ಅಪರಾಧ

ದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು ಹೇಗೆ?

ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲ.ರೂ. ಪರಿಹಾರ ಹೊಸದಿಲ್ಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ. ಪರಿಹಾರ ಕೇಂದ್ರ ಸರ್ಕಾರ ಘೋಷಿಸಿದೆ.ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಭೀಕರ ಕಾಲ್ತುಳಿತದಿಂದ ಕುಂಭಮೇಳಕ್ಕೆ ಹೊರಟಿದ್ದ 18 ಜನ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಮೃತರಲ್ಲಿ 11 ಮಹಿಳೆಯರು ಹಾಗೂ ನಾಲ್ಕು ಮಕ್ಕಳು ಸೇರಿದ್ದಾರೆ ಎಂದು ವರದಿಯಾಗಿದೆ. […]

ದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು ಹೇಗೆ? Read More »

ಚಿಕ್ಕಮಗಳೂರಿನಲ್ಲಿ ಹಿಂದೂಗಳ ಮನೆ ಮೇಲೆ ಕಲ್ಲುತೂರಾಟ

ತಡರಾತ್ರಿ ಹಬ್ಬ ಮುಗಿಸಿ ಹೋಗುವಾಗ ಕಲ್ಲು ತೂರಿ ಘೋಷಣೆ ಕೂಗಿದ ಕಿಡಿಗೇಡಿಗಳು ಚಿಕ್ಕಮಗಳೂರು: ಮೈಸೂರಿನ ಉದಯಗಿರಿಯಲ್ಲಿ ಪೊಲೀಸ್‌ ಠಾಣೆಗೆ ಕಲ್ಲುತೂರಿ, ಪೊಲೀಸರ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ಹಸಿರಾಗಿರುವಾಗಲೇ ಶುಕ್ರವಾರ ತಡರಾತ್ರಿ ಹಿಂದುಗಳ ಮನೆಗಳಿಗೆ ಕಲ್ಲು ತೂರಿದ ಘಟನೆ ಸಂಭವಿಸಿದೆ.ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿರುವ ಮನೆಗಳ ಮೇಲೆ ಕೆಲ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಯುವಕರು ಶುಕ್ರವಾರ ಉಪವಾಸದ ಹಬ್ಬ ಮುಗಿಸಿ ಹಿಂದೂಗಳ ಮನೆಗಳನ್ನು ಗುರಿಯಾಗಿಸಿ ಕಲ್ಲು ತೂರಾಟ ನಡೆಸಿದ್ದಾರೆ.ಮಹೇಶ್ ಎನ್ನುವರ ಮನೆ ಮೇಲೆ

ಚಿಕ್ಕಮಗಳೂರಿನಲ್ಲಿ ಹಿಂದೂಗಳ ಮನೆ ಮೇಲೆ ಕಲ್ಲುತೂರಾಟ Read More »

ಮಂಗಳೂರಿನ ಜುಗಾರಿ ಅಡ್ಡೆಯಲ್ಲಿ ಪೋಲಿಸರ ದಿಢೀರ್ ದಾಳಿ | ಇಸ್ಪೀಟ್ ಆಟವಾಡುತ್ತಿದ್ದ 12 ಮಂದಿಯ ಬಂಧನ  

ಮಂಗಳೂರು : ಮಂಗಳೂರಿನ ಕಾರ್‌ಸ್ಟ್ರೀಟ್ ಬಳಿ ಕಾರ್ಯಾಚರಿಸುತ್ತಿದ್ದ ಜುಗಾರಿ ಅಡ್ಡೆಯಲ್ಲಿ ಪೊಲೀಸರು ದಿಢೀರ್ ದಾಳಿ ನಡೆಸಿ ಇಸ್ಪೀಟ್ ಆಡುತ್ತಿದ್ದ 12 ಮಂದಿಯನ್ನು ಬಂಧಿಸಿರುವ ಘಟನೆ ನಿನ್ನೆ ನಡೆದಿದೆ. ಆರೋಪಿಗಳನ್ನು ವಿಠೋಭ ದೇವಸ್ಥಾನದ ಬಳಿಯ ನಾಗರಾಜ್ ಭಂಡಾರಿ ಹಾಗೂ ಆತನ ನಿಕಟವರ್ತಿಗಳು ಎಂದು ಎನ್ನಲಾಗಿದೆ. ಜೂಜಾಟದಲ್ಲಿ ಸುಮಾರು 10ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದಾರೆ ಎಂಬ ಮಾಹಿತಿಯಿಂದ ಪೊಲೀಸರು ದಿಢೀರ್‍ ದಾಳಿ ನಡೆಸಿ, ಆರೋಪಿಗಳಿಂದ ನಗದು ವಶಪಡಿಸಿಕೊಂಡಿದ್ದಾರೆ. ಈ ಘಟನೆ ಕುರಿತು ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರಿನ ಜುಗಾರಿ ಅಡ್ಡೆಯಲ್ಲಿ ಪೋಲಿಸರ ದಿಢೀರ್ ದಾಳಿ | ಇಸ್ಪೀಟ್ ಆಟವಾಡುತ್ತಿದ್ದ 12 ಮಂದಿಯ ಬಂಧನ   Read More »

