ಅಪರಾಧ

ನಟ ಸಲ್ಮಾನ್‌ ಖಾನ್‌ಗೆ ಮತ್ತೆ ಜೀವ ಬೆದರಿಕೆ

ಮನೆಗೆ ನುಗ್ಗಿ ಸಾಯಿಸುತ್ತೇವೆ, ಇಲ್ಲವೇ ಕಾರು ಸ್ಫೋಟಿಸುತ್ತೇವೆ ಎಂದು ಧಮಕಿ ಮುಂಬಯಿ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಮತ್ತೊಮ್ಮೆ ಜೀವ ಬೆದರಿಕೆ ಸಂದೇಶ ಬಂದಿದೆ. ಮುಂಬಯಿಯ ವರ್ಲಿ ವಿಭಾಗದ ಸಂಚಾರಿ ಪೊಲೀಸರ ವಾಟ್ಸಪ್‌ ನಂಬರ್‌ಗೆ ಕಳುಹಿಸಿರುವ ಸಂದೇಶದಲ್ಲಿ ನಟನನ್ನು ಮನೆಗೆ ನುಗ್ಗಿ ಅಥವಾ ಕಾರು ಸ್ಫೋಟಿಸಿ ಸಾಯಿಸಿಲಿದ್ದೇವೆ ಎಂದು ಬೆದರಿಕೆಯೊಡ್ಡಲಾಗಿದೆ. ಒಂದು ವರ್ಷದ ಹಿಂದೆ ನಟನ ಮನೆಯೆದುರು ಇಬ್ಬರು ವ್ಯಕ್ತಿಗಳು ಬೈಕಿನಲ್ಲಿ ಬಂದು ಗುಂಡು ಹಾರಿಸಿದ್ದರು. ಅನಂತರ ಸಲ್ಮಾನ್‌ ಖಾನ್‌ಗೆ ಪದೇ ಪದೆ ಜೀವ ಬೆದರಿಕೆ ಸಂದೇಶಗಳು […]

ನಟ ಸಲ್ಮಾನ್‌ ಖಾನ್‌ಗೆ ಮತ್ತೆ ಜೀವ ಬೆದರಿಕೆ Read More »

ಯುವತಿಗೆ ಕಿರುಕುಳ ನೀಡಿದ ಆರೋಪಿ ಕೇರಳದಲ್ಲಿ ಸೆರೆ

ರಾಜ್ಯಾದ್ಯಂತ ಅಕ್ರೋಶಕ್ಕೆ ಕಾರಣವಾಗಿದ್ದ ಕೃತ್ಯದ ಆರೋಪಿ ಬೆಂಗಳೂರು : ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಹಿಂದಿನಿಂದ ಬಂದು ಕಿರುಕುಳ ನೀಡಿ ಪಲಾಯನ ಮಾಡಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದು ಸುಮಾರು 10 ದಿನಗಳ ಬಳಿಕ ಆರೋಪಿ ಸಂತೋಷ್ ಡೆನಿಯಲ್​​​ನನ್ನು ಕೇರಳ ಕೋಝಿಕ್ಕೋಡ್‌ ಸಮೀಪದ ಹಳ್ಳಿಯೊಂದರಿಂದ ಬಂಧಿಸಲಾಗಿದೆ. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿತ್ತು. ಆರೋಪಿಯ ಚಲನವಲನ ಪತ್ತೆಗೆ 1,800ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸಿದ್ದರು. ಆರೋಪಿ ಪತ್ತೆಗಾಗಿ ಡಿಸಿಪಿ ಸಾರಾ

ಯುವತಿಗೆ ಕಿರುಕುಳ ನೀಡಿದ ಆರೋಪಿ ಕೇರಳದಲ್ಲಿ ಸೆರೆ Read More »

