ಅಪರಾಧ

ಕಲ್ಲರ್ಪೆ ನಿವಾಸಿ ಭರತ್ ಕಲ್ಲರ್ಪೆ ಆತ್ಮಹತ್ಯೆ

ಪುತ್ತೂರು: ಸಂಪ್ಯ ಸಮೀಪದ ಕಲ್ಲರ್ಪೆ ನಿವಾಸಿ ಶ್ರೀಧ‌ರ್ ಆಚಾರ್ಯ ಅವರ ಪುತ್ರ ಭರತ್‌ ಕಲ್ಲರ್ಪೆ(24) ಮನೆಯ ಸಮೀಪದ ತಮ್ಮ ತೋಟದ ಮರವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ರಕರ್ತ ಗಣೇಶ್ ಕಲ್ಲರ್ಪೆ ಅವರ ಸಹೋದರ ಆಗಿರುವ ಭರತ್ ಕಲ್ಲರ್ಪೆ ಹೈದರಾಬಾದ್ ನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ಅಣ್ಣನ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮತ್ತೆ ಹೈದರಾಬಾದ್ ಗೆ ತೆರಳಿದ್ದು, ಡಿ.12ರಂದು ಮತ್ತೆ ಮನೆಗೆ ಬಂದಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಇದೀಗ ಮೃತದೇಹವನ್ನು […]

ಕಲ್ಲರ್ಪೆ ನಿವಾಸಿ ಭರತ್ ಕಲ್ಲರ್ಪೆ ಆತ್ಮಹತ್ಯೆ Read More »

ಮಾರಕಾಸ್ತ್ರದಿಂದ ಇರಿದು ಯುವಕನ ಹತ್ಯೆ; ಆರೋಪಿಗಳ ಬಂಧನ

ಉಳ್ಳಾಲ : ಯುವಕನೊಬ್ಬನ್ನು ಮಾರಕಾಸ್ತ್ರದಿಂದ ಇರಿದು ಹತ್ಯೆಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿಯ ಶಾಲೆಯೊಂದರ ಬಳಿ ಬುಧವಾರ ರಾತ್ರಿ ನಡೆದಿದೆ. ಹತ್ಯಗೀಡಾದ ಯುವಕನನ್ನು ವರುಣ್‌ ಗಟ್ಟಿ(28) ಎಂದು ಗುರುತಿಸಲಾಗಿದೆ. ಆರೋಪಿಗಳಾದ ಸೂರಜ್‌ ಮತ್ತು ರವಿರಾಜ್‌ ಎಂಬವರನ್ನು ಉಳ್ಳಾಲ ಠಾಣಾ ಪೋಲೀಸರು ವಶಕ್ಕೆ ಪಡೆದಿದ್ದಾರೆ. ಬಿಯರ್‌ ಕುಡಿದು ಬಾಟಲಿಯನ್ನು ರಸ್ತೆಗೆ ಎಸೆದಿದ್ದನ್ನು ಪ್ರಶ್ನಿಸಿದಕ್ಕೆ ಕೊಲೆಗೈಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಲೆಯ ಮುಂಭಾಗದ ಕಟ್ಟೆಯೊಂದರಲ್ಲಿ ಕುಳಿತು ಸೂರಜ್‌ ಮತ್ತು ರವಿರಾಜ್‌ ಬಿಯರ್‌ ಕುಡಿದು ಬಾಟಲಿಯನ್ನು ರಸ್ತೆಗೆ

ಮಾರಕಾಸ್ತ್ರದಿಂದ ಇರಿದು ಯುವಕನ ಹತ್ಯೆ; ಆರೋಪಿಗಳ ಬಂಧನ Read More »

ಸಂಸತ್ ಸದನಕ್ಕೆ ನುಗ್ಗಿ ಆತಂಕ ಸೃಷ್ಟಿ | ಆರೋಪಿಗಳ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲು

ನವದೆಹಲಿ: ಬುಧವಾರ ಸಂಸತ್ ಸದನಕ್ಕೆ ನುಗ್ಗಿ ಆತಂಕ ಸೃಷ್ಟಿಸಿದವರ ವಿರುದ್ದ ಯುಎಪಿಎ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಯುಎಪಿಎ ಕಾಯ್ದೆ : ಯುಎಪಿಎಯ ಸೆಕ್ಷನ್ 15 ಭಯೋತ್ಪಾದಕ ಚಟುವಟಿಕೆಯನ್ನು ವ್ಯಾಖ್ಯಾನಿಸುತ್ತದೆ. ಈ ಕಾನೂನಿನ ಅಡಿಯಲ್ಲಿ, ಕನಿಷ್ಠ 5 ವರ್ಷಗಳು ಮತ್ತು ಗರಿಷ್ಠ ಜೀವಾವಧಿ ಶಿಕ್ಷೆಯ ಅವಕಾಶವಿದೆ. ಭಯೋತ್ಪಾದಕ ಘಟನೆಯಲ್ಲಿ ಯಾರಾದರೂ ಪ್ರಾಣ ಕಳೆದುಕೊಂಡರೆ, ತಪ್ಪಿತಸ್ಥರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಗೆ ಅವಕಾಶವಿದೆ. ಯಾವುದೇ ವ್ಯಕ್ತಿ ಭಯೋತ್ಪಾದನೆಯನ್ನು ಹರಡುವ ಉದ್ದೇಶದಿಂದ ದೇಶದ ಸಮಗ್ರತೆ, ಏಕತೆ, ಭದ್ರತೆ ಮತ್ತು

ಸಂಸತ್ ಸದನಕ್ಕೆ ನುಗ್ಗಿ ಆತಂಕ ಸೃಷ್ಟಿ | ಆರೋಪಿಗಳ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲು Read More »

ಉದ್ಯಾವರ ಸೇತುವೆಯಿಂದ ಕೆಳಗೆ ಹಾರಿದ ವ್ಯಕ್ತಿಯ ಶವ ಪತ್ತೆ!

ಉಡುಪಿ: ಉದ್ಯಾವರ ಸೇತುವೆಯಲ್ಲಿ ಸ್ಕೂಟ‌ರ್ ಚಪ್ಪಲಿ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತರನ್ನು ನಗರದ ಕೋರ್ಟ್ ಬಳಿಯ ನಿವಾಸಿ ರವೀಂದ್ರ ಭಟ್ (55) ಎಂದು ಗುರುತಿಸಲಾಗಿದೆ. ಬುಧವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಪಾರ್ಸೆಲ್ ತೆಗೆದುಕೊಂಡು ಬರುವುದಾಗಿ ಹೇಳಿ ಹೊರಗೆ ಹೋದವರು ಮನೆಗೆ ವಾಪಸ್ಸು ಬಾರದೇ ನಾಪತ್ತೆಯಾಗಿದ್ದರು. ಅಲ್ಲಿಂದ ತನ್ನ ಸ್ಕೂಟರ್‌ನಲ್ಲಿ ಉದ್ಯಾವರ ಸೇತುವೆ ಬಳಿ ತೆರಳಿದ ಅವರು, ಸೇತುವೆಯಲ್ಲಿಯೇ ಸ್ಕೂಟರ್ ನಿಲ್ಲಿಸಿ, ಮೇಲಿಂದ ಹೊಳೆಗೆ ಹಾರಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕಾಪು

ಉದ್ಯಾವರ ಸೇತುವೆಯಿಂದ ಕೆಳಗೆ ಹಾರಿದ ವ್ಯಕ್ತಿಯ ಶವ ಪತ್ತೆ! Read More »

ಸ್ಕೂಟರ್ ಬಿಟ್ಟು ಯುವಕ ನಾಪತ್ತೆ: ನದಿಗೆ ಹಾರಿರುವ ಶಂಕೆ!

ಸೇತುವೆ ಸಮೀಪ ಸ್ಕೂಟರ್ ಬಿಟ್ಟು ಯುವಕ ನಾಪತ್ತೆಯಾಗಿರುವ ಘಟನೆ ಕಾಪು ಸಮೀಪದ ಉದ್ಯಾವರ ಸೇತುವೆ ಬಳಿ ನಡೆದಿದೆ. ಯುವಕ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು, ಯುವಕನನ್ನು ಉಡುಪಿಯ ಖಾಸಗಿ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ಉದ್ಯೋಗಿ ಎಂದು ಗುರುತಿಸಲಾಗಿದೆ. ಸ್ಥಳೀಯ ಮೀನುಗಾರರ ಸಹಾಯದಿಂದ ದೋಣಿಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಈವರೆಗೆ ಯಾವುದೇ ಸುಳಿವು ಲಭ್ಯವಾಗಿಲ್ಲ. ಕಾಪು ಪೋಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

ಸ್ಕೂಟರ್ ಬಿಟ್ಟು ಯುವಕ ನಾಪತ್ತೆ: ನದಿಗೆ ಹಾರಿರುವ ಶಂಕೆ! Read More »

ಗುರುತು ಪತ್ತೆ: ಸಂಸತ್ತಿಗೆ ನುಗ್ಗಿದವರು ಮೈಸೂರು ಮೂಲದವರು!!

