ಅಪರಾಧ

ಮೂಲ್ಕಿ : ನಾಪತ್ತೆಯಾಗಿದ್ದ ಆಟೋ ಚಾಲಕನ ಮೃತದೇಹ ಬಾವಿಯಲ್ಲಿ ಪತ್ತೆ

ಗಡಿಭಾಗದ ಕುಂಜತ್ತೂರು ಪದವು ಎಂಬಲ್ಲಿ ಬಾವಿಯೊಳಗಿದೆ ಶವ- ಕೊಲೆ ಶಂಕೆ ಮೂಲ್ಕಿ‌: ಕಳೆದ ಬುಧವಾರದಿಂದ ನಾಪತ್ತೆಯಾಗಿದ್ದ ಮೂಲ್ಕಿಯ ಆಟೋ ಚಾಲಕನ ಮೃತದೇಹ ಕಾಸರಗೋಡಿನ ಮಂಜೇಶ್ವರ ಸಮೀಪದ ಕುಂಜತ್ತೂರು ಪದವು ಎಂಬಲ್ಲಿ ನಿರ್ಜನ ಪ್ರದೇಶದ ಬಾವಿಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದ್ದು, ಇದು ಕೊಲೆ ಎಂದು ಶಂಕಿಸಲಾಗಿದೆ. ಮೂಲ್ಕಿ ಕೊಳ್ನಾಡಿನ ಮುಹಮ್ಮದ್ ಶರೀಫ್ (52) ಮೃತಪಟ್ಟವರು. ಬುಧವಾರ ಬೆಳಗ್ಗೆ ಎಂದಿನಂತೆ ರಿಕ್ಷಾ ಸಹಿತ ಮನೆಯಿಂದ ತೆರಳಿದ್ದ ಇವರು ಅಂದು ಮನೆಗೆ ಬಾರದೆ ನಾಪತ್ತೆಯಾಗಿದ್ದರು.ಪತ್ನಿ ಕರೆ ಮಾಡಿದಾಗ ಮೊಬೈಲ್ ಸಂಪರ್ಕಕಕ್ಕೆ ಸಿಗದ […]

ಮೂಲ್ಕಿ : ನಾಪತ್ತೆಯಾಗಿದ್ದ ಆಟೋ ಚಾಲಕನ ಮೃತದೇಹ ಬಾವಿಯಲ್ಲಿ ಪತ್ತೆ Read More »

ಉಗ್ರ ತಹಾವುರ್‌ ರಾಣಾ 18 ದಿನ ಎನ್‌ಐಎ ಕಸ್ಟಡಿಗೆ

ತಡರಾತ್ರಿ ತನಕ ವಿಚಾರಣೆ ನಡೆಸಿ ಮುಂಜಾನೆ ಆದೇಶ ನೋಡಿದ ಕೋರ್ಟ್‌ ನವದೆಹಲಿ: ಮುಂಬೈ ದಾಳಿಯ ಸಂಚುಕೋರ, 64 ವರ್ಷ ವಯಸ್ಸಿನ ತಹವುರ್‌ ರಾಣಾನನ್ನು ದೆಹಲಿಯ ವಿಶೇಷ ನ್ಯಾಯಾಲಯ 18 ದಿನಗಳ ಮಟ್ಟಿಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ವಶಕ್ಕೊಪ್ಪಿಸಿದೆ. ಅಮೆರಿಕದಿಂದ ಗಡಿಪಾರುಗೊಂಡಿದ್ದ ಉಗ್ರ ರಾಣಾನನ್ನು ಗುರುವಾರ ಸಂಜೆ 6.30ಕ್ಕೆ ಭಾರತಕ್ಕೆ ಕರೆತರಲಾಗಿತ್ತು.ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಬಂದಿಳಿದ ವಿಶೇಷ ವಿಮಾನದಿಂದ ರಾಣಾನನ್ನು ಇಳಿಸಿದ ಕೂಡಲೇ ವಿಮಾನ ನಿಲ್ದಾಣದಲ್ಲೇ ಅವನ ಬಂಧನದ ಔಪಚಾರಿಕತೆಯನ್ನು ಪೂರೈಸಿ ಪಟಿಯಾಲ ಹೌಸ್‌ನ ಕೋರ್ಟ್‌ನ ಎನ್‌ಐಎ