ಬ್ಯಾಂಕಿಗೆ 13,850 ಕೋ. ರೂ. ವಂಚಿಸಿದ ಉದ್ಯಮಿ ಮೆಹುಲ್‌ ಚೋಕ್ಸಿ ಬೆಲ್ಜಿಯಂನಲ್ಲಿ ಬಂಧನ

2019ರಲ್ಲಿ ದೇಶ ಬಿಟ್ಟು ಪಲಾಯನ ಮಾಡಿದ್ದ ಪ್ರತಿಷ್ಠಿತ ವಜ್ರೋದ್ಯಮಿ ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13,000 ಕೋ.ರೂ.ಗೂ ಹೆಚ್ಚು ಮೊತ್ತ ವಂಚಿಸಿ ಪಲಾಯನ ಮಾಡಿದ್ದ ಪ್ರತಿಷ್ಠಿತ ವಜ್ರೋದ್ಯಮಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂ ದೇಶದಲ್ಲಿ ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಭಾರತೀಯ ತನಿಖಾ ಸಂಸ್ಥೆಗಳ ಕೋರಿಗೆ ಮೇರೆಗೆ ಏಪ್ರಿಲ್‌ 12ರಂದು ಮೆಹುಲ್‌ ಚೋಕ್ಸಿಯನ್ನು ಬೆಲ್ಜಿಯಂನ ಆಸ್ಪತ್ರೆಯಲ್ಲಿ ಬಂಧಿಸಲಾಯಿತು ಎಂದು ತಿಳಿದುಬಂದಿದೆ. ಅವನನ್ನು ಭಾರತಕ್ಕೆ ಕರೆತರಲು ತನಿಖಾ ಸಂಸ್ಥೆಗಳು ಸಿದ್ಧತೆ ಮಾಡಿಕೊಳ್ಳುತ್ತಿವೆ. ಕಾನೂನು ಹೋರಾಟ ಸ್ವಲ್ಪ ಸಮಯ ತೆಗೆದುಕೊಳ್ಳಬಹುದು ಎಂದು ಮೂಲಗಳು

ಬ್ಯಾಂಕಿಗೆ 13,850 ಕೋ. ರೂ. ವಂಚಿಸಿದ ಉದ್ಯಮಿ ಮೆಹುಲ್‌ ಚೋಕ್ಸಿ ಬೆಲ್ಜಿಯಂನಲ್ಲಿ ಬಂಧನ Read More »

ಮಗುವನ್ನು ಹತ್ಯೆ ಮಾಡಿದ ಆರೋಪಿ ಪೊಲೀಸರ ಗುಂಡಿಗೆ ಬಲಿ : ಕಮಿಷನರ್‌ಗೆ ಜೈಕಾರ ಹಾಕಿದ ಜನ

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿ ಕೊಲೆಗೈದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಗುಂಡಿಟ್ಟು ಕೊಂದಿರುವುದು ರಾಜ್ಯಾದ್ಯಂತ ಸಂಚಲನವುಂಟುಮಾಡಿದೆ. ರಾಜ್ಯದಲ್ಲಿ ಆರೋಪಿಯನ್ನು ಈ ರೀತಿ ಎನ್‌ಕೌಂಟರ್‌ನಲ್ಲಿ ಸಾಯಿಸಿರುವುದು ಬಹಳ ಅಪರೂಪದ ಪ್ರಕರಣವಾಗಿದೆ. ಶಿಶುಕಾಮಿ ಆರೋಪಿಯನ್ನು ಪೊಲೀಸರು ಗುಂಟಿಕ್ಕಿ ಸಾಯಿಸಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತ ಶಶಿಕುಮಾರ್​ ಅವರಿಗೆ ಜನರು ಜೈಕಾರ ಹಾಕಿದ್ದಾರೆ. ಈ ವೀಡಿಯೊ ಈಗ ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್‌ ಆಗಿದೆ. ಆರೋಪಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕಿಮ್ಸ್

ಮಗುವನ್ನು ಹತ್ಯೆ ಮಾಡಿದ ಆರೋಪಿ ಪೊಲೀಸರ ಗುಂಡಿಗೆ ಬಲಿ : ಕಮಿಷನರ್‌ಗೆ ಜೈಕಾರ ಹಾಕಿದ ಜನ Read More »