ರಾಷ್ಟ್ರದ ಶಕ್ತಿ ಕೇಂದ್ರವಾಗಿರುವ ಸಂಸತ್ ಭವನದೊಳಗೆ ನುಗ್ಗಿದ ದುಷ್ಕರ್ಮಿಗಳ ಗುರುತು ಪತ್ತೆಯಾಗಿದ್ದು, ಮೂವರ ಪೈಕಿ ಇಬ್ಬರನ್ನು ಮೈಸೂರು ಮೂಲದವರು ಎಂದು ಹೇಳಲಾಗಿದೆ. ಒಟ್ಟು ಮೂವರು ನೂತನ ಸಂಸತ್ ಭವನದೊಳಗೆ ನುಗ್ಗಿದ್ದರು. ಅವರಲ್ಲಿ ಇಬ್ಬರು ಮೈಸೂರು ಮೂಲದ ಮನೋರಂಜನ್ ಹಾಗೂ ಸಾಗರ್ ಶರ್ಮಾ ಎಂದು ಗುರುತಿಸಲಾಗಿದೆ. ಮನೋರಂಜನ್ ಇಂಜಿನಿಯರ್ ಎಂದು ಹೇಳಲಾಗಿದೆ. ಘಟನೆ ತಕ್ಷಣವೇ ದುಷ್ಕರ್ಮಿಗಳನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು, ದುಷ್ಕರ್ಮಿಗಳ ವಿಚಾರಣೆ ನಡೆಸುತ್ತಿದ್ದಾರೆ.

ಗುರುತು ಪತ್ತೆ: ಸಂಸತ್ತಿಗೆ ನುಗ್ಗಿದವರು ಮೈಸೂರು ಮೂಲದವರು!! Read More »

ನೂತನ ಸಂಸತ್‌ ಭವನಕ್ಕೆ ನುಗ್ಗಿದ ಅಪರಿಚಿತ ವ್ಯಕಿಗಳು !! | ಸಂಸತ್‌ ಭವನದ ದಾಳಿಗೆ 22 ವರ್ಷದ ದಿನದಂದೆ ನಡೆದ ಘಟನೆ !!

ದೆಹಲಿ : ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿ ಪ್ರಕ್ಷೇಕರ ಗ್ಯಾಲರಿಯಿಂದ ನುಗ್ಗಿದ ಇಬ್ಬರು ಅಪರಿಚಿತ ವ್ಯಕ್ತಿಗಳು ಸದನದೊಳಗೆ ಭಯದ ವಾತಾವರಣ ಸೃಷ್ಟಿಸಿದ ಘಟನೆ ಬುಧವಾರ ನಡೆದಿದೆ. ಇದೊಂದು ಭದ್ರತಾ ವೈಪಲ್ಯವಾಗಿದ್ದು, ನೂತನ ಸಂಸತ್‌ ಭವನದ ಒಳಗೆ ನುಗ್ಗಿದ ಯುವಕ ಹಾಗೂ ಯುವತಿ ಪ್ರೇಕ್ಷಕರ ಗ್ಯಾಲರಿಯಿಂದ ಕೆಳಗೆ ಹಾರಿದ್ದಾರೆ. ಕೆಮಿಕಲ್ ಸ್ಪ್ರೇ ಸಿಡಿಸಿದವರನ್ನು ಸಾಗರ್‌ ಶರ್ಮಾ ಹಾಗೂ ನೀಲಂ ಕೌರ್ ಎಂದು ಎಂದು ಗುರುತಿಸಲಾಗಿದೆ. ಶೂನ್ಯ ವೇಳೆಯಲ್ಲಿ ಒಬ್ಬ ವ್ಯಕ್ತಿ ಲೋಕಸಭೆಯ ಬೆಂಚುಗಳ ಮೇಲೆ ಜಿಗಿಯುತ್ತಿರುವುದನ್ನು ಕಂಡರೆ, ಮತ್ತೊಬ್ಬರು ಸಾರ್ವಜನಿಕ

ನೂತನ ಸಂಸತ್‌ ಭವನಕ್ಕೆ ನುಗ್ಗಿದ ಅಪರಿಚಿತ ವ್ಯಕಿಗಳು !! | ಸಂಸತ್‌ ಭವನದ ದಾಳಿಗೆ 22 ವರ್ಷದ ದಿನದಂದೆ ನಡೆದ ಘಟನೆ !! Read More »

ವಿಷ ಸೇವಿಸಿ ಆತ್ಮಹತ್ಯೆ!