ಉಗ್ರ ತಹಾವುರ್‌ ರಾಣಾ 18 ದಿನ ಎನ್‌ಐಎ ಕಸ್ಟಡಿಗೆ Read More »

ಸಾಮಾಜಿಕ ಜಾಲತಾಣದಲ್ಲಿ ತಲವಾರು ಹಿಡಿದು ಫೋಸ್‍ | ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರವಾದ ತಲವಾರುವನ್ನು  ಹಿಡಿದುಕೊಂಡು ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಆರೋಪದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಆರೋಪಿಗಳ ವಿರುದ್ಧ ಸುಮೊಟೋ ಕೇಸ್ ದಾಖಲಿಸಿ ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಪುತ್ತೂರು ಕುರಿಯ ಗ್ರಾಮದ ನಿವಾಸಿ ಸುಜಿತ್ (36) ಹಾಗೂ ಪುತ್ತೂರು ಆರ್ಯಾಪು ಗ್ರಾಮದ ನಿವಾಸಿ ಪುಟ್ಟಣ್ಣ (32) ಎಂದು ಪತ್ತೆಹಚ್ಚಲಾಗಿದೆ. ಆರೋಪಿಗಳು ತಲವಾರು ಹಿಡಿದಿರುವ ಫೋಟೋ ಹಾಕಿ ಸಮಯ ಎಂದು ಶೀರ್ಷಿಕೆ ಬರೆದು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದರು. ಆರೋಪಿಗಳು ತಲವಾರು ಹಿಡಿದು ಫೋಟೋ

ಸಾಮಾಜಿಕ ಜಾಲತಾಣದಲ್ಲಿ ತಲವಾರು ಹಿಡಿದು ಫೋಸ್‍ | ಇಬ್ಬರು ಆರೋಪಿಗಳ ಬಂಧನ Read More »

ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ : ಅಪ್ರಾಪ್ತ ಬಾಲಕಿ ಗರ್ಭಿಣಿ

ತಾಯಿ ಇಲ್ಲದಾಗ ಮಗಳನ್ನು ಬೆದರಿಸಿ ನೀಚ ಕೃತ್ಯ ಎಸಗಿದ ತಂದೆ ಗದಗ: ಅಪ್ರಾಪ್ತ ವಯಸ್ಸಿನ ಪುತ್ರಿ ಮೇಲೆ ತಂದೆಯೇ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಹೇಯಕೃತ್ಯ ಗದಗ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. 55 ವರ್ಷದ ವ್ಯಕ್ತಿ ತನ್ನ ಮಗಳ ಮೇಲೆಯೇ ನಿರಂತರವಾಗಿ ಅತ್ಯಾಚಾರ ನಡೆಸಿದ್ದು, ಪರಿಣಾಮ ವರ್ಷದ ಬಾಲಕಿ ಈಗ ಗರ್ಭಿಣಿಯಾಗಿದ್ದಾಳೆ. ಈ ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ಪೊಲೀಸರು, ನೀಚ ತಂದೆ ಮೇಲೆ‌ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ತಾಯಿ ಆಕೆಯನ್ನು

ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ : ಅಪ್ರಾಪ್ತ ಬಾಲಕಿ ಗರ್ಭಿಣಿ Read More »

