ಅಪರಾಧ

ಮುಂಡಾಜೆ: ನೆಲಮಾಳಿಗೆಯಲ್ಲಿಟ್ಟಿದ್ದ ಚಿನ್ನಾಭರಣ ಕಳವು | ಕಳವಾದ ಚಿನ್ನಾಭರಣದ ಮೌಲ್ಯ ಸುಮಾರು 5 ಲಕ್ಷ ರೂ.!

ಬೆಳ್ತಂಗಡಿ: ಇಲ್ಲಿನ ಮುಂಡಾಜೆಯ ಮನೆಯೊಂದರಿಂದ ಚಿನ್ನಾಭರಣ ಕಳವಾದ ಘಟನೆ ಸೆ. 12ರಂದು ಬೆಳಕಿಗೆ ಬಂದಿದೆ. ಕಳವಾದ ಚಿನ್ನಾಭರಣದ ಮೌಲ್ಯ 5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಮುಂಡಾಜೆ ಗ್ರಾಮದ ನಿವಾಸಿ ಕಡಂಬಳ್ಳಿಯ ಪ್ರಮೋದ್ ವಿ. ಭಿಡೆ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮನೆ ಕೆಲಸಕ್ಕೆ ಬಂದವರ ಮೇಲೆ ಸಂಶಯ ವ್ಯಕ್ತಪಡಿಸಿದ್ದು, ಪ್ರಕರಣ ದಾಖಲಾಗಿದೆ. ಜುಲೈ 5ರಂದು ಮನೆ ಸಾರಣೆ ಹಾಗೂ ಪೈಂಟಿಂಗ್ ಕೆಲಸ ಪ್ರಾರಂಭಿಸಿದ್ದು, ಸುಮಾರು 10ರಿಂದ 13 ಜನ […]

ಮುಂಡಾಜೆ: ನೆಲಮಾಳಿಗೆಯಲ್ಲಿಟ್ಟಿದ್ದ ಚಿನ್ನಾಭರಣ ಕಳವು | ಕಳವಾದ ಚಿನ್ನಾಭರಣದ ಮೌಲ್ಯ ಸುಮಾರು 5 ಲಕ್ಷ ರೂ.! Read More »

ಸರ್ಕಾರದ ವಿರುದ್ಧ, ವ್ಯವಸ್ಥೆಯ ವಿರುದ್ಧ ಜನರು ತಿರುಗಿಬೀಳುವಂತಾಗಿದೆ: ಸಂಜೀವ ಮಠಂದೂರು | ಹೋರಾಟದ ಕಾವು ತಗ್ಗಿಸಲು ಸಂಘಟನೆಗಳಿಗೆ ಹಣ ಪೂರೈಕೆ: ಪ್ರವೀಣ್ ಕುಂಟ್ಯಾನ ಆರೋಪ | ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಮಂಗಳೂರಿನಲ್ಲಿ ಜಿಲ್ಲಾ ಹೋರಾಟ ಸಮಿತಿಯಿಂದ ಪ್ರತಿಭಟನೆ

ಮಂಗಳೂರು: ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ಮಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಬುಧವಾರ ಎರಡನೇ ದಿನಕ್ಕೆ ಕಾಲಿಟ್ಟಿತು. ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಸರ್ಕಾರದ ವಿರುದ್ಧ, ವ್ಯವಸ್ಥೆಯ ವಿರುದ್ಧ ಜನರು ತಿರುಗಿ ಬೀಳುವಂತಾಗಿದೆ. ಇಂತಹ ಒಂದು ಹೋರಾಟವನ್ನು ಮಹೇಶ್ ಶೆಟ್ಟಿ ತಿಮರೋಡಿ ಅವರು ಸಂಘಟಿಸಿದ್ದಾರೆ. ನ್ಯಾಯಪರವಾದ ಇಂತಹ ಹೋರಾಟವನ್ನು ವಿರೋಧಿಸುವುದು ಎಷ್ಟು ಸರಿ? ಅಪರಾಧಿ ಯಾರೆಂದು ತಿಳಿಯಬೇಕು ತಾನೇ? ಪ್ರಜಾಪ್ರಭುತ್ವದಲ್ಲಿ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಕೊಡುವ ಕೆಲಸವನ್ನು ಸರ್ಕಾರ

