ಅಪರಾಧ

ಹಾಲಶ್ರೀ ಕಾರು ಚಾಲಕ CCB ವಶ!

ಬೆಂಗಳೂರು: ಅಭಿನಯ ಹಾಲಶ್ರೀ ಸ್ವಾಮೀಜಿಯ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೆ ಅಭಿನಯ ಶ್ರೀ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಬಿಜೆಪಿ ಬೈಂದೂರು ಎಂ.ಎಲ್‌ಎ ಟಿಕೆಟ್ ಪಡೆಯಬೇಕಾದ್ರೇ ಅಭಿನಯ ಹಾಲಶ್ರೀ ಶಿಫಾರಸ್ಸು ಮುಖ್ಯ ಎಂಬುದಾಗಿ ಉದ್ಯಮಿ ಗೋವಿಂದಬಾಬುಗೆ ಚೈತ್ರಾ ಕುಂದಾಪುರ ಹಾಗೂ ಅವರ ತಂಡ ಹೇಳಿತ್ತು. ಅದರಂತೆ ಉದ್ಯಮಿ ಅಭಿನಯ ಹಾಲಶ್ರೀಗಳನ್ನು ಬೆಂಗಳೂರಿನ ವಿಜಯನಗರದಲ್ಲಿ ಭೇಟಿಯಾಗಿದ್ದರು. ಈ ಸಂದರ್ಭ ತನಗೆ ಬೈಂದೂರು ಉಸ್ತುವಾರಿಯನ್ನು ನೀಡಿದ್ದಾರೆ. ಅಲ್ಲದೇ ಕೇಂದ್ರದ ಬಿಜೆಪಿ ನಾಯಕರು ಪರಿಚಯ ಎಂದೂ […]

ಹಾಲಶ್ರೀ ಕಾರು ಚಾಲಕ CCB ವಶ! Read More »

ಕೊನೆಗೂ ಬಾರಲೇ ಇಲ್ಲ ಮನೆಯವರು, ಪರಿಚಯಸ್ಥರು!! | 13 ದಿನಗಳ ಬಳಿಕ ಅಂತ್ಯಸಂಸ್ಕಾರ ನೆರವೇರಿಸಿದ ಪೊಲೀಸರು!

ಸುಳ್ಯ: ಮೃತಪಟ್ಟ ಹೋಟೆಲ್ ಕಾರ್ಮಿಕನ ಮೃತದೇಹವನ್ನು ಕೊಂಡೊಯ್ಯಲು ಮನೆಯವರು ಬಾರದ ಹಿನ್ನೆಲೆಯಲ್ಲಿ ಪೊಲೀಸರೇ ಅಂತ್ಯಸಂಸ್ಕಾರ ನೆರವೇರಿಸಿದ ಘಟನೆ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ 13 ದಿನಗಳ ಹಿಂದೆ ಹೃದಯಾಘಾತದಿಂದ ಉತ್ತರ ಭಾರತ ಮೂಲದ ಲೂಲು ಮೃತಪಟ್ಟಿದ್ದರು. ಸುಳ್ಯದ ರಥಬೀದಿಯ ಸ್ವಾಮಿ ಪ್ರಸಾದ್ ಹೋಟೆಲಿನಲ್ಲಿ ಕೆಲಸ ಮಾಡುತ್ತಿದ್ದ ಇವರ ಮೃತದೇಹವನ್ನು ಕೊಂಡೊಯ್ಯಲು ಮನೆಯವರು ಬಾರದ ಹಿನ್ನೆಲೆಯಲ್ಲಿ ಕೆವಿಜಿ ಆಸ್ಪತ್ರೆಯ ಶಿಥಿಲೀಕರಣ ಘಟಕದಲ್ಲಿ ಮೃತದೇಹವನ್ನು ಇರಿಸಲಾಗಿತ್ತು. ವ್ಯಕ್ತಿಯ ಸಂಬಂಧಿಕರು ಯಾರಾದರೂ ಇದ್ದಲ್ಲಿ ಸುಳ್ಯ ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ

ಕೊನೆಗೂ ಬಾರಲೇ ಇಲ್ಲ ಮನೆಯವರು, ಪರಿಚಯಸ್ಥರು!! | 13 ದಿನಗಳ ಬಳಿಕ ಅಂತ್ಯಸಂಸ್ಕಾರ ನೆರವೇರಿಸಿದ ಪೊಲೀಸರು! Read More »

ಮನೆಯಂಗಳದಲ್ಲಿ ಚಿನ್ನಾಭರಣ ಇಟ್ಟುಹೋದ ಕಳ್ಳರು!

