ಅಪರಾಧ

ರಕ್ಷಿತಾರಣ್ಯದಲ್ಲಿ ಅಕ್ರಮ ಜಾನುವಾರು ಮಾಂಸ: ಆರೋಪಿಗಳು ಪರಾರಿ

ನೆಲ್ಯಾಡಿ: ಜಾನುವಾರು ಕಡಿದು ಮಾಂಸ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿರುವ ಘಟನೆ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ನಡೆದಿದೆ. ದಾಳಿ ವೇಳೆ ನಾಲ್ವರು ಪರಾರಿಯಾಗಿರುವುದಾಗಿ ವರದಿಯಾಗಿದೆ. ಶಿರಾಡಿ-ಶಿಶಿಲ ರಕ್ಷಿತಾರಣ್ಯದ ನದಿ ಕಿನಾರೆಯಲ್ಲಿ ನದಿ ಕಿನಾರೆಯ ರಕ್ಷಿತಾರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಜಾನುವಾರನ್ನು ಕಡಿದು ಮಾಂಸ ಮಾಡಲಾಗಿತ್ತು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ನೆಲ್ಯಾಡಿ ಹೊರಠಾಣೆ ಪೊಲೀಸರು ದಾಳಿ ನಡೆಸಿದ್ದರು. ಪೊಲೀಸರು ದಾಳಿ ನಡೆಸುತ್ತಿದ್ದಂತೆ ಸ್ಥಳದಲ್ಲಿದ್ದ ನಾಲ್ವರು ಅಲ್ಲಿಂದ ಓಡಿ ಪರಾರಿಯಾಗಿದ್ದಾರೆ. ಪ್ಲಾಸ್ಟಿಕ್ ಚೀಲ, ಪ್ಲಾಸ್ಟಿಕ್ ಟರ್ಪಾಲು, […]

ರಕ್ಷಿತಾರಣ್ಯದಲ್ಲಿ ಅಕ್ರಮ ಜಾನುವಾರು ಮಾಂಸ: ಆರೋಪಿಗಳು ಪರಾರಿ Read More »

ಕಳವಾದ ದೇವಸ್ಥಾನದ ಆಭರಣದೊಂದಿಗೆ ಶರಣಾದ ಮಾಜಿ ಅಧ್ಯಕ್ಷ!

ಉಪ್ಪಿನಂಗಡಿ: ಡಿಸೆಂಬರ್ ತಿಂಗಳಲ್ಲಿ ನಡೆದ ಬ್ರಹ್ಮಕಲಶೋತ್ಸವ ವೇಳೆ ಪೆರ್ನೆಯ ಕಳೆಂಜ- ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಮರ್ಪಿಸಲಾದ ಆಭರಣ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ ಬೆನ್ನಲ್ಲೇ ಆರೋಪಿ ಆಭರಣದೊಂದಿಗೆ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ. ದೇವಳದ ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ರೋಹಿತಾಕ್ಷ ಬಾಣಬೆಟ್ಟು ನಾಪತ್ತೆಯಾದ ಚಿನ್ನಾಭರಣದೊಂದಿಗೆ ಪೊಲೀಸರಿಗೆ ಶರಣಾದ ವ್ಯಕ್ತಿ. ಕಳೆದ ಡಿಸೆಂಬರ್’ನಲ್ಲಿ ದೇವಾಲಯದ ಬ್ರಹ್ಮಕಲಶಾಭಿಷೇಕ ನಡೆದಿದ್ದು, ಈ ಸಂದರ್ಭ ಭಕ್ತರೋರ್ವರು ಸುಮಾರು ಮೂರು ಮುಕ್ಕಾಲು ಪವನಿನ ಐದು ಎಳೆಗಳಿಂದ ಕೂಡಿದ ಚಿನ್ನದ ಜೋ

ಕಳವಾದ ದೇವಸ್ಥಾನದ ಆಭರಣದೊಂದಿಗೆ ಶರಣಾದ ಮಾಜಿ ಅಧ್ಯಕ್ಷ! Read More »

ಗೆಳೆಯರೊಂದಿಗೆ ಈಜಲು ತೆರಳಿದ್ದ ತಸ್ಲೀಮ್ ಶವ ಪತ್ತೆ!

