ಅಪರಾಧ

ಮನೆಯವರನ್ನು ಕೂಡಿ ಹಾಕಿ ದರೋಡೆ ಪ್ರಕರಣ | ಕೇರಳದಲ್ಲಿ ಮಹತ್ವದ ಸಾಧನೆ ಮೆರೆದ ಕರ್ನಾಟಕ ಪೊಲೀಸರು!!

ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಕುದ್ಕಾಡಿ ತೋಟದಮೂಲೆಯನ್ನು ಇತ್ತೀಚೆಗೆ ತಾಯಿ-ಮಗನನ್ನು ಕಟ್ಟಿ ಹಾಕಿ ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾಸರಗೋಡು ಜಿಲ್ಲೆಯ ಸೀತಾಂಗೋಳಿ ಸಮೀಪದ ಬಾಡೂರು ನಿವಾಸಿಯೋರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದರೋಡೆಗೈದು ಕೇರಳದಲ್ಲಿ ಅವಿತಿರುವ ಕುರಿತು ಮಾಹಿತಿ ಕಲೆ ಹಾಕಿದ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಾಡೂರು ಬಳಿ ಸಂಸ್ಥೆಯೊಂದರಲ್ಲಿ ಅವಿತು ಕುಳಿತಿದ್ದ ವೇಳೆ ಕರ್ನಾಟಕ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಕೇರಳ ಮಾಧ್ಯಮಗಳಲ್ಲಿ ವರದಿ ಪ್ರಕವಾಗಿತ್ತು ಎನ್ನಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ತಡ ರಾತ್ರಿ […]

ಮನೆಯವರನ್ನು ಕೂಡಿ ಹಾಕಿ ದರೋಡೆ ಪ್ರಕರಣ | ಕೇರಳದಲ್ಲಿ ಮಹತ್ವದ ಸಾಧನೆ ಮೆರೆದ ಕರ್ನಾಟಕ ಪೊಲೀಸರು!! Read More »

ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ವಿದ್ಯಾರ್ಥಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬನ್ನೂರಿನ ಕರ್ಮಲದಲ್ಲಿ ನಡೆದಿದೆ. ಬನ್ನೂರು ಕರ್ಮಲ ಸನ್ನಿಧಿ ಲೇ ಔಟ್ ನಿವಾಸಿ, ವಿವೇಕಾನಂದ ಕಾಲೇಜಿನ ಅಂತಿಮ ಬಿಸಿಎ ವಿದ್ಯಾರ್ಥಿನಿ ಕೀರ್ತಿಕಾ (19) ಈ ಕೃತ್ಯ ಎಸಗಿದವರು. ಕಿಶೋರ್ ಎಂಬವರ ಪುತ್ರಿಯಾಗಿರುವ ಈಕೆ ಮನೆಯಲ್ಲಿ ಸೀಲಿಂಗ್ ಫ್ಯಾನ್‍ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣಗಳು ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಸ್ಥಳಕ್ಕೆ ನಗರ ಪೊಲೀಸರು ತೆರಳಿ ಮಾಹಿತಿ ಕಲೆ ಹಾಕಿದ್ದಾರೆ.

ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ Read More »

ನಿರ್ಜನ ಪ್ರದೇಶದಲ್ಲಿ ಮಾದಕ ವಸ್ತು ಸೇವನೆ | ಆರೋಪಿಗಳು ಪೊಲೀಸ್ ವಶಕ್ಕೆ

ಪುತ್ತೂರು: ನಿರ್ಜನ ಪ್ರದೇಶದಲ್ಲಿ ಯುವಕರ ತಂಡವೊಂದು ಗಾಂಜಾ, ಮಾದಕ ವಸ್ತುಗಳನ್ನು ಸೇವಿಸುತ್ತಿದ್ದ ಕುರಿತು ಮಾಹಿತಿ ತಿಳಿದ ಗ್ರಾಮಸ್ಥರು ಯುವಕರನ್ನು ಸೆರೆಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಇಡ್ಕಿದು ಗ್ರಾಮದ ಮುಂಡ್ರಬೈಲಿನಲ್ಲಿ ನಡೆದಿದೆ. ಮುಂಡ್ರಬೈಲಿನ ನಿರ್ಜನ ಪ್ರದೇಶದಲ್ಲಿ ನಶೆಯಲ್ಲಿದ್ದ ಕಂಬಳಬೆಟ್ಟು ನೂಜಿ ನಿವಾಸಿಗಳಾದ ಸಾಹಿಲ್, ಶಝ್, ಜಾಯಿ ಎಂಬವರು ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯರು,  ಹೆಣ್ಣು ಮಕ್ಕಳಿಗೆ ಕಿರುಕುಳ ನೀಡುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತರಿಂದ ಬೈಕ್, ಸ್ಕೂಟರ್ ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ನಿರ್ಜನ ಪ್ರದೇಶದಲ್ಲಿ ಮಾದಕ ವಸ್ತು ಸೇವನೆ | ಆರೋಪಿಗಳು ಪೊಲೀಸ್ ವಶಕ್ಕೆ Read More »

