ಅಪರಾಧ

ಕೋಡಿಂಬಾಡಿ ಕುಶಾಲಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ ಶಂಕೆ : ಕೇಸು ದಾಖಲು !

ಪುತ್ತೂರು: ಕೋಡಿಂಬಾಡಿ ಗ್ರಾಮದ ಶಾಂತಿನಗರ ನಿವಾಸಿ ಕುಶಾಲಪ್ಪ ಪೂಜಾರಿ (61) ಮಂಗಳವಾರ ರಾತ್ರಿ ನಿಧನರಾಗಿದ್ದು, ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ. ಕೋಡಿಂಬಾಡಿಯ ದಿ.ಮಾಂಕು ಪೂಜಾರಿಯವರ ಪುತ್ರರಾಗಿರುವ ಕುಶಾಲಪ್ಪ ಪೂಜಾರಿ ಮಂಗಳವಾರ ರಾತ್ತಿ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಮನೆಯವರು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆ ವೇಳೆಗಾಗಲೇ ಕುಶಾಲಪ್ಪ ಪೂಜಾರಿಯವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು. ಬಳಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಘಟನೆ ಬಳಿಕ ಮನೆಯಲ್ಲಿ ವಿಷ ಇದ್ದ […]

ಕೋಡಿಂಬಾಡಿ ಕುಶಾಲಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ ಶಂಕೆ : ಕೇಸು ದಾಖಲು ! Read More »

ಜಾಗದ ವಿವಾದ ಸಹಿತ ಅಯೋಧ್ಯಾ ಮಂತ್ರಾಕ್ಷತೆ ಕಾರಣಕ್ಕೇ ಹಲ್ಲೆ ನಡೆಸಲಾಗಿದೆ | ಹಲ್ಲೆಗೊಳಗಾದ ಸಂತೋಷ್ ಬಿ.ಕೆ. ಪತ್ರಿಕಾಗೋಷ್ಠಿಯಲ್ಲಿ ಆರೋಪ

ಪುತ್ತೂರು: ಜಾಗದ ವಿವಾದ ಸಹಿತ ಅಯೋಧ್ಯೆಯ ಮಂತ್ರಾಕ್ಷತೆ ವಿತರಣಾ ಜವಾಬ್ದಾರಿ ನಮಗೆ ನೀಡಲಿಲ್ಲ ಎಂಬ ಕಾರಣಕ್ಕೆ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡವರಿಂದ ನಮಗೆ ಹಲ್ಲೆ ನಡೆದಿದೆ ಎಂದು ಸೋಮವಾರ ರಾತ್ರಿ ಹಲ್ಲೆಗೊಳಗಾದ ಮುಂಡೂರು ನಿವಾಸಿ ಸಂತೋಷ್ ಬಿ.ಕೆ. ಆರೋಪಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮುಂಡೂರು ಪರಿಸರದಲ್ಲಿ ಅಕ್ಷತೆ ವಿತರಣೆ ಜವಾಬ್ದಾರಿಯನ್ನು ನನಗೆ ನೀಡಲಾಗಿದ್ದು, ಶುಕ್ರವಾರ ಮಂತ್ರಾಕ್ಷತೆ ವಿತರಿಸಿ ಉಳಿದ ಮಂತ್ರಾಕ್ಷತೆಯನ್ನು ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಇಟ್ಟಿದ್ದೇವು. ಅದೇ ರಾತ್ರಿ ಪುತ್ತಿಲ ಪರಿವಾರದವರು ನಮ್ಮಲ್ಲಿ ಕೇಳದೆ ಮಂತ್ರಾಕ್ಷತೆಯನ್ನು

ಜಾಗದ ವಿವಾದ ಸಹಿತ ಅಯೋಧ್ಯಾ ಮಂತ್ರಾಕ್ಷತೆ ಕಾರಣಕ್ಕೇ ಹಲ್ಲೆ ನಡೆಸಲಾಗಿದೆ | ಹಲ್ಲೆಗೊಳಗಾದ ಸಂತೋಷ್ ಬಿ.ಕೆ. ಪತ್ರಿಕಾಗೋಷ್ಠಿಯಲ್ಲಿ ಆರೋಪ Read More »