ಮಾಡಾವು: ಗೆಳೆಯರೊಂದಿಗೆ ಈಜಲು ತೆರಳಿದ್ದ ಯುವಕನ ಮೃತದೇಹ ಸೋಮವಾರ ಬೆಳಿಗ್ಗೆ ಹೊಳೆಯಲ್ಲಿ ಪತ್ತೆಯಾಗಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17 ವ.) ಮೃತಪಟ್ಟವರು. ತಸ್ಲೀಮ್ ಅ. 15ರಂದು ಸಂಜೆ ಗೆಳೆಯರ ಜೊತೆಗೂಡಿ ಅರಿಕ್ಕಿಲ ಸಮೀಪದ ಎರಕ್ಕಲ ಎಂಬಲ್ಲಿ ಹೊಳೆಗೆ ಈಜಲು ತೆರಳಿದ್ದ ವೇಳೆ ಘಟನೆ ಸಂಭವಿಸಿತ್ತು. ಯುವಕ ನಾಪತ್ತೆಯಾಗುತ್ತಿದ್ದಂತೆ ಸ್ನೇಹಿತರು ಮನೆಯವರಿಗೆ, ಸ್ಥಳೀಯರಿಗೆ ವಿಷಯ ತಲುಪಿಸಿದ್ದರು. ತಕ್ಷಣ ಸ್ಥಳೀಯರು ಹೊಳೆಯಲ್ಲಿ ಹುಡುಕಾಟ ನಡೆಸಿದರಾದರೂ ಮೃತದೇಹ ಪತ್ತೆಯಾಗಿರಲಿಲ್ಲ. ಬಳಿಕ ಮುಳುಗು ತಜ್ಞರು ಕಾರ್ಯಾಚರಣೆ ಮುಂದುವರಿಸಿದ್ದರು.

ಗೆಳೆಯರೊಂದಿಗೆ ಈಜಲು ತೆರಳಿದ್ದ ತಸ್ಲೀಮ್ ಶವ ಪತ್ತೆ! Read More »

ಹೊಳೆಗೆ ಈಜಲು ತೆರಳಿದ ಬಾಲಕ ನಾಪತ್ತೆ : ಹುಡುಕಾಟ

ಮಾಡಾವು : ಹೊಳೆಗೆ ಈಜಲು ತೆರಳಿದ ಬಾಲಕನೋರ್ವ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದ್ದು, ಹುಡುಕಾಟ ನಡೆಸಲಾಗುತ್ತಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲಿಮ್ (17 ವ) ಗೆಳೆಯರ ಜೊತೆಗೂಡಿ ಅ. 15ರಂದು ಸಂಜೆ ಅರಿಕ್ಕಿಲ ಸಮೀಪದ ಎರಕ್ಕಲ ಎಂಬಲ್ಲಿನ ಹೊಳೆಗೆ ತೆರಳಿದ್ದು ಈಜುವ ವೇಳೆ ಬಾಲಕ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ. ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದು ಹುಡುಕಾಟ ನಡೆಸುತ್ತಿದ್ದಾರೆ.

ಹೊಳೆಗೆ ಈಜಲು ತೆರಳಿದ ಬಾಲಕ ನಾಪತ್ತೆ : ಹುಡುಕಾಟ Read More »

ಹಟ್ಟಿಯಿಂದ ದನ ಕಳವು: ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

ಸುಳ್ಯ: ತಿಂಗಳ ಹಿಂದೆ ಸಂಪಾಜೆ ಕಲ್ಲುಗುಂಡಿಯ ಗೂನಡ್ಕದಲ್ಲಿ ಹಟ್ಟಿಯಿಂದ ದನ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಆರೋಪಿಗಳನ್ನು ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಳ್ಯ ಮರ್ಕುಂಜ ನಿವಾಸಿ ಗಣೇಶ್ ಕಾಯಾರ ಮತ್ತು ಕೇರಳದ ಚೆಂಬೇರಿಯ ನಿವಾಸಿ ಅಬ್ದುಲ್ ಬಂಧಿತ ಆರೋಪಿಗಳು. ಸೆ. 13ರಂದು ತಡರಾತ್ರಿ ಎರಡು ಗಂಟೆ ವೇಳೆಗೆ ಗೂನಡ್ಕದ ವರದರಾಜ್ ಸಂಕೇಶ್ವರ್ ಅವರ ಮನೆಯ ಹಟ್ಟಿಯಲ್ಲಿದ್ದ ಎರಡು ಹಸುಗಳನ್ನು ಪಿಕಪ್ ಗೆ ತುಂಬಿ ಕದ್ದೊಯ್ಯಲಾಗಿತ್ತು. ಆರೋಪಿಗಳ ಚಲನ ವಲನಗಳನ್ನು ಸಿಸಿ ಕ್ಯಾಮೆರಾಗಳ ಸಹಾಯದಿಂದ ಸೆರೆ