ಪರಪ್ಪನ ಅಗ್ರಹಾರ ಸೇರಿದ ಚೈತ್ರಾ ಕುಂದಾಪುರ!!

ಬೆಂಗಳೂರು: 5 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಬಂಧಿತಳಾಗಿರುವ ಚೈತ್ರಾ ಕುಂದಾಪುರ ಹಾಗೂ ಆಕೆಯ ಗ್ಯಾಂಗ್ ನ ಇತರೆ ಐವರು ಆರೋಪಿಗಳ ಸಿಸಿಬಿ ಕಸ್ಟಡಿ ಶನಿವಾರಕ್ಕೆ ಅಂತ್ಯಗೊಂ ಡಕಾರಣ ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಅದರಂತೆ ಚೈತ್ರಾ ಕುಂದಾಪುರ ಸೇರಿದಂತೆ ಇತರೆ 6 ಮಂದಿ ಆರೋಪಿಗಳಿಗೆ ಅಕ್ಟೋಬರ್ 6ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಈ ವೇಳೆ ವಕೀಲರ ಬದಲಾವಣೆಗೆ ಚೈತ್ರಾ ಮನವಿ ಮಾಡಿಕೊಂಡರು. ಅಲ್ಲದೇ ನ್ಯಾಯಾಧೀಶರ ಮುಂದೆ ಕಣ್ಣೀರು

ಪರಪ್ಪನ ಅಗ್ರಹಾರ ಸೇರಿದ ಚೈತ್ರಾ ಕುಂದಾಪುರ!! Read More »

ಮೀನು ಮಾರಾಟ ಫೆಡರೇಷನ್’ಗೆ ಭಾರೀ ವಂಚನೆ! | ಮಂಜುನಾಥ್’ಗೆ ಜೈಲು ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ಗೆ 88 ಲ.ರೂ. ವಂಚಿಸಿದ ಆರೋಪಿ ಮಂಜುನಾಥ್ ಖಾರ್ವಿ ಎಂಬಾತನಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಆರೋಪಿ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಸಂಸ್ಥೆಯಿಂದ ಮೀನು ಖರೀದಿ ಮಾಡಿದ್ದ. ಫೆಡರೇಷನ್‌ಗೆ ಮೀನು ಮಾರಾಟವಾದ ಕಮಿಷನ್‌ ಕೂಡ ಬಾಕಿ ಇರಿಸಿದ್ದ. ಈ ಮೊತ್ತವನ್ನು ಪಾವತಿಸಲು ನೀಡಿದ್ದ ಮೂರು ಚೆಕ್‌ಗಳು ಬೌನ್ಸ್ ಆಗಿದ್ದವು. ಈ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಲಾಗಿತ್ತು. ನ್ಯಾಯಾಲಯ ಮೂರು ಪ್ರಕರಣಗಳಲ್ಲಿ ಆರೋಪಿ 5

ಮೀನು ಮಾರಾಟ ಫೆಡರೇಷನ್’ಗೆ ಭಾರೀ ವಂಚನೆ! | ಮಂಜುನಾಥ್’ಗೆ ಜೈಲು ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ Read More »

ತ್ಯಾಜ್ಯ ಎಸೆಯುವುದನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮ ಪಂಚಾಯತ್! | ದಂಡ ಮಾತ್ರವಲ್ಲ, ತಕ್ಕ ಶಾಸ್ತಿಯೂ ಆಯಿತು