ಬೆಳ್ತಂಗಡಿ: ದೂರು ನೀಡಿದ ಎರಡೇ ದಿನದಲ್ಲಿ ಮನೆಯ ನೆಲಮಾಳಿಗೆಯಿಂದ ಕಳವಾಗಿದ್ದ ಚಿನ್ನಾಭರಣವನ್ನು ಮನೆಯಂಗಳದಲ್ಲಿ ಇಟ್ಟುಹೋದ ಘಟನೆ ಮುಂಡಾಜೆ ಗ್ರಾಮದ ಕಡಂಬಳ್ಳಿ ವಾಳ್ಯದಲ್ಲಿ ನಡೆದಿದೆ. ಸುಮಾರು 5 ಲಕ್ಷ ರೂ. ಮೌಲ್ಯದ 122 ಗ್ರಾಂ ಚಿನ್ನಾಭರಣ ಮನೆಯಿಂದ ಕಳವಾದ ಬಗ್ಗೆ ದೂರು ನೀಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಈ ನಡುವೆ ಪ್ರಮೋದ್ ವಿ. ಭಿಡೆ ಅವರ ಮನೆಯಂಗಳದಲ್ಲಿ ಚಿನ್ನಾಭರಣ ಪತ್ತೆಯಾಗಿದೆ. ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್‌ ಕದ್ರಿ ಹಾಗೂ ತಂಡದವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ

ಮನೆಯಂಗಳದಲ್ಲಿ ಚಿನ್ನಾಭರಣ ಇಟ್ಟುಹೋದ ಕಳ್ಳರು! Read More »

ತಾಯಿ-ಮಗಳ ಮೃತದೇಹ ಬಾವಿಯಲ್ಲಿ ಪತ್ತೆ: ಶಂಕೆ ಮೂಡಿಸಿದ ಸಾವು!!

ಕಾಸರಗೋಡು: ತಾಯಿ ಮತ್ತು ಮಗಳ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನ ಉದುಮ ಸಮೀಪದ ಕಳ್ನಾಡ್ ನಲ್ಲಿ ನಡೆದಿದೆ. ಕಳ್ನಾಡ್ ಅರಮಂಗಾನದ ತಾಜುದ್ದೀನ್ ರವರ ಪತ್ನಿ ರುಬೀನಾ (33) ಮತ್ತು ಪುತ್ರಿ ಹನಾನ್ ಮರಿಯಾ (5) ಮೃತ ಪಟ್ಟವರು. ಶುಕ್ರವಾರ ಮಧ್ಯಾಹ್ನ 12 ಗಂಟೆ ಯಿಂದ ಇಬ್ಬರು ನಾಪತ್ತೆಯಾಗಿದ್ದು, ಇದರಿಂದ ಶೋಧ ನಡೆಸಿದಾಗ ಮನೆ ಸಮೀಪದ ಬಾವಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಮೇಲ್ಪರಂಬ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದು, ಪೊಲೀಸರು ಹಾಗೂ ಅಗ್ನಿ

ತಾಯಿ-ಮಗಳ ಮೃತದೇಹ ಬಾವಿಯಲ್ಲಿ ಪತ್ತೆ: ಶಂಕೆ ಮೂಡಿಸಿದ ಸಾವು!! Read More »

ಮಡಿಕೇರಿಯಲ್ಲಿ ಅಪ್ರಾಪ್ತೆ ಹಿಂದೂ ಹುಡುಗಿಯರ ಕಿಡ್ನ್ಯಾಪ್! | ನಿಜಾಮಿಲ್, ಸಮದ್, ತಪ್ಸಿರ್ ಹಾಗೂ ಇರ್ಫಾನ್ ಬಂಧನ

ಮಡಿಕೇರಿ: ಕೊಡಗಿನಲ್ಲಿ ಪಿಯುಸಿ ಓದುತ್ತಿದ್ದ ಅಪ್ರಾಪ್ತೆ ಹಿಂದೂ ಹುಡುಗಿಯರನ್ನು ಕಿಡ್ನ್ಯಾಪ್ ಮಾಡುತ್ತಿದ್ದ ನಾಲ್ವರು ಮುಸ್ಲಿಂ ಯುವಕರನ್ನು ಅರೆಸ್ಟ್ ಮಾಡಲಾಗಿದೆ. ಪಿಯುಸಿ ಓದುತ್ತಿದ್ದ ಅಪ್ರಾಪ್ತ ಹುಡುಗಿಯರನ್ನು ಕೊಡಗಿನಿಂದ ಮೈಸೂರಿಗೆ ಯುವಕರು ಅಪಹರಿಸಿ ಕರೆದೊಯ್ಯುತ್ತಿದ್ದರು ಎನ್ನಲಾಗಿದೆ. ಈ ವೇಳೆ ಇದನ್ನು ಗಮನಿಸಿದ್ದ ಸ್ಥಳೀಯರು ಕೂಡಲೇ ಫೋನ್ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧ ಪಟ್ಟ ಹಾಗೆ ನಾಲ್ವರು ಯುವಕರನ್ನು ಅರೆಸ್ಟ್ ಮಾಡಲಾಗಿದೆ. ನಿಜಾಮಿಲ್, ಸಮದ್, ತಪ್ಸಿರ್ ಹಾಗೂ ಇರ್ಫಾನ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

