ಅಯ್ಯಪ್ಪ ವೃತಧಾರಿ ನೇಣು ಬಿಗಿದು ಆತ್ಮಹತ್ಯೆ !
ಪುತ್ತೂರು: ಅಯ್ಯಪ್ಪ ವೃತಧಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹವೊಂದು ಇದೀಗ ಸೇವಾಜೆ ಬಳಿ ಪತ್ತೆಯಾಗಿದೆ. ದೇವಚಳ್ಳ ಗ್ರಾಮದ ದೇವ ದಿ.ಹೊನ್ನಪ್ಪ ಎಂಬವರ ಪುತ್ರ ಪದ್ಮನಾಭ (26) ಮೃತ ವ್ಯಕ್ತಿ. ಸೇವಾಜೆ ಬಳಿಯ ಆಶ್ರಮದಲ್ಲಿ ಅಯ್ಯಪ್ಪ ಮಾಲೆ ಧರಿಸಿ ವೃತಾಚರಣೆಯಲ್ಲಿದ್ದರು ಎಂದು ತಿಳಿದು ಬಂದಿದೆ. ಮೃತ ಪದ್ಮನಾಭ ಅವರ ಸಹೋದರ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದರು ಎನ್ನಲಾಗಿದೆ. ಇದೀಗ ಇನ್ನೊಬ್ಬ ಮಗನನ್ನು ಕಳೆದುಕೊಂಡು ತಾಯಿ ಒಬ್ಬಂಟಿಯಾಗಿದ್ದಾರೆ.
ಅಯ್ಯಪ್ಪ ವೃತಧಾರಿ ನೇಣು ಬಿಗಿದು ಆತ್ಮಹತ್ಯೆ ! Read More »