ಒಣ ಪ್ರತಿಷ್ಠೆಯಿಂದ ಶಿಕ್ಷಕಿಯರ ಒಳಜಗಳ | ಪೋಷಕರಿಂದ ಅಧಿಕಾರಿಗಳ ಮುಂದೆ ಆಕ್ರೋಶ

ವಿಟ್ಲ : ಒಣ ಪ್ರತಿಷ್ಠೆಯಿಂದ ಶಿಕ್ಷಕಿಯರಿಬ್ಬರ ಒಳಜಗಳದಿಂದಾಗಿ ಕನ್ಯಾನ ಗ್ರಾಮದ ಕಣಿಯೂರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ  ಸರ್ಕಾರಿ ಹಿರಿಯ  ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಭವಿಷ್ಯ ತೂಗುಯ್ಯಾಲೆಯಂತಾಗಿದೆ. 46 ವಿದ್ಯಾರ್ಥಿಗಳಿರುವ ಕಣಿಯೂರು ಸರ್ಕಾರಿ ಶಾಲೆಯಲ್ಲಿ ಮೂವರು ಶಿಕ್ಷಕಿಯರಿದ್ದಾರೆ. 23 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶಿಕ್ಷಕಿ ಈಗ ಮುಖ್ಯ ಶಿಕ್ಷಕಿಯಾಗಿದ್ದಾರೆ. ಏಳೆಂಟು ವರ್ಷಗಳಿಂದ ಇನ್ನೋರ್ವರು  ಸಹಾಯಕ ಶಿಕ್ಷಕಿಯಾಗಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಹಾಸನ ಮೂಲದವರು ಒಬ್ಬರು ಇದೇ ಕಣಿಯೂರು ಶಾಲೆಗೆ ಶಿಕ್ಷಕಿಯಾಗಿ ಕರ್ತವ್ಯಕ್ಕೆ ಬಂದಿದ್ದಾರೆ. ಕಳೆದ ಏಳು ತಿಂಗಳ

ಒಣ ಪ್ರತಿಷ್ಠೆಯಿಂದ ಶಿಕ್ಷಕಿಯರ ಒಳಜಗಳ | ಪೋಷಕರಿಂದ ಅಧಿಕಾರಿಗಳ ಮುಂದೆ ಆಕ್ರೋಶ Read More »

ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು: ಮೈಕ್ರೋ ಫೈನಾನ್ಸ್ ಹಾವಳಿಗೆ ಜನ ಮನೆ ಮಠ ಕಳೆದುಕೊಂಡು ಬೀದಿಗೆ ಭೀಳುವ, ಆತ್ಮಹತ್ಯೆಗೆ ಶರಣಾಗುವ ಪ್ರಕರಣಗಳ ಬಗ್ಗೆ ರಾಜ್ಯ ಸರಕಾರ ತೆಗೆದುಕೊಂಡ ಮಹತ್ವದ ನಿರ್ಣಯಗಳಂತೆ ಇದೀಗ ಮಹತ್ವದ ಬೆಳವಣಿಗೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ ೨೦೨೫ ರ ಮುಖ್ಯಾಂಶಗಳು:- ೧. ಸದರಿ ಆಧ್ಯಾದೇಶವು ದಿನಾಂಕ: ೧೨.೦೨.೨೦೨೫ ರಂದು ಜಾರಿಗೆ ಬಂದಿದೆ.

ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ Read More »

ಇತ್ತಂಡಗಳ ಮಧ್ಯೆ  ವಾಗ್ವಾದ | ಸೋಡಾಬಾಟಲಿಯಿಂದ ಹಲ್ಲೆ

ಪುತ್ತೂರು: ನಗರದ ಬೊಳ್ಳಾರ್ ನಲ್ಲಿ ಇತ್ತಂಡಗಳ ಮಧ್ಯೆ  ವಾದಗಳು ನಡೆದಿದ್ದು,ಕೋಪಕ್ಕೆ ತುತ್ತಾಗಿ ವ್ಯಕ್ತಿಯೊರ್ವರಿಗೆ  ಸೋಡಾ ಬಾಟಲಿಯಿಂದ ಚುಚ್ಚಿದ್ದ ಘಟನೆ ಬುಧವಾರ ತಡ ರಾತ್ರಿ ನಡೆದಿದೆ. ಘಟನೆಯ ಕುರಿತು ಉಮೇಶ್ ಬಾಳುಗೋಡು ದೂರು ನೀಡಿದ್ದು,  ಪುತ್ತೂರು ನಗರ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ತಿಂಗಳಾಡಿ ನೀವಾಸಿ ನರ್ಮೇಶ್ ರೈ, ಪ್ರಸಾದ್ ಪ್ರಕರಣದ ಆರೋಪಿತರು.  ನರ್ಮೇಶ್ ರೈ ಎಂಬುವರು ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಇತ್ತಂಡದವರು ಕುಡಿತದ ಮತ್ತಿನಲ್ಲಿ ಜಗಳವಾಡಿದ್ದು, ಈ ವೇಳೆ ಇದು ತಾರಕಕ್ಕೆ ಹೋಗಿ

ಇತ್ತಂಡಗಳ ಮಧ್ಯೆ  ವಾಗ್ವಾದ | ಸೋಡಾಬಾಟಲಿಯಿಂದ ಹಲ್ಲೆ Read More »

ಮಂಗಳೂರು : ಅಡಿಕೆ ವರ್ತಕರ ಮೇಲೆ ಐಟಿ ದಾಳಿ

ಸಾವಿರಾರು ಕೋ.ರೂ. ತೆರಿಗೆ ವಂಚನೆ, ಅಕ್ರಮ ಗಳಿಕೆ ಪತ್ತೆ ಮಂಗಳೂರು: ಅಡಿಕೆ ರಫ್ತು ವ್ಯವಹಾರ ನಡೆಸುತ್ತಿರುವ ಮಂಗಳೂರಿನ ಕೆಲವು ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಮಂಗಳೂರಿನ ಸ್ವಸ್ತಿಕ್ ಟ್ರೇಡಿಂಗ್ ಕಂಪನಿ, ನರೇಶ್ & ಕೋ, ಶಿವ ಪ್ರೇಮ್ ಟ್ರೇಡರ್ಸ್ ಮತ್ತು ಪರಮೇಶ್ವರಿ ಟ್ರೇಡಿಂಗ್ ಕಂಪನಿ ಮೇಲೆ ಐಟಿ ದಾಳಿಯಾಗಿದೆ. ಟ್ರೇಡಿಂಗ್ ಕಂಪನಿ ಕಚೇರಿ, ಗೋಡೌನ್ ಹಾಗೂ ಟ್ರೇಡಿಂಗ್ ಕಂಪನಿ ಮಾಲೀಕರ ಮನೆ ಮೇಲೂ ದಾಳಿ‌ ನಡೆಸಿ ಅಧಿಕಾರಿಗಳು ದಾಖಲೆ ಪರಿಶೀಲನೆ

ಮಂಗಳೂರು : ಅಡಿಕೆ ವರ್ತಕರ ಮೇಲೆ ಐಟಿ ದಾಳಿ Read More »

ಕುಖ್ಯಾತ ಬೈಕ್‍ ಕಳ್ಳರ ಬಂಧನ

ಪಡುಬಿದ್ರಿ : ಮುಂಡೂರು ಗ್ರಾಮದ ಪರೀಕ್ಷಿತ್ ಅವರಿಗೆ ಸೇರಿದ ಬುಲೆಟ್ ಬೈಕನ್ನುಜ. 21ರಂದು ಪಡುಬಿದ್ರಿಯಲ್ಲಿ ಪಾರ್ಕ್ ಮಾಡಿದ್ದಲ್ಲಿಂದ ಕಳವು ಮಾಡಿರುವ ಘಟನೆ ನಡೆದಿದೆ. ಬೈಕ್‍ ಕದ್ದವರು ಸೂಳೆಬೈಲು ಶಿವಮೊಗ್ಗದ ಮೊಹಮ್ಮದ್ ರೂಹಾನ್ ಮತ್ತು ಶಿವಮೊಗ್ಗದ ತಾಜುದ್ದೀನ್ ಯಾನೆ ತಾಜು ಇಬ್ಬರು ಅಂತರ್ ಜಿಲ್ಲಾ ಕುಖ್ಯಾತ ಬೈಕ್ ಕಳ್ಳರಾಗಿದ್ದಾರೆ. ಇವರನ್ನು ಪಡುಬಿದ್ರಿ ಪೊಲೀಸರು ಶಿವಮೊಗ್ಗದಿಂದ ಬಂಧಿಸಿದ್ದಾರೆ 4 ಲ.ರೂ. ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ. ಕಳವು ಮಾಡಿದ್ದ  ಬುಲೆಟ್ ಹಾಗೂ ಈ ಕೃತ್ಯಕ್ಕೆ ಬಳಸಿದ್ದ ಮಾರುತಿ ರಿಟ್ಸ್ ಕಾರು ಸಹಿತ