ಮಡಿಕೇರಿಯಲ್ಲಿ ಅಪ್ರಾಪ್ತೆ ಹಿಂದೂ ಹುಡುಗಿಯರ ಕಿಡ್ನ್ಯಾಪ್! | ನಿಜಾಮಿಲ್, ಸಮದ್, ತಪ್ಸಿರ್ ಹಾಗೂ ಇರ್ಫಾನ್ ಬಂಧನ Read More »

ಚೈತ್ರಾ ಕುಂದಾಪುರ ಆರೋಗ್ಯದ ಬಗ್ಗೆ ಹೇಳಿಕೆ ನೀಡಿದ ಡಾ. ಅಸೀಮಾ ಬಾನು

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರಾ ಕುಂದಾಪುರ ಅವರು ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾಗಲೇ ಬಾಯಲ್ಲಿ ನೊರೆ ಬಂದು ಕುಸಿದು ಬಿದ್ದಿದ್ದರು. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚೈತ್ರಾ ಅವರಿಗೆ ಫಿಡ್ಸ್ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಚೈತ್ರಾ ಕುಂದಾಪುರ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆ ವೈದ್ಯೆ ಡಾ. ಅಸೀಮಾ ಬಾನು ಅವರು, ಚೈತ್ರಾ ಕುಂದಾಪುರ ಆರೋಗ್ಯ ಸ್ಥಿರವಾಗಿದೆ. ಚೈತ್ರಾ ಕುಂದಾಪುರ ಸಿಟಿ ಸ್ಕ್ಯಾನ್, ಇಸಿಜಿ ರಿಪೋರ್ಟ್ ನಾರ್ಮಲ್ ಇದೆ. ಚೈತ್ರಾ ಕುಂದಾಪುರಗೆ

ಚೈತ್ರಾ ಕುಂದಾಪುರ ಆರೋಗ್ಯದ ಬಗ್ಗೆ ಹೇಳಿಕೆ ನೀಡಿದ ಡಾ. ಅಸೀಮಾ ಬಾನು Read More »

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ಸೂತ್ರಧಾರ ಅರಾಫತ್ ಆಲಿ ದೆಹಲಿಯಲ್ಲಿ ಅರೆಸ್ಟ್‌

ನವದೆಹಲಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ ಐಸಿಸ್ ಉಗ್ರ ಸಂಘಟನೆಯ ಸಂಚುಕೋರ, ಕರ್ನಾಟಕದ ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ನೈರೋಬಿಯಾದಿಂದ ದೆಹಲಿಗೆ ವಾಪಾಸ್ ಆಗುತ್ತಿದ್ದಾಗ ಎನ್​ಐಎ ಬಲೆಗೆ ಬಿದ್ದಿದ್ದಾನೆ. ಈತ ನೇರವಾಗಿ ಎಲ್ಲಿಯೂ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗದಿದ್ದರೂ, ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ , ಶಿವಮೊಗ್ಗ ಭಯೋತ್ಪಾದನೆ ಸಂಚು ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಅಲ್ಲದೇ ಮಂಗಳೂರಿನ ಕದ್ರಿ ಮಂಜುನಾಥ ದೇಗುಲದ ಬಳಿ ಸ್ಪೋಟ ನಡೆಸುವ ಸಲುವಾಗಿ ಕುಕ್ಕರ್

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ಸೂತ್ರಧಾರ ಅರಾಫತ್ ಆಲಿ ದೆಹಲಿಯಲ್ಲಿ ಅರೆಸ್ಟ್‌ Read More »

ತಿಂಗಳ ಹಿಂದೆ ವಿವಾಹವಾಗಿದ್ದ ಪೊಲೀಸ್ ಕಾನ್’ಸ್ಟೇಬಲ್ ನೇಣಿಗೆ ಶರಣು!!

