಯ ಕಳೆಂಜ- ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಮರ್ಪಿಸಲಾದ ಆಭರಣ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ ಬೆನ್ನಲ್ಲೇ ಆರೋಪಿ ಆಭರಣದೊಂದಿಗೆ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ. ದೇವಳದ ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ರೋಹಿತಾಕ್ಷ ಬಾಣಬೆಟ್ಟು ನಾಪತ್ತೆಯಾದ ಚಿನ್ನಾಭರಣದೊಂದಿಗೆ ಪೊಲೀಸರಿಗೆ ಶರಣಾದ ವ್ಯಕ್ತಿ. ಕಳೆದ ಡಿಸೆಂಬರ್’ನಲ್ಲಿ ದೇವಾಲಯದ ಬ್ರಹ್ಮಕಲಶಾಭಿಷೇಕ ನಡೆದಿದ್ದು, ಈ ಸಂದರ್ಭ ಭಕ್ತರೋರ್ವರು ಸುಮಾರು ಮೂರು ಮುಕ್ಕಾಲು ಪವನಿನ ಐದು ಎಳೆಗಳಿಂದ ಕೂಡಿದ ಚಿನ್ನದ ಜೋ

ಕಳವಾದ ದೇವಸ್ಥಾನದ ಆಭರಣದೊಂದಿಗೆ ಶರಣಾದ ಮಾಜಿ ಅಧ್ಯಕ್ಷ! Read More »

ಗೆಳೆಯರೊಂದಿಗೆ ಈಜಲು ತೆರಳಿದ್ದ ತಸ್ಲೀಮ್ ಶವ ಪತ್ತೆ!

ಮಾಡಾವು: ಗೆಳೆಯರೊಂದಿಗೆ ಈಜಲು ತೆರಳಿದ್ದ ಯುವಕನ ಮೃತದೇಹ ಸೋಮವಾರ ಬೆಳಿಗ್ಗೆ ಹೊಳೆಯಲ್ಲಿ ಪತ್ತೆಯಾಗಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17 ವ.) ಮೃತಪಟ್ಟವರು. ತಸ್ಲೀಮ್ ಅ. 15ರಂದು ಸಂಜೆ ಗೆಳೆಯರ ಜೊತೆಗೂಡಿ ಅರಿಕ್ಕಿಲ ಸಮೀಪದ ಎರಕ್ಕಲ ಎಂಬಲ್ಲಿ ಹೊಳೆಗೆ ಈಜಲು ತೆರಳಿದ್ದ ವೇಳೆ ಘಟನೆ ಸಂಭವಿಸಿತ್ತು. ಯುವಕ ನಾಪತ್ತೆಯಾಗುತ್ತಿದ್ದಂತೆ ಸ್ನೇಹಿತರು ಮನೆಯವರಿಗೆ, ಸ್ಥಳೀಯರಿಗೆ ವಿಷಯ ತಲುಪಿಸಿದ್ದರು. ತಕ್ಷಣ ಸ್ಥಳೀಯರು ಹೊಳೆಯಲ್ಲಿ ಹುಡುಕಾಟ ನಡೆಸಿದರಾದರೂ ಮೃತದೇಹ ಪತ್ತೆಯಾಗಿರಲಿಲ್ಲ. ಬಳಿಕ ಮುಳುಗು ತಜ್ಞರು ಕಾರ್ಯಾಚರಣೆ ಮುಂದುವರಿಸಿದ್ದರು.

ಗೆಳೆಯರೊಂದಿಗೆ ಈಜಲು ತೆರಳಿದ್ದ ತಸ್ಲೀಮ್ ಶವ ಪತ್ತೆ! Read More »

ಹೊಳೆಗೆ ಈಜಲು ತೆರಳಿದ ಬಾಲಕ ನಾಪತ್ತೆ : ಹುಡುಕಾಟ

ಮಾಡಾವು : ಹೊಳೆಗೆ ಈಜಲು ತೆರಳಿದ ಬಾಲಕನೋರ್ವ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದ್ದು, ಹುಡುಕಾಟ ನಡೆಸಲಾಗುತ್ತಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲಿಮ್ (17 ವ) ಗೆಳೆಯರ ಜೊತೆಗೂಡಿ ಅ. 15ರಂದು ಸಂಜೆ ಅರಿಕ್ಕಿಲ ಸಮೀಪದ ಎರಕ್ಕಲ ಎಂಬಲ್ಲಿನ ಹೊಳೆಗೆ ತೆರಳಿದ್ದು ಈಜುವ ವೇಳೆ ಬಾಲಕ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ. ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದು ಹುಡುಕಾಟ ನಡೆಸುತ್ತಿದ್ದಾರೆ.

ಹೊಳೆಗೆ ಈಜಲು ತೆರಳಿದ ಬಾಲಕ ನಾಪತ್ತೆ : ಹುಡುಕಾಟ Read More »

ಹಟ್ಟಿಯಿಂದ ದನ ಕಳವು: ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

ಸುಳ್ಯ: ತಿಂಗಳ ಹಿಂದೆ ಸಂಪಾಜೆ ಕಲ್ಲುಗುಂಡಿಯ ಗೂನಡ್ಕದಲ್ಲಿ ಹಟ್ಟಿಯಿಂದ ದನ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಆರೋಪಿಗಳನ್ನು ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಳ್ಯ ಮರ್ಕುಂಜ ನಿವಾಸಿ ಗಣೇಶ್ ಕಾಯಾರ ಮತ್ತು ಕೇರಳದ ಚೆಂಬೇರಿಯ ನಿವಾಸಿ ಅಬ್ದುಲ್ ಬಂಧಿತ ಆರೋಪಿಗಳು. ಸೆ. 13ರಂದು ತಡರಾತ್ರಿ ಎರಡು ಗಂಟೆ ವೇಳೆಗೆ ಗೂನಡ್ಕದ ವರದರಾಜ್ ಸಂಕೇಶ್ವರ್ ಅವರ ಮನೆಯ ಹಟ್ಟಿಯಲ್ಲಿದ್ದ ಎರಡು ಹಸುಗಳನ್ನು ಪಿಕಪ್ ಗೆ ತುಂಬಿ ಕದ್ದೊಯ್ಯಲಾಗಿತ್ತು. ಆರೋಪಿಗಳ ಚಲನ ವಲನಗಳನ್ನು ಸಿಸಿ ಕ್ಯಾಮೆರಾಗಳ ಸಹಾಯದಿಂದ ಸೆರೆ

ಹಟ್ಟಿಯಿಂದ ದನ ಕಳವು: ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು Read More »

5 ವರ್ಷಗಳಿಂದ  ತಲೆಮರೆಸಿಕೊಂಡಿದ್ದ 6 ಆರೋಪಿಗಳು ಸೆರೆ!

ಬಂಟ್ವಾಳ: ಫರಂಗಿಪೇಟೆಯಲ್ಲಿ ಅಕ್ರಮ ಮರಳು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಉತ್ತರಪ್ರದೇಶ ಮೂಲದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ ಸಹಾನಿ, ಅಮಿತ್ ಕುಮಾರ್, ಸತ್ಯೇಂದ್ರ ಸಹಾನಿ, ಸೈದಾನ್ ಸಹಾನಿ, ಅಭಯ್ ನಾರಾಯಣ್ ಬಂಧಿತರು. ಫರಂಗಿಪೇಟೆಯಲ್ಲಿ ಅಕ್ರಮ ಮರಳು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮೂಲದ ಆರು ಮಂದಿಯ ಮೇಲೆ ಬಂಟ್ವಾಳ ಗ್ರಾಮಾಂತರ

5 ವರ್ಷಗಳಿಂದ  ತಲೆಮರೆಸಿಕೊಂಡಿದ್ದ 6 ಆರೋಪಿಗಳು ಸೆರೆ! Read More »

error: Content is protected !!
Scroll to Top