ಕುಖ್ಯಾತ ಬೈಕ್‍ ಕಳ್ಳರ ಬಂಧನ Read More »

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಪ್ರತೀಕ್ಷಾ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಪುತ್ತೂರು: ಬೆದ್ರಾಳ ನಿವಾಸಿ, ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಪುತ್ತೂರು ಬೆದ್ರಾಳ ನಿವಾಸಿ ಪ್ರತೀಕ್ಷಾ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಖಾಸಗಿ ಕಾಲೇಜಿನಲ್ಲಿ ಅಲೈಡ್ ಹೆಲ್ತ್‍ ಸೈನ್ಸ್ ವಿಷಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ ಕೆಲ ದಿನಗಳ ಹಿಂದೆ ನೇಣು ಬಿಗಿದು ಆತ್ಮಹತ್ಯೆಗೆ ಪ್ರಯತಿಸಿದ್ದಳು. ತಕ್ಷಣ ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಮೃತಳು ತಂದೆ, ತಾಯಿ ಮತ್ತು ಕುಟುಂಬಸ್ಥರನ್ನು

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಪ್ರತೀಕ್ಷಾ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಶಾಲಾ ಮಕ್ಕಳನ್ನು ಅಪಹರಿಸಲು ಬಂದ ದುಷ್ಕರ್ಮಿಗಳ ತಂಡ | ಮಕ್ಕಳ ಧೈರ್ಯ ಕಂಡು ಪರಾರಿಯಾದ ತಂಡ

ಮುಲ್ಕಿ: ದುಷ್ಕರ್ಮಿಗಳ ತಂಡವೊಂದು ಶಾಲಾ ಮಕ್ಕಳನ್ನು ಕಿಡ್ನಾಪ್ ಮಾಡಲು ಯತ್ನಿಸಿದ್ದು, ಮಕ್ಕಳ ಧೈರ್ಯ ಕಂಡು ದುಷ್ಕರ್ಮಿಗಳ ತಂಡ ಸ್ಥಳದಿಂದ ಪರಾರಿಯಾದ ಘಟನೆ ಮುಲ್ಕಿಯಲ್ಲಿ ನಡೆದಿದೆ. ಕಾರಿನಲ್ಲಿ ಬಂಡ ತಂಡ ಶಾಲಾ ಮಕ್ಕಳನ್ನು ಕಿಡ್ನಾಪ್ ಮಾಡಲು ಮಕ್ಕಳಿಗೆ ಚಾಕೊಲೇಟ್ ಅಸೆ ತೋರಿಸಿ ಕಾರಿನಲ್ಲಿ ಕುಳಿತುಕೊಳ್ಳಲು ಹೇಳಿದ್ದಾರೆ. ಇದಕ್ಕೆ ಮಕ್ಕಳು ಬಗ್ಗಲಿಲ್ಲ, ಕೂಡಲೇ ತಂಡದಲ್ಲಿ ಒಬ್ಬ ಚಾಕು ತೋರಿಸಿದಾಗ ಮಕ್ಕಳು ಧೈರ್ಯದಿಂದ ಶಾಲೆಗೆ ಓಡಿ ಹೋಗಿ ಶಾಲಾ ಪ್ರಾಂಶುಪಾಲರಿಗೆ ದೂರು ನೀಡಿದ್ದಾರೆ. ಶಾಲಾ ಪ್ರಾಂಶುಪಾಲರು ಸಹಿತ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದಾಗ

ಶಾಲಾ ಮಕ್ಕಳನ್ನು ಅಪಹರಿಸಲು ಬಂದ ದುಷ್ಕರ್ಮಿಗಳ ತಂಡ | ಮಕ್ಕಳ ಧೈರ್ಯ ಕಂಡು ಪರಾರಿಯಾದ ತಂಡ Read More »

error: Content is protected !!
Scroll to Top