ಅಪರಾಧ

ಮೇರ್ಲ ನಿವಾಸಿ ಪ್ರಕಾಶ್ ಶೆಟ್ಟಿ ಆತ್ಮಹತ್ಯೆ

ಪುತ್ತೂರು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಪ್ಯದಲ್ಲಿ ನಡೆದಿದೆ. ಸಂಪ್ಯ ಮೇರ್ಲ ನಿವಾಸಿ ಪ್ರಕಾಶ್ ಶೆಟ್ಟಿ (46) ಮೃತರು. ಪ್ರಕಾಶ್ ಅವರು ಕೂಲಿ ಕೆಲಸ ಮಾಡಿಕೊಂಡಿದ್ದು, ಮನೆಯವರು ಬೇರೆ ಕಡೆ ತೆರಳಿದ್ದ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಆತ್ಮಹತ್ಯೆ ಮಾಡಿಕೊಂಡು ಎರಡು, ಮೂರು ದಿನ ಕಳೆದಿದೆ ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ, ಮಗ ಹಾಗೂ ಮನೆಯವರನ್ನು ಅಗಲಿದ್ದಾರೆ. ಸಂಪ್ಯ ಠಾಣಾ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೇರ್ಲ ನಿವಾಸಿ ಪ್ರಕಾಶ್ ಶೆಟ್ಟಿ ಆತ್ಮಹತ್ಯೆ Read More »

ಗೂಡಂಗಡಿ ಧ್ವಂಸ: ಪ್ರಕರಣ ದಾಖಲು

ರಸ್ತೆ ಬದಿಯಲ್ಲಿದ್ದ ಗೂಡಂಗಡಿಯನ್ನು ಕಿಡಿಗೇಡಿ ಗಳು ರಾತ್ರಿ ವೇಳೆ ಧ್ವಂಸಗೊಳಿಸಿದ ಘಟನೆ ಸಂಭವಿಸಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಡ್ಲೆ ಗ್ರಾಮದ ಬೂಡುಜಾಲು ಎಂಬಲ್ಲಿ ಘಟನೆ ನಡೆದಿದೆ. ಕೊಕ್ಕಡ ಗ್ರಾಮದ ಮಲ್ಲಿಗೆ ಮಜಲು ನಿವಾಸಿ ಅಬ್ದುಲ್‌ ಅಜೀಜ್‌ ಅವರು ಕಳೆದ ಮೂರು ವರ್ಷಗಳಿಂದ ರಾಜ್ಯ ಹೆದ್ದಾರಿಯ ಬದಿಯಲ್ಲಿ ಗೂಡಂಗಡಿ ಇರಿಸಿ ವ್ಯಾಪಾರ ನಡೆಸುತ್ತಿದ್ದರು. ಶುಕ್ರವಾರ ರಾತ್ರಿಯ ವೇಳೆ ಎಂದಿನಂತೆ ಅಂಗಡಿಯನ್ನು ಮುಚ್ಚಿ ಹೋಗಿದ್ದ ಅಬ್ದುಲ್‌ ಅಜೀಜ್‌ ಶನಿವಾರ ಬೆಳಗ್ಗೆ ಬಂದು ನೋಡಿದಾಗ ಅಂಗಡಿಯನ್ನು

ಗೂಡಂಗಡಿ ಧ್ವಂಸ: ಪ್ರಕರಣ ದಾಖಲು Read More »

ಹತ್ಯೆಯ ಬಳಿಕ ಮಗು ಮೆಡಿಕಲ್ ವೇಸ್ಟ್‌ಗೆ!! | ಭ್ರೂಣ ಹತ್ಯೆ ಕುರಿತು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನರ್ಸ್!

ಬೆಂಗಳೂರು: ಭ್ರೂಣ ಹತ್ಯೆ ಕುರಿತ ಸ್ಫೋಟಕ ಮಾಹಿತಿಗಳನ್ನು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ ಪೊಲೀಸರ ಮುಂದೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದು, ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡಿದ್ದೇನೆ ಹಾಗೂ 6 ತಿಂಗಳ ಮಗುವನ್ನೂ ಹೊರತೆಗೆದಿದ್ದೇನೆಂದು ತಪ್ಪೊಪ್ಪಿಕೊಂಡಿದ್ದಾಳೆ. ಮೈಸೂರು ಭ್ರೂಣ ಹತ್ಯೆ ಪ್ರಕರಣದಲ್ಲಿ ಪೊಲೀಸರು ನರ್ಸ್ ಮಂಜುಳಾರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಬೆಚ್ಚಿಬೀಳಿಸುವ ಮಾಹಿತಿಯನ್ನು ಆಕೆ ಬಹಿರಂಗಪಡಿಸಿದ್ದಾಳೆ. ತಿಂಗಳಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ. ಆ ಮಕ್ಕಳಿಗೆ ಜೀವ ಇರುತ್ತಿತ್ತು. 6

ಹತ್ಯೆಯ ಬಳಿಕ ಮಗು ಮೆಡಿಕಲ್ ವೇಸ್ಟ್‌ಗೆ!! | ಭ್ರೂಣ ಹತ್ಯೆ ಕುರಿತು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನರ್ಸ್! Read More »

ಸ್ಪೈಡರ್​ಮ್ಯಾನ್​ನಂತೆ ಎಸ್ಕೇಪ್ ಆದ ಚಿನ್ನ ಕಳ್ಳ​: ಖದೀಮನ ಚಾಕಚಕ್ಯತೆ ಕಂಡು ದಂಗಾದ ಪೊಲೀಸರು!!

