ಅಪರಾಧ

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಸುಳ್ಯದ ಯುವಕ ಆತ್ಮಹತ್ಯೆ

ಸುಳ್ಯ : ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಶುಕ್ರವಾರ ನಡೆದಿದೆ. ಸುಳ್ಯ ಗುತ್ತಿಗಾರಿನ ಆಚಳ್ಳಿಯ ಸಿರಿಯಾಕ್ ಮ್ಯಾಥ್ಯೂ ಎಂಬವರ ಮಗ ಸೈಬಿನ್ ಈ ಕೃತ್ಯ ಎಸಗಿದವರು. ನಿನ್ನೆ ಗುತ್ತಿಗಾರು ಪೇಟೆಗೆ ಸೈಬಿನ್  ಆಗಮಿಸಿದ್ದು, ಎಲ್ಲರ ಜೊತೆ ಸಂತೋಷದಿಂದ ಮಾತನಾಡಿದ್ದ ಎನ್ನಲಾಗಿದೆ. ಸೈಬಿನ್ ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ಅವರ ಹಳೆ ಮನೆಯ ಪಕ್ಕ ಜಮಾಯಿಸಿದ್ದರು. ಈ ಸಂದರ್ಭ  ಪೊಲೀಸರು ಆಗಮಿಸಿ ಜನರನ್ನು ಚದುರಿಸಿದರು ಎಂದು ತಿಳಿದು ಬಂದಿದೆ. […]

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಸುಳ್ಯದ ಯುವಕ ಆತ್ಮಹತ್ಯೆ Read More »

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿ ನೌಷದ್ ಸುಳಿವಿಗೆ ಎರಡು ಲಕ್ಷ ಘೋಷಣೆ

ಬೆಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಘೋಷಣೆ ಮಾಡಿ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ. 2022 ಜುಲೈ 26ರಂದು ಹತ್ಯೆಯಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಕೆಗುಡ್ಡೆ ನಿವಾಸಿ ನೌಷದ್ (32) ಎಂಬಾತ ಕೊಲೆ ಮಾಡಿದ ಆರೋಪಿಗಳು ಪರಾರಿಯಾಗಲು ಸಹಕರಿಸಿದ ಹಿನ್ನೆಲೆಯಲ್ಲಿ ಎನ್.ಐ.ಎ ಅಧಿಕಾರಿಗಳು ಈ ಮೊದಲೇ ಪಡಂಗಡಿಯಲ್ಲಿರುವ ಮನೆಗೆ ದಾಳಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿ ನೌಷದ್ ಸುಳಿವಿಗೆ ಎರಡು ಲಕ್ಷ ಘೋಷಣೆ Read More »

ಸುಳ್ಯದ ವಿವಾಹಿತೆ ಬೆಂಗಳೂರಿನಲ್ಲಿ ಆತ್ಮಹತ್ಯೆ

ಸುಳ್ಯ: ಉದ್ಯಮಿಯೊಬ್ಬರ ಸೊಸೆ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಡೈರಿ ರಿಚ್ ಐಸ್‍ ಕ್ರೀಂ ಉದ್ಯಮಿ ಕನಕಮಜಲಿನ ಗಿರಿಯಪ್ಪ ಗೌಡರ ಸೊಸೆ, ರಾಜೇಶ್ ಎಂಬವರ ಪತ್ನಿ ಐಶ್ವರ್ಯ (26) ಈ ಕೃತ್ಯ ಎಸಗಿದವರು. ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಉಷಾ ದಂಪತಿ ಪುತ್ರಿಯಾಗಿರುವ ಐಶ್ವರ್ಯ ನಾಲ್ಕು ವರ್ಷಗಳ ಹಿಂದೆ ರಾಜೇಶ್‍ ಅವರನ್ನು ವಿವಾಹವಾಗಿದ್ದು, ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಪತಿ ರಾಜೇಶ್ ಐಸ್‍ ಕ್ರೀಂ ಪಾರ್ಲರ್ ನಡೆಸಿಕೊಂಡು ಬೆಂಗಳೂರಿನಲ್ಲೇ ವಾಸವಾಗಿದ್ದರು. ಅವರ ತಾಯಿಯೂ