ಮಾಣಿ: ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ತ್ಯಾಜ್ಯ ಎಸೆಯುತ್ತಿದ್ದ ವಾಹನವನ್ನು ತಡೆದು, ದಂಡ ವಿಧಿಸಿದ ಘಟನೆ ಮಾಣಿಯಲ್ಲಿ ನಡೆದಿದೆ. ಸ್ವಚ್ಛತೆ ಬಗ್ಗೆ ಸಾಕಷ್ಟು ಜಾಗೃತಿ ಕಾರ್ಯಕ್ರಮ ಮಾಡಿದರೂ, ಸಂದೇಶ ನೀಡಿದರೂ ತಲೆಕೆಡಿಸಿಕೊಳ್ಳದ ನಾಗರಿಕರಿಗೆ ಇದೀಗ ದಂಡ ವಿಧಿಸಲು ಗ್ರಾಮ ಪಂಚಾಯತ್ ಮುಂದಾಗಿದೆ. ಲಾರಿವೊಂದರಲ್ಲಿ ತ್ಯಾಜ್ಯ ತಂದು ಸುರಿಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮ ಪಂಚಾಯತ್, ದಂಡ ವಿಧಿಸಿದೆ. ಮಾತ್ರವಲ್ಲ, ಎಸೆದ ತ್ಯಾಜ್ಯವನ್ನು ಅದೇ ಲಾರಿಯಲ್ಲಿ ತುಂಬಿಸಿ ವಾಪಾಸ್ ಕಳಿಸಲಾಗಿದೆ.

ತ್ಯಾಜ್ಯ ಎಸೆಯುವುದನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮ ಪಂಚಾಯತ್! | ದಂಡ ಮಾತ್ರವಲ್ಲ, ತಕ್ಕ ಶಾಸ್ತಿಯೂ ಆಯಿತು Read More »

ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ! | ಸಿರಿಲ್ ಮಿನೇಜಸ್ ಸಹಿತ ನಾಲ್ವರು ವಶ

ಬೆಳ್ತಂಗಡಿ; ಜುಗಾರಿ ಆಡುತ್ತಿದ್ದಾಗ ಪೊಲೀಸರು ದಾಳಿ ಮಾಡಿದ ಘಟನೆ ಬೆಳ್ತಂಗಡಿ ತಾಲೂಕು ಅಂಡಿಂಜೆ ಗ್ರಾಮದ ಕಿಲಾರ ಮಾರಿಕಾಂಬ ದೇವಸ್ಥಾನದ ಹಿಂಭಾಗದ ಸರಕಾರಿ ಗುಡ್ಡೆ ಪ್ರದೇಶದಲ್ಲಿ ನಡೆದಿದೆ. ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟ್ ಎಲೆಗಳಿಂದ ಜುಗಾರಿ ಆಟ ಆಡುತ್ತಿದ್ದಾಗ, ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಯ ತಂಡ ದಾಳಿ ಮಾಡಿದೆ. ಈ ವೇಳೆ ಅಂಡಿಂಜೆ ಗ್ರಾಮದ ವಾಸಿಗಳಾದ ಸಿರಿಲ್ ಮಿನೇಜಸ್, ಎಂ ಸಿ ಸುಂದರ, ಶೀನ ಮತ್ತು ರಾಘವ ಆಚಾರಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ! | ಸಿರಿಲ್ ಮಿನೇಜಸ್ ಸಹಿತ ನಾಲ್ವರು ವಶ Read More »

ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೌಜನ್ಯಾ ತಾಯಿ ದೂರು | ದೂರಿನಲ್ಲೇನಿದೆ?? ಸಚಿವರ ಪ್ರತಿಕ್ರಿಯೆ ಏನು?

ಮಂಗಳೂರು: ಸೌಜನ್ಯಾ ತಾಯಿ ಕುಸುಮಾವತಿ ಗೌಡ ಅವರು ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನು ಭೇಟಿ ಮಾಡಿ ಸೌಜನ್ಯಾಗೆ ನ್ಯಾಯ ಕೊಡಿಸಲು ನಡೆಯುತ್ತಿರುವ ಹೋರಾಟವನ್ನು ಹತ್ತಿಕ್ಕಲು ಯತ್ನಿಸುತ್ತಿದ್ದು, ರಕ್ಷಣೆ ಕೊಡಬೇಕೆಂದು ಮನವಿ ಮಾಡಿದ್ದಾರೆ. ನಿನ್ನೆ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಸಚಿವರನ್ನು ದಿಢೀರ್‌ ಭೇಟಿ ಮಾಡಿದ ಕುಸುಮಾವತಿ ಅವರು ಪ್ರಭಾವಿಗಳ ಒತ್ತಡಕ್ಕೆ ಮಣಿದು ಸಾಕ್ಷ್ಯಗಳನ್ನು ನಾಶ ಮಾಡಿದ ಪೊಲೀಸರು ಮತ್ತು ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಪ್ರಕರಣದ ಮರು ತನಿಖೆಗೆ ಸರಕಾರದ

ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೌಜನ್ಯಾ ತಾಯಿ ದೂರು | ದೂರಿನಲ್ಲೇನಿದೆ?? ಸಚಿವರ ಪ್ರತಿಕ್ರಿಯೆ ಏನು? Read More »

ಹಾಲಶ್ರೀ ಬಂಧನದ ಬೆನ್ನಿಗೇ ವಿನಯ್ ಗುರೂಜಿಗೆ ಸಿಸಿಬಿ ನೋಟಿಸ್ ನೀಡಿದ್ದ್ಯಾಕೆ? | ವಿ.ಹೆಚ್.ಪಿ., ಭಜರಂಗದಳ ಮುಖಂಡರಿಗೂ ಸಿಸಿಬಿ ನೋಟಿಸ್!

ಬೆಂಗಳೂರು: ಬಹುಕೋಟಿ ವಂಚನೆ ಆರೋಪ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಕೆದಕಿದಷ್ಟು ಬೆಚ್ಚಿ ಬೀಳಿಸುವ ವಿಷಯಗಳು ಹೊರಬರುತ್ತಿವೆ. ಮಾಹಿತಿ ಪ್ರಕಾರ, ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗಲು ಸೂಚಿಸಿ ಹಲವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ಇನ್ನೂ ಕೆಲವರಿಗೆ ವಿಚಾರಣೆಗೆ ಹಾಜರಾಗುವಂತೆ ಪೋನ್ ಮೂಲಕ ಮೌಖಿಕ ಸೂಚನೆ ನೀಡಿದೆ ಎನ್ನಲಾಗಿದೆ. ಭಜರಂಗದಳ, ವಿಹೆಚ್​ಪಿ, ಹಿಂದೂ ಜಾಗರಣೆ ವೇದಿಕೆಯ ಮುಖಂಡರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಹಿಂದುತ್ವ ನಾಯಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಅವದೂತ ವಿನಯ್ ಗುರೂಜಿಗೆ

ಹಾಲಶ್ರೀ ಬಂಧನದ ಬೆನ್ನಿಗೇ ವಿನಯ್ ಗುರೂಜಿಗೆ ಸಿಸಿಬಿ ನೋಟಿಸ್ ನೀಡಿದ್ದ್ಯಾಕೆ? | ವಿ.ಹೆಚ್.ಪಿ., ಭಜರಂಗದಳ ಮುಖಂಡರಿಗೂ ಸಿಸಿಬಿ ನೋಟಿಸ್! Read More »

ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಕೇಸ್ ದಾಖಲು.!

ಉಡುಪಿ: ಎಂ.ಎಲ್.ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣದಲ್ಲಿ ಸಿಸಿಬಿಯಿಂದ ಬಂಧಿಸಲ್ಪಟ್ಟಿರುವ ಚೈತ್ರಾ ಕುಂದಾಪುರಳ ಹೊಸ ಹೊಸ ಪ್ರಕರಣಗಳು ದಿನವೂ ಹೊರಬರುತ್ತಿದೆ. 5 ಕೋಟಿ ವಂಚನೆ ಪ್ರಕರಣದ ಬೆನ್ನಲ್ಲೇ ಇದೀಗ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಬಟ್ಟೆ ಅಂಗಡಿ ಹಾಕಿಸಿಕೊಡುವುದಾಗಿ ನಂಬಿಸಿ 5 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಿ, ಚೈತ್ರಾ ಕುಂದಾಪುರ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಸುದಿನ ಎಂಬುವವರು ದೂರು ದಾಖಲಿಸಿದ್ದಾರೆ. 2015ರಲ್ಲಿ ಚೈತ್ರಾ ಕುಂದಾಪುರ ಪರಿಚಯವಾಗಿದ್ದು, ತಾನು

ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಕೇಸ್ ದಾಖಲು.! Read More »

error: Content is protected !!
Scroll to Top