ಅಪರಾಧ

ಇನ್‌ಸ್ಟಾಗ್ರಾಂನಲ್ಲಿ ಖಮೇನಿ ಹತ್ಯೆ ಕುರಿತು ಪೋಸ್ಟ್‌ ಹಾಕಿದ ಹಿಂದೂ ಯುವಕನ ಮೇಲೆ ಹಲ್ಲೆ

ಅಂಗಡಿಗೆ ನುಗ್ಗಿ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ತಂಡ ಬೆಂಗಳೂರು: ಅಮೆರಿಕ ಮತ್ತು ಇಸ್ರೇಲ್​ ಕ್ಷಿಪಣಿ ದಾಳಿಯಲ್ಲಿ ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾದ ಕುರಿತಾಗಿ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿದ ಕಾರಣಕ್ಕೆ ಮುಸ್ಲಿಂ ಯುವಕರು ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ. ಚಂದ್ರಶೇಖರ ಎಂಬವರ ಮೇಲೆ ಐದಾರು ಮುಸ್ಲಿಂ ಯುವಕರು ಹಲ್ಲೆ ಮಾಡಿದ್ದಾರೆ. ಚಂದ್ರಶೇಖರ ಖರ್ಜೂರ ವ್ಯಾಪಾರಿಯಾಗಿದ್ದು, ವ್ಯಾಪಾರ ಮಾಡುತ್ತಿದ್ದ ವೇಳೆ ಏಕಾಏಕಿ‌ ಬಂದ […]

ಇನ್‌ಸ್ಟಾಗ್ರಾಂನಲ್ಲಿ ಖಮೇನಿ ಹತ್ಯೆ ಕುರಿತು ಪೋಸ್ಟ್‌ ಹಾಕಿದ ಹಿಂದೂ ಯುವಕನ ಮೇಲೆ ಹಲ್ಲೆ Read More »

ಉಡುಪಿ: ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ನಡೆಸುತ್ತಿದ್ದ ಮುಖಂಡನ ಮೇಲೆ ಚಾಕುವಿನಿಂದ ಹಲ್ಲೆ

ಉಡುಪಿ: ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ನಡೆಸುತ್ತಿದ್ದ ಸ್ಥಳೀಯ ಮೀನುಗಾರರ ಮುಖಂಡನಿಗೆ ಚಾಕುವಿನಿಂದ ಇರಿದ ಘಟನೆ ಉಡುಪಿ ಸಮೀಪ ಮಲ್ಪೆಯಲ್ಲಿ ನಡೆದಿದೆ. ಮಂಜು ಕೊಳ ಯಾನೆ ಮಂಜುನಾಥ ಸಾಲಿಯಾನ್ ಚಾಕು ಇರಿತಕ್ಕೊಳಗಾದ ಮೀನುಗಾರರ ಮುಖಂಡ. ಮಲ್ಪೆಯ ಯುವಕನ ಜೊತೆ ಪಡುಬಿದ್ರಿ ಪಲಿಮಾರು ಪರಿಸರದ ಯುವತಿಯ ಪ್ರೇಮ ಪ್ರಕರಣದ ಕುರಿತು ಮಾತುಕತೆಗೆ ಬಂದಿದ್ದ ಯುವತಿಯ ಕಡೆಯವರು ಮೀನುಗಾರ ಮುಖಂಡನಿಗೆ ಚಾಕುವಿನಿಂದ ಇರಿದಿದ್ದಾರೆ. ಗಾಯಾಳು ಮಂಜು ಕೊಳ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಗಂಭೀರ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಇರಿದ ಆರೋಪಿಗಳನ್ನು

ಉಡುಪಿ: ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ನಡೆಸುತ್ತಿದ್ದ ಮುಖಂಡನ ಮೇಲೆ ಚಾಕುವಿನಿಂದ ಹಲ್ಲೆ Read More »

ಲಂಚ ಸ್ವೀಕಾರ : ಎಎಸ್‌ಐ, ಪಿಎಸ್‌ಐ ಲೋಕಾಯುಕ್ತ ಬಲೆಗೆ

ಬಿ ರಿಪೋರ್ಟ್‌ ಸಲ್ಲಿಸಲು 1 ಲ.ರೂ. ಕೇಳಿದ್ದ ಪೊಲೀಸರು ಬೆಂಗಳೂರು: ಪ್ರಕರಣವೊಂದರ ಬಿ ರಿಪೋರ್ಟ್ ಸಲ್ಲಿಕೆಗೆ 70 ಸಾವಿರ ಲಂಚ ಪಡೆದ ಪ್ರಕರಣದಲ್ಲಿ ಎಎಸ್‌ಐ ಮತ್ತು ಪಿಎಸ್‌ಐಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಶರಣಪ್ಪ ಹಾಗೂ ಎಎಸ್‌ಐ ವೆಂಕಟೇಶ್ ಅವರನ್ನು ಚಿಕ್ಕಬಳ್ಳಾಪುರ ಲೋಕಾಯುಕ್ತ ಪೊಲೀಸರು ಬಂಧಸಿ ವಿಚಾರಣೆ ಮುಂದುವರಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಮೋಟಲೂರು ಗ್ರಾಮದ ರಘು ಎಂಬವರ ಬಳಿ ಪ್ರಕರಣ ಒಂದರ ಬಿ ರಿಪೋರ್ಟ್ ಸಲ್ಲಿಕೆಗಾಗಿ 1

ಲಂಚ ಸ್ವೀಕಾರ : ಎಎಸ್‌ಐ, ಪಿಎಸ್‌ಐ ಲೋಕಾಯುಕ್ತ ಬಲೆಗೆ Read More »

ಶೀಲ ಶಂಕಿಸಿ ಪತ್ನಿಯನ್ನು ಬರ್ಬರವಾಗಿ ಕೊಂದ ಪಾಪಿ ಪತಿ

ಬೀದರ್: ಪತ್ನಿಗೆ ಅನೈತಿಕ ಸಂಬಂಧ ಇರುವ ಸಂದೇಹದಲ್ಲಿ ಗಂಡನೊಬ್ಬ ಆಕೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ‌ಹತ್ಯೆ ಮಾಡಿದ ಘಟನೆ ಮನ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅಶ್ವಿನಿ(28) ಎಂದು ಗುರುತಿಸಲಾಗಿದೆ. ಕಿಶನ್ ಎಂಬವನೇ ಆರೋಪಿ. ಕಿಶನ್ ಮಹಾರಾಷ್ಟ್ರದ ಡಾಬಾ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಅಶ್ವಿನಿ ಮೂವರು ಮಕ್ಕಳ ಜೊತೆಗೆ ಮನ್ನಳ್ಳಿಯಲ್ಲೇ ವಾಸವಿದ್ದಳು. ಕಿಶನ್ ತನ್ನ ಪತ್ನಿಗೆ ಅಕ್ರಮ ಸಂಬಂಧ ಇದೆ ಎಂದು ಹೇಳಿ ಪ್ರತಿನಿತ್ಯ ಆಕೆಯ ಜೊತೆಗೆ ಜಗಳವಾಡುತ್ತಿದ್ದ. ಬೇರೊಬ್ಬ ವ್ಯಕ್ತಿಯ ಜೊತೆ ಆಕೆ

ಶೀಲ ಶಂಕಿಸಿ ಪತ್ನಿಯನ್ನು ಬರ್ಬರವಾಗಿ ಕೊಂದ ಪಾಪಿ ಪತಿ Read More »