ಕಿಡಿಗೇಡಿಗಳಿಂದ ರಸ್ತೆ ಬದಿ ತ್ಯಾಜ್ಯ ಎಸೆತ | ಸ್ಥಳೀಯರಿಂದ ಆಕ್ರೋಶ

ಪುತ್ತೂರು: ಶಾಂತಿಗೋಡು ಗ್ರಾಮದ ಕೋಡಿ ಎಂಬಲ್ಲಿ ಮಂಗಳವಾರ ತಡರಾತ್ರಿ ಯಾರೋ ಕಿಡಿಗೇಡಿಗಳು ರಸ್ತೆ ಬದಿಯಲ್ಲಿ ತ್ಯಾಜ್ಯಗಳನ್ನು ತಂದು ಸುರಿದ ಪರಿಣಾಮ ಸ್ಥಳೀಯರು ಆಕ್ರೋಶಗೊಂಡಿದ್ದಾರೆ. ಪಾರ್ಟಿ ನಡೆಸಿ ಬಳಿಕ ತಡರಾತ್ರಿ ತ್ಯಾಜ್ಯವನ್ನು ರಸ್ತೆ ಬದಿ ತಂದು ಸುರಿದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ತ್ಯಾಜ್ಯ ಬಹುತೇಕ ಪ್ಲಾಸ್ಟಿಕ್ ಬಾಟಲಿಗಳಿಂದ ಕೂಡಿದ್ದು, ಪೇಪರ್ ಪ್ಲೇಟ್, ಪ್ಲಾಸ್ಟಿಕ್ ಗ್ಲಾಸ್ ಇನ್ನಿತರ ಪದಾರ್ಥಗಳನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ತಂದು ಸುರಿದಿದ್ದಾರೆ. ಗ್ರಾಪಂ ಕಾರ್ಯದರ್ಶಿ, ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕಿಡಿಗೇಡಿಗಳಿಂದ ರಸ್ತೆ ಬದಿ ತ್ಯಾಜ್ಯ ಎಸೆತ | ಸ್ಥಳೀಯರಿಂದ ಆಕ್ರೋಶ Read More »

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ !

ಪುತ್ತೂರು: ಬಲ್ನಾಡು ಗ್ರಾಮದ ಬುಳೇರಿಕಟ್ಟೆ ಸಾಜ ಬಶೀರ್ತಡಿ ಎಂಬಲ್ಲಿ ವ್ಯಕ್ತಿಯೊಬ್ಬರು ಮಂಗಳವಾರ ತಡರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬುಳೇರಿಕಟ್ಟೆ ಬಶೀರ್ತಡಿ ನಿವಾಸಿ ಕುಂಞ ನಾಯ್ಕ (70) ಆತ್ಮಹತ್ಯೆ ಮಾಡಿಕೊಂಡವರು. ಮೃತರು ಬಲ್ನಾಡು ಗ್ರಾಪಂ ಉಪಾಧ್ಯಕ್ಷ ರವಿಚಂದ್ರ ಸಹಿತ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ! Read More »

ನಿವೃತ್ತ ರೈಲ್ವೇ ಉದ್ಯೋಗಿ ಆತ್ಮಹತ್ಯೆ !

ಕಡಬ: ನಿವೃತ್ತ ರೈಲ್ವೇ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಸಮೀಪದ ಕೋಡಿಂಬಾಳದಲ್ಲಿ ನಡೆದಿದೆ. ಕೋಡಿಂಬಾಳ ಗ್ರಾಮದ ಗುಂಡಿಮಜಲು‌ ನಿವಾಸಿ ಮಾಧವ ರೈ ( 62) ಆತ್ಮಹತ್ಯೆ ಮಾಡಿಕೊಂಡವರು. ಕೋಡಿಂಬಾಳದ ರೈಲು ಮಾರ್ಗದ ಸಮೀಪ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಗೆ ಮರಣೊತ್ತರ ಪರೀಕ್ಷೆಗೆ ತರಲಾಗಿದೆ. ಮೃತರು ಕೋಡಿಂಬಾಳದ ಅಯಪ್ಪ ಭಜನಾ ಮಂದಿರದ ಸೇವಾ ಕಾರ್ಯದಲ್ಲಿಯೂ ಸಕ್ರಿಯವಾಗಿ ತೊಡಗಿಕೊಂಡಿದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ನಿವೃತ್ತ ರೈಲ್ವೇ ಉದ್ಯೋಗಿ ಆತ್ಮಹತ್ಯೆ ! Read More »

