ಅಪರಾಧ

ಸಹೋದರರೊಳಗೆ ಗಲಾಟೆ | ಹಲ್ಲೆ, ಜೀವ ಬೆದರಿಕೆ ಪ್ರಕರಣ ದಾಖಲು

ಕಡಬ: ಕಳೆ ಕೀಳುವ ವೇಳೆ ಸಹೋದರರೊಳಗೆ ಗಲಾಟೆ ನಡೆದು ಹಲ್ಲೆ ನಡೆದ ಘಟನೆ ಕಡಬದಲ್ಲಿ ಭಾನುವಾರ ನಡೆದಿದೆ. ವಸಂತ ಹಾಗೂ ಪತ್ನಿ ಹೇಮಲತಾ ಹಲ್ಲೆ ನಡೆಸಿದ ಆರೋಪಿಗಳೆಂದು ಗುರುತಿಸಲಾಗಿದೆ. ರೆಂಜಿಲಾಡಿ ಗ್ರಾಮದ ಗಂಗಾಧರ ಎಂಬವರು ತಮ್ಮ ಮನೆಯ ಎದುರು ಕಳೆಯನ್ನು ಮೆಷಿನ್‍ನಲ್ಲಿ ತೆಗೆಯುತ್ತಿದ್ದ ವೇಳೆ ಅವರ ಅಣ್ಣ ವಸಂತ ಸ್ಥಳಕ್ಕೆ ಬಂದು ಆಕ್ಷೇಪ ವ್ಯಕ್ತಪಡಿಸಿ ಮೆಷಿನನ್ನು ಎಳೆದು ಗಂಗಾಧರ ಹಾಗೂ ಪತ್ನಿ ಗುಣಶ್ರೀ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಈ ಸಂದರ್ಭ ವಸಂತ ಅವರ […]

ಸಹೋದರರೊಳಗೆ ಗಲಾಟೆ | ಹಲ್ಲೆ, ಜೀವ ಬೆದರಿಕೆ ಪ್ರಕರಣ ದಾಖಲು Read More »

ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹಾಗೂ ನಳಿನ್ ಕುಮಾರ್ ಕಟೀಲ್ ಭಾವಚಿತ್ರದ ಬ್ಯಾನರ್ ಗೆ ಶ್ರದ್ಧಾಂಜಲಿ, ಚಪ್ಪಲಿ ಹಾರ ಪ್ರಕರಣ | ಪೊಲೀಸ್ ದೌರ್ಜನ್ಯ ಆರೋಪಕ್ಕೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ರಾಜ್ಯ ಮಾನವ ಹಕ್ಕುಗಳ ಆಯೋಗದಿಂದ ಪಶ್ಚಿಮ ವಲಯ ಐಜಿಪಿಗೆ ಸೂಚನೆ

ಪುತ್ತೂರು: ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ನಳಿನ್ ಕುಮಾ‌ರ್ ಕಟೀಲ್‌ ಅವರ ಭಾವಚಿತ್ರವಿದ್ದ ಬ್ಯಾನರ್‌ಗೆ ಶ್ರದ್ಧಾಂಜಲಿ ಬರಹದೊಂದಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರುವ ಆರೋಪದ ಕುರಿತು ತನಿಖೆ ನಡೆಸಿ ಸೂಕ್ತ ಕ್ರಮಕೈಗೊಂಡು ವರದಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಪಶ್ಚಿಮ ವಲಯ ಐಜಿಪಿಯವರಿಗೆ ಸೂಚನೆ ನೀಡಿದೆ. ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕದ ದಿನದಲ್ಲಿ ಬಿಜೆಪಿ ನಾಯಕರಾದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ

ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹಾಗೂ ನಳಿನ್ ಕುಮಾರ್ ಕಟೀಲ್ ಭಾವಚಿತ್ರದ ಬ್ಯಾನರ್ ಗೆ ಶ್ರದ್ಧಾಂಜಲಿ, ಚಪ್ಪಲಿ ಹಾರ ಪ್ರಕರಣ | ಪೊಲೀಸ್ ದೌರ್ಜನ್ಯ ಆರೋಪಕ್ಕೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ರಾಜ್ಯ ಮಾನವ ಹಕ್ಕುಗಳ ಆಯೋಗದಿಂದ ಪಶ್ಚಿಮ ವಲಯ ಐಜಿಪಿಗೆ ಸೂಚನೆ Read More »

ಅಯೋಧ್ಯೆ ಕಾರ್ಯಕ್ರಮದ ಬ್ಯಾನರ್ ಹರಿದ ಕಿಡಿಗೇಡಿಗಳು !

