ಅಪರಾಧ

ಕದ್ರಿ: ವೀಸಾ ಅವಧಿ ಮೀರಿದ ಆರೋಪದಡಿ ವಿದೇಶಿಯರು ವಶಕ್ಕೆ!

ಮಂಗಳೂರು: ವೀಸಾ ಅವಧಿ ಮೀರಿದ ಬಳಿಕವೂ ನಗರದಲ್ಲಿ ವಾಸವಾಗಿದ್ದ ಇಬ್ಬರು ವಿದೇಶಿಯರನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದಿರುವುದಾಗಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಘಾನಾ ದೇಶದ ಸಲಾಂ ಕ್ರಿಸ್ಟೆನ್ ಮತ್ತು ನೈಜೀರಿಯಾದ ಅಂಕಿತೋಲ ವೀಸಾ ಅವಧಿ ಮೀರಿದ ಬಳಿಕವೂ ನಗರದಲ್ಲಿ ಉಳಕೊಂಡಿದ್ದರು ಎನ್ನಲಾಗಿದೆ. ‌ ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ ಹಸ್ತಾಂತರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಕದ್ರಿ: ವೀಸಾ ಅವಧಿ ಮೀರಿದ ಆರೋಪದಡಿ ವಿದೇಶಿಯರು ವಶಕ್ಕೆ! Read More »

ಮತ್ತೊಂದು ಚುನಾವಣಾ ಟಿಕೆಟ್ ವಂಚನೆ ಪ್ರಕರಣ ಬೆಳಕಿಗೆ! | 2.55 ಕೋಟಿ ರೂ. ಪಂಗನಾಮ!

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಚುನಾವಣಾ ಟಿಕೆಟ್ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ನಾಲ್ವರ ವಿರುದ್ಧ ಪೊಲೀಸ್ ಎಫ್ ಐಆರ್ ದಾಖಲಾಗಿದೆ. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣ ಇದಾಗಿದ್ದು, ಕೊಟ್ಟೂರು ನಿವಾಸಿ, ನಿವೃತ್ತ ಎಂಜಿನಿಯರ್‌ ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹಗರಿಬೊಮ್ಮನಹಳ್ಳಿ ಎಸ್‌ಸಿ ಮೀಸಲು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಶಿವಮೂರ್ತಿ ಎಂಬುವವರಿಗೆ ನಾಲ್ವರ ತಂಡವು ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ

ಮತ್ತೊಂದು ಚುನಾವಣಾ ಟಿಕೆಟ್ ವಂಚನೆ ಪ್ರಕರಣ ಬೆಳಕಿಗೆ! | 2.55 ಕೋಟಿ ರೂ. ಪಂಗನಾಮ! Read More »

ಕತ್ತರಿಸಿದ ದನದ ಕಿವಿ ಪತ್ತೆ

ವಿಟ್ಲ: ದನವೊಂದರ ಕಿವಿ ಕತ್ತರಿಸಿ ಎಸೆದು ಹೋದ ಘಟನೆ ಕೆಲಿಂಜ ಕೊಟ್ಟಾರಿಕಟ್ಟೆ ಬಸ್ ನಿಲ್ದಾಣದ ಸಮೀಪ ಬೆಳಕಿಗೆ ಬಂದಿದೆ. ವೀರಕಂಭ ಗ್ರಾಮದ ಕೊಟ್ಟಾರಿಕಟ್ಟೆ ಬಸ್ ನಿಲ್ದಾಣದಲ್ಲಿ ಇಂದು ಮುಂಜಾನೆ ಕತ್ತರಿಸಿದ ದನದ ಕಿವಿ ಪತ್ತೆಯಾಗಿದೆ. ಸ್ಥಳೀಯರು ವಿಟ್ಲ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಕತ್ತರಿಸಿದ ದನದ ಕಿವಿ ಪತ್ತೆ Read More »

ನೇಣು ಬಿಗಿದು ಪುಣಚದ ಶ್ರೀಕೃಷ್ಣ ಆತ್ಮಹತ್ಯೆ

ವಿಟ್ಲ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಪುಣಚದಲ್ಲಿ ನಡೆದಿದೆ. ಪುಣಚ ಚೆಕ್ಕುತ್ತಿ ನಿವಾಸಿ ಶ್ರೀಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡವರು ಸೆಂಟ್ರಿಂಗ್ ಕೆಲಸ ಮಾಡುತ್ತಿರುವ ಶ್ರೀಕೃಷ್ಣ ಅವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ತಾಯಿ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನೇಣು ಬಿಗಿದು ಪುಣಚದ ಶ್ರೀಕೃಷ್ಣ ಆತ್ಮಹತ್ಯೆ Read More »

ದಯಾ ನಾಯಕ್ ತಂಡದ ಭರ್ಜರಿ ಕಾರ್ಯಾಚರಣೆ!!

