ಅಪರಾಧ

ಬೋರ್ವೆಲ್ ಲಾರಿಯಿಂದ ಕಬ್ಬಿಣದ ಡ್ರಿಲ್ಲಿಂಗ್ ಬಿಟ್ ಕಳವು!!

ಕಡಬ: ಐತ್ತೂರು ಗ್ರಾಮದ ಸುಂಕದಕಟ್ಟೆ ಎಂಬಲ್ಲಿ ರಾಜ್ಯ ಹೆದ್ದಾರಿ ಬದಿ ನಿಲ್ಲಿಸಿದ್ದ ಬೋರ್ವೆಲ್ ಲಾರಿಯಿಂದ ಕೊಳವೆ ಬಾವಿ ಕೊರೆಯುವ ಕಬ್ಬಿಣದ ಡ್ರಿಲ್ಲಿಂಗ್ ಬಿಟ್ ಕಳವು ಮಾಡಿರುವ ಘಟನೆ ನಡೆದಿದೆ. ರಾಜ್ಯ ಸರಕಾರದ ಜಲಜೀವನ ಯೋಜನೆಯಡಿ ಕೊಳವೆ ಬಾವಿ ಕೊರೆಯಲು ಟೆಂಡರ್ ಆಗಿದ್ದು, ಅದರಂತೆ ಬಿಳಿನೆಲೆ ಗ್ರಾ.ಪಂ.ಗೆ ಸಂಬಂಧಿಸಿದ ಕೊಳವೆ ಬಾವಿ ಕೊರೆಯುವ ಬೋರ್ವೆಲ್ ಆಗಮಿಸಿತ್ತು. ಐತ್ತೂರು ಗ್ರಾಮದ ಸುಂಕದಕಟ್ಟೆ ಎಂಬಲ್ಲಿ ರಾಜ್ಯ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಕೆಲಸಗಾರರು ಲಾರಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಬೆಳಗ್ಗೆದ್ದು ನೋಡಿದಾಗ ಕೊಳವೆ ಬಾವಿ […]

ಬೋರ್ವೆಲ್ ಲಾರಿಯಿಂದ ಕಬ್ಬಿಣದ ಡ್ರಿಲ್ಲಿಂಗ್ ಬಿಟ್ ಕಳವು!! Read More »

ಸ್ಫೋಟದಲ್ಲಿ ಜೈಶ್​ ಮುಖ್ಯಸ್ಥ ಮಸೂದ್ ಅಜರ್ ಹತ್ಯೆ? ಸಾಮಾಜಿಕ ಜಾಲತಾಣದಲ್ಲಿದೆ ವಿಡಿಯೋ!!

ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮಸೂದ್ ಅಜರ್ (55) ಸಾವನ್ನಪ್ಪಿದ್ದಾನೆ. ಮಂಗಳವಾರ ಬೆಳಗ್ಗೆ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಬಾಂಬ್ ದಾಳಿಯಲ್ಲಿ ಮಸೂದ್ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಆದರೆ ಈ ಕುರಿತಾಗಿ ಯಾವುದೇ ಅಧಿಕೃತವಾದ ಮಾಹಿತಿ ಕೂಡ ಲಭ್ಯವಾಗಿಲ್ಲ. ಮೊಹಮ್ಮದ್ ಮಸೂದ್ ಅಜರ್ ಅಲ್ವಿ, ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಸ್ಥಾಪಕ. ಸೋಮವಾರ ಬೆಳಗ್ಗೆ ಭಾವಲ್‌ಪುರ ಮಸೀದಿಯಿಂದ ವಾಪಸಾಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ಆತನ ಮೇಲೆ ಬಾಂಬ್ ಎಸೆದಿದ್ದಾರೆ ಎಂದು ವರದಿಯಾಗಿದೆ. ಮಸೂದ್ ಅಜರ್ ಸಾವಿನ ಕುರಿತು ಅಧಿಕೃತ ಘೋಷಣೆ

ಸ್ಫೋಟದಲ್ಲಿ ಜೈಶ್​ ಮುಖ್ಯಸ್ಥ ಮಸೂದ್ ಅಜರ್ ಹತ್ಯೆ? ಸಾಮಾಜಿಕ ಜಾಲತಾಣದಲ್ಲಿದೆ ವಿಡಿಯೋ!! Read More »

ಮುಸುಕುಧಾರಿಗಳಿಂದ ಆಭರಣ ಮಳಿಗೆಗೆ ನುಗ್ಗಲು ವಿಫಲ ಯತ್ನ!