ಸುಳ್ಯ: ಕಳೆದ ವಾರವಷ್ಟೇ ಸದ್ದು ಮಾಡಿದ ಬ್ಯಾನ್ ಹರಿದ ವಿಚಾರ ಮಾಸುವ ಮುನ್ನವೇ ಇದೀಗ ಮತ್ತೊಂದು ಅಯೋಧ್ಯೆ ಕಾರ್ಯಕ್ರಮಕ್ಕೆ ಶುಭಕೋರಿ ಹಾಕಿದ ಬ್ಯಾನರನ್ನು ಕಿಡಿಗೇಡಿಗಳು ಹರಿದು ಹಾಕಿದ ಘಟನೆ ಸುಳ್ಯ ತಾಲೂಕಿನ ಅಡ್ಕಾರು ಬಳಿ ಗುರುವಾರ ನಡೆದಿದೆ. ಅಡ್ಕಾರು ಕಾರ್ತಿಕೇಯ ಯುವ ಸೇವಾ ಸಮಿತಿಯವರು ಜ.22 ರಂದು ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಶುಭಕೋರಿ ಬ್ಯಾನರ್ ಅಳವಡಿಸಿದ್ದರು. ಬುಧವಾರ ರಾತ್ರಿ ಯಾರೋ ಕಿಡಿಗೇಡಿಗಳು ಬ್ಯಾನರ್‍ ನ ಮಧ್ಯಭಾಗವನ್ನು ಹರಿದು ಹಾಕಿದ್ದಾರೆ. ಇದೀಗ ಈ ಘಟನೆಯಿಂದ ಆಕ್ರೋಶ

ಅಯೋಧ್ಯೆ ಕಾರ್ಯಕ್ರಮದ ಬ್ಯಾನರ್ ಹರಿದ ಕಿಡಿಗೇಡಿಗಳು ! Read More »

ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿದ ದರೋಡೆಕೋರರು | ಲಕ್ಷಾಂತರ ರೂ. ನಗ-ನಗದು ದೋಚಿ ಪರಾರಿ!!

ಬಂಟ್ವಾಳ: ಬೆಳ್ಳಂಬೆಳಗ್ಗೆ ಮನೆಯೊಂದಕ್ಕೆ ನುಗ್ಗಿದ  ನಾಲ್ವರು ಮುಸುಕುಧಾರಿ ತಂಡ ಮನೆಯಲ್ಲಿದ್ದ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗ-ನಗದನ್ನು ದೋಚಿದ ಘಟನೆ ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟೀ ಪಾರ್ಕ್ ಮುಂಭಾಗದಲ್ಲಿ ಗುರುವಾರ ನಡೆದಿದೆ. ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೋ ಹಾಗೂ ಮಗಳು ಮರಿನಾ ಪಿಂಟೋ ಇಬ್ಬರೇ ಇದ್ದ ಸಂದರ್ಭ ಮನೆಗೆ ನುಗ್ಗಿದ ಕಳ್ಳರು ತಾಯಿ-ಮಗಳಿಗೆ ಚಾಕು ತೋರಿಸಿ ಕಪಾಟಿನಲ್ಲಿದ್ದ ಸುಮಾರು 2.90 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 30 ಸಾವಿರ ನಗದು ಹಾಗೂ

ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿದ ದರೋಡೆಕೋರರು | ಲಕ್ಷಾಂತರ ರೂ. ನಗ-ನಗದು ದೋಚಿ ಪರಾರಿ!! Read More »

ಅಂಗಡಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕ!

ಪುತ್ತೂರು: ಒಬ್ಬಂಟಿಯಾಗಿ ವಾಸವಾಗಿದ್ದ ಕಾರ್ಮಿಕನೋರ್ವ ಪೆರಿಗೇರಿಯ ಅಂಗಡಿ ಹೊರಭಾಗದ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗುರುವಾರ ಬೆಳಿಗ್ಗೆ ಕೃತ್ಯ ಬೆಳಕಿಗೆ ಬಂದಿದ್ದು, ಎಷ್ಟು ಹೊತ್ತಿಗೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ದಿ. ಅಪ್ಪಯ್ಯ ನಾಯ್ಕ ಅವರ ಪುತ್ರ, ಕಾರ್ಮಿಕ ಜಾನು ನಾಯ್ಕ (45) ಆತ್ಮಹತ್ಯೆ ಮಾಡಿಕೊಂಡವರು. ಪೆರಿಗೇರಿಯ ತನ್ನ ಮನೆ ಸಮೀಪದ ದುರ್ಗಾ ಸ್ಟೋರ್ ಎಂಬ ಅಂಗಡಿ ಮುಂಭಾಗವೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಅಂಗಡಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕ! Read More »

