ಅಪರಾಧ

ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ಹೋರಿಗಳ ಸಾಗಾಟ: ಆರೋಪಿ ಬಂಧನ

ನೆಲ್ಯಾಡಿ: ಹಿಂಸಾತ್ಮಕ ರೀತಿಯಲ್ಲಿ ಹೋರಿಗಳನ್ನು ‌ಸಾಗಾಟ ಮಾಡುತ್ತಿದ್ದ ಗೂಡ್ಸ್ ಟೆಂಪೋ ಒಂದನ್ನು ಗುಂಡ್ಯದಲ್ಲಿ ‌ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಹಾಸನದ ಅರಸೀಕೆರೆಯ ಕುಮಾರ್ (48) ಎಂದು ಗುರುತಿಸಲಾಗಿದೆ. ಗುಂಡ್ಯ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ಸಮಯದಲ್ಲಿ ಟೆಂಪೋದಲ್ಲಿ ಹೋರಿಗಳ ಸಾಗಾಟ ನಡೆಯುತ್ತಿರುವುದು ಪತ್ತೆಯಾಗಿದೆ. ಆರೋಪಿಯನ್ನು ಪ್ರಶ್ನೆ ಮಾಡಲಾಗಿ ಹೋರಿಗಳನ್ನು ಮಾಂಸ ಮಾಡುವ ಉದ್ದೇಶದಿಂದ ಕಾಸರಗೋಡಿಗೆ ಸಾಗಾಟ‌ ಮಾಡುತ್ತಿರುವುದಾಗಿ ಹೇಳಿದ್ದಾನೆ. ಹಾಗೆಯೇ ಇದನ್ನು ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ನಡೆಸಲಾಗುತ್ತಿದೆ ಎನ್ನುವ ವಿಷಯವೂ […]

ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ಹೋರಿಗಳ ಸಾಗಾಟ: ಆರೋಪಿ ಬಂಧನ Read More »

ಸುಳ್ಯ : ಕಳ್ಳತನ ಆರೋಪಿಗೆ ಜೈಲು ಶಿಕ್ಷೆ

ಸುಳ್ಯ: ಮನೆಗಳ್ಳತನ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬೆಳ್ತಂಗಡಿ ನೆರಿಯ ನಿವಾಸಿ ಶರತ್ ಎಸ್. (24) ಎಂಬಾತನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕಳವು ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯವು ಕಲಂ 457 ಐಪಿಸಿ ರಲ್ಲಿ ಆರೋಪಿಗೆ ಆರು ತಿಂಗಳ ಸಾದ ಸಜೆ ಹಾಗೂ 500 ದಂಡ, ಕಲಂ 380 ಐಪಿಸಿಯಲ್ಲಿ 10 ತಿಂಗಳ ಸಾದಾ ಸಜೆ ಹಾಗೂ 500 ರೂ.ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ 10 ದಿನಗಳ ಹೆಚ್ಚುವರಿ ಸಜೆ

ಸುಳ್ಯ : ಕಳ್ಳತನ ಆರೋಪಿಗೆ ಜೈಲು ಶಿಕ್ಷೆ Read More »

ಜೈಲಿಗೆ ವಾರ್ಡನ್‌ನಿಂದಲೇ ಡ್ರಗ್ಸ್‌ ಪೂರೈಕೆ

ಮತ್ತೊಮ್ಮೆ ಪರಪ್ಪನ ಅಗ್ರಹಾರ ಕರ್ಮಕಾಂಡ ಬಯಲು ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಗಾಂಜಾ ಸರಬರಾಜು ಮಾಡುತ್ತಿದ್ದ ಜೈಲು ವಾರ್ಡನ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪ್ರಕಾಶ್ ಗಾವಡೆ ಎಂದು ಗುರುತಿಸಲಾಗಿದೆ. ಮಾರ್ಚ್ 9ರಂದು ರಾತ್ರಿ ಸುಮಾರು 8.15ರ ಸುಮಾರಿಗೆ ಈ ಘಟನೆ ನಡೆದಿದೆ. ಆ ದಿನ ನಿಯೋಜನೆಗೊಂಡಿದ್ದ ವಾರ್ಡನ್ ಪ್ರಕಾಶ್ ಗಾವಡೆ ಜೈಲಿನೊಳಗೆ ಪ್ರವೇಶಿಸುವ ವೇಳೆ ತಪಾಸಣೆ ವಿಭಾಗ–2ರಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಅವನನ್ನು ಪರಿಶೀಲನೆಗೆ ಒಳಪಡಿಸಿದರು. ಈ ವೇಳೆ ಅವನ ಒಳ ಉಡುಪಿನಲ್ಲಿ ಹಣ

ಜೈಲಿಗೆ ವಾರ್ಡನ್‌ನಿಂದಲೇ ಡ್ರಗ್ಸ್‌ ಪೂರೈಕೆ Read More »

ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಹತ್ಯೆಗೆ ಯತ್ನ

ಮದುವೆ ಸಮಾರಂಭದಲ್ಲಿ ಗುಂಡಿನೇಟಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಫಾರೂಕ್‌ ಅಬ್ದುಲ್ಲಾ ಶ್ರೀನಗರ : ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ತಂದೆ, ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರನ್ನು ಗುಂಡಿಕ್ಕಿ ಸಾಯಿಸಲು ಯತ್ನಿಸಿರುವ ಘಟನೆ ನಡೆದಿದೆ. ಬುಧವಾರರಂದು ಸಂಜೆ ವಿವಾಹ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ಫಾರೂಕ್ ಅಬ್ದುಲ್ಲಾ ಅವರನ್ನು ಕೊಲೆ ಮಾಡಲು ಸಂಚು ರೂಪಿಸಲಾಗಿತ್ತು. ದುಷ್ಕರ್ಮಿಯೊಬ್ಬ ಅವರ ಮೇಲೆ ಗುಂಡು ಹಾರಿಸಿದ್ದಾನೆ. ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ದಾಳಿಕೋರ ಅಬ್ದುಲ್ಲಾ ಅವರಿಂದ ಕೆಲವೇ ಕೆಲವು

ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಹತ್ಯೆಗೆ ಯತ್ನ Read More »

ವಿಟ್ಲ: ಬಾಡಿಗೆ ಮನೆಯಲ್ಲಿ ಡ್ರಗ್ಸ್‌ ದಂಧೆ, ನಾಲ್ವರು ಸೆರೆ

ವಿಟ್ಲ: ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ಇದ್ದುಕೊಂಡು ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿ, ಸುಮಾರು ರೂ.1,79,700 ಮೌಲ್ಯದ 17.97 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಇಂದಿರಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಶ್ರಫ್ ಜಿ ಎಂಬಾತ ತನ್ನ ಮನೆಯಲ್ಲಿ ಎಂಡಿಎಂಎ ಸಂಗ್ರಹಿಸಿ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ

ವಿಟ್ಲ: ಬಾಡಿಗೆ ಮನೆಯಲ್ಲಿ ಡ್ರಗ್ಸ್‌ ದಂಧೆ, ನಾಲ್ವರು ಸೆರೆ Read More »

ಅಪ್ರಾಪ್ತ‌ನಿಂದ ಯುವಕನ ಹತ್ಯೆ: ಯುವತಿಯ ವಿಷಯಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಬಾಗಲಕೋಟೆ: ಯುವತಿಯೊಬ್ಬಳ‌ ವಿಷಯದಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ಅಪ್ರಾಪ್ತ ಯುವಕ ಆರೋಪಿಯಾಗಿದ್ದು, ರಾಹುಲ್ ಎಂಬಾತನೇ ಕೊಲೆಯಾದ ದುರ್ದೈವಿ. ಯುವತಿಯ ವಿಷಯಕ್ಕೆ ಸಂಬಂಧಿಸಿದ ಹಾಗೆ ರಾಹುಲ್ ಮತ್ತು ಅಪ್ರಾಪ್ತ ಯುವಕನ ನಡುವೆ ಹೋಳಿ ಹಬ್ಬದ ಸಂದರ್ಭದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಯುವಕ ರಾಹುಲ್‌ನ ಕುತ್ತಿಗೆಗೆ ಬೈಕ್‌ನ ಕೀ ಚೈನ್‌ನಿಂದ ಚುಚ್ಚಿದ್ದಾನೆ. ಗಂಭೀರವಾಗಿ ಗಾಯಗೊಂಡ ರಾಹುಲ್ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ತೇರದಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಅಪ್ರಾಪ್ತ‌ನಿಂದ ಯುವಕನ ಹತ್ಯೆ: ಯುವತಿಯ ವಿಷಯಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ Read More »

ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 201 ಮೊಬೈಲ್‌ ವಶ

ವಾರಿಸುದಾರರಿಲ್ಲದ ಬ್ಯಾಗ್‌ ಪರಿಶೀಲಿಸಿದಾಗ ಸಿಕ್ಕಿದ ಮೊಬೈಲ್‌ ಮಂಗಳೂರು: ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 201 ಹಳೆಯ ಮೊಬೈಲ್‌ಗಳನ್ನು ರೈಲ್ವೆ ರಕ್ಷಣಾ ದಳದವರು (ಆರ್‌ಪಿಎಫ್) ಮಂಗಳೂರು ಜಂಕ್ಷನ್ ನಿಲ್ದಾಣದಲ್ಲಿ ಸೋಮವಾರ ವಶಪಡಿಸಿಕೊಂಡಿದ್ದಾರೆ. ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಣ್ಗಾವಲು ತೀವ್ರಗೊಳಿಸಿರುವ ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ಆರ್‌ಪಿಎಫ್ ರೈಲುಗಳ ಮೂಲಕ ನಗದು, ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತುಗಳ ಅಕ್ರಮ ಸಾಗಾಟದ ವಿರುದ್ಧ ನಡೆಸಿದ ವಿಶೇಷ ಕಾರ್ಯಾಚರಣೆಯ ವೇಳೆ ಸುಮಾರು 10.05 ಲಕ್ಷ ರೂ. ಮೌಲ್ಯದ 201 ಹಳೆಯ ಮೊಬೈಲ್

ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 201 ಮೊಬೈಲ್‌ ವಶ Read More »

ಚಿನ್ನಾಭರಣ ಕಳ್ಳತನ ಪ್ರಕರಣ : 24 ಗಂಟೆಯಲ್ಲಿ ಆರೋಪಿ ಅರೆಸ್ಟ್‌

ಮನೆಯಿಂದ ಹಾಡಹಗಲೇ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿ ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಸ್ ನಗರದಲ್ಲಿ ಮನೆಯಿಂದ ಹಾಡಹಗಲೇ ಚಿನ್ನಾಭರಣ ಕಳ್ಳತನವಾದ ಪ್ರಕರಣವನ್ನು ಪೊಲೀಸರು 24 ಗಂಟೆಯೊಳಗೆ ಭೇದಿಸಿ ಆರೋಪಿಯನ್ನು ಬಂಧಿಸಿ ಕಳವು ಮಾಡಿದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಮಾರ್ಚ್ 7ರಂದು ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆ ಮನೆಯಲ್ಲಿದ್ದವರು ಹೊರಗಿದ್ದ ಸಂದರ್ಭದಲ್ಲಿ ಉಲ್ಲಾಸ್ ನಗರದ ಮನೆಯೊಂದರ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು 4,80,000 ರೂ. ಮೌಲ್ಯದ 39 ಗ್ರಾಂ ಚಿನ್ನಾಭರಣ ಹಾಗೂ

ಚಿನ್ನಾಭರಣ ಕಳ್ಳತನ ಪ್ರಕರಣ : 24 ಗಂಟೆಯಲ್ಲಿ ಆರೋಪಿ ಅರೆಸ್ಟ್‌ Read More »