ಪಶ್ಚಿಮ ಬಂಗಾಳ : ಮೂವರು ಸಾವು; 150ಕ್ಕೂ ಅಧಿಕ ಬಂಧನ

ವಕ್ಫ್‌ ಕಾಯಿದೆ ವಿರೋಧಿ ಪ್ರತಿಭಟನೆ ವೇಳೆ ಭಾರಿ ಹಿಂಸಾಚಾರ ಕೋಲ್ಕತ್ತಾ: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆ ಮುಂದುವರಿದಿದೆ. ತಂದೆ ಮತ್ತು ಮಗ ಸೇರಿ ಈವರೆಗೆ ಒಟ್ಟು ಮೂವರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಶುಕ್ರವಾರದ ಪ್ರಾರ್ಥನೆಯ ನಂತರ ಭುಗಿಲೆದ್ದ ಹಿಂಸಾಚಾರ ಮುರ್ಷಿದಾಬಾದ್‌ ಜಿಲ್ಲೆಯ ಹಲವು ಭಾಗಗಳಿಗೆ ವ್ಯಾಪಿಸಿದ್ದು, ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿವೆ. ಕಳೆದ ರಾತ್ರಿ ಪೊಲೀಸರು, ಅರೆಸೇನಾ ಪಡೆಗಳು ಸಂಪೂರ್ಣ ಗಸ್ತು ತಿರುಗಿದ್ದು, ಸುತಿ,

ಪಶ್ಚಿಮ ಬಂಗಾಳ : ಮೂವರು ಸಾವು; 150ಕ್ಕೂ ಅಧಿಕ ಬಂಧನ Read More »

ನಿಯಂತ್ರಣ ತಪ್ಪಿದ ಕಾರು | ಕಾರಿನಲ್ಲಿ ಗಾಂಜಾ ಪ್ಯಾಕೇಟ್‍ ಪತ್ತೆ : ಮೂವರು ಪೊಲೀಸರ ವಶಕ್ಕೆ

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ದೇವರಕೊಲ್ಲಿ ಬಳಿ ನಡೆದಿದ್ದು, ಈ ಸಂದರ್ಭ ವೇಳೆ ಕಾರನ್ನು ಎತ್ತಿ ಸರಿ ಪಡಿಸಲು ಹೋದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೆಟ್ ಇದ್ದ ಪ್ರಕರಣ ಬಯಲಿಗೆ ಬಂದಿದೆ. ಶನಿವಾರ ಸಂಜೆ ಪಿರಿಯಾಪಟ್ಟಣದಿಂದ ಮಡಿಕೇರಿ ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕಾರು ದೇವರಕೊಲ್ಲಿ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಗಿದೆ. ನೆರವಿಗೆ ಧಾವಿಸಿ ಬಂದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೇಟ್ ಗಳು ಪತ್ತೆಯಾಗಿದ್ದು ಕೂಡಲೇ ಮಡಿಕೇರಿ ಗ್ರಾಮಾಂತರ

ನಿಯಂತ್ರಣ ತಪ್ಪಿದ ಕಾರು | ಕಾರಿನಲ್ಲಿ ಗಾಂಜಾ ಪ್ಯಾಕೇಟ್‍ ಪತ್ತೆ : ಮೂವರು ಪೊಲೀಸರ ವಶಕ್ಕೆ Read More »

ನ್ಯಾಶನಲ್‌ ಹೆರಾಲ್ಡ್‌ ಹಗರಣ : ಕಾಂಗ್ರೆಸ್‌ನ 661 ಕೋ. ರೂ. ಆಸ್ತಿ ಜಪ್ತಿ ಪ್ರಕ್ರಿಯೆ ಶುರು

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಆರೋಪಿಗಳಾಗಿರುವ ಪ್ರಕರಣ ನವದೆಹಲಿ : ನ್ಯಾಶನಲ್‌ ಹೆರಾಲ್ಡ್‌ ಭ್ರಷ್ಟಾಚಾರ ಕೇಸಿಗೆ ಸಂಬಂಧಪಟ್ಟಂತೆ ಕಾಂಗ್ರೆಸ್‌ನ 600 ಕೋಟಿ ರೂ.ಗೂ ಮಿಕ್ಕಿದ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಪ್ರಾರಂಭಿಸಿದೆ.ಕಾಂಗ್ರೆಸ್ ನಿಯಂತ್ರಿತ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ವಿರುದ್ಧದ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ಜಪ್ತಿ ಮಾಡಲಾಗಿರುವ 661 ಕೋಟಿ ರೂಪಾಯಿ ಮೌಲ್ಯದ ಸ್ಥಿರ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಜಾರಿ ನಿರ್ದೇಶನಾಲಯ ಶನಿವಾರ ನೋಟಿಸ್ ಜಾರಿ ಮಾಡಿದೆ. ದೆಹಲಿಯ ಐಟಿಒದಲ್ಲಿರುವ ಹೆರಾಲ್ಡ್ ಹೌಸ್, ಮುಂಬಯಿಯ