ಮಂಗಳೂರು: ಮಂಗಳೂರು ನಗರ ಪೊಲೀಸ್ ಸೇವೆಯಲ್ಲಿದ್ದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್‌ಟೇಬಲ್ ಓರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸವದತ್ತಿಯ ಮಹೇಶ್ (31) ಆತ್ಮಹತ್ಯೆ ಮಾಡಿಕೊಂಡವರು. ನಗರದ ದಕ್ಷಿಣ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಕೌಟುಂಬಿಕ ಕಲಹವೇ ಮಹೇಶ್ ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ. ಒಂದೂವರೆ ತಿಂಗಳ ಹಿಂದೆಯಷ್ಟೇ ಮಹೇಶ್ ವಿವಾಹವಾಗಿದ್ದರು ಎನ್ನಲಾಗಿದ್ದು, ಕಪಿತಾನಿಯೋ ಬಳಿಯ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಿಂಗಳ ಹಿಂದೆ ವಿವಾಹವಾಗಿದ್ದ ಪೊಲೀಸ್ ಕಾನ್’ಸ್ಟೇಬಲ್ ನೇಣಿಗೆ ಶರಣು!! Read More »

ಮೂರ್ಛೆ ಹೋದ ಚೈತ್ರಾ, ಆಸ್ಪತ್ರೆಯ ಐಸಿಯುಗೆ ಶಿಫ್ಟ್!

ಬೆಂಗಳೂರು: ಸಿಸಿಬಿ ಪೊಲೀಸರ ವಶದಲ್ಲಿರುವ ಚೈತ್ರಾ ಕುಂದಾಪುರ ಅಸ್ವಸ್ಥಗೊಂಡಿದ್ದು, ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಉದ್ಯಮಿ ಗೋವಿಂದ ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಎರಡು ದಿನಗಳ ಹಿಂದೆ ಬಂಧನಕ್ಕೊಳಗಾಗಿದ್ದರು. ವಿಚಾರಣೆ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಅವರನ್ನು ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿ ಬಳಿ ಕರೆ ತರಲಾಗಿತ್ತು. ಆದರೆ ಸಿಸಿಬಿ ಕಚೇರಿ ಬಳಿ ತಲುಪುತ್ತಿದ್ದಂತೆಯೇ ಚೈತ್ರಾ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಈ ವೇಳೆ ಅವರ ಬಾಯಿಂದ ನೊರೆಯೂ ಬಂದಿದ್ದು, ಅವರನ್ನು ಕೂಡಲೇ

ಮೂರ್ಛೆ ಹೋದ ಚೈತ್ರಾ, ಆಸ್ಪತ್ರೆಯ ಐಸಿಯುಗೆ ಶಿಫ್ಟ್! Read More »

ಸಹಾಯಕ ಆಯುಕ್ತೆಗೆ ಜೈಲು ವಿಧಿಸಿದ ಲೋಕಾಯುಕ್ತ ನ್ಯಾಯಾಲಯ | ಉಪತಹಸೀಲ್ದಾರ್ ಶಬ್ಬೀರಿಗೂ ಜೈಲು

ಬೆಂಗಳೂರು: ಕೆಐಎಡಿಬಿ ವಿಶೇಷ ಭೂಸ್ವಾಧೀನ ಅಧಿಕಾರಿ ತಬಸ್ಸುಮ್ ಜಹೇರಾ ಹಾಗೂ ಬೆಳ್ಳಾವಿ ಉಪ ತಹಸೀಲ್ದಾರ್ ಶಬ್ಬೀರ್ ಅಹಮದ್ ಅವರಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ವಿಶೇಷ ಲೋಕಾಯುಕ್ತ ನ್ಯಾಯಾಲಯ ಆದೇಶ ನೀಡಿದೆ. ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಲಂಚ ಕೇಳಿದ ಹಾಗೂ ಸ್ವೀಕರಿಸಿದ ಪ್ರಕರಣದಲ್ಲಿ ತಬಸ್ಸುಮ್ ಜಹೇರಾ ಹಾಗೂ ಶಬ್ಬೀರ್ ಅಹಮದ್ ಅವರನ್ನು ದೋಷಿ ಎಂದು ನ್ಯಾಯಾಲಯ ಆದೇಶ ನೀಡಿತ್ತು. ಇದೀಗ ಶಿಕ್ಷೆಯ ಪ್ರಮಾಣವನ್ನು ಪ್ರಕಟ ಮಾಡಿದೆ. ಇಬ್ಬರಿಗೂ 4 ವರ್ಷಗಳ ಕಾಲ ಜೈಲು ಶಿಕ್ಷೆ ನೀಡಿ

ಸಹಾಯಕ ಆಯುಕ್ತೆಗೆ ಜೈಲು ವಿಧಿಸಿದ ಲೋಕಾಯುಕ್ತ ನ್ಯಾಯಾಲಯ | ಉಪತಹಸೀಲ್ದಾರ್ ಶಬ್ಬೀರಿಗೂ ಜೈಲು Read More »

error: Content is protected !!
Scroll to Top