ಸರ್ಕಾರದ ವಿರುದ್ಧ, ವ್ಯವಸ್ಥೆಯ ವಿರುದ್ಧ ಜನರು ತಿರುಗಿಬೀಳುವಂತಾಗಿದೆ: ಸಂಜೀವ ಮಠಂದೂರು | ಹೋರಾಟದ ಕಾವು ತಗ್ಗಿಸಲು ಸಂಘಟನೆಗಳಿಗೆ ಹಣ ಪೂರೈಕೆ: ಪ್ರವೀಣ್ ಕುಂಟ್ಯಾನ ಆರೋಪ | ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಮಂಗಳೂರಿನಲ್ಲಿ ಜಿಲ್ಲಾ ಹೋರಾಟ ಸಮಿತಿಯಿಂದ ಪ್ರತಿಭಟನೆ Read More »

ಚೈತ್ರಾ ಕುಂದಾಪುರ ಸಿಸಿಬಿ ಕಸ್ಟಡಿಗೆ: ನ್ಯಾಯಾಲಯ ಆದೇಶ

ಉಡುಪಿ: ಚೈತ್ರಾ ಕುಂದಾಪುರ ಅವರನ್ನು ಬುಧವಾರ ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಅವರನ್ನು ಸಿಸಿಬಿ ಕಸ್ಟಡಿಗೆ ಒಪ್ಪಿಸಿದೆ. ವಂಚನೆ ಆರೋಪದಲ್ಲಿ ನಡುರಾತ್ರಿ ಹೊತ್ತಿಗೆ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಸಂಜೆ ವೇಳೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರ ಮುಂದೆ ಚೈತ್ರಾ ಕಣ್ಣೀರು ಹಾಕಿದ್ದಾರೆ ಎಂದು ಹೇಳಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯ, ಸೆಪ್ಟೆಂಭರ್ 23ರವರೆಗೆ ಸಿಸಿಬಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ.

ಚೈತ್ರಾ ಕುಂದಾಪುರ ಸಿಸಿಬಿ ಕಸ್ಟಡಿಗೆ: ನ್ಯಾಯಾಲಯ ಆದೇಶ Read More »

ವಿಷ ಸೇವಿಸಿದ ಸಹೋದರರು: ವಿಟ್ಲ ಆಸ್ಪತ್ರೆಗೆ ದಾಖಲು

ವಿಟ್ಲ: ಇಲ್ಲಿನ ಕುದ್ದುಪದವು ನಿವಾಸಿಗಳಾದ ಸಹೋದರರು ವಿಷಪ್ರಾಶನ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಿತಿ ಗಂಭೀರವಾಗಿದೆ. ಇಬ್ಬರನ್ನು ವಿಟ್ಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೈರ ಮೂಲದ ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿರಾಜ್ ವಿಷ ಸೇವನೆ ಮಾಡಿದವರು ಎಂದು ತಿಳಿದು ಬಂದಿದೆ. ಎರಡು ಪ್ರತ್ಯೇಕ ತುರ್ತುವಾಹನಗಳ ಮೂಲಕ ಅಸ್ವಸ್ಥರನ್ನು ವಿಟ್ಲ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಓರ್ವರನ್ನು ಮಂಗಳೂರಿಗೆ ಹಾಗೂ ಇನ್ನೋರ್ವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ವಿಷ ಸೇವಿಸಿದ ಸಹೋದರರು: ವಿಟ್ಲ ಆಸ್ಪತ್ರೆಗೆ ದಾಖಲು Read More »

ಚೈತ್ರಾ ಕುಂದಾಪುರ ಅವರನ್ನು ಬಂಧಿಸಿರುವುದು ಉಡುಪಿ ರಾಜಾಂಗಣದಿಂದ. ತನ್ನ ಮನೆಯಿಂದಲ್ಲ. ಹಾಗಾಗಿ ನನಗೆ ನೋಟಿಸ್ ಬಂದಿದೆ ಎನ್ನುವುದು ಸುಳ್ಳು ಸುದ್ದಿ!! | ಚೈತ್ರಾ ಕುಂದಾಪುರ ಪ್ರಕರಣದ ಬಗ್ಗೆ ಕಾಂಗ್ರೆಸ್‌ನ ಸುರಯ್ಯಾ ಅಂಜುಮ್‌ ಹೇಳಿಕೆ!!