ಮುಂಬಯಿ: ಕೈಂ ಬ್ರಾಂಚ್‌ನ ಬಾಂದ್ರಾ 9ರ ಘಟಕದ ಅಧಿಕಾರಿಗಳ ತಂಡದ ಸೀನಿಯರ್ ಇನ್ಸ್‌ಪೆಕ್ಟರ್ ದಯಾ ನಾಯಕ್ ಅವರ ನೇತೃತ್ವದಲ್ಲಿ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 16 ಕೋಟಿ ರೂ. ಮೌಲ್ಯದ 5.089 ಕೆಜಿ ಎಂಡಿ (ಮೆಫೆಡೋನ್) ಡ್ರಗ್ಸ್‌ನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದೆ. ಖಾರ್ ಪಶ್ಚಿಮದ ಖಾರ್ದಂಡದ ಕಾರ್ಟರ್ ರೋಡ್‌ನ ಖಲಾ ಮೈದಾನ ಸಮೀಪದ ಸ್ಮಶಾನದ ಬಳಿ ಈ ಕಾರ್ಯಾಚರಣೆ ನಡೆಸಲಾಯಿತು. ಬಂಧಿತ ಆರೋಪಿಗಳನ್ನು ರಾಹುಲ್ ಕಿಸಾನ್ ಗವಾಲಿ ಮತ್ತು ಅತುಲ್ ಕಿಸಾನ್ ಗವಾಲಿ (32)

ದಯಾ ನಾಯಕ್ ತಂಡದ ಭರ್ಜರಿ ಕಾರ್ಯಾಚರಣೆ!! Read More »

ಬಾಯೊಳಗೆ, ತಲೆಕೂದಲಲ್ಲಿ ಪತ್ತೆಯಾಯ್ತು ಅಕ್ರಮ ಚಿನ್ನ!

ಮಂಗಳೂರು: ದುಬೈನಿಂದ ಮಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರಿಂದ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಸುಮಾರು 11 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದುಬೈನಿಂದ ಮಂಗಳೂರಿಗೆ ಏರ್ ಇಂಡಿಯಾ ವಿಮಾನದ ಮೂಲಕ ಆಗಮಿಸಿದ ಓರ್ವ ಪುರುಷ ಹಾಗೂ ಮಹಿಳೆಯನ್ನು ತಪಾಸಣೆ ನಡೆಸಿದ ವೇಳೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿರುವುದು ಪತ್ತೆಯಾಗಿದೆ. ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಓರ್ವ ಪ್ರಯಾಣಿಕ ಮುಖಕ್ಕೆ ಮಾಸ್ಕ್ ಧರಿಸಿದ್ದು, ಆತನನ್ನು

ಬಾಯೊಳಗೆ, ತಲೆಕೂದಲಲ್ಲಿ ಪತ್ತೆಯಾಯ್ತು ಅಕ್ರಮ ಚಿನ್ನ! Read More »

ಸಮುದ್ರ ಬೀಚ್‌ನಲ್ಲಿ ಜೋಡಿ ಮೃತದೇಹ ಪತ್ತೆ!

ಮಂಗಳೂರು: ಇಲ್ಲಿನ ಪಣಂಬೂರು ಬೀಚ್‌ನಲ್ಲಿ ಬೆಂಗಳೂರಿನ ಜೋಡಿ ಶವ ಗುರುವಾರ ಬೆಳಿಗ್ಗೆ ಪತ್ತೆಯಾಗಿದೆ. ಮೃತರನ್ನು ಲಕ್ಷ್ಮಿ(40) ಮತ್ತು ಬೋರಲಿಂಗಯ್ಯ (45) ಎಂದು ಗುರುತ್ತಿಸಲಾಗಿದ್ದು, ಇವರಿಬ್ಬರೂ ಬೆಂಗಳೂರು ಮೂಲದವರು. ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ. ಬುಧವಾರ ಬೆಂಗಳೂರಿನಿಂದ ಆಗಮಿಸಿದ್ದ ಈ ಜೋಡಿ, ಗುರುವಾರ ಮುಂಜಾನೆ 5 ಗಂಟೆ ಸುಮಾರಿಗೆ ಪಣಂಬೂರಿಗೆ ಬಂದು ಸಮುದ್ರಕ್ಕೆ ಧುಮುಕಿದ್ದರು ಎನ್ನಲಾಗಿದೆ. ಸಮುದ್ರಕ್ಕೆ ಹಾರುವ ಮುಂಚೆ ತಮ್ಮ ಮೊಬೈಲ್ ಮತ್ತಿತರ ಸೊತ್ತುಗಳನ್ನು ತೀರದಲ್ಲೇ ಬಿಟ್ಟಿದ್ದರಿಂದ ಪೊಲೀಸರು ಸಂಬಂಧಿಕರನ್ನು ಸಂಪರ್ಕಿಸಿ ಮಾಹಿತಿ ನೀಡಿದರು.