ಕಾರಿನಲ್ಲಿ ಚಿನ್ನ, ನಗದು, ಮಾರಕಾಯುಧ ಪತ್ತೆ

ಪಲಾಯನ ಮಾಡಲೆತ್ನಿಸಿದ ಕಾರನ್ನು8 ಕಿ.ಮೀ. ಬೆನ್ನಟ್ಟಿ ಹಿಡಿದ ಪೊಲೀಸರು ಕಾಸರಗೋಡು: ಕಾರೊಂದನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದಾಗ ಭಾರಿ ಪ್ರಮಾಣದ ಚಿನ್ನಾಭರಣ, ನಗದು ಮತ್ತು ಮಾರಕಾಯುಧಗಳು ಪತ್ತೆಯಾದ ಘಟನೆ ಕೇರಳ-ಕರ್ನಾಟಕ ಗಡಿಯ ಆದೂರು ಚೆಕ್‌ಪೋಸ್ಟ್‌ ಸಮೀಪ ನಡೆದಿದೆ. ವಾಹನ ತಪಾಸಣೆ ಸಂದರ್ಭದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದ ಕಾರನ್ನು ಬೆನ್ನಟ್ಟಿ ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಚಿನ್ನಾಭರಣ , ಬೆಳ್ಳಿ ಹಾಗೂ ಇನ್ನಿತರ ವಸ್ತುಗಳ ಜೊತೆಗೆ ಮಾರಕಾಯುಧಗಳು ಮತ್ತು ಕಳ್ಳತನಕ್ಕೆ ಬಳಸುವ ಪರಿಕರಗಳು ಸಿಕ್ಕಿವೆ. ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ. ಅಬಕಾರಿ

ಕಾರಿನಲ್ಲಿ ಚಿನ್ನ, ನಗದು, ಮಾರಕಾಯುಧ ಪತ್ತೆ Read More »

ಗ್ಯಾಸ್‌ ಕಟ್ಟರ್‌ನಿಂದ ಎಟಿಎಂ ಕತ್ತರಿಸಿ 18 ಲ.ರೂ. ಕಳ್ಳತನ

ಬೆಂಗಳೂರು: ಗ್ಯಾಸ್ ಕಟ್ಟರ್ ಬಳಸಿ ಎಟಿಎಂನ್ನು ಕತ್ತರಿಸಿ 18 ಲ.ರೂ. ಕಳ್ಳತನ ಮಾಡಿದ ಘಟನೆ ಇಂದು ನಸುಕಿನ ಹೊತ್ತು ಕಲಬುರಗಿ ನಗರದಲ್ಲಿ ಸಂಭವಿಸಿದೆ. ಕಲಬುರಗಿಯ ರಾಮನಗರದ ಬಳಿ ಇರುವ ಎಸ್‌ಬಿಐ ಎಟಿಎಂನಿಂದ ಕಳ್ಳರು ಹಣ ದೋಚಿದ್ದಾರೆ. ಮಂಗಳವಾರ ಸಂಜೆ 3 ಗಂಟೆಗೆ ಬ್ಯಾಂಕ್ ಸಿಬ್ಬಂದಿ ಎಟಿಎಂಗೆ ಹಣ ತುಂಬಿಸಿದ್ದರು. ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಎಟಿಎಂನಲ್ಲಿ ಸೆಕ್ಯೂರಿಟಿ ಇಲ್ಲದನ್ನು ಗಮನಿಸಿದ ಖದೀಮರು ಕನ್ನ ಹಾಕಿದ್ದಾರೆ. ಎಟಿಎಂನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಿಗೆ ಬ್ಲಾಕ್ ಸ್ಪ್ರೇ ಮಾಡಿ ಗ್ಯಾಸ್ ಕಟ್ಟರ್‌ನಿಂದ

ಗ್ಯಾಸ್‌ ಕಟ್ಟರ್‌ನಿಂದ ಎಟಿಎಂ ಕತ್ತರಿಸಿ 18 ಲ.ರೂ. ಕಳ್ಳತನ Read More »

ಯಾಸಿನ್‌ ಭಟ್ಕಳ್‌ ಸಹಿತ ಐವರು ಉಗ್ರರ ಗಲ್ಲುಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್‌