ಉಡುಪಿ: ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿರುವ ಚೈತ್ರಾ ಕುಂದಾಪುರ ಅವರಿಗೆ ತಾನು ಆಶ್ರಯ ನೀಡಿಲ್ಲ. ನನಗೆ ಯಾವುದೇ ನೋಟಿಸ್ ಬಂದಿಲ್ಲ. ಎಲ್ಲವೂ ಸುಳ್ಳು ಎಂದು ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಮ್ ಹೇಳಿಕೆ ನೀಡಿದ್ದಾರೆ. ಘಟನೆಯ ಸಂಬಂಧ ಸುರಯ್ಯಾ ಅಂಜುಮ್ ಅವರಲ್ಲಿ ಮಾಧ್ಯಮದ ಪ್ರತಿನಿಧಿಗಳು ಕರೆ ಮಾಡಿ ಮಾತನಾಡಿಸಿದಾಗ, ”ಚೈತ್ರಾ ಕುಂದಾಪುರ ಅವರಿಗೆ ನಾನು ಆಶ್ರಯ ನೀಡಿದ್ದೇನೆ. ಹಾಗಾಗಿ ನೋಟಿಸ್ ಬಂದಿದೆ ಎಂಬುದು ಸುಳ್ಳು. ಆಕೆಯನ್ನು ನಿನ್ನೆ ರಾತ್ರಿ ಉಡುಪಿಯ ಕೃಷ್ಣಮಠದ ರಾಜಾಂಗಣದ ಬಳಿ ಪೊಲೀಸರು

ಚೈತ್ರಾ ಕುಂದಾಪುರ ಅವರನ್ನು ಬಂಧಿಸಿರುವುದು ಉಡುಪಿ ರಾಜಾಂಗಣದಿಂದ. ತನ್ನ ಮನೆಯಿಂದಲ್ಲ. ಹಾಗಾಗಿ ನನಗೆ ನೋಟಿಸ್ ಬಂದಿದೆ ಎನ್ನುವುದು ಸುಳ್ಳು ಸುದ್ದಿ!! | ಚೈತ್ರಾ ಕುಂದಾಪುರ ಪ್ರಕರಣದ ಬಗ್ಗೆ ಕಾಂಗ್ರೆಸ್‌ನ ಸುರಯ್ಯಾ ಅಂಜುಮ್‌ ಹೇಳಿಕೆ!! Read More »

ಚೈತ್ರಾ ಕುಂದಾಪುರ ಬಂಧನದ ಬೆನ್ನಿಗೆ ಆಶ್ರಯ ನೀಡಿದ್ದ ಕಾಂಗ್ರೆಸ್ ವಕ್ತಾರೆಗೂ ಸಿಸಿಬಿ ನೊಟೀಸ್ | ಕಾಶ್ಮೀರದಲ್ಲಿದ್ದಾನೆಂದು ನಂಬಿಸಿ ಸುರೆಯ್ಯ ಅಂಜುಮ್ ಜಸೀಮ್ ಮನೆಯಲ್ಲಿ 7 ದಿನಗಳಿಂದ ಆಶ್ರಯ ಪಡೆದಿದ್ದ ಚೈತ್ರಾ!

ಉಡುಪಿ: ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ಗೆ ಕೊಡಿಸುವುದಾಗಿ 7 ಕೋಟಿ ರೂ. ಡೀಲ್ ಪ್ರಕರಣದಲ್ಲಿ ಹಿಂದೂ ಮುಖಂಡೆ ಚೈತ್ರಾ ಕುಂದಾಪುರ ಅವರನ್ನು ವಶಕ್ಕೆ ಪಡೆದ ಬೆನ್ನಿಗೇ ಆಶ್ರಯ ನೀಡಿದ್ದ ಕಾಂಗ್ರೆಸ್‌ ನ ಮಾಧ್ಯಮ ವಕ್ತಾರೆ ಸುರೆಯ್ಯ ಅಂಜುಮ್ ಜಸೀಮ್ ಅವರಿಗೂ ಸಿಸಿಬಿ ನೊಟೀಸ್ ನೀಡಿದೆ. ಕಾಂಗ್ರೆಸ್ ಮಹಿಳಾ ನಾಯಕಿ ಸುರೆಯ್ಯ ಅಂಜುಂಗೆ ಸಿಸಿಬಿ ನೋಟೀಸ್ ನೀಡಿದ್ದು, ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಕಳೆದ ಏಳು ದಿನಗಳಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಕಾಂಗ್ರೆಸ್ ಮಾಧ್ಯಮ