ಸಾರ್ವಜನಿಕ ಸ್ಥಳದಲ್ಲಿ ವಿದ್ಯಾರ್ಥಿಯಿಂದ ತ್ಯಾಜ್ಯ ತೆರವು ಮಾಡಿಸಿದ ಕೃತ್ಯ: ಠಾಣೆಗೆ ದೂರು! | ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು

ಪುತ್ತೂರು: 7ನೇ ತರಗತಿ ವಿದ್ಯಾರ್ಥಿಯಿಂದ ವ್ಯಕ್ತಿಯೋರ್ವರು ತ್ಯಾಜ್ಯ ತೆರವು ಮಾಡಿಸಿರುವ ಘಟನೆ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಮಾಜಿ ಶಾಸಕ ಸಂಜೀವ ಮಠಂದೂರು ಅವರು ವಿದ್ಯಾರ್ಥಿಗೆ ನ್ಯಾಯ ದೊರಕಿಸಿಕೊಡಲು ಶ್ರಮಿಸುವ ಭರವಸೆ ನೀಡಿದ್ದಾರೆ. ವಿದ್ಯಾರ್ಥಿಯ ತಂದೆ ಬಿಳಿಯೂರು ಗ್ರಾಮದ ನಡುಮನೆ ನಿವಾಸಿ ವಾಸಪ್ಪ ನಾಯ್ಕ ಎಂಬವರು ದೂರು ನೀಡಿದ್ದಾರೆ. ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ಬಾಲಕನಿಗೆ ಮಾನಸಿಕ ಹಿಂಸೆ ನೀಡಿರುವ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ವಿದ್ಯಾರ್ಥಿಯಿಂದ ತ್ಯಾಜ್ಯ ತೆರವು ಮಾಡಿಸಿದ ಕೃತ್ಯ: ಠಾಣೆಗೆ ದೂರು! | ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು Read More »

ಎಟಿಎಂ ಕಾರ್ಡ್ ಮೋಸದ ಜಾಲ: ಮೂವರಿಗೆ ಲಕ್ಷಾಂತರ ರೂ. ವಂಚನೆ!! | ಮೋಸ ಹೋದ ಬಗೆಯನ್ನು ಬಿಚ್ಚಿಟ್ಟ ಗ್ರಾಹಕರು!

ಎಟಿಎಂನಿಂದ ಹಣ ತೆಗೆದುಕೊಡುವುದಾಗಿ ನಂಬಿಸಿ ಕಾರ್ಡ್ ಪಡೆದು ಬದಲಾಯಿಸಿ, ಹಣ ಡ್ರಾ ಮಾಡಿ ವಂಚಿಸುವ ಜಾಲವೊಂದು ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಕ್ರಿಯವಾಗಿರುವುದು ಬೆಳಕಿಗೆ ಬಂದಿದೆ. ಜ. 9ರಂದು ಒಂದೇ ದಿನ ಈ ರೀತಿ ವಂಚನೆಗೆ ಒಳಗಾದವರು ನೀಡಿರುವ ದೂರಿನಂತೆ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಜ. 9ರಂದು ಬೆಳಗ್ಗೆ 10 ಗಂಟೆಗೆ ಶಿರೂರು ಮಾರ್ಕೆಟ್ ಬಳಿಯ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಶಿರೂರಿನ ಚೈತ್ರಾ ಎಂಬವರಿಗೆ ಬೆಳಗ್ಗೆ 10:15ಕ್ಕೆ ಶಿರೂರು ಅರ್ಬನ್ ಬ್ಯಾಂಕಿನ ಎಟಿಎಂನಲ್ಲಿ ಶಿರೂರಿನ ಬಲ್ಕೀಸ್

ಎಟಿಎಂ ಕಾರ್ಡ್ ಮೋಸದ ಜಾಲ: ಮೂವರಿಗೆ ಲಕ್ಷಾಂತರ ರೂ. ವಂಚನೆ!! | ಮೋಸ ಹೋದ ಬಗೆಯನ್ನು ಬಿಚ್ಚಿಟ್ಟ ಗ್ರಾಹಕರು! Read More »