ಘನಘೋರ ಸಮರ : ಇರಾನ್‌ನಲ್ಲಿ ಮಕ್ಕಳ ಸಹಿತ 700ಕ್ಕೂ ಅಧಿಕ ಮಂದಿ ಸಾವು

ತೀವ್ರಗೊಂದ ಸೇನಾ ಕಾರ್ಯಾಚರಣೆ, ಮಿಸೈಲ್‌, ಡ್ರೋನ್‌, ಫೈಟರ್‌ ವಿಮಾನಗಳ ಆರ್ಭಟ ಟೆಹ್ರಾನ್‌ : ಇದು ಸದ್ಯಕ್ಕೆ ಮುಗಿಯುವ ಯುದ್ಧವಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ ಬೆನ್ನಿಗೆ ಅಮೆರಿಕ ಹಾಗೂ ಇಸ್ರೇಲ್ ಸೇನೆಗಳು ಇರಾನ್ ಮೇಲಿನ ಯುದ್ಧವನ್ನು ತೀವ್ರಗೊಳಿಸಿದ್ದು, ಹಲವು ತಾಣಗಳನ್ನು ಗುರಿಯಾಗಿಸಿ ಬಾಂಬ್ ಹಾಗೂ ಕ್ಷಿಪಣಿ ದಾಳಿ ನಡೆಸಿವೆ. ಇರಾನ್ ಕೂಡ ಪ್ರತೀಕಾರದ ದಾಳಿ ಮುಂದುವರಿಸಿರುವುದರಿಂದ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗುತ್ತಿದೆ. ಗಲ್ಫ್‌ ರಾಷ್ಟ್ರಗಳ ಮೇಲಿನ ದಾಳಿಯನ್ನು ಇರಾನ್‌ ಮುಂದುವರಿಸಿದೆ. ಇರಾನ್‌ನ ಕ್ಷಿಪಣಿ

ಘನಘೋರ ಸಮರ : ಇರಾನ್‌ನಲ್ಲಿ ಮಕ್ಕಳ ಸಹಿತ 700ಕ್ಕೂ ಅಧಿಕ ಮಂದಿ ಸಾವು Read More »

ಇನ್‌ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್‌ ಹಾಕಿದವನ ವಿರುದ್ಧ ದೂರು

ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಬಾಂಬ್ ಸ್ಫೋಟದ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಸಂತೋಷ್ ದೊಡ್ಡಮನಿ ಅವರು ಮಾರ್ಚ್ 2ರಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಇನ್‌ಸ್ಟಾಗ್ರಾಂ ಪರಿಶೀಲಿಸುವಾಗ ಸುಹಾಸ್ ಶೆಟ್ಟಿ ಎಂಬಾತನ ಫೋಟೋ ಹೊಂದಿದ್ದ ಪೋಸ್ಟ್‌ಗೆ “shankar11916 Support maadi bro ullal masjid hatra bomb blast madtini (ಉಳ್ಳಾಲ ದರ್ಗಾ

ಇನ್‌ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್‌ ಹಾಕಿದವನ ವಿರುದ್ಧ ದೂರು Read More »