ಸುಳ್ಯದ ವಿವಾಹಿತೆ ಬೆಂಗಳೂರಿನಲ್ಲಿ ಆತ್ಮಹತ್ಯೆ Read More »

ಹುಲಿ ವೇಷದ ತಂಡಗಳ ವಿಚಾರಕ್ಕೆ ಗಲಾಟೆ: ಮೂವರಿಗೆ ಚೂರಿ ಇರಿತ | ಮೆಲ್ಕಾರ್ ನಲ್ಲಿ ಘಟನೆ

ಬಂಟ್ವಾಳ: ಹುಲಿ ವೇಷದ ತಂಡಗಳ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಮೂವರಿಗೆ ಚೂರಿ ಇರಿತವಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್, ಶಂಕರ್ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರು. ಶೋಧನ್, ಯತೀಶ್, ಚೇತನ್, ಪ್ರಸನ್ನ, ಪ್ರದೀಪ್ ಮತ್ತು ಪ್ರಕಾಶ್ ತಂಡದವರು ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಮೆಲ್ಕಾರ್ ನಲ್ಲಿ ಎರಡು ತಂಡಗಳ ನಡುವೆ ಕೆಲ ದಿನಗಳ ಹಿಂದೆ ನಡೆದಿದ್ದ ಜಗಳ ನಡೆದಿತ್ತು. ನಿನ್ನೆ ತಂಡಗಳ ನಡುವೆ ಕಲಹ ಮುಂದುವರಿದು ಮೂವರ ಮೇಲೆ ಮತ್ತೊಂದು

ಹುಲಿ ವೇಷದ ತಂಡಗಳ ವಿಚಾರಕ್ಕೆ ಗಲಾಟೆ: ಮೂವರಿಗೆ ಚೂರಿ ಇರಿತ | ಮೆಲ್ಕಾರ್ ನಲ್ಲಿ ಘಟನೆ Read More »

ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಪುತ್ತೂರು: ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾವು ಸಮೀಪದ ಅಮ್ಚಿನಡ್ಕದಲ್ಲಿ ನಡೆದಿದೆ. ಆಯಿಷಾ ಎಂಬವರೇ ಈ ಕೃತ್ಯ ಎಸಗಿದವರು. ವಿವಾಹಿತೆಯಾಗಿದ್ದ ಆಯಿಷಾ ಮುಖಾರಿಮೂಲೆ ಜೈನುದ್ದೀನ್ ಎಂಬವರ ಪುತ್ರಿಯಾಗಿದ್ದಾರೆ. ಮೃತದೇಹ ಮನೆಯ ಬಾವಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »

ನಿರ್ಮಾಣ ಹಂತದ ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕರೊಬ್ಬರು ಮೃತ್ಯು : ಗುತ್ತಿಗೆದಾರ ಗಂಭೀರ ಗಾಯ

ಅರಿಯಡ್ಕ:ನಿರ್ಮಾಣ ಹಂತದ ಮನೆಯ ಸಿಟೌಟ್‌ನ ಮೇಲ್ಬಾವಣಿ ಕುಸಿದ ಪರಿಣಾಮ ಕಾರ್ಮಿಕರೊಬ್ಬರು ಮೃತಪಟ್ಟು, ಗುತ್ತಿಗೆದಾರ ಗಂಭೀರ ಗಾಯಗೊಂಡಿರುವ ಘಟನೆ ಅರಿಯಡ್ಕ ಗ್ರಾಮದ ಪಾದಲಾಡಿ ಎಂಬಲ್ಲಿ ನಡೆದಿದೆ. ಅರಿಯಡ್ಕ ಗ್ರಾಮದ ಕೌಡಿಚ್ಚಾರ್ ನಿವಾಸಿ ಶೇಖರ್ ಕುಲಾಲ್(45) ಮೃತಪಟ್ಟವರು. ಶೇಖರ್ ಕುಲಾಲ್ ಅರಿಯಡ್ಕ ಗ್ರಾಮದ ಪಾದಲಾಡಿ ಎಂಬಲ್ಲಿ ಕಮಲ ಎಂಬವರ ಮನೆಗೆ ಸೆಂಟ್ರಿಂಗ್ ಕೆಲಸಕ್ಕೆ ತೆರಳಿದ್ದರು. ಮನೆಯ ಸಿಟೌಟ್‌ನ ಮೇಲ್ಟಾವಣಿಯ ಸೆಂಟ್ರಿಂಗ್ ಕೆಲಸ ಮಾಡುತ್ತಿರುವ ಸಂದರ್ಭ ಮೇಲ್ಟಾವಣೆ ಕುಸಿದು ಬಿದ್ದು ಶೇಖರ್ ಕುಲಾಲ್ ಹಾಗೂ ಜೊತೆಗೆ ಕೆಲಸ ಮಾಡಿಕೊಂಡಿದ್ದ ಗುತ್ತಿಗೆದಾರ ಸಂಜೀವ

ನಿರ್ಮಾಣ ಹಂತದ ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕರೊಬ್ಬರು ಮೃತ್ಯು : ಗುತ್ತಿಗೆದಾರ ಗಂಭೀರ ಗಾಯ Read More »

ತಮಿಳುನಾಡು ಮೂಲದ ಸೈಟ್ ಇಂಜಿನಿಯರ್ ಸಂಶಯಾಸ್ಪದ ರೀತಿಯಲ್ಲಿ ಮೃತ್ಯು

ಉಪ್ಪಿನಂಗಡಿ: ಕೆಎನ್‍ಆರ್ ಸಂಸ್ಥೆಯಲ್ಲಿ ಸೈಟ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ತಮಿಳುನಾಡು ಮೂಲದ ವ್ಯಕ್ತಿಯೊಬ್ಬರು ಸಂಶಯಾಸ್ಪದವಾಗಿ ಮೃತಪಟ್ಟ ಘಟನೆ ಪರ್ನೆಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಅನೂಫ್ (47) ಮೃತಪಟ್ಟವರು. ಅನೂಫ್ ಅವರು ರಾಷ್ಟ್ರೀಯ ಹೆದ್ದಾರಿ ವಿಸ್ತರಣಾ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ಕೆಎನ್‍ಆರ್ ಸಂಸ್ಥೆಯಲ್ಲಿ ಸೈಟ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಅ.21 ರಂದು ಉಪ್ಪಿನಂಗಡಿ ಪ್ರದೇಶದಲ್ಲಿ ಕೆಲಸ ನಿರ್ವಹಿಸಲು ವರ್ಗಾವಣೆಯಾಗಿ ಬಂದಿದ್ದರು. ಪೆರ್ನೆಯ ಮುಸ್ತಾಫ ಎಂಬವರ ಮಾಲಕತ್ವದ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಅ.22 ರಂದು ಸಹೋದ್ಯೋಗಿಯೊಬ್ಬರು ಮನೆಗೆ

ತಮಿಳುನಾಡು ಮೂಲದ ಸೈಟ್ ಇಂಜಿನಿಯರ್ ಸಂಶಯಾಸ್ಪದ ರೀತಿಯಲ್ಲಿ ಮೃತ್ಯು Read More »

ನಿವೃತ್ತ ಬ್ಯಾಂಕ್ ಉದ್ಯೋಗಿ ಶವ ಬಾವಿಯಲ್ಲಿ ಪತ್ತೆ

ಉಡುಪಿ: ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರ ಶವ ಅವರ ಮನೆ ಆವರಣದಲ್ಲಿರುವ ಬಾವಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಉಡುಪಿ ಒಳಕಾಡು ನಾರಾಯಣ ರಾವ್ ಕಂಪೌಂಡ್ ನ ನಿವೃತ್ತ ಬ್ಯಾಂಕ್ ಉದ್ಯೋಗಿ ಸದಾನಂದ ಕುಂದರ್ (65) ಎಂಬವರ ಶವ ಪತ್ತೆಯಾಗಿರುವುದು. ಘಟನಾ ಸ್ಥಳಕ್ಕೆ ನಗರ ಪೊಲೀಸ್ ಠಾಣೆಯ ಎಎಸ್‍ಐ ಅರುಣ್ ಹಂಗಾರಕಟ್ಟೆ, ಹೆಡ್ ಕಾನ್‍ ಸ್ಟೇಬಲ್ ಗಳಾದ ಹರೀಶ್ ನಾಯ್ಕ್‍, ಶಂಕರ್ ಭೇಟಿ ನೀಡಿದ್ದು, ಘಟನೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

ನಿವೃತ್ತ ಬ್ಯಾಂಕ್ ಉದ್ಯೋಗಿ ಶವ ಬಾವಿಯಲ್ಲಿ ಪತ್ತೆ Read More »

ಮಾಲಕರ ವಿಶ್ವಾಸ ಗಿಟ್ಟಿಸಿದ್ದ ಕೆಲಸದವನಿಂದಲೇ ಭಾರೀ ಕಳ್ಳತನ!

ಬಂಟ್ವಾಳ: ಬಿಲ್ಡರ್ ಓರ್ವರ ಮನೆಯ ಕೆಲಸಕ್ಕಿದ್ದಾತ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದನ್ನು ಕಳುವು ಮಾಡಿ ಪರಾರಿಯಾಗಿರುವ ಘಟನೆ ಫರಂಗಿಪೇಟೆ ಎಂಬಲ್ಲಿ ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪುದು ಗ್ರಾಮದ ಕೋಡಿಮಜಲು ನಿವಾಸಿಯಾಗಿರುವ ಇಮಾದ್ ಬಿಲ್ಡರ್ ಮಾಲಕ ಮೊಹಮ್ಮದ್ ಝಫರುಲ್ಲಾ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಕಪಾಟಿನೊಳಗೆ ಇರಿಸಲಾಗಿದ್ದ ಲಕ್ಷಾಂತರ ಬೆಲೆ ಬಾಳುವ ಚಿನ್ನಾಭರಣ ಸಹಿತ ಲಕ್ಷಾಂತರ ರೂ ಹಣವನ್ನು ಮನೆಯ ಕೆಲಸದಾತನೇ ಕದ್ದುಕೊಂಡು ಹೋಗಿರುವುದಾಗಿ ಪೋಲೀಸರಿಗೆ ದೂರು ನೀಡಲಾಗಿದೆ. ಸುಮಾರು 2,75,0000

ಮಾಲಕರ ವಿಶ್ವಾಸ ಗಿಟ್ಟಿಸಿದ್ದ ಕೆಲಸದವನಿಂದಲೇ ಭಾರೀ ಕಳ್ಳತನ! Read More »

ಬಾವಿಯಲ್ಲಿ ಪತ್ತೆಯಾದ ಹೆಡ್’ಕಾನ್’ಸ್ಟೇಬಲ್ ಮೃತದೇಹ!

ಕಾರ್ಕಳ: ನಾಪತ್ತೆಯಾಗಿದ್ದ ಹೆಡ್ ಕಾನ್‍ ಸ್ಟೇಬಲ್ ರೊಬ್ಬರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ಕಾರ್ಕಳ ನಗರ ಠಾಣೆಯ ಹೆಡ್ ಕಾನ್‍ಸ್ಟೇಬಲ್ ಶೃತಿನ್ ಶೆಟ್ಟಿ (35) ಎಂಬವರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ.ಶೃತಿನ್ ಶೆಟ್ಟಿ ಅ.19 ರಂದು ನಾಪತ್ತೆಯಾಗಿದ್ದರು. ಸೋಮವಾರ ಕಾರ್ಕಳ ಪುಚ್ಚೇರಿ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಾವಿಯಲ್ಲಿ ಪತ್ತೆಯಾದ ಹೆಡ್’ಕಾನ್’ಸ್ಟೇಬಲ್ ಮೃತದೇಹ! Read More »

error: Content is protected !!
Scroll to Top