2013ರಲ್ಲಿ ಹೈದರಾಬಾದ್‌ನಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣದ ಅಪರಾಧಿಗಳು ಹೈದರಾಬಾದ್‌: ಹೈದರಾಬಾದ್‌ನಲ್ಲಿ 2013ರಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಇಂಡಿಯನ್‌ ಮುಜಾಹಿದಿನ್‌ ಉಗ್ರ ಯಾಸಿನ್ ಭಟ್ಕಳ್ ಸೇರಿ ಐವರು ಅಪರಾಧಿಗಳಿಗೆ ನೀಡಿದ್ದ ಮರಣದಂಡನೆಯನ್ನು ತೆಲಂಗಾಣ ಹೈಕೋರ್ಟ್ ಎತ್ತಿಹಿಡಿದಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್‌ನ ಈ ಐವರು ಭಯೋತ್ಪಾದಕರು 2013ರಲ್ಲಿ ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದರು. ಈ ಸ್ಫೋಟದಲ್ಲಿ 18 ಮಂದಿ ಸಾವನ್ನಪ್ಪಿ, 131 ಜನರು ಗಾಯಗೊಂಡಿದ್ದರು. ನ್ಯಾಯಮೂರ್ತಿಗಳಾದ ಲಕ್ಷ್ಮಣ್ ಮತ್ತು ಪಿ. ಶ್ರೀಸುಧಾ

ಯಾಸಿನ್‌ ಭಟ್ಕಳ್‌ ಸಹಿತ ಐವರು ಉಗ್ರರ ಗಲ್ಲುಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್‌ Read More »

ಮುಂಬಯಿ ಭಯೋತ್ಪಾದಕ ದಾಳಿಯ ರೂವಾರಿ ತಹಾವುರ್‌ ರಾಣಾ ಭಾರತಕ್ಕೆ ಗಡಿಪಾರು

ಬಿಗುಭದ್ರತೆಯಲ್ಲಿ ಕರೆತರುತ್ತಿರುವ ಅಧಿಕಾರಿಗಳು, ತಡರಾತ್ರಿ ಬಂದಿಳಿಯುವ ಸಾಧ್ಯತೆ ನವದೆಹಲಿ : ವಾಣಿಜ್ಯ ನಗರಿ ಮುಂಬಯಿ ಮೇಲೆ 2008ರಲ್ಲಾದ ಭಯೋತ್ಪಾದಕ ದಾಳಿಯ ರೂವಾರಿ ತಹಾವುರ್‌ ರಾಣಾ ಕೊನೆಗೂ ಅಮೆರಿಕದಿಂದ ಗಡಿಪಾರು ಆಗಿದ್ದು, ಇಂದು ಅಧಿಕಾರಿಗಳು ಅವನನ್ನು ಭಾರತಕ್ಕೆ ಕರೆತರುತ್ತಿದ್ದಾರೆ. ತನಿಖಾಧಿಕಾರಿಗಳ ಜೊತೆ ವಿಶೇಷ ಭದ್ರತಾ ತಂಡವೊಂದು ತಹಾವುರ್‌ ರಾಣಾನನ್ನು ಭಾರತಕ್ಕೆ ಕರೆತರುತ್ತಿದೆ. ತಡರಾತ್ರಿ ಅಥವಾ ನಾಳೆ ನಸುಕಿನ ಹೊತ್ತು ಅವರ ವಿಮಾನ ಭಾರತದಲ್ಲಿ ಬಂದಿಳಿಯಲಿದೆ. ತಹಾವುರ್‌ ರಾಣಾನನ್ನು ಯಾವ ಜೈಲಿನಲ್ಲಿಡಲಾಗುತ್ತದೆ ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ. ಆದರೆ ದಿಲ್ಲಿಯ

ಮುಂಬಯಿ ಭಯೋತ್ಪಾದಕ ದಾಳಿಯ ರೂವಾರಿ ತಹಾವುರ್‌ ರಾಣಾ ಭಾರತಕ್ಕೆ ಗಡಿಪಾರು Read More »

ಹಿಂದೂ ಕಾರ್ಯಕರ್ತನ ಮೇಲೆ ಎಸ್‌ಪಿ ಹಲ್ಲೆ ಆರೋಪ : ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಕಾರವಾರ: ಹಿಂದೂ ಸಂಘಟನೆ ಕಾರ್ಯಕರ್ತನನ್ನು ವಿಚಾರಣೆ ನೆಪದಲ್ಲಿ ಪೊಲೀಸ್‌ ಠಾಣೆಗೆ ಕರೆಸಿ ಎಸ್‌ಪಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಭಟ್ಕಳದಲ್ಲಿ ಬಿಜೆಪಿ ಮುಖಂಡರು ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ನಿನ್ನೆ ರಾತ್ರಿ ಹೆದ್ದಾರಿ ತಡೆದು ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದಾರೆ. ಭಟ್ಕಳದ ಹನುಮ ನಗರದ ಹಿಂದೂ ಸಂಘಟನೆ ಕಾರ್ಯಕರ್ತ ಶ್ರೀನಿವಾಸ್ ನಾಯ್ಕ ಹಲ್ಲೆಗೊಳಗಾಗಿದ್ದು, ಭಟ್ಕಳ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ಶಿರಸಿಯಲ್ಲಿ ರೌಡಿಶೀಟರ್ ಪೆರೇಡ್ ಮಾಡಿದ್ದ ಎಸ್ಪಿ ಎಂ.ನಾರಾಯಣ್‌ 6 ಪ್ರಕರಣದಲ್ಲಿ ಆರೋಪಿಯಾಗಿ ಕಳೆದ ಲೋಕಸಭಾ ಚುನಾವಣೆಯಲ್ಲಿ

ಹಿಂದೂ ಕಾರ್ಯಕರ್ತನ ಮೇಲೆ ಎಸ್‌ಪಿ ಹಲ್ಲೆ ಆರೋಪ : ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ Read More »

ಮದುವೆಗೆ 9 ದಿನ ಬಾಕಿಯಿರುವಾಗ ಭಾವಿ ಅಳಿಯನ ಜೊತೆ ಅತ್ತೆ ಪರಾರಿ!

ಮಗಳ ಮದುವೆಗೆ ತಂದಿಟ್ಟ ಆಭರಣ, ಹಣ ದೋಚಿಕೊಂಡು ಹೋದ ತಾಯಿ ಲಖನೌ: ಮಗಳ ಮದುವೆಗೆ ಒಂಬತ್ತು ದಿನಗಳಷ್ಟೇ ಬಾಕಿಯಿರುವಾಗ ಭಾವಿ ಅಳಿಯನ ವಧುವಿನ ತಾಯಿ ಪಲಾಯನ ಮಾಡಿರುವ ವಿಚಿತ್ರ ಘಟನೆಯೊಂದು ಉತ್ತರ ಪ್ರದೇಶದ ಅಲಿಘಡದಲ್ಲಿ ಸಂಭವಿಸಿದೆ. ಮದುವೆಯ ತಯಾರಿಗಳೆಲ್ಲ ಮುಗಿದಿದ್ದವು, ಆಭರಣ, ಉಡುಪು ಖರೀದಿಸಿಯಾಗಿತ್ತು. ನಿಶ್ಚಿತಾರ್ಥವೂ ನಡೆದುಹೋಗಿತ್ತು. ಹೀಗಿರುವಾಗ ಮದುವೆ ಹೆಣ್ಣಿನ ತಾಯಿಯೇ ಮಗಳ ಮದುವೆಗಾಗಿ ಮಾಡಿಟ್ಟ ಆಭರಣಗಳನ್ನು ದೋಚಿಕೊಂಡು ಭಾವಿ ಅಳಿಯನ ಜತೆ ಪರಾರಿಯಾಗಿದ್ದಾಳೆ. ಭಾವಿ ಅಳಿಯ ಅತ್ತೆಯನ್ನು ಪ್ರೀತಿಸುತ್ತಿದ್ದ, ಮತ್ತು ಆ ಜೋಡಿ ಓಡಿ

ಮದುವೆಗೆ 9 ದಿನ ಬಾಕಿಯಿರುವಾಗ ಭಾವಿ ಅಳಿಯನ ಜೊತೆ ಅತ್ತೆ ಪರಾರಿ! Read More »

error: Content is protected !!
Scroll to Top