ಲಂಚ ಸ್ವೀಕರಿಸಿದ ಎಸ್‌ಡಿಎ ಲೋಕಾಯುಕ್ತ ಬಲೆಗೆ

ವಿದ್ಯುತ್‌ ಗುತ್ತಿಗೆದಾರರಿಂದ ಲಂಚ ಕೇಳಿದ್ದ ಅಧಿಕಾರಿ ಮಂಗಳೂರು: ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಿಗೆ ಒಳಪಟ್ಟ ದಾರಿದೀಪ ವಿಸ್ತರಣೆಯ ಸರ್ಕಾರಿ ಕಾಮಗಾರಿಗಳ ನಿರ್ವಹಿಸಿದ ಇಲೆಕ್ಟ್ರಿಕಲ್ ಪ್ರಥಮ ದರ್ಜೆಯ ಗುತ್ತಿಗೆದಾರರಿಗೆ ಕೆಲಸದ ಬಿಲ್ ಪಾವತಿಗೆ ಶೇ.4ರಂತೆ 22,600 ರೂ. ಕೊಡಬೇಕು ಎಂದು ಲಂಚದ ಬೇಡಿಕೆ ಇರಿಸಿದ್ದ ಮಂಗಳೂರು ಲೋಕೋಪಯೋಗಿ ಇಲಾಖೆಯ ಪ್ರಥಮ ದರ್ಜೆ ಸಹಾಯಕನನ್ನು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ತಂಡ ರೆಡ್‌ಹ್ಯಾಂಡ್ ಆಗಿ ಬಂಧಿಸಿದೆ. ಎಸ್.ಡಿ.ಎ ಸಂಪತ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ದೂರುದಾರರು ಇಲೆಕ್ಟ್ರಿಕಲ್ ಪ್ರಥಮ ದರ್ಜೆಯ

ಲಂಚ ಸ್ವೀಕರಿಸಿದ ಎಸ್‌ಡಿಎ ಲೋಕಾಯುಕ್ತ ಬಲೆಗೆ Read More »

ಬಾಲಕಿ ಮೇಲೆ ಅತ್ಯಾಚಾರ: ಒಂದೇ ದಿನದಲ್ಲಿ ಆರೋಪಿ ಬಂಧನ

ತುಮಕೂರು: ವಿಳಾಸ ಕೇಳಿಕೊಂಡು ಬಂದು ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಒಂದೇ ದಿನದಲ್ಲಿ ಪೊಲೀಸರು ಬಂಧಿಸಿರುವ‌ ಘಟನೆ ಗುಬ್ಬಿ ಗ್ರಾಮದಲ್ಲಿ ನಡೆದಿದೆ. ಶನಿವಾರದಂದು ಶಾಲೆಗೆ ಹೋಗಿ ಮರಳಿ ಮನೆಗೆ ಬರುತ್ತಿದ್ದ ಬಾಲಕಿಯ ‌ಬಳಿ ಆರೋಪಿ ವಿಳಾಸ ಕೇಳಿದ್ದಾನೆ. ಆಕೆ ಆತ ಹೇಳಿದ ವಿಳಾಸದ ರಸ್ತೆ ತೋರಿಸಲು ಹೋಗಿದ್ದಾಳೆ. ಈ ಸಮಯ ನಿರ್ಜನ ಪ್ರದೇಶವೊಂದರಲ್ಲಿ ಆಕೆಯ ಮೇಲೆ ಕಾಮುಕ ಅತ್ಯಾಚಾರ ನಡೆಸಿರುವುದಾಗಿದೆ. ಬಾಲಕಿ ಮನೆಗೆ ಓಡಿ ಹೋಗಿ ಈ ಸಂಗತಿಯನ್ನು ತಿಳಿಸಿದ್ದಾಳೆ. ತಕ್ಷಣವೇ ಪೊಲೀಸರಿಗೆ ದೂರು ನೀಡಲಾಗಿದ್ದು,

ಬಾಲಕಿ ಮೇಲೆ ಅತ್ಯಾಚಾರ: ಒಂದೇ ದಿನದಲ್ಲಿ ಆರೋಪಿ ಬಂಧನ Read More »