ಆಭರಣದ ಅಂಗಡಿಯೊಂದಕ್ಕೆ ನುಗ್ಗಿ ಬರೋಬ್ಬರಿ 3 ಕೆಜಿ ತೂಕದ ಚಿನ್ನಾಭರಣಗಳನ್ನು ಕದ್ದು ಪರಾರಿ ಆಗಿದ್ದ ಖದೀಮನನ್ನು ಹಿಡಿಯಲು ಹೋದ ಪೊಲೀಸರು,​ ಆತನ ಸ್ಪೈಡರ್​ಮ್ಯಾನ್ ಸಾಹಸ ಕಂಡು ಒಂದು ಕ್ಷಣ ದಂಗಾದ ಪ್ರಸಂಗ ಜರುಗಿದೆ. ಕೊಯಮತ್ತೂರಿನ ಆಭರಣದಂಗಡಿಗೆ ನಸುಕಿನ ಜಾವದಲ್ಲಿ ಗೋಡೆಯನ್ನು ಮೊದಲು ಒಡೆಯುವ ಖದೀಮ ಕಿರಿದಾದ ಕಿಂಡಿಯನ್ನು ಮಾಡಿ, ಅದರೊಳಗೆ ನುಸುಳಿ, ಮೂರನೇ ಮಹಡಿಗೆ ಸರಸರನೇ ಏರಿ, ​ ಆಭರಣದ ಅಂಗಡಿಗೆ ನುಗ್ಗುತ್ತಾನೆ. ಇದಾದ ಬಳಿಕ ತನ್ನ ಬಟ್ಟೆಯನ್ನು ಬದಲಾಯಿಸಿಕೊಂಡು, ಎಚ್ಚರಿಕೆಯಿಂದ ಸುಮಾರು 150 ಸವರನ್​ ಅಂದರೆ,

ಸ್ಪೈಡರ್​ಮ್ಯಾನ್​ನಂತೆ ಎಸ್ಕೇಪ್ ಆದ ಚಿನ್ನ ಕಳ್ಳ​: ಖದೀಮನ ಚಾಕಚಕ್ಯತೆ ಕಂಡು ದಂಗಾದ ಪೊಲೀಸರು!! Read More »

ಶಾಲೆಗಳಿಗೆ ಬಾಂಬ್ ಬೆದರಿಕೆ: ಇ ಮೇಲ್ ಸಂದೇಶ ರವಾನೆ!! | ಪತ್ತೆಗೆ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಗರದ ಕೆಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದವರ ಮೂಲ ಪತ್ತೆಹಚ್ಚುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ. ಇಂತಹ ಘಟನೆಗಳು ಮರುಕಳಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಗರದ ಹಲವು ಖಾಸಗಿ ಶಾಲೆಗಳಿಗೆ ಈ ರೀತಿ ಬಾಂಬ್ ಬೆದರಿಕೆ ಕರೆಗಳು ಪುನರಾವರ್ತನೆಯಾಗುತ್ತಿರುತ್ತವೆ. ಇಂತಹ ಘಟನೆಗಳು ನಡೆದರೆ ಪೋಷಕರು, ಮಕ್ಕಳು ಮತ್ತು ಶಾಲೆಯ ಶಿಕ್ಷಕರು, ಆಡಳಿತ ಮಂಡಳಿ ಆತಂಕಗೊಳ್ಳುತ್ತಾರೆ. ಇದು ಉತ್ತಮ ಬೆಳವಣಿಗೆಯಲ್ಲ. ಇಂತಹ ಹುಸಿ ಬಾಂಬ್ ಬೆದರಿಕೆಯನ್ನು ಯಾರು

ಶಾಲೆಗಳಿಗೆ ಬಾಂಬ್ ಬೆದರಿಕೆ: ಇ ಮೇಲ್ ಸಂದೇಶ ರವಾನೆ!! | ಪತ್ತೆಗೆ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ Read More »