ದಾರಿ ವಿವಾದಕ್ಕೆ ಹಲ್ಲೆ ನಡೆದಿದೆಯೇ ಹೊರತು ಅಕ್ಷತೆ ವಿಚಾರಕ್ಕೆ ಅಲ್ಲ | ದ.ಕ. ಜಿಲ್ಲಾ ಎಸ್ಪಿ ಸ್ಪಷ್ಟನೆ

ಪುತ್ತೂರು: ಪುತ್ತೂರಿನ ಹೊರವಲಯದ ಮುಂಡೂರು ಎಂಬಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತನ ಮೇಲೆ ನಡೆದ ಹಲ್ಲೆ ಪ್ರಕರಣ ಘಟನೆ ದಾರಿ ವಿವಾದಕ್ಕೆಯೇ ಹೊರತು ಅಕ್ಷತೆ ವಿಚಾರಕ್ಕೆ ಅಲ್ಲ ಎಂದು ದ.ಕ. ಜಿಲ್ಲಾ ಎಸ್ಪಿ ಸಿ.ಬಿ. ರಿಷ್ಯಂತ್ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಹಲ್ಲೆಗೂ ರಾಮ ಅಕ್ಷತೆ ವಿತರಣೆಗೂ ಯಾವುದೇ ಸಂಬಂಧವಿಲ್ಲ. ಮುಂಡೂರಿನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಅಕ್ಷತೆ ಹಂಚುವ ವಿಚಾರಕ್ಕೆ ನಡೆದ ಹಲ್ಲೆ ಅಲ್ಲ. ಅದು ಜಾಗದ ವಿಚಾರಕ್ಕೆ ನಡೆದ ಗಲಾಟೆ ಆಗಿದೆ. ಹಲ್ಲೆ ನಡೆಸಿದವರಿಗೂ,

ದಾರಿ ವಿವಾದಕ್ಕೆ ಹಲ್ಲೆ ನಡೆದಿದೆಯೇ ಹೊರತು ಅಕ್ಷತೆ ವಿಚಾರಕ್ಕೆ ಅಲ್ಲ | ದ.ಕ. ಜಿಲ್ಲಾ ಎಸ್ಪಿ ಸ್ಪಷ್ಟನೆ Read More »

ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದ ಅನ್ಯಕೋಮಿನ ಜೋಡಿ | ಪೊಲೀಸರಿಂದ ವಿಚಾರಣೆ

ಧರ್ಮಸ್ಥಳ: ಅನ್ಯ ಕೋಮಿನ ಜೋಡಿಯೊಂದು ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದಾಗ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಮಂಗಳವಾರ ನಡೆದಿದೆ. ಬೆಂಗಳೂರು ಮೂಲದ ಅನ್ಯಕೋಮಿನ ಯುವಕ ಹಾಗೂ ಹಿಂದೂ ಯುವತಿ ಎಂದು ಗೊತ್ತಾಗಿದ್ದು, ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಯುವಕ-ಯುವತಿಯನ್ನು ಠಾಣೆಗೆ ಕರೆದೊಯ್ದಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದ ಅನ್ಯಕೋಮಿನ ಜೋಡಿ | ಪೊಲೀಸರಿಂದ ವಿಚಾರಣೆ Read More »

ಮಗ ಆತ್ಮಹತ್ಯೆ ಮಾಡಿಕೊಂಡ 13ನೇ ದಿನಕ್ಕೆ ತಂದೆಯೂ ಆತ್ಮಹತ್ಯೆ !

ಬೆಳ್ತಂಗಡಿ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣು ಬಿಗಿದು ಆತ್ಚಹತ್ಯೆ ಮಾಡಿಕೊಂಡ ಘಟನೆ ಉಜಿರೆಯ ಪೆರ್ಲದಲ್ಲಿ ನಡೆದಿದೆ. ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೋಗೀಶ್ ಪೂಜಾರಿ (41) ಆತ್ಮಹತ್ಯೆ ಮಾಡಿಕೊಂಡವರು. ಯೋಗೀಶ್ ಪೂಜಾರಿ ಅವರ ಮಗ ಯಶ್ಚಿತ್ (14) ಕ್ಷುಲ್ಲಕ ವಿಚಾರದಲ್ಲಿ 13 ದಿನಗಳ ಹಿಂದೆ ತಾಯಿಯ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಜ.14 ರಂದು ಆತನ ಉತ್ತರಕ್ರಿಯೆ ನಡೆದಿತ್ತು. ಇದೀಗ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಆತ್ಮಹತ್ಯೆಯಿಂದ ನೊಂದು ತಂದೆಯೂ