ಕುಂದಾಪುರ: ಮುಸುಕುಧಾರಿ ದರೋಡೆಕೋರರ ತಂಡವೊಂದು ಶುಕ್ರವಾರ ತಡರಾತ್ರಿ ತೆಕ್ಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಶಾನುಭೋಗ್ ಕಾಂಪ್ಲೆಕ್ಸ್ ನಲ್ಲಿರುವ ಆಭರಣ ಮಳಿಗೆಗೆ ನುಗ್ಗಲು ವಿಫಲ ಯತ್ನಿಸಿದ ಘಟನೆ ನಡೆದಿದೆ. ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಡಿ.21ರಂದು ತೆಕ್ಕಟ್ಟೆ ಕೆನರಾ ಬ್ಯಾಂಕ್ ಬಳಿಯ ಸಮೃದ್ಧಿ ಕಾಂಪ್ಲೆಕ್ಸ್ ನಲ್ಲಿರುವ ಮೀನಾಕ್ಷಿ ಫರ್ನಿಚರ್ ಶೋರೂಮ್, ಗೋಡೌನ್ ಮತ್ತು ಟೈಲರಿಂಗ್ ಅಂಗಡಿಯಲ್ಲಿ ಇತ್ತೀಚೆಗೆ ಕಳ್ಳತನಕ್ಕೆ ಯತ್ನಿಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದರೂ,

ಮುಸುಕುಧಾರಿಗಳಿಂದ ಆಭರಣ ಮಳಿಗೆಗೆ ನುಗ್ಗಲು ವಿಫಲ ಯತ್ನ! Read More »

ನವ ವಿವಾಹಿತ ನೇಣು ಬಿಗಿದು ಆತ್ಮಹತ್ಯೆ !

ಸುಳ್ಯ: ನವ ವಿವಾಹಿತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಗುಂಡ್ಯ ನಿವಾಸಿ ರಾಜೇಶ್ ಗುಂಡ್ಯ (29) ಆತ್ಮಹತ್ಯೆ ಮಾಡಿಕೊಂಡವರು. ರಾಜೇಶ್‍ ಗುಂಡ್ಯ ಜನನಿ ಫ್ರೆಂಡ್ಸ್ ಕ್ಲಬ್‍ ನ ಸಕ್ರೀಯ ಸದಸ್ಯರಾಗಿದ್ದು ಡಿ.21 ರಂದು ಕಾಣಿಯೂರಿನ ಯುವತಿ ಜತೆ ವಿವಾಹವಾಗಿದ್ದರು. ಬಳಿಕ ಪತ್ನಿಯೊಂದಿಗೆ ಗುಂಡ್ಯ ಮನೆಯಲ್ಲಿದ್ದರು. ಮನೆಯವರು ಹೊರ ಹೋದ ಸಂದರ್ಭದಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ನವ ವಿವಾಹಿತ ನೇಣು ಬಿಗಿದು ಆತ್ಮಹತ್ಯೆ ! Read More »

ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆಯಲು ಯತ್ನ !

ಪುತ್ತೂರು: ಪಾದಚಾರಿ ಮಹಿಳೆಯೊಬ್ಬರ ಕತ್ತಿಗೆ ಕೈ ಹಾಕಿ ಚಿನ್ನದ ಸೆಳೆಯಲು ಯತ್ನಿಸಿದ ಘಟನೆ ಬನ್ನೂರು ಗ್ರಾಮದ ಸೇಡಿಯಾಪು ಕಜೆ ಎಂಬಲ್ಲಿ ನಡೆದಿದೆ. ಸೇಡಿಯಾಪು ಕಜೆ ಅಂಗನವಾಡಿ ಅಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷೆ ಮಮತಾ ಎಂಬವರು ಕರೆ ರಸ್ತೆಯಾಗಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಸ್ಕೂಟರ್‍ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಚಿನ್ನದ ಸರ ಎಳೆಯಲು ಯತ್ನಿಸಿದಾಗ ಮಹಿಳೆ ಬೊಬ್ಬೆ ಹೊಡೆದದ್ದರಿಂದ ಸ್ಕೂಟರ್ ಸವಾರ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಕುರಿತು ಮಹಿಳೆ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.

ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆಯಲು ಯತ್ನ ! Read More »

ವಿಷ ಪದಾರ್ಥ ಸೇವಿಸಿ ಮೃತ್ಯು !

ಪುತ್ತೂರು:ವಿಷ ಪದಾರ್ಥ ಸೇವಿಸಿದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಗುರುವಾರ ತಡರಾತ್ರಿ ಸಂಭವಿಸಿದೆ. ಆರ್ಯಾಪು ಗ್ರಾಮದ ಕಾರ್ಪಾಡಿ ನಿವಾಸಿ ರತ್ನಾಕರ ಭಂಡಾರಿ ಮೃತಪಟ್ಟವರು. ತಾಲೂಕಿನ ಹೊರವಲಯದ ನೈತ್ತಾಡಿ ಕಲ್ಲುಗುಡ್ಡೆ ಸೆಲೂನ್ ಮಾಲಕರಾಗಿರುವ ರತ್ನಾಕರ ಭಂಡಾರಿ ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾಗಿದ್ದರು. ತಕ್ಷಣ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದು ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ರತ್ನಾಕರ

ವಿಷ ಪದಾರ್ಥ ಸೇವಿಸಿ ಮೃತ್ಯು ! Read More »

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ !

ಕಾಣಿಯೂರು: ರಿಕ್ಷಾ ಚಾಲಕರೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಣಿಯೂರಿನ ಎಲುವೆ ಎಂಬಲ್ಲಿ ನಡೆದಿದೆ.. ಕಾಣಿಯೂರು ಬೆದ್ರಾಜೆ ನಿವಾಸಿ ವಸಂತ (42) ಎಂಬವರ ಶವ ಪತ್ತೆಯಾಗಿದೆ. ಅವರ ರಿಕ್ಷಾ ಕಾಣಿಯೂರು ರಸ್ತೆಯ ಎಲುವೆ ಎಂಬಲ್ಲಿ ನಿಲ್ಲಿಸಿತ್ತು. ಅಲ್ಲೇ ಸಮೀಪದ ಕಾಡಿನಲ್ಲಿ ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ! Read More »

ಸಹಕಾರ ಸಂಘದ ಚುನಾವಣೆಯಲ್ಲಿ ಸೋಲು | ಆತ್ಮಹತ್ಯೆಗೆ ಶರಣು !

ಧಾರವಾಡ: ಸಹಕಾರ ಸಂಘದ ಚುನಾವಣೆಯಲ್ಲಿ ಸ್ಪರ್ಥಿಸಿ ಸೋತ ಅಭ್ಯರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದ ಮುರುಘಾ ಮಠದ ಬಳಿ ನಡೆದಿದೆ. ವಿಶ್ವವಿದ್ಯಾನಿಲಯದ ಲೆಕ್ಕಪತ್ರ ವಿಭಾಗದ ಸೂಪರಿಂಟೆಂಡೆಂಟ್ ಚಂದ್ರಕಾತ್ ಸಾವಳಗಿ (55) ಆತ್ಮಹತ್ಯೆ ಮಾಡಿಕೊಂಡವರು. ಚುನಾವಣೆ ಫಲಿತಾಂಶ ಬಂದ ಮೇಲೆ ಮನೆಗೆ ವಾಪಸ್ ಆಗಿದ್ದ ಅವರು ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೂರ್ನಾಲ್ಕು ದಿನಗಳಿಂದ ಮನೆ ಬಾಗಿಲು ತೆರೆಯದ ಕಾರಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಬಂದಿ ಬಾಗಿಲು ತೆರೆದಾಗ ಪ್ರಕರಣ ಬೆಳಕಿಗೆ ಬಂದಿದೆ

ಸಹಕಾರ ಸಂಘದ ಚುನಾವಣೆಯಲ್ಲಿ ಸೋಲು | ಆತ್ಮಹತ್ಯೆಗೆ ಶರಣು ! Read More »

ವೃದ್ಧ ದಂಪತಿ ಮೃತದೇಹ ಕೆರೆಯಲ್ಲಿ ಪತ್ತೆ!

ಕಾಸರಗೋಡು : ವೃದ್ದ ದಂಪತಿಯ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ಕಾಞಂಗಾಡ್ ನ ರಾಜಪುರಂನ ಪನತ್ತಡಿ ಎಂಬಲ್ಲಿ ನಡೆದಿದೆ. ಪನತ್ತಡಿ ನಿಲಚ್ಚಾಲ್‌ ನಿವಾಸಿಗಳಾದ ಎನ್. ಕೃಷ್ಣ ನಾಯ್ಕ ( 84,) ಪತ್ನಿ ಐತ್ತಮ್ಮ ಬಾಯಿ (80) ದಂಪತಿ ಎಂದು ಗುರುತಿಸಲಾಗಿದೆ. ಮನೆಯಿಂದ ನಾಪತ್ತೆಯಾಗಿದ್ದ ಇಬ್ಬರನ್ನು ಹುಡುಕಿದಾಗ ಘಟನೆ ಬೆಳಕಿಗೆ ಬಂದಿದೆ. ಮನೆ ಸಮೀಪದ ಕೆರೆಯಲ್ಲಿ ಶನಿವಾರ ಸಂಜೆ ಮೃತದೇಹ ಪತ್ತೆಯಾಗಿದ್ದು, ಆಕಸ್ಮಿಕವಾಗಿ ಕೆರೆಗೆ ಬಿದ್ದಿರಬಹುದು ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು

ವೃದ್ಧ ದಂಪತಿ ಮೃತದೇಹ ಕೆರೆಯಲ್ಲಿ ಪತ್ತೆ! Read More »

ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ !

ಮೂಡಬಿದಿರೆ: ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಮನೋಜ್ (18) ಆತ್ಮಹತ್ಯೆ ಮಾಡಿಕೊಂಡ  ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ನ ಸ್ನಾನಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಮನೋಜ್ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತರ್ಚಿಹಾಳ ಗ್ರಾಮದವನಾಗಿದ್ದು, ಪೋಷಕರಿಗೆ ಮಾಹಿತಿ ನೀಡಲಾಗಿದೆ. ಮನೋಜ್ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದು ಪೋಷಕರು ಮೂಡಬಿದಿರೆಗೆ ದೌಡಾಯಿಸಿದ್ದು, ತಾವು ಬರುವವರೆಗೂ ಶವ ಹೊರ ತೆಗೆಯದಂತೆ ಒತ್ತಾಯಿಸಿದ್ದಾರೆ ಎಂದು ತಿಳಿದು

ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ ! Read More »

error: Content is protected !!
Scroll to Top