ಹಾಸನ ಶಿಕ್ಷಕಿ ಕಿಡ್ನಾಪ್: ಆರೋಪಿ ನೆಲ್ಯಾಡಿಯಲ್ಲಿ ಪೊಲೀಸ್ ವಶ

ನೆಲ್ಯಾಡಿ: ಹಾಸನದಲ್ಲಿ ನಡೆದಿದ್ದ ಶಾಲಾ ಶಿಕ್ಷಕಿ ಕಿಡ್ನ್ಯಾಪ್ ಪ್ರಕರಣವನ್ನು ಪೊಲೀಸರು ಭೇಧಿಸಿದ್ದಾರೆ. ಕಡಬ ತಾಲೂಕಿನ ನೆಲ್ಯಾಡಿ ಬಳಿ ಅಪಹರಣಕಾರರನ್ನು ಪತ್ತೆ ಹಚ್ಚಿರುವ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿವಾಹ ಮಾಡಿ ಕೊಡಲು ಒಪ್ಪದ ಕಾರಣಕ್ಕೆ ಹಾಸನ ನಗರದ ಹೊರ ವಲಯದ ಬಿಟ್ಟಗೌಡನಹಳ್ಳಿ ಬಳಿ ಖಾಸಗಿ ಶಾಲೆ ಶಿಕ್ಷಕಿಯನ್ನು ರಾಮು ಎಂಬಾತ ಅಪಹರಣ ಮಾಡಿದ್ದನು. ನೆಲ್ಯಾಡಿ ಬಳಿ ಕಿಡ್ನಾಪ್ ಮಾಡಿದ ಆರೋಪಿಗಳನ್ನು ಪತ್ತೆ ಹಚ್ಚಿದ ಹಾಸನ ಪೊಲೀಸರು ವಶಕ್ಕೆ ಪಡೆದು, ಅಪಹರಣಕ್ಕೊಳಗಾದ ಶಾಲಾ ಶಿಕ್ಷಕಿಯನ್ನು ಹಾಸನಕ್ಕೆ ಕರೆದೊಯ್ದಿದ್ದಾರೆ.ಮದುವೆಗೆ ಒಪ್ಪದ ಅತ್ತೆ

ಹಾಸನ ಶಿಕ್ಷಕಿ ಕಿಡ್ನಾಪ್: ಆರೋಪಿ ನೆಲ್ಯಾಡಿಯಲ್ಲಿ ಪೊಲೀಸ್ ವಶ Read More »

ಪಾರ್ಕಿಂಗ್ ಮಾಡಿದ್ದ ಬೈಕ್‍ ಕಳವು

ಬೆಳ್ತಂಗಡಿ: ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ನಡೆದಿದೆ. ಚಿಕ್ಕಮಗಳೂರು ಕುರುಬರ ಬೂದಿಹಾಳ ಗ್ರಾಮ ನಿವಾಸಿ ಕೆ ಟಿ ಕೃಷ್ಣಶೆಟ್ಟಿ (54) ಎಂಬವರ ಬೈಕ್ ಕಳವಾಗಿದ್ದು, ತನ್ನ ಬೈಕ್‌ನ್ನು ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ನಿಲ್ಲಿಸಿದ್ದರು. ಸ್ನಾನ ಮಾಡಲು ನದಿಗೆ ತೆರಳಿದ್ದು, ಸ್ನಾನ ಮುಗಿಸಿ ಪಾರ್ಕಿಂಗ್ ಸ್ಥಳಕ್ಕೆ ಬಂದಾಗ ಮೋಟಾರ್ ಸೈಕಲ್ ಅನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರು ನೀಡಿದ್ದಾರೆ.

ಪಾರ್ಕಿಂಗ್ ಮಾಡಿದ್ದ ಬೈಕ್‍ ಕಳವು Read More »

ಮದ್ಯ ಕುಡಿಸಿ ಮಹಿಳೆಯ ಅತ್ಯಾಚಾರಗೈದಾತನ ಬಂಧನ

ಪುತ್ತೂರು: ಮಹಿಳೆಗೆ ಮದ್ಯ ಕುಡಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಘಟನೆಗೆ ಸಂಬಂಧಿಸಿ ಆರೋಪಿಯೊಬ್ಬನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಆರ್ಯಾಪು ಗ್ರಾಮದ ಸಂಶುದ್ದೀನ್ (23) ಬಂಧಿತ ವ್ಯಕ್ತಿ ಎನ್ನಲಾಗಿದೆ. ನ.24 ರಂದು ರಾತ್ರಿ ಸಮಯ ಹಾಸನ ತಾಲೂಕು ಚೆನ್ನರಾಯಪಟ್ಟಣದ ನಿವಾಸಿ ಸಂತ್ರಸ್ಥ ಮಹಿಳೆ ಪುತ್ತೂರಿನ ಬಸ್‌ ನಿಲ್ದಾಣದ ಬಳಿ ನಿಂತಿದ್ದ ವೇಳೆ ಅಲ್ಲಿಗೆ ಬಂದ ಆರೋಪಿ ಮಹಿಳೆಯೊಂದಿಗೆ ಮಾತನಾಡಿ ಆಕೆಯ ಜೊತೆಗೆ ಸಲುಗೆ ಬಳಸಿಕೊಂಡು ನಂತರ ಮದ್ಯ ಕುಡಿಸಿದ್ದಾನೆ. ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ

ಮದ್ಯ ಕುