ಅಪರಾಧ

ಹಿಂದೂ ಮುಖಂಡ ಅವಿನಾಶ್‍ ಗೆ ಗಡಿಪಾರು ಆದೇಶ | ವಿಚಾರಣೆಗೆ ಹಾಜರಾಗುವಂತೆ ನೋಟಿಸ್

ಪುತ್ತೂರು: ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ಪುರುಷರಕಟ್ಟೆ ನಿವಾಸಿ ಹಿಂದೂ ಮುಖಂಡ ಅವಿನಾಶ್ ಅವರಿಗೆ ದ.ಕ.ಜಿಲ್ಲಾ ವ್ಯಾಪ್ತಿಯಿಂದ ಬೀದರ್ ಜಿಲ್ಲಾ ವ್ಯಾಪ್ತಿಯ ಶಾಂತಪುರ ಪೊಲೀಸ್ ಠಾಣಾ ಸರಹದ್ದಿಗೆ ಗಡಿಪಾರಿಗೆ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ಆದೇಶ ಮಾಡುವ ಕುರಿತು ಪುತ್ತೂರು ಸಹಾಯಕ ಆಯುಕ್ತರ ಕಚೇರಿ ನ್ಯಾಯಾಲಯದಲ್ಲಿ ಜ.24 ರಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆ ನಡೆಯಲಿದೆ. ಕರ್ನಾಟಕ ಪೊಲೀಸ್ ಅಧಿನಿಯಮ-1963 ರ ಕಲಂ :55 ಪ್ರಕಾರ ಗಡಿಪಾರಿಗೆ ಆದೇಶಿಸಲಾಗಿದೆ. ವಿಚಾರಣೆಗೆ ಸಂಬಂಧಿಸಿ ಅವಿನಾಶ್ ಸ್ವತಃ ಅಥವಾ ವಕೀಲರ […]

ಹಿಂದೂ ಮುಖಂಡ ಅವಿನಾಶ್‍ ಗೆ ಗಡಿಪಾರು ಆದೇಶ | ವಿಚಾರಣೆಗೆ ಹಾಜರಾಗುವಂತೆ ನೋಟಿಸ್ Read More »

ಯಕ್ಷಗಾನ ಕಲಾವಿದ ನಾರಾಯಣ ನಾಯಕ್ ತೋಟಚಾವಡಿ ಆತ್ಮಹತ್ಯೆ !

ಸುಳ್ಯ: ಪ್ರಸಿದ್ಧ ಯಕ್ಷಗಾನ ಕಲಾವಿದರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಮರ್ಕಂಜದಲ್ಲಿ ನಡೆದಿದೆ. ಕೃಷಿಕ ನಾರಾಯಣ ನಾಯಕ್ ತೋಟಚಾವಡಿ (52) ಆತ್ಮಹತ್ಯೆ ಮಾಡಿಕೊಂಡ ಯಕ್ಷಗಾನ ಕಾಲವಿದರು. ಯಕ್ಷಗಾನದ ಹಿಮ್ಮೇಳದಲ್ಲಿ ಚೆಂಡೆ, ಮದ್ದಳೆ ವಾದಕರಾಗಿ ಪ್ರಸಿದ್ಧರಾಗಿದ್ದ ನಾರಾಯಣ ನಾಯಕ್ ಅವರ ಮನೆಯಲ್ಲಿ ಮುಂಜಾನೆ ಬಾಗಿಲು ತೆರೆಯದಿರುವುದನ್ನು ಗಮನಿಸಿದ ಪಕ್ಷದ ಮನೆಯವರು ಮನೆ ಬಳಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಪತ್ನಿ ಮಗಳ ಮನೆಗೆ ಹೋಗಿದ್ದ ಸಂದರ್ಭ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೃತರಿಗೆ ಇಬ್ಬರು ಪುತ್ರಿಯರಿದ್ದು,

ಯಕ್ಷಗಾನ ಕಲಾವಿದ ನಾರಾಯಣ ನಾಯಕ್ ತೋಟಚಾವಡಿ ಆತ್ಮಹತ್ಯೆ ! Read More »

ಮನೆ ಬಾಗಿಲು ಬಡಿದ ಅಪರಿಚಿತರು | ಓರ್ವ ಪೊಲೀಸ್ ವಶ

ಪುತ್ತೂರು: ಇಲ್ಲಿಯ ಕೊಂಬೆಟ್ಟು ಬಳಿ ಭಾನುವಾರ ನಸುಕಿನ ವೇಳೆ ಅಪರಿಚಿತರು ಮೂರು ಮನೆಗಳ ಬಾಗಿಲು ಬಡಿದು ಆತಂಕದ ವಾತವಾರಣ ಸೃಷ್ಟಿಸಿದ ಘಟನೆ ನಡೆದಿದೆ. ಭಾನುವಾರ ಬೆಳಿಗ್ಗೆ ಸುಮಾರು 5.30ರ ಹೊತ್ತಿಗೆ ಇಬ್ಬರು ಅಪರಿಚಿತರು ಮೂರು ಮನೆಗಳ ಬಾಗಿಲು ಬಡಿದು ಮನೆಯ ಸುತ್ತಾಮುತ್ತಾ ಓಡಾಡಿದ್ದಾರೆ. ಇದನ್ನು ಗಮನಿಸಿದ ಮನೆಯವರು ಹಿಡಿಯಲು ಹೋದಾಗ ಹಲ್ಲೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಮನೆಯ ಪ್ರವೀಣ್ ರಾವ್ ನಗರ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ. ಜತೆಗೆ ಸ್ಥಳೀಯ ನಗರಸಭಾ ಸದಸ್ಯರಿಗೂ ಮಾಹಿತಿ ನೀಡಿದ್ದಾರೆ.

ಮನೆ ಬಾಗಿಲು ಬಡಿದ ಅಪರಿಚಿತರು | ಓರ್ವ ಪೊಲೀಸ್ ವಶ Read More »

ಸರಕಾರಿ ಜಾಗ ಒತ್ತುವರಿ ತೆರವು ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ !!

ಬೆಳ್ತಂಗಡಿ: ಸರಕಾರಿ ಜಾಗದ ಒತ್ತುವರಿಯನ್ನು ತೆರವು ಗೊಳಿಸಲು ತೆರಳಿದ್ದ ತಹಶೀಲ್ದಾರರ ಮೇಲೆ ತಂಡವೊಂದು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿದ  ಘಟನೆ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಸರಕಾರಿ ಜಾಗ ಒತ್ತುವರಿಯಾಗಿರುವ ಕುರಿತು ಮಾಹಿತಿ ಬಂದ ಹಿನ್ನಲೆಯಲ್ಲಿ ಪರಿಶೀಲನೆಗೆಂದು ಕಂದಾಯ ನಿರೀಕ್ಷಕರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಂದಿಗೆ ತೆರಳಿದ್ದರು. ಈ ಸಂದರ್ಭ ಜಾಗವನ್ನು

ಸರಕಾರಿ ಜಾಗ ಒತ್ತುವರಿ ತೆರವು ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ !! Read More »

ಬಸ್ಸಿನಲ್ಲಿ ಚಿನ್ನದ ಸರವಿದ್ದ ಬ್ಯಾಗ್‍ ಕಳವು | ಪ್ರಕರಣ ದಾಖಲು

ಪುತ್ತೂರು: ಚಿನ್ನದ ಸರ ಖರೀದಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬ್ಯಾಗ್‍ ಕಳವಾದ ಘಟನೆ ನಡೆದಿದೆ. ಪುತ್ತೂರಿನ ಜಯರಾಮ ಭಟ್‍ ಪಿ. ಎಂಬವರು ಮಂಗಳೂರಿನ ಜ್ಯುವೆಲ್ಲರಿ ಒಂದರಿಂದ 1.60 ಲಕ್ಷ ರೂ. ಮೌಲ್ಯದ ಚಿನ್ನ ಖರೀದಿಸಿ ಬ್ಯಾಗ್‍ನಲ್ಲಿರಿಸಿ ಪುತ್ತೂರಿಗೆ ಕೆ ಎಸ್‍ ಆರ್ ಟಿಸಿ ಬಸ್ ಮೂಲಕ ಬರುತ್ತಿದ್ದಾಗ ಮಂಗಳೂರು ಬಂಟ್ಸ್ ಹಾಸ್ಟೇಲ್ ತಲುಪುತ್ತಿದ್ದಂತೆ ಪಕ್ಕದಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಚಿಲ್ಲರೆ ಹಣ ಬೀಳಿಸಿ ಅವರ ಗಮನ ಬೇರೆಡೆ ಸೆಳೆದಿದ್ದಾಳೆ. ಆ ಬಳಿಕ ಮಹಿಳೆ ಇನ್ನೋರ್ವ ಮಹಿಳೆಯೊಂದಿಗೆ ಬಸ್ಸಿನಿಂದ ಇಳಿದು

ಬಸ್ಸಿನಲ್ಲಿ ಚಿನ್ನದ ಸರವಿದ್ದ ಬ್ಯಾಗ್‍ ಕಳವು | ಪ್ರಕರಣ ದಾಖಲು Read More »

ಗ್ಯಾರೇಜ್‍ ಬೀಗ ಒಡೆದು ಕಳ್ಳತನ !