ನ್ಯಾಶನಲ್‌ ಹೆರಾಲ್ಡ್‌ ಹಗರಣ : ಕಾಂಗ್ರೆಸ್‌ನ 661 ಕೋ. ರೂ. ಆಸ್ತಿ ಜಪ್ತಿ ಪ್ರಕ್ರಿಯೆ ಶುರು Read More »

ವೃದ್ಧೆ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ವೃದ್ಧೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಕೆರೆಮೂಲೆ ಎಂಬಲ್ಲಿ ನಡೆದಿದೆ. ಜಯಂತಿ (70) ಆತ್ಮಹತ್ಯೆ ಮಾಡಿಕೊಂಡ ವೃದ್ಯೆ. ವಿಪರೀತ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವೃದ್ಧೆ ನೇಣು ಬಿಗಿದು ಆತ್ಮಹತ್ಯೆ Read More »

ಧರ್ಮಸ್ಥಳದ ಆಕ್ಷೇಪಾರ್ಹ ವಿಡಿಯೋ ಮಾಡಿದ ಸಮೀರ್‌ ವಿರುದ್ಧ 10 ಕೋ. ರೂ. ಮಾನನಷ್ಟ ದಾವೆ

ನ್ಯಾಯಾಲಯದ ತಡೆಯಾಜ್ಞೆ ಇದ್ದರೂ ಎರಡನೇ ವಿಡಿಯೋ ಮಾಡಿರುವುದಕ್ಕೆ ಆಕ್ಷೇಪ ಬೆಂಗಳೂರು : ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಪ್ರಕರಣ ಸಂಬಂಧ ಧರ್ಮಸ್ಥಳವನ್ನು ಗುರಿಯಾಗಿಟ್ಟುಕೊಂಡು ಮಾಡಿದ್ದ ವಿಡಿಯೋವನ್ನು ತೆಗೆದು ಹಾಕುವಂತೆ ನೀಡಿದ್ದ ಆದೇಶ ಉಲ್ಲಂಘಿಸಿದ ಯುಟ್ಯೂಬರ್‌ ಎಂ ಡಿ ಸಮೀರ್‌ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲಾಗಿದೆ. ಧರ್ಮಸ್ಥಳ ಪರ ಡಿ. ಹರ್ಷೇಂದ್ರ ಕುಮಾರ್‌ ಮತ್ತು ನಿಶ್ಚಲ್‌ ಡಿ. ಹೂಡಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ ಪರಿಶೀಲಿಸಿದ ಬಳಿಕ ಬೆಂಗಳೂರಿನ ಸಿಟಿ ಸಿವಿಲ್‌ ನ್ಯಾಯಾಧೀಶರಾದ ಎಸ್‌. ನಟರಾಜ್‌

ಧರ್ಮಸ್ಥಳದ ಆಕ್ಷೇಪಾರ್ಹ ವಿಡಿಯೋ ಮಾಡಿದ ಸಮೀರ್‌ ವಿರುದ್ಧ 10 ಕೋ. ರೂ. ಮಾನನಷ್ಟ ದಾವೆ Read More »

ಮಂಗಳೂರು: ಬೀಚ್‌ನಲ್ಲಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಮೂವರು ಸೆರೆ

ಮಾದಕವಸ್ತು, ಕಾರು ಸಹಿತ 9.24 ಲ.ರೂ. ಸೊತ್ತು ವಶ ಮಂಗಳೂರು ‌: ನಗರದ ಸುರತ್ಕಲ್‌ ಬೀಚ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಿಂದ ನಿಷೇಧಿತ ಎಂಡಿಎಂಎಯನ್ನು ತಂದು ಸುರತ್ಕಲ್ ಸುತ್ತಮುತ್ತ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವಕರನ್ನು ಗುರಿಮಾಡಿಕೊಂಡು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಬಂಧಿತರನ್ನು ಸುರತ್ಕಲ್ ನಿವಾಸಿಗಳಾದ ಮೊಹಮ್ಮದ್ ಆಸಿಫ್ (24), ಅಸ್ಕರ್ ಅಲಿ (31) ಮತ್ತು ಹಳೆಯಂಗಡಿಯ ಮೊಹಮ್ಮದ್ ರಶೀಮ್ (24)

ಮಂಗಳೂರು: ಬೀಚ್‌ನಲ್ಲಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಮೂವರು ಸೆರೆ Read More »

error: Content is protected !!
Scroll to Top