ಸಮುದ್ರ ಬೀಚ್‌ನಲ್ಲಿ ಜೋಡಿ ಮೃತದೇಹ ಪತ್ತೆ! Read More »

ನಟಿ ರಾಧಿಕಾ ಮನೆಯ ಕೆಲಸದಾಳು ನಾಪತ್ತೆ!

ವಿಟ್ಲ: ಚಲನಚಿತ್ರ ನಟಿ ರಾಧಿಕಾ ಅವರ ಅಮ್ಟೂರು ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವಳು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು‌ ದಾಖಲಾಗಿದೆ. ಮೂಲತಃ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಾದನಗಿರಿ ನಿವಾಸಿ ಮಹಾದೇವ ಮಾರಿಪಟಗಾರ್ ಅವರ ಪತ್ನಿ ನಾಗರತ್ನ (33) ಕಾಣೆಯಾದ ಮಹಿಳೆ. ‌ತಾಲೂಕಿನ‌ ಅಮ್ಟೂರು ಗ್ರಾಮದ ರಾಯಪ್ಪನಕೋಡಿ ಎಂಬಲ್ಲಿ ಚಲನ ಚಿತ್ರ ನಟಿ ರಾಧಿಕ ಅವರ ಎಸ್ಟೇಟ್‌ ನಲ್ಲಿ ಕಳೆದ ಆರು ತಿಂಗಳ ಹಿಂದೆ ಕೆಲಸಕ್ಕೆ ಸೇರಿದ ನಾಗರತ್ನ ಇದೀಗ ಕಾಣೆಯಾಗಿದ್ದಾರೆ. ನಾಗರತ್ನ

ನಟಿ ರಾಧಿಕಾ ಮನೆಯ ಕೆಲಸದಾಳು ನಾಪತ್ತೆ! Read More »

ಲಂಚ ಸ್ವೀಕಾರ : ಇಂಜಿನಿಯರ್ ಲೋಕಾಯುಕ್ತ ಬಲೆಗೆ

ಮಂಗಳೂರು : ಕಾಮಗಾರಿ ನಡೆದ ಬಳಿಕ ಸ್ಥಳದಲ್ಲಿರುವ ಮೆಟೀರಿಯಲ್ ಪರಿಶೀಲನೆ ನಡೆಸಿ ವರದಿ ನೀಡಲು ಗುತ್ತಿಗೆದಾರರೊಬ್ಬರಿಂದ ಲಂಚ ಬೇಡಿಕೆ ಇಟ್ಟಿದ್ದ ಮಂಗಳೂರು ಲೋಕೋಪಯೋಗಿ ಸಹಾಯಕ ಕಾರ್ಯಪಾಲ ಇಂಜಿನಿಯರ್ ಕಚೇರಿಯ ಗುಣ ಭರವಸೆ ಉಪವಿಭಾಗದ ಕಿರಿಯ ಇಂಜಿನಿಯರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಿರಿಯ ಇಂಜಿನಿಯರ್ -2 ಅಗಿರುವ ರೋನಾಲ್ಡ್ ಲೋಬೋ ಲೋಕಾಯುಕ್ತ ಬಲೆಗೆ ಬಿದ್ದವರು. ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಕಾಮಗಾರಿ ನಡೆಸಿದ ಬಳಿಕ ಸ್ಥಳದಲ್ಲಿದ್ದ ಮೆಟೀರಿಯಲ್ ಪರಿಶೀಲನೆಗೆ ಬೆಳ್ತಂಗಡಿಯ ಗುತ್ತಿಗೆದಾರರೊಬ್ಬರಿಂದ 20 ಸಾವಿರ ರೂ. ಲಂಚದ ಬೇಡಿಕೆ

ಲಂಚ ಸ್ವೀಕಾರ : ಇಂಜಿನಿಯರ್ ಲೋಕಾಯುಕ್ತ ಬಲೆಗೆ Read More »

ಕೆರೆಗೆ ಬಿದ್ದು ಮಹಿಳೆ ಮೃತ್ಯು

ಪುತ್ತೂರು: ಮಹಿಳೆಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಎಡಮಂಗಲ ಗ್ರಾಮದ ಕೇರ್ಪಡ ಎಂಬಲ್ಲಿ ಬುಧವಾರ ನಡೆದಿದೆ. ಕೇರ್ಪಡ ದಿ.ಹುಕ್ರ ಎಂಬವರ ಪತ್ನಿ ಗಿರಿಜಾ (50) ಮೃತಪಟ್ಟವರು. ಮೃತ ಗಿರಿಜಾ ಅವರ ಮನೆಯವರು ಅಡಿಕೆ ಹೆಕ್ಕಲು ಹೋದಾಗ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಗಿರಿಜಾ ಅವರು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೃತರು ಪುತ್ರ ಲೋಕೇಶ್ ಅವರನ್ನು ಅಗಲಿದ್ದಾರೆ.

ಕೆರೆಗೆ ಬಿದ್ದು ಮಹಿಳೆ ಮೃತ್ಯು Read More »

error: Content is protected !!
Scroll to Top