ಪುತ್ತೂರು: ಗ್ಯಾರೇಜ್ ಒಂದರ ಬೀಗ ಒಡೆದು ಒಳಗೆ ನುಗ್ಗಿದ ಕಳ್ಳರು ಸಾವಿರಾರು ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ ಘಟನೆ ಬೆಟ್ಟಂಪಾಡಿ ಗ್ರಾಮದ ಇರ್ದೆಯಲ್ಲಿ ನಡೆದಿದೆ. ಪ್ರಸಾದ್ ಎಂಬವರ ಮಾಲಕತ್ವದ ಗ್ಯಾರೇಜ್ ಗೆ ರಾತ್ರಿ ಬೀಗ ಹಾಕಿ ಹೋಗಿದ್ದಾರೆ. ತಡರಾತ್ರಿ ಗ್ಯಾರೇಜ್‍ ನ ಬಾಗಿಲು ತೆರೆದಿರುವ ಕುರಿತು ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಅವರು ಬಂದು ನೋಡಿದಾಗ ಗ್ಯಾರೇಜ್‍ನ ಬೀಗ ಮುರಿದು ಅಲ್ಲಿದ್ದ ಸುಮಾರು 69,800 ರೂ. ಮೌಲ್ಯದ ಸೊತ್ತುಗಳನ್ನು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಈ ಕುರಿತು

ಗ್ಯಾರೇಜ್‍ ಬೀಗ ಒಡೆದು ಕಳ್ಳತನ ! Read More »

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ | ಮೂವರು ಪೊಲೀಸ್ ವಶಕ್ಕೆ

ಮಂಗಳೂರು: ಭಿನ್ನ ಸಮುದಾಯದ ವಿದ್ಯಾರ್ಥಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಘಟನೆ ಮಂಗಳೂರು ಕದ್ರಿ ಪಾರ್ಕ್‍ ನಲ್ಲಿ ನಡೆದಿದ್ದು ಈ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶುಕ್ರವಾರ ಮಂಗಳೂರಿನ ಕಾಲೇಜೊಂದರ ಯುವಕ ಹಾಗೂ ನರ್ಸಿಂಗ್ ಮಾಡುತ್ತಿದ್ದ ವಿದ್ಯಾರ್ಥಿನಿ ಜತೆಯಾಗಿ ಬಸ್‍ ನಲ್ಲಿ ಮಂಗಳೂರಿಗೆ ಬಂದಿದ್ದರು. ಬಸ್‍ನಲ್ಲಿ ಅವರನ್ನು ಹಿಂಬಾಲಿಸಿಕೊಂಡು ಬಂದ ತಂಡ ಕದ್ರಿ ಪಾರ್ಕ್‍ ತಲುಪುತ್ತಿದ್ದಂತೆ ರಸ್ತೆಯಲ್ಲಿ ತಡೆದು ನೈತಿಕ ಪೊಲೀಸ್ ಗಿರಿ ನಡೆಸಿದೆ ಎನ್ನಲಾಗಿದೆ. ಈ ಸಂದರ್ಭ ಸ್ಥಳದಲ್ಲಿ ಜನ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ | ಮೂವರು ಪೊಲೀಸ್ ವಶಕ್ಕೆ Read More »

ಚಾರ್ವಾಕದ ಆತಾಜೆ ಮೇದಪ್ಪ ಗೌಡ ಆತ್ಮಹತ್ಯೆ !

ಕಾಣಿಯೂರು: ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಆತಾಜೆ ಮೇದಪ್ಪ ಗೌಡ (48) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇದಪ್ಪ ಗೌಡರವರು ತನ್ನ ಅಣ್ಣನ ಪತ್ನಿ ಯಶೋಧ ಮತ್ತು ಮಗಳು ರಾಶಿಯವರೊಂದಿಗೆ ವಾಸವಾಗಿದ್ದು, ಬೆಳಗ್ಗೆ ಮೇದಪ್ಪ ಗೌಡರ ಅಣ್ಣನ ಪತ್ನಿ ಯಶೋಧ ಹೂ ತರಲು ಹೋಗಿದ್ದು, ವಾಪಾಸು ಮನೆಗೆ ಬಂದಾಗ ಮನೆಯಲ್ಲಿ ಮೇದಪ್ಪ ಗೌಡರು ಇಲ್ಲದೇ ಇರುವುದನ್ನು ಕಂಡು ಅವರ ಮೊಬೈಲ್‍ ಫೋನಾಯಿಸಿದಾಗ ಕರೆ ಸ್ವೀಕರಿಸದ ಹಿನ್ನಲೆಯಲ್ಲಿ ಮನೆಯ ಸುತ್ತಮುತ್ತ ಹುಡುಕಾಡಿದಾಗ ಮೇದಪ್ಪ ಗೌಡರು ಮನೆಯ ಹತ್ತಿರ ಸುಮಾರು

ಚಾರ್ವಾಕದ ಆತಾಜೆ ಮೇದಪ್ಪ ಗೌಡ ಆತ್ಮಹತ್ಯೆ ! Read More »

ನೇಣು ಬಿಗಿದು ಮಹಿಳೆ ಆತ್ಮಹತ್ಯೆ !

ಬೆಳ್ತಂಗಡಿ: ಉದ್ಯಮಿಯೋರ್ವರ ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಅಳದಂಗಡಿಯಲ್ಲಿ ಗುರುವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸಮೀಪದ ಕುಬಲಾಜೆ ನಿವಾಸಿ ಉದ್ಯಮಿ ಸುನಿಲ್ ಎಂಬವರ ಪತ್ನಿ ಕಾವ್ಯ (32) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಮಧ್ಯಾಹ್ನ ಮನೆಯಲ್ಲಿ ಈ ಘಟನೆ ನಡೆದಿದೆ. ಮೃತರಿಗೆ ಪತಿ, ಪುತ್ರ, ಪುತ್ರಿ ಇದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವೇಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಸು ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ನೇಣು ಬಿಗಿದು ಮಹಿಳೆ ಆತ್ಮಹತ್ಯೆ ! Read More »

ಪಾರ್ಕ್ ಮಾಡಲಾದ ವಾಹನಗಳಿಂದ ಪೆಟ್ರೋಲ್ ಕಳ್ಳತನ | ರೆಡ್ ಹ್ಯಾಂಡ್ ಆಗಿ ಸಾರ್ಜನಿಕರಿಗೆ ಸಿಕ್ಕಿಬಿದ್ದ ಕಳ್ಳ

ಪುತ್ತೂರು: ಪಾರ್ಕ್ ಮಾಡಲಾದ ವಾಹನಗಳಿಂದ ಪೆಟ್ರೋಲ್ ಕದಿಯುತ್ತಿದ್ದ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಹಿಡಿದ ಘಟನೆ ಗುರುವಾರ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಪೆಟ್ರೋಲ್ ಕದಿಯುತ್ತಿದ್ದವನನ್ನು ಸವಣೂರು ನಿವಾಸಿ ಶಮೀರ್‍  ಎಂದು ಗುರುತಿಸಲಾಗಿದೆ. ರೈಲ್ವೇ ನಿಲ್ದಾಣಕ್ಕೆ ಬೈಕ್‍ ನಲ್ಲಿ ಬಂದ ಯುವಕ ಅಲ್ಲಿ ಪಾರ್ಕ್‍ ಮಾಡಲಾದ ಬೈಕ್‍ ಇನ್ನಿತರ ವಾಹನಗಳಿಂದ ಪೆಟ್ರೋಲ್ ಕದಿಯುತ್ತಿದ್ದಾಗ ರೆಡ್‍ ಹ್ಯಾಂಡ್‍ ಆಗಿ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದಿದ್ದು, ರೈಲ್ವೇ ಪೊಲೀಸರಿಗೆ ಒಪ್ಪಿಸಲಾಗಿದೆ. ಬಳಿಕ ರೈಲ್ವೇ ಪೊಲೀಸರು ಪುತ್ತೂರು ನಗರ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಪಾರ್ಕ್ ಮಾಡಲಾದ ವಾಹನಗಳಿಂದ ಪೆಟ್ರೋಲ್ ಕಳ್ಳತನ | ರೆಡ್ ಹ್ಯಾಂಡ್ ಆಗಿ ಸಾರ್ಜನಿಕರಿಗೆ ಸಿಕ್ಕಿಬಿದ್ದ ಕಳ್ಳ Read More »

error: Content is protected !!
Scroll to Top