ಅಪರಾಧ

ಕಡಬ: ಪೆಟ್ರೋಲು ಸುರಿದು ಹತ್ಯೆಗೆ ಯತ್ನ

ಕಡಬ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅತ್ತಿಗೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲೆತ್ನಿಸಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಐತ್ತೂರು ಎಂಬಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ. ಐತ್ತೂರು ನಿವಾಸಿ ಬೇಬಿ ಕೆ.ಎಸ್. ಎಂಬವರು ಈ ಬಗ್ಗೆ ಕಡಬ ಠಾಣೆಗೆ ದೂರು ನೀಡಿದ್ದು, ತನ್ನ ಮನೆಯ ಸಮೀಪ ಬೋರ್‌ವೆಲ್‌ನಲ್ಲಿ ನೀರು ಸಿಕ್ಕಿದ್ದರಿಂದ ಅಸೂಯೆಗೊಂಡ ಗಂಡನ ಸಹೋದರ ಕುಸುಮಾಧರ(37) ಎಂಬಾತ ತನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲೆತ್ನಿಸಿದ್ದು, ಈ ವೇಳೆ ತಾನು ಬೊಬ್ಬೆ ಹಾಕಿದಾಗ ಪೆಟ್ರೋಲ್ ಕ್ಯಾನ್ ಮತ್ತು […]

ಕಡಬ: ಪೆಟ್ರೋಲು ಸುರಿದು ಹತ್ಯೆಗೆ ಯತ್ನ Read More »

ರೈಲಿನಲ್ಲಿ ಸೀಟು ಜಗಳ : ರೈಲ್ವೆ ಸಿಬ್ಬಂದಿ ಸಹಿತ ಇಬ್ಬರಿಗೆ ಚಾಕು ಇರಿತದಿಂದ ಗಂಭೀರ ಗಾಯ

ಸೀಟಿಗಾಗಿ ನಡೆಯುತ್ತಿದ್ದ ಜಗಳ ಬಿಡಿಸಲು ಹೋದ ಪ್ರಯಾಣಿಕನಿಗೆ ಇರಿದ ದುಷ್ಕರ್ಮಿಗಳು ಬೆಂಗಳೂರು : ರೈಲಿನಲ್ಲಿ ಸೀಟಿನ ವಿಚಾರದಲ್ಲಿ ಜಗಳವಾಗಿ ಚಾಕುವಿನಿಂದ ಇರಿದಿದ್ದು, ಓರ್ವ ಪ್ರಯಾಣಿಕ ಹಾಗೂ ರೈಲ್ವೆ ಸಿಬ್ಬಂದಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮದ್ದೂರು ರೈಲ್ವೆ ನಿಲ್ದಾಣದ ಸ್ವಲ್ಪ ದೂರದಲ್ಲಿ ಬುಧವಾರ ನಡೆದಿದೆ. ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ ಮೂವರು ಪ್ರಯಾಣಿಕರನ್ನು ರೈಲು ಪ್ರಯಾಣಿಕರು ಹಾಗೂ ಸಾರ್ವಜನಿಕರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಚಾಕು ಇರಿತಕ್ಕೆ ಒಳಗಾಗಿರುವ ತುಮಕೂರು ಮೂಲದ ಶಿವಕುಮಾ‌ರ್ ಹಾಗೂ ರೈಲ್ವೆ ಸಿಬ್ಬಂದಿ ಕುಮಾರ್

ರೈಲಿನಲ್ಲಿ ಸೀಟು ಜಗಳ : ರೈಲ್ವೆ ಸಿಬ್ಬಂದಿ ಸಹಿತ ಇಬ್ಬರಿಗೆ ಚಾಕು ಇರಿತದಿಂದ ಗಂಭೀರ ಗಾಯ Read More »

ಪಶ್ಚಿಮ ಬಂಗಾಳ : ಸುವೇಂದು ಅಧಿಕಾರಿಯ ಆಪ್ತ ಸಹಾಯಕನ ಹತ್ಯೆ

ರಾತ್ರಿ ಕಾರು ತಡೆದು ಗುಂಡಿಕ್ಕಿ ಸಾಯಿಸಿದ ದುಷ್ಕರ್ಮಿಗಳು ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಭೀಕರ ಹಿಂಸಾಚಾರ ಭುಗಿಲೆದ್ದಿದೆ. ಬುಧವಾರ ರಾತ್ರಿ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ ಗ್ರಾಮದ ದೋಹಾರಿಯಾ ಪ್ರದೇಶದಲ್ಲಿ ಬಿಜೆಪಿ ನಾಯಕ ಮತ್ತು ಭಾವಿ ಮುಖ್ಯಮಂತ್ರಿ ಎನ್ನಲಾದ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಈ ಘಟನೆಯು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಪಶ್ಚಿಮ ಬಂಗಾಳ : ಸುವೇಂದು ಅಧಿಕಾರಿಯ ಆಪ್ತ ಸಹಾಯಕನ ಹತ್ಯೆ Read More »