ಪಾಲಿಶ್ ಹೆಸರಲ್ಲಿ ಚಿನ್ನವನ್ನು ರಾಸಾಯನಿಕ ಬಳಸಿ ಕದಿಯುತ್ತಿದ್ದ ಕಳ್ಳ ಪೊಲೀಸ್ ವಶಕ್ಕೆ

ವೇಣೂರು: ಬಂಗಾರದ ಒಡವೆಗಳಿಗೆ ಪಾಲಿಶ್ ಮಾಡುವ ಮತ್ತು ತೊಳೆದು ಕೊಡುವುದಾಗಿ ನಂಬಿಸಿ ರಾಸಾಯನಿಕ ಬಳಸಿ ಕದಿಯುತ್ತಿದ್ದ ಕಳ್ಳ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಫೆ. 10 ರಂದು ಕಾಶಿಪಟ್ಣದ ಪಾಣಿಲಾಜೆ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಚಿನ್ನ ತೊಳೆದು, ಪಾಲಿಶ್ ಮಾಡುವುದಾಗಿ ಹೇಳಿ ರಾಸಾಯನಿಕದ ಮೂಲಕ ಚಿನ್ನವನ್ನು ಕರಗಿಸಿ ಮನೆಮಂದಿಗೆ ವಂಚಿಸಿದ ಘಟನೆ ನಡೆದಿತ್ತು. ಈ ಬಗ್ಗೆ ಪೊಲೀಸ್ ದೂರು ದಾಖಲಾಗಿತ್ತು. ಈ ಸಂಬಂಧ ತನಿಖೆ ನಡೆಸಿದ ಪೊಲೀಸರಿಗೆ ಆರೋಪಿ ಬಿಹಾರ ಮೂಲದ ಚಂದನ್ (30) ಎಂಬಾತ ಸೆರೆಯಾಗಿದ್ದಾನೆ. ಆತನನ್ನು

ಪಾಲಿಶ್ ಹೆಸರಲ್ಲಿ ಚಿನ್ನವನ್ನು ರಾಸಾಯನಿಕ ಬಳಸಿ ಕದಿಯುತ್ತಿದ್ದ ಕಳ್ಳ ಪೊಲೀಸ್ ವಶಕ್ಕೆ Read More »

ಪ್ರೇಯಸಿಯನ್ನು ಕಾಣಲು ಬುರ್ಖಾ ‌ತೊಟ್ಟು ಬಂದ ಅಪ್ರಾಪ್ತ: ಪೊಲೀಸರಿಗೊಪ್ಪಿಸಿದ ‌ಸ್ಥಳೀಯರು

ಸಾಗರ: ಬುರ್ಖಾ ‌ಧರಿಸಿ‌ ಪ್ರೇಯಸಿಯನ್ನು ಕಾಣಲು ಬಂದ ಅಪ್ರಾಪ್ತ ಯುವಕನನ್ನು ‌ಕಂಡು ಅನುಮಾನಗೊಂಡ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜನ್ನತ್ ‌ನಗರದಲ್ಲಿ ನಡೆದಿದೆ. ತ್ಯಾಗರ್ತಿಯ ಯುವಕ ತನ್ನ ಪ್ರೇಮಿಯನ್ನು ‌ಕಾಣಲು ಬುರ್ಖಾ ಧರಿಸಿ ಬಂದಿದ್ದ. ಆದರೆ ಈತನ ನಡೆ ಕಂಡ ಸ್ಥಳೀಯರು ಈತ ಮಕ್ಕಳ ಕಳ್ಳ ಆಗಿರಬೇಕು ಎಂದು ತಿಳಿದು, ಹಿಡಿದು ಕಂಬಕ್ಕೆ ಕಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸ್‌ ವಿಚಾರಣೆ ವೇಳೆಗೆ ಆತ ಸತ್ಯ ಬಾಯ್ಬಿಟ್ಟಿದ್ದಾನೆ. ಒಟ್ಟಿನಲ್ಲಿ ರಹಸ್ಯವಾಗಿ ಪ್ರೇಯಸಿಯ ಭೇಟಿಗೆ ಬಂದು, ಪೊಲೀಸರ ವಶಕ್ಕೆ

ಪ್ರೇಯಸಿಯನ್ನು ಕಾಣಲು ಬುರ್ಖಾ ‌ತೊಟ್ಟು ಬಂದ ಅಪ್ರಾಪ್ತ: ಪೊಲೀಸರಿಗೊಪ್ಪಿಸಿದ ‌ಸ್ಥಳೀಯರು Read More »

error: Content is protected !!
Scroll to Top