ಹಟ್ಟಿಯಿಂದ ದನ ಕಳವು: ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು Read More »

5 ವರ್ಷಗಳಿಂದ  ತಲೆಮರೆಸಿಕೊಂಡಿದ್ದ 6 ಆರೋಪಿಗಳು ಸೆರೆ!

ಬಂಟ್ವಾಳ: ಫರಂಗಿಪೇಟೆಯಲ್ಲಿ ಅಕ್ರಮ ಮರಳು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಉತ್ತರಪ್ರದೇಶ ಮೂಲದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ ಸಹಾನಿ, ಅಮಿತ್ ಕುಮಾರ್, ಸತ್ಯೇಂದ್ರ ಸಹಾನಿ, ಸೈದಾನ್ ಸಹಾನಿ, ಅಭಯ್ ನಾರಾಯಣ್ ಬಂಧಿತರು. ಫರಂಗಿಪೇಟೆಯಲ್ಲಿ ಅಕ್ರಮ ಮರಳು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮೂಲದ ಆರು ಮಂದಿಯ ಮೇಲೆ ಬಂಟ್ವಾಳ ಗ್ರಾಮಾಂತರ

5 ವರ್ಷಗಳಿಂದ  ತಲೆಮರೆಸಿಕೊಂಡಿದ್ದ 6 ಆರೋಪಿಗಳು ಸೆರೆ! Read More »

ಗಾಂಜಾ ಸೇವನೆ: ಐವರ ಬಂಧನ

ಬಜ್ಪೆ: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧೆಡೆ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಪೋರ್ಕೊಡಿ ನಿವಾಸಿ ಮುಹಮ್ಮದ್ ಮುನಾಝ್, ಕಸಬಾ ಬೆಂಗ್ರೆಯ ನಿವಾಸಿ ಮುಹಮ್ಮದ್ ಅಫ್ರಾರ್, ಬಡಗುಳಿಪಾಡಿ ಗ್ರಾಮದ ನಿವಾಸಿ ರಾಹಿಲ್ ಮೊಯ್ದಿನ್ ಶರೀಫ್, ಮೂಡುಪೆರಾರ ಗ್ರಾಮದ ಗುರುಕಂಬಳದ ನಿವಾಸಿ ಮುಲ್ಲಾ ಅಬ್ದುಲ್ ಅಮನ್ ಮತ್ತು ಕಂದಾವರ ಗ್ರಾಮದ ಅಮಾನುಲ್ಲಾ ಕಂಪೌಂಡ್ ನಿವಾಸಿ ಮುಹಮ್ಮದ್ ಶಾಹಿನ್ ಬಂಧಿತರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತರ ಪೈಕಿ ಮುನಾಝ್ ಮತ್ತು ಮುಹಮ್ಮದ್ ಅಫ್ರಾರ್ ಕಂಜಾರು

ಗಾಂಜಾ ಸೇವನೆ: ಐವರ ಬಂಧನ Read More »

ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಪೊಲೀಸ್ ವಶ

ವಿಟ್ಲ: ಅನ್ಯಕೋಮಿನ ಯುವಕರ ಜೊತೆಗೆ ಓರ್ವ ಹಿಂದೂ ಯುವತಿ ಪತ್ತೆಯಾಗಿದ್ದು, ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಸಮೀಪ ಘಟನೆ ನಡೆದಿದೆ. ಇಬ್ಬರು ಅನ್ಯಧರ್ಮೀಯ ಯುವಕರು ಹಾಗೂ ಹಿಂದೂ ಯುವತಿ ಬಸ್ಸಿನಿಂದ ಇಳಿದು, ಕುದ್ದುಪದವು ಬಸ್ಸು ತಂಗುದಾಣದಲ್ಲಿ ಕುಳಿತಿದ್ದರು. ಸ್ಥಳೀಯರು ವಿಚಾರಿಸಿದಾಗ ಉಪ್ಪಳ ಕಡೆ ತೆರಳುವುದಾಗಿ ತಿಳಿಸಿದ್ದರು ಎಂದು ಹೇಳಲಾಗಿದೆ. ಈ ಮೂವರು ಸಲುಗೆಯಿಂದ ಇರುವುದರಿಂದ ಸ್ಥಳೀಯರು ಸಂಶಯಗೊಂಡಿದ್ದಾರೆ. ತಕ್ಷಣ ವಿಟ್ಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ವಿಟ್ಲ ಠಾಣಾ ಪೊಲೀಸರು

ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಪೊಲೀಸ್ ವಶ Read More »

ಕಾರಿನ ಗಾಜು ಪುಡಿ ಮಾಡಿ ಕಳ್ಳತನ: ಬಂಧನ

ಸುಬ್ರಹ್ಮಣ್ಯ: ಕಾರಿನ ಗಾಜು ಒಡೆದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ.ಪ್ರಭಾಕರ ಹೊನ್ನವಳ್ಳಿ ಬಂಧಿತ ಆರೋಪಿ. ಕಳ್ಳತನ ಬೆಳಕಿಗೆ ಬರುತ್ತಿದ್ದಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಕಾರ್ತಿಕ್ ಹಾಗೂ ಮುರಳೀಧರ ನಾಯಕ್, ಕರುಣಾಕರ, ಮಹೇಶ್, ಕುಮಾರ್, ಆನಂದ್, ವಿಠ್ಠಲ್ ಬಸವರಾಜ್, ರೋಹಿತ್, ಕೃಷ್ಣ ಸೇರಿದಂತೆ ಎರಡು ತಂಡವನ್ನು ರಚಿಸಿ ಪತ್ತೆಕಾರ್ಯದಲ್ಲಿ ತೊಡಗಿದ್ದರು. ಸುಬ್ರಹ್ಮಣ್ಯ ರೈಲ್ವೇ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದ ಭಕ್ತಾಧಿಯೋರ್ವರ ಕಾರಿನ ಗಾಜು

ಕಾರಿನ ಗಾಜು ಪುಡಿ ಮಾಡಿ ಕಳ್ಳತನ: ಬಂಧನ Read More »

ಅನಿರೀಕ್ಷಿತವಾಗಿ ಪತ್ತೆಯಾಯ್ತು ಕಳವಾಗಿದ್ದ ಬೈಕ್…!!

ಮಂಗಳೂರು: ಸುಮಾರು ಒಂದು ವರ್ಷ ಒಂಬತ್ತು ತಿಂಗಳ ಹಿಂದೆ ಕಳವಾಗಿದ್ದ ಬೈಕೊಂದು ಮತ್ತೆ ಅದರ ಮಾಲಕನಿಗೇ ಕಾಣಸಿಗುವ ಮೂಲಕ ಅವರ ಮುಖದಲ್ಲಿ ಹರ್ಷಕ್ಕೆ ಕಾರಣವಾಗಿದೆ. ಮಂಗಳೂರಿನ ಹಸುರು ದಳ ಎನ್‌ಜಿಒ ಸಂಸ್ಥೆಯ ಸದಸ್ಯರಾಗಿರುವ ನಾಗರಾಜ್‌ ಬಜಾಲ್‌ ಅವರೇ ಪತ್ತೆಯಾದ ಬೈಕ್‌ನ ಮಾಲಕ. 2022ರ ಮಾರ್ಚ್‌ನಲ್ಲಿ ಹಂಪನಕಟ್ಟೆಯ ರೂಪಾ ಹೊಟೇಲ್‌ ಬಳಿ ಪಾರ್ಕ್‌ ಮಾಡಿದ್ದ ಅವರ ಬಜಾಜ್‌ ಅವೆಂಜರ್‌ ಬೈಕ್‌ ಕಳುವಾಗಿತ್ತು. ಈ ಬಗ್ಗೆ ಬಂದರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸಿಸಿ ಕೆಮರಾ ಪರಿಶೀಲಿಸಿದಾಗ ಯುವಕನೊಬ್ಬ ಬೈಕ್‌ ಕಳವು

ಅನಿರೀಕ್ಷಿತವಾಗಿ ಪತ್ತೆಯಾಯ್ತು ಕಳವಾಗಿದ್ದ ಬೈಕ್…!! Read More »

error: Content is protected !!
Scroll to Top