ಹಿರಿಯ ಐಪಿಎಸ್‌ ಅಧಿಕಾರಿ ಡಾ.ಕೆ.ರಾಮಚಂದ್ರ ರಾವ್‌ ಅಮಾನತು ರದ್ದು

ಕಚೇರಿಯಲ್ಲಿ ರಾಸಲೀಲೆಯಾಡಿದ ವಿಡಿಯೋ ವೈರಲ್‌ ಆದ ಬಳಿಕ ಅಮಾನತುಗೊಂಡಿದ್ದ ಉನ್ನತ ಅಧಿಕಾರಿ ಬೆಂಗಳೂರು: ಮಹಿಳೆಯರೊಂದಿಗೆ ಕಚೇರಿಯಲ್ಲೇ ರಾಸಲೀಲೆಯಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಮಾನತಿನಲ್ಲಿದ್ದ ಹಿರಿಯ ಐಪಿಎಸ್ ಅಧಿಕಾರಿ ಡಾ.ಕೆ.ರಾಮಚಂದ್ರ ರಾವ್ ಅವರ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ರದ್ದುಪಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ಮರು ನೇಮಕ ಮಾಡಲಾಗಿದೆ. ಅವರಿಗಾಗಿಯೇ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಪೊಲೀಸ್ ಮ್ಯಾನುಯಲ್) ಎನ್ನುವ ಹೊಸ ಹುದ್ದೆ ಸೃಷ್ಟಿಸಿದೆ. ಆಲ್ ಇಂಡಿಯಾ ಸರ್ವಿಸ್ ನಿಯಮಗಳ ಅಡಿ ಈಗ ಅವರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.

ಹಿರಿಯ ಐಪಿಎಸ್‌ ಅಧಿಕಾರಿ ಡಾ.ಕೆ.ರಾಮಚಂದ್ರ ರಾವ್‌ ಅಮಾನತು ರದ್ದು Read More »

ಪಂಜಾಬಿನಲ್ಲಿ ಬೆನ್ನುಬೆನ್ನಿಗೆ ಎರಡು ಸ್ಫೋಟ : ವಿಧ್ವಂಸಕ ಕೃತ್ಯದ ಶಂಕೆ

ಬಿಎಸ್‌ಎಫ್‌ ಹೆಡ್‌ಕ್ವಾರ್ಟರ್ಸ್‌, ಸೇನಾ ನೆಲೆಯ ಬಳಿ ಸ್ಫೋಟ ಜಲಂಧರ್ : ಪಂಜಾಬಿನ ಜಲಂಧರ್‌ನಲ್ಲಿರುವ ಬಿಎಸ್‌ಎಫ್ ಪ್ರಧಾನ ಕಚೇರಿ ಸಮೀಪ ಬಿಎಸ್‌ಎಫ್ ಚೌಕ್ ಪ್ರದೇಶದಲ್ಲಿ ಮತ್ತು ಅಮೃತಸರದಲ್ಲಿ ಸೇನಾ ನೆಲೆಯ ಸಮೀಪ ಬೆನ್ನುಬೆನ್ನಿಗೆ ಎರಡು ಸ್ಫೋಟಗಳು ನಿನ್ನೆ ರಾತ್ರಿ ಸಂಭವಿಸಿದ್ದು, ವಿಧ್ವಂಸಕ ಕೃತ್ಯವೆಂದು ಅನುಮಾನಿಸಲಾಗಿದೆ. ಜಲಂಧರ್‌ನಲ್ಲಿ ಸ್ಕೂಟರ್‌ ಒಂದರಲ್ಲಿ ಸಂಭವಿಸಿದ ಸ್ಫೋಟ ಇಡೀ ನಗರವನ್ನು ಭೀತಿಗೀಡುಮಾಡಿದೆ. ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಸ್ಕೂಟರ್ ದೊಡ್ಡ ಶಬ್ದದೊಂದಿಗೆ ಸ್ಫೋಟಗೊಂಡು ಬೆಂಕಿಗೆ ಆಹುತಿಯಾಗಿದೆ. ಸ್ಫೋಟದ ತೀವ್ರತೆಗೆ ಗಾಬರಿಗೊಂಡ ವ್ಯಕ್ತಿಯೊಬ್ಬ ಜೀವ ಉಳಿಸಿಕೊಳ್ಳಲು ಓಡುತ್ತಿರುವುದು