ಕಡಬ: ಹಿರಿಯ ನಾಗರಿಕೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಬೈದ್ರಿಜಾಲ್ ನಲ್ಲಿ ನಡೆದಿದೆ. ಬೈದ್ರಿಜಾಲ್ ನಿವಾಸಿ ಬಾಬು ಗೌಡರ ಪತ್ನಿ ಶಿವಮ್ಮ (78) ಆತ್ಮಹತ್ಯೆ ಮಾಡಿಕೊಂಡವರು. ಮಂಗಳವಾರ ಸಂಜೆ ಮನೆಯಲ್ಲಿ ವಿಷ ಪದಾರ್ಥ ಸೇವಿಸಿದ್ದರು. ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಯಿತು.  ಅಲ್ಲಿ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ವಿಷ ಸೇವಿಸಿ ಆತ್ಮಹತ್ಯೆ! Read More »

ಕುಂಬ್ರದ ಟಿಪ್ಪರ್ ಚಾಲಕನ ಕೊಲೆ ಪ್ರಕರಣ | ಮೂರನೇ ಆರೋಪಿ ಬಂಧನ!

ಪುತ್ತೂರು: ಟಿಪ್ಪರ್ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ಬಾಗಲಕೋಟೆ ಬಾದಾಮಿ ಡಾಣಕಶಿರೂರು ಮೂಲದ ಹನುಮಂತ ಮಾದರ (22) ಎಂಬವರ ಕೊಲೆ ಪ್ರಕರಣದ ಮೂರನೇ ಆರೋಪಿ ದುರ್ಗಪ್ಪ ಮಾದರ (42) ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಅಪಹರಣಕ್ಕೆ ಬಳಸಿದ್ದ ವಾಹನ ಮತ್ತು ಕೊಲೆ ಮಾಡಲು ಬಳಸಲಾಗಿದ್ದ ರಾಡ್ ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆ ಡಾಣಕಶಿರೂರು ರೇಣವ್ವ ಮತ್ತು ಸುರೇಶರವರ ಮಗ ಹನುಮಂತ ಮಾದರ(22) ಅವರನ್ನು ಕುಂಬ್ರದಿಂದ ಮೂವರು ಸೇರಿ ವಾಹನವೊಂದರಲ್ಲಿ ಕರೆದೊಯ್ದು ಕೊಲೆ ಮಾಡಿ ಆಗುಂಬೆ ಘಾಟ್

ಕುಂಬ್ರದ ಟಿಪ್ಪರ್ ಚಾಲಕನ ಕೊಲೆ ಪ್ರಕರಣ | ಮೂರನೇ ಆರೋಪಿ ಬಂಧನ! Read More »

ಬಸ್ಸಿಗೆ ಹತ್ತುವ ವೇಳೆ ಚಿನ್ನದ ಸರ ಕಳವು !

ಬೆಳ್ತಂಗಡಿ: ಬಸ್ಸಿಗೆ ಹತ್ತುವ ವೇಳೆ ಚಿನ್ನ ಕಳವು ಮಾಡಿರುವ ಘಟನೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಉಜಿರೆ ಗ್ರಾಮದ ವಾರಿಜ ಟಿ. (53) ಮಂಗಳವಾರ ಸಂಜೆ ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಧರ್ಮಸ್ಥಳಕ್ಕೆ ಹೋಗುವ ಕೆಎಸ್ಸಾಆರ್ಟಿಸಿ ಬಸ್ ಗೆ ಹತ್ತುವ ವೇಳೆ ಘಟನೆ ನಡೆದಿದೆ. ವಾರಿಜ ಅವರು ಕೊರಳಿನಲ್ಲಿ ಧರಿಸಿದ್ದ ಚಿನ್ನದ ಸರವನ್ನು ಯಾರೋ ಅನಾಮಿಕರು ಎಳೆದು ತೆಗೆದಿದ್ದಾರೆ. ಈ ಸಂದರ್ಭ ಅವರು ಬೊಬ್ಬೆ ಹೊಡೆದಿದ್ದಾರೆ. ಆದರೆ ಬಸ್ಸಿನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದುದರಿಂದ ಕಳ್ಳ ಯಾರೆಂದು ಪತ್ತೆಯಾಗಿಲ್ಲ ಎಂದು

ಬಸ್ಸಿಗೆ ಹತ್ತುವ ವೇಳೆ ಚಿನ್ನದ ಸರ ಕಳವು ! Read More »

error: Content is protected !!
Scroll to Top