ಚೈತ್ರಾ ಕುಂದಾಪುರ ಬಂಧನದ ಬೆನ್ನಿಗೆ ಆಶ್ರಯ ನೀಡಿದ್ದ ಕಾಂಗ್ರೆಸ್ ವಕ್ತಾರೆಗೂ ಸಿಸಿಬಿ ನೊಟೀಸ್ | ಕಾಶ್ಮೀರದಲ್ಲಿದ್ದಾನೆಂದು ನಂಬಿಸಿ ಸುರೆಯ್ಯ ಅಂಜುಮ್ ಜಸೀಮ್ ಮನೆಯಲ್ಲಿ 7 ದಿನಗಳಿಂದ ಆಶ್ರಯ ಪಡೆದಿದ್ದ ಚೈತ್ರಾ! Read More »

ಉದ್ಯಮಿಗೆ ಬಹುಕೋಟಿ ರೂಪಾಯಿ ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಪೊಲೀಸ್ ವಶಕ್ಕೆ

ಉಡುಪಿ : ಮುಂಬಯಿಯ ಉದ್ಯಮಿಯೊಬ್ಬರಿಗೆ ಎಂಎಲ್‌ಎ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರ ಕೊನೆಗೂ ಪೋಲಿಸರ ಕೈಗೆ ಸಿಕ್ಕಿಬಿದ್ದಿದ್ದಾರೆ . ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಬೆಂಗಳೂರು ಸಿಸಿಬಿ ಪೊಲೀಸರು ಸಿನಿಮಿಯ ಶೈಲಿಯಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆ ಬೈಂದೂರಿನ ಉದ್ಯಮಿ ಗೋವಿಂದ

ಉದ್ಯಮಿಗೆ ಬಹುಕೋಟಿ ರೂಪಾಯಿ ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಪೊಲೀಸ್ ವಶಕ್ಕೆ Read More »

ಜಾಲ್ಸೂರು: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಆಂಬ್ಯುಲೆನ್ಸ್ ಢಿಕ್ಕಿ | ಅಪಘಾತದ ಗಾಯಾಳುವನ್ನು ಕರೆದೊಯ್ಯುತ್ತಿದ್ದ ವೇಳೆ ಘಟನೆ

ಜಾಲ್ಸೂರು: ವಿದ್ಯಾರ್ಥಿನಿಯೋರ್ವಳಿಗೆ ಆಂಬ್ಯುಲೆನ್ಸ್ ಢಿಕ್ಕಿಯಾಗಿದ ಘಟನೆ ಕನಕಮಜಲಿನಲ್ಲಿ ಸೆ. 12ರಂದು ಸಂಜೆ ನಡೆದಿದೆ. ಪಯಸ್ವಿನಿ ಪ್ರೌಢಶಾಲಾ ವಿದ್ಯಾರ್ಥಿನಿ ಯೋಗಿನಿ ರಸ್ತೆ ದಾಟುತ್ತಿದ್ದ ವೇಳೆ ಘಟನೆ ನಡೆದಿದ್ದು, ಕಾಲಿಗೆ ಗಾಯವಾಗಿದೆ. ಬಾಲಕಿಯನ್ನು ಅದೇ ಆಂಬ್ಯುಲೆನ್ಸ್’ನಲ್ಲಿ ಸುಳ್ಯ ಕೆವಿಜಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರನ್ನು ಆಂಬ್ಯುಲೆನ್ಸ್’ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ಸಂದರ್ಭ ಶಾಲೆ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿನಿ ರಸ್ತೆ ದಾಟುತ್ತಿದ್ದಾಗ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಜಾಲ್ಸೂರು: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಆಂಬ್ಯುಲೆನ್ಸ್ ಢಿಕ್ಕಿ | ಅಪಘಾತದ ಗಾಯಾಳುವನ್ನು ಕರೆದೊಯ್ಯುತ್ತಿದ್ದ ವೇಳೆ ಘಟನೆ Read More »