ಮಗ ಆತ್ಮಹತ್ಯೆ ಮಾಡಿಕೊಂಡ 13ನೇ ದಿನಕ್ಕೆ ತಂದೆಯೂ ಆತ್ಮಹತ್ಯೆ ! Read More »

ಬೇಲಿ ವಿಚಾರದಲ್ಲಿ ಗಲಾಟೆ: ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಪುತ್ತೂರು : ಜಮೀನಿನಲ್ಲಿ ಅಳವಡಿಸಿದ ತಂತಿ ಬೇಲಿ ವಿಷಯದಲ್ಲಿ ಗಲಾಟೆ ನಡೆದು ಅವಾಚ್ಯವಾಗಿ ನಿಂದಿಸಿ, ಹಲ್ಲೆ, ಜೀವ ಬೆದರಿಕೆ ಹಾಕಿರುವ ಕುರಿತು ಇತ್ತಂಡಗಳು ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಮುಂಡೂರು ನಿವಾಸಿ ಸಂತೋಷ್ ಬಿ.ಕೆ ಎಂಬವರು ನೀಡಿರುವ ದೂರಿನ ಮೇರೆಗೆ ಕೇಶವ, ಧನಂಜಯ, ಜಗದೀಶ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತೋಷ್ ಸೋಮವಾರ ರಾತ್ರಿ ಆಕ್ಟಿವಾ ಸ್ಕೂಟರ್ ನಲ್ಲಿ ತಮ್ಮ ತೋಟದ ಹತ್ತಿರ ಬಂದು ವಾಹನ ನಿಲ್ಲಿಸಿ, ಅಲ್ಲಿಂದ ತಮ್ಮ ತೋಟದಲ್ಲಿ ನಡೆದುಕೊಂಡು ಮನೆಗೆ ಹೋಗುತ್ತಿರುವಾಗ

ಬೇಲಿ ವಿಚಾರದಲ್ಲಿ ಗಲಾಟೆ: ಇತ್ತಂಡಗಳಿಂದ ದೂರು, ಪ್ರಕರಣ ದಾಖಲು Read More »

ಕ್ರಿಶ್ಚಿಯನ್ ಧರ್ಮದ ಕುರಿತು ಅವಹೇಳನಕಾರಿ ಪೋಸ್ಟ್ | ಪ್ರಕರಣ ದಾಖಲು

ನೆಲ್ಯಾಡಿ: ಕಡಬ ತಾಲೂಕಿನ ಇಚ್ಚಂಪಾಡಿ ಗ್ರಾಮದ ಬರುಮಾರು ಎಂಬಲ್ಲಿ ಕ್ರಿಶ್ಚಿಯನ್ ಧರ್ಮದ ಕುರಿತು ಅವಹೇಳನಕಾರಿ ಪೋಸ್ಟ್ ಮಾಡಿದ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೈಪನಡ್ಕಯ ಕೆ.ಪಿ ಜಾರ್ಜ್ ಎಂಬವರು ಈ ಪೋಸ್ಟ್ ಹಾಕಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೆ.ಪಿ ಚಾರ್ಜ್ ಎಂಬವರು ಮೊಬೈಲ್‌ ನೋಡುತ್ತಿರುವ ಸಂದರ್ಭ ಕ್ರಿಶ್ಚಿಯನ್ ಬ್ರದರ್ಸ್ ಎಂಬ ವಾಟ್ಸಪ್ ಗ್ರೂಪ್ ನಲ್ಲಿ ಸುನೀಶ್ ಟಿ.ಪಿ. ಎಂಬವರು ಹಾಕಿದ ಸ್ಕ್ರೀನ್ ಶಾಟ್ ನ್ನು ನೋಡಲಾಗಿ ಇಚ್ಲಂಪಾಡಿ ಗ್ರಾಮದ ಗ್ರಾಮದ ಒಡತಡ್ಕ ಮನೆ

ಕ್ರಿಶ್ಚಿಯನ್ ಧರ್ಮದ ಕುರಿತು ಅವಹೇಳನಕಾರಿ ಪೋಸ್ಟ್ | ಪ್ರಕರಣ ದಾಖಲು Read More »

error: Content is protected !!
Scroll to Top