ಪಂಜಾಬಿನಲ್ಲಿ ಬೆನ್ನುಬೆನ್ನಿಗೆ ಎರಡು ಸ್ಫೋಟ : ವಿಧ್ವಂಸಕ ಕೃತ್ಯದ ಶಂಕೆ Read More »

ಸಚಿವ ಜಮೀರ್‌ ಮನೆಯಿಂದ ಕೋಟಿಗಟ್ಟಲೆ ಮೌಲ್ಯದ ಆಭರಣ ಕದ್ದ ಇಬ್ಬರ ಬಂಧನ

ತಾಯಿಯ ಸಂಬಂಧಿಕನಿಂದಲೇ ಕಳ್ಳತನ ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಮನೆಯಿಂದ ಕೋಟಿಗಟ್ಟಲೆ ಮೌಲ್ಯದ ಚಿನ್ನಾಭರಣ ಕದ್ದಿದ್ದ ಕಳ್ಳರನ್ನು ಬಂಧಿಸುವಲ್ಲಿ ಶಿವಾಜಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಸೈಯದ್ ಅಮೀನ್ ಮತ್ತು ಆತನ ಸ್ನೇಹಿತ ಅಮಿರ್ ಅಹ್ಮದ್ ಬಂಧಿತ ಆರೋಪಿಗಳು. ಸಚಿವ ಜಮೀರ್ ಮನೆಯಿಂದ ಕಳೆದ ಮೂರು ವರ್ಷದಲ್ಲಿ ಹಂತ ಹಂತವಾಗಿ ಕೋಟಿಗಟ್ಟಲೆ ಮೌಲ್ಯದ ಚಿನ್ನಾಭರಣ ಎಗರಿಸಿದ್ದರು. ಜಮೀರ್ ಆರೋಗ್ಯ ವಿಚಾರಿಸುವ ಸಲುವಾಗಿ ಪದೇಪದೆ ಮನೆಗೆ ಬರುತ್ತಿದ್ದ ಅಮೀರ್ 2023ರಿಂದ ನಿರಂತರವಾಗಿ 1 ಕೆಜಿ 200 ಗ್ರಾಂ ಚಿನ್ನಾಭರಣ ಎಗರಿಸಿದ್ದಾನೆ. ಬಂಧಿತ

ಸಚಿವ ಜಮೀರ್‌ ಮನೆಯಿಂದ ಕೋಟಿಗಟ್ಟಲೆ ಮೌಲ್ಯದ ಆಭರಣ ಕದ್ದ ಇಬ್ಬರ ಬಂಧನ Read More »

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಬಿ.ಪಿ.ಹರೀಶ್

ಜಾತಿ ನಿಂದನೆ ಕೇಸಿನಲ್ಲಿ ಬಂಧನಕ್ಕೆ ವಾರಂಟ್‌ ಜಾರಿ ಬೆಂಗಳೂರು : ಜಾತಿನಿಂದನೆ ಆರೋಪದಡಿ ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಹರಿಹರ ಟೌನ್ ಠಾಣೆ ಪ್ರಕರಣ ದಾಖಲಾಗಿದ್ದು, ಇದೀಗ ಈ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್​ಗೆ ಕೋರ್ಟ್ ಬಂಧನದ ವಾರಂಟ್ ಜಾರಿ ಮಾಡಿದೆ. ಜಾತಿ ನಿಂದನೆ ಪ್ರಕರಣದ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಜಡ್ಜ್ ಸಂತೋಷ್ ಗಜಾನನ ಭಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದು, ಮೇ 7ರಂದು ಕೋರ್ಟ್​ಗೆ ಹಾಜರುಪಡಿಸುವಂತೆ ನಿರ್ದೇಶನ ನೀಡಿದ್ದಾರೆ.

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಬಿ.ಪಿ.ಹರೀಶ್ Read More »

ಶೃಂಗೇರಿ ಶಾಸಕ ಜೀವರಾಜ್‌ ವಿರುದ್ಧ ಕಾಂಗ್ರೆಸ್‌ ದೂರು

ಅಂಚೆ ಮತಪತ್ರದಲ್ಲಿ ಅಕ್ರಮ ಎಸಗಿದ ಕುರಿತು ಮೂವರ ವಿರುದ್ಧ ಕೇಸ್‌ ದಾಖಲು ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಅಂಚೆ ಮತಗಳಲ್ಲಿ ಅಕ್ರಮ ಆರೋಪದ ಮೇಲೆ ಶಾಸಕ ಡಿ.ಎನ್ ಜೀವರಾಜ್ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಚಿಕ್ಕಮಗಳೂರು ನಗರ ಠಾಣೆಗೆ ಅಂಚೆ ಮತ ಎಣಿಕೆ ಟೇಬಲ್‌ನ ಎಜೆಂಟ್ ಆಗಿರುವ ಸುಧೀರ್ ಕುಮಾರ್ ಮುರೋಳ್ಳಿ ದೂರು ನೀಡಿದ್ದಾರೆ. ಶಾಸಕ ಡಿ.ಎನ್.ಜೀವರಾಜ್, ಅಂದಿನ ಚುನಾವಣಾಧಿಕಾರಿ ವೇದಾಮೂರ್ತಿ ಹಾಗೂ ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ಸ್ಟ್ರಾಂಗ್ ರೂಂ ಸೀಲ್

ಶೃಂಗೇರಿ ಶಾಸಕ ಜೀವರಾಜ್‌ ವಿರುದ್ಧ ಕಾಂಗ್ರೆಸ್‌ ದೂರು Read More »

ಡ್ರಗ್ಸ್‌ ಸೇವಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ : ಆರೋಪಿ ಸೆರೆ

ವಿಟ್ಲ : ಮಾದಕ ದ್ರವ್ಯ ಸೇವಿಸಿ ದ್ವಿಚಕ್ರ ವಾಹನ ಚಲಾಯಿಸಿದ ಮತ್ತು ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸ್ ಉಪನಿರೀಕ್ಷಕರೊಂದಿಗೆ ಅಸಭ್ಯವಾಗಿ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಯುವಕನೋರ್ವನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳದ ಕೊಳ್ನಾಡು ನಿವಾಸಿ ಮೊಹಮ್ಮದ್ ಅಸ್ಬೀರ್ (26) ಎಂದು ಗುರುತಿಸಲಾಗಿದೆ. ಮೇ 3ರಂದು ಮಧ್ಯಾಹ್ನ ವಿಟ್ಲ ಪೊಲೀಸ್ ಉಪನಿರೀಕ್ಷಕ ಬಿ.ಎಸ್. ನಾಯಕ್ ಮತ್ತು ಅವರ ಸಿಬ್ಬಂದಿ ವಿಟ್ಲ ಚತುಷ್ಪಥ ರಸ್ತೆಯ ಜಂಕ್ಷನ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಹೆಲ್ಮೆಟ್ ಧರಿಸಿರದ ಕಾರಣ

ಡ್ರಗ್ಸ್‌ ಸೇವಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ : ಆರೋಪಿ ಸೆರೆ Read More »

ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಸೆರೆ

ಮಂಗಳೂರು: ಸುರತ್ಕಲ್‌ ಸಮೀಪ ಕುಳಾಯಿ ಹೊಸಬೆಟ್ಟುವಿನಲ್ಲಿ 2014ರಲ್ಲಿ ನಡೆದ ಕೊಲೆ ಹಾಗೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. 2014ರ ಫೆಬ್ರವರಿ 8ರಂದು ಸಂಜೆ 4ರಿಂದ ರಾತ್ರಿ 8ರ ನಡುವೆ ಕುಳಾಯಿ ಹೊಸಬೆಟ್ಟು ಕೋರ್ದಬ್ಬು ಕಲದ ಬಳಿ ವಾಸವಾಗಿದ್ದ ಸುಮತಿ ಪ್ರಭು ಅವರನ್ನು ಕುತ್ತಿಗೆಗೆ ಚೂರಿಯಿಂದ ಇರಿದು ಕೊಲೆ ಮಾಡಿ, ಅವರ ಮೈಮೇಲಿದ್ದ ಸುಮಾರು 3.80 ಲಕ್ಷ ಮೌಲ್ಯದ 192 ಗ್ರಾಂ (24 ಪವನ್) ಬಂಗಾರದ ಆಭರಣಗಳನ್ನು ದರೋಡೆ

ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಸೆರೆ Read More »

error: Content is protected !!
Scroll to Top