4,175 ಲೀಟರ್‌ ಡೀಸೆಲ್‌ ಅಕ್ರಮ ದಾಸ್ತಾನು ಪತ್ತೆ

ಮನೆಯ ಶೆಡ್‌ನಲ್ಲಿ ಬ್ಯಾರಲ್‌ಗಳಲ್ಲಿ ಅಪಾಯಕಾರಿಯಾಗಿ ತುಂಬಿಸಿಟ್ಟಿದ್ದ ಡೀಸೆಲ್‌ ಉಪ್ಪಿನಂಗಡಿ: ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಇಂಧನ ಅಭಾವದ ಭೀತಿ ತಲೆದೋರಿರುವಂತೆಯೇ ಉಪ್ಪಿನಂಗಡಿಯಲ್ಲಿ 4 ಸಾವಿರ ಲೀಟರ್‌ಗೂ ಅಧಿಕ ಡೀಸೆಲ್‌ ಅಕ್ರಮವಾಗಿ ದಾಸ್ತಾನು ಇಟ್ಟಿರುವುದು ಪತ್ತೆಯಾಗಿದೆ. ಅಕ್ರಮವಾಗಿ ಶೇಖರಿಸಿದ್ದ ಸುಮಾರು 4,175 ಲೀಟರ್ ಡೀಸೆಲ್‌ನ್ನು ಪೊಲೀಸರು ಪತ್ತೆಹಚ್ಚಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಾರ್ಚ್ 9ರಂದು ರಾತ್ರಿ ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ರೋಹಿಣಿ ಸಿ.ಕೆ ಅವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮುದಲ್ತಿಯಾರ್

4,175 ಲೀಟರ್‌ ಡೀಸೆಲ್‌ ಅಕ್ರಮ ದಾಸ್ತಾನು ಪತ್ತೆ Read More »

ಶ್ರೀಮಂತರನ್ನು ಹನಿಟ್ರ್ಯಾಪ್ ಮಾಡಿ ದೋಚುತ್ತಿದ್ದ ಕಿಲಾಡಿ ಲೇಡಿ ಪೊಲೀಸರ ಬಲೆಗೆ

ಬೆಳಗಾವಿ: ಶ್ರೀಮಂತ ಪುರುಷರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮಾಡಿ ಅವರನ್ನು ದೋಚುತ್ತಿದ್ದ ಖತರ್‌ನಾಕ್ ಲೇಡಿಯನ್ನು ತಿಲಕವಾಡಿ ಪೊಲೀಸರು ಬಂಧಿಸಿದ್ದಾರೆ. ಫ್ಯಾಶನ್ ಡಿಸೈನರ್ ದೀಪಾ ಎಂಬಾಕೆಯೇ ಬಂಧಿತ ಆರೋಪಿ. ಆಕೆಗೆ ಈ ಕೆಲಸಕ್ಕೆ ಸಹಾಯ ಮಾಡುತ್ತಿದ್ದ ಆಕೆಯ ಸ್ನೇಹಿತ ಶಿವಾನಂದ ಮಠಪತಿ ಪರಾರಿಯಾಗಿದ್ದಾನೆ. ಆರೋಪಿ ಶಿವಾನಂದನೇ ದೀಪಾಳಿಗೆ ಶ್ರೀಮಂತ ವ್ಯಕ್ತಿಗಳ ಮಾಹಿತಿ ನೀಡುತ್ತಿದ್ದ. ಆ‌ ವ್ಯಕ್ತಿಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯ ಮಾಡಿಕೊಂಡು ತನ್ನ ಬಲೆಗೆ ಬೀಳಿಸಿಕೊಳ್ಳುತ್ತಿದ್ದ ಆಕೆ, ಬಳಿಕ ಅವರ ಜೊತೆ ಸಲುಗೆಯಿಂದ, ಆಶ್ಲೀಲ ಸಂದೇಶಗಳನ್ನು ಕಳುಹಿಸುವ ಮೂಲಕ

ಶ್ರೀಮಂತರನ್ನು ಹನಿಟ್ರ್ಯಾಪ್ ಮಾಡಿ ದೋಚುತ್ತಿದ್ದ ಕಿಲಾಡಿ ಲೇಡಿ ಪೊಲೀಸರ ಬಲೆಗೆ Read More »

error: Content is protected !!
Scroll to Top