ಸುಚನಾ ಸೇಠ್ ಪೊಲೀಸ್ ಕಸ್ಟಡಿಗೆ! | ಮಗುವಿನ ಪೋಸ್ಟ್ ಮಾರ್ಟಂ ವರದಿಯ ಮಾಹಿತಿ ನೀಡಿರುವ ವೈದ್ಯರು

ಸ್ಟಾರ್ಟ್ ಅಪ್ ಕಂಪೆನಿಯ ಮಹಿಳಾ ಸಿಇಒ ಸುಚನಾ ಸೇಠ್ ತನ್ನ ನಾಲ್ಕು ವರ್ಷದ ಮುದ್ದಾದ ಮಗು ಚಿನ್ಮಯ್ ನನ್ನು ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ  ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇನ್ನೊಂದೆಡೆ ಮಗುವಿನ ಮರಣೋತ್ತರ ಪರೀಕ್ಷೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆಸಿದ್ದು, ಬೆಂಗಳೂರಿಗೆ ಬುಧವಾರ ಕಳುಹಿಸಲಾಗುತ್ತಿದೆ. ಗೋವಾದ ಸರ್ವಿಸ್ ಅಪಾರ್ಟ್ ಮೆಂಟ್ ನಲ್ಲಿ ಮಗುವನ್ನು ಕೊಂದು ಸೂಟ್ ಕೇಸ್ ನಲ್ಲಿ ಹಾಕಿ ಬೆಂಗಳೂರಿಗೆ ಟ್ಯಾಕ್ಸಿಯಲ್ಲಿ ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದ ಸುಚನಾ ಸೇಠ್ ಳನ್ನು ನಿನ್ನೆ ಚಿತ್ರದುರ್ಗದ ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದರು.

ಸುಚನಾ ಸೇಠ್ ಪೊಲೀಸ್ ಕಸ್ಟಡಿಗೆ! | ಮಗುವಿನ ಪೋಸ್ಟ್ ಮಾರ್ಟಂ ವರದಿಯ ಮಾಹಿತಿ ನೀಡಿರುವ ವೈದ್ಯರು Read More »

ಅಕ್ರಮ ಮರಳು ಸಾಗಾಟ: ಆರೋಪಿ ಬಂಧನ!

ವಿಟ್ಲ : ಅಕ್ರಮ ಮರಳು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ನರಿಂಗಾನ ಗ್ರಾಮದ ಕೆದಂಬಾಡಿ ಜಂಕ್ಷನ್ ನಲ್ಲಿ ಬಂಧಿಸಿದ್ದಾರೆ. ಬಂಟ್ವಾಳ ನರಿಂಗಾನ ನಿವಾಸಿ, ಸಿದ್ದೀಕ್ ಕೆ.ಎಂ. ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಯಾವುದೇ ದಾಖಲೆ ಪತ್ರ ಇಲ್ಲದಿದ್ದುದರಿಂದ ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಜ.8 ರಂದು ರಾತ್ರಿ ವಿಟ್ಲ ಠಾಣಾ ಎ.ಎಸ್.ಐ ಜಯರಾಮ ಹಾಗೂ ಸಿಬ್ಬಂದಿಗಳಾದ ಪುನೀತ್, ಹೇಮರಾಜ್, ಅಶೋಕ್ ರವರು ಬಂಟ್ವಾಳ ತಾಲೂಕು

ಅಕ್ರಮ ಮರಳು ಸಾಗಾಟ: ಆರೋಪಿ ಬಂಧನ! Read More »

ಪರಾರಿಯಾಗಲೆತ್ನಿಸಿದ ನಟೋರಿಯಸ್ ರೌಡಿಯ ಕಾಲಿಗೆ ಗುಂಡು, ಬಂಧನ! | ಮಂಗಳೂರು ಪೊಲೀಸರ ಕಾರ್ಯಾಚರಣೆ!

ಮಂಗಳೂರು: ನಟೋರಿಯಸ್ ರೌಡಿ ಆಕಾಶಭವನ ಶರಣ್ ನ ಕಾಲಿಗೆ ಮಂಗಳವಾರ ಪೊಲೀಸರು ಗುಂಡು ಹಾರಿಸಿದ್ದಾರೆಂದು ತಿಳಿದು ಬಂದಿದೆ. ಪರಾರಿಯಾಗಲು ಯತ್ನಿಸಿದಾಗ ಫೈರಿಂಗ್ ಮಾಡಲಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಕಾಶಭವನ ಶರಣ್ ವಿರುದ್ದ ಕೊಲೆ, ಸುಲಿಗೆ, ಅತ್ಯಾಚಾರದಂತಹ 21 ಪ್ರಕರಣಗಳು ದಾಖಲಾಗಿದ್ದವು. ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿಯೂ ದೋಷಿಯಾಗಿದ್ದ. ಇತ್ತೀಚೆಗೆ ಪೊಲೀಸರ ವಾಹನಕ್ಕೆ ಕಾರು ಢಿಕ್ಕಿ ಮಾಡಿ ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ.

ಪರಾರಿಯಾಗಲೆತ್ನಿಸಿದ ನಟೋರಿಯಸ್ ರೌಡಿಯ ಕಾಲಿಗೆ ಗುಂಡು, ಬಂಧನ! | ಮಂಗಳೂರು ಪೊಲೀಸರ ಕಾರ್ಯಾಚರಣೆ! Read More »

error: Content is protected !!
Scroll to Top