ಗಲ್ಲಿ ಗಲ್ಲಿಯಲ್ಲಿ ಅಟ್ಟಾಡಿಸಿ ಮಚ್ಚು ಬೀಸಿದ ಪುಂಡರು! | ಸಿಸಿ ಟಿವಿ ದೃಶ್ಯ ಆಧರಿಸಿ ಆರು ಮಂದಿಯ ಸೆರೆ

ಬೆಂಗಳೂರು: ಬಾರ್‌ನಲ್ಲಿ ಅವಾಜ್‌ ಹಾಕಿದ್ದಕ್ಕಾಗಿ ಯುವಕರನ್ನು ಕೆಲ ಪುಂಡರು ಅಟ್ಟಾಡಿಸಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ. ರೋಹಿತ್ ಗೌಡ ಎಂಬಾತನ ಮೇಲೆ ಕಾಮಾಕ್ಷಿಪಾಳ್ಯದ ರಾಜು ಮತ್ತು ತಂಡದವರು ನಡುರಸ್ತೆಯಲ್ಲಿ ಲಾಂಗ್ ಬೀಸುತ್ತಾ ಹಲ್ಲೆ ನಡೆಸಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳೆದ ವಾರ ರೋಹಿತ್ ಬಾರ್‌ವೊಂದರಲ್ಲಿ ಇದ್ದಾಗ ರಾಜು, ಧನುಷ್, ಗುರುಪ್ರಸಾದ್‌ಗೆ ಅವಾಜ್ ಹಾಕಿ ಹೋಗಿದ್ದ. ಇದರಿಂದ ಈ ಮೂವರು ಮನಸ್ಸಿನಲ್ಲೆ ದ್ವೇಷ ಕಾರುತ್ತಿದ್ದರು. ರೋಹಿತ್‌ನನ್ನು ಹೀಗೆ ಬಿಟ್ಟರೇ ನಮ್ಮನ್ನೇ ಮುಗಿಬಿಡುತ್ತಾನೆ ಎಂದುಕೊಂಡು ಆತನ

ಗಲ್ಲಿ ಗಲ್ಲಿಯಲ್ಲಿ ಅಟ್ಟಾಡಿಸಿ ಮಚ್ಚು ಬೀಸಿದ ಪುಂಡರು! | ಸಿಸಿ ಟಿವಿ ದೃಶ್ಯ ಆಧರಿಸಿ ಆರು ಮಂದಿಯ ಸೆರೆ Read More »

ಎಂಡೋ ಸಂತ್ರೆಸ್ತೆಯ ಅತ್ಯಾಚಾರ ಪ್ರಕರಣ | ರಾಜೇಶ್ ರೈ ಅಪರಾಧ ಸಾಬೀತು ಪಡಿಸಿದ ನ್ಯಾಯಾಲಯ | ಅಪರಾಧಿಗೆ ಕಠಿಣ ಶಿಕ್ಷೆ, ಸಂತ್ರಸ್ತೆಗೆ ಪರಿಹಾರ

ವಿಟ್ಲ: ಇಲ್ಲಿನ ಎಂಡೋ ಪೀಡಿತೆ ಸಂತ್ರೆಸ್ತೆಯೋರ್ವರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ಅಪರಾಧ ಸಾಬೀತು ಪಡಿಸಿ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಪ್ರೀತಿ ಕೆ.ಪಿ. ತೀರ್ಪು ಪ್ರಕಟಿಸಿದ್ದಾರೆ. ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ರಾಜೇಶ್ ರೈ (33 ವ.)ನನ್ನು ನ್ಯಾಯಾಲಯ ಅಪರಾಧಿ ಎಂದು ಘೋಷಿಸಿದೆ. 2015ರ ಅ. 1ರಂದು ಘಟನೆ ನಡೆದಿದ್ದು, ಎಂಡೋ ಸಲ್ಫಾನ್

ಎಂಡೋ ಸಂತ್ರೆಸ್ತೆಯ ಅತ್ಯಾಚಾರ ಪ್ರಕರಣ | ರಾಜೇಶ್ ರೈ ಅಪರಾಧ ಸಾಬೀತು ಪಡಿಸಿದ ನ್ಯಾಯಾಲಯ | ಅಪರಾಧಿಗೆ ಕಠಿಣ ಶಿಕ್ಷೆ, ಸಂತ್ರಸ್ತೆಗೆ ಪರಿಹಾರ Read More »

error: Content is protected !!
Scroll to Top