ಆಸ್ಪತ್ರೆಗೆ ದಾಖಲಾದ ಬಾಲಕ ಶಸ್ತ್ರಚಿಕಿತ್ಸೆ ಬಳಿಕ ಮೃತ್ಯು : ವೈದ್ಯರ ಬೇಜವಾಬ್ದಾರಿ ಆರೋಪ |ಆಸ್ಪತ್ರೆ ಮುಂಭಾಗ ಮೃತದೇಹ ಇಟ್ಟು ದಲಿತ ಸಂಘಟನೆಯಿಂದ ಪ್ರತಿಭಟನೆ
ಪುತ್ತೂರು; ಅಪ್ರಾಪ್ತ ಬಾಲಕನೋರ್ವ ಕರುಳಿಗೆ ಸಂಬಂಧಿಸಿದ ಸಮಸ್ಯೆಯಿಂದ ಹೊಟ್ಟೆನೋವು ಉಂಟಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿ ಬಳಿಕ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಬಾಲಕನ ಸಾವಿಗೆ ಪುತ್ತೂರಿನ ಖಾಸಗಿ ಆಸ್ಪತ್ರೆಯ ವೈದ್ಯರುಗಳೇ ಕಾರಣ ಎಂದು ಆರೋಪಿಸಿ ಮೃತ ಬಾಲಕನ ಶವವನ್ನು ಆಸ್ಪತ್ರೆಯ ಮುಂದಿಟ್ಟು ದಲಿತ ಸಂಘಟನೆ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಪ್ರತಿಭಟನಾ ನಿರತ ದಲಿತ ಸಂಘಟನೆ ಮೃತ ಬಾಲಕನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಬೇಕು, ಜತೆಗೆ ಬೇಜವಾಬ್ದಾರಿ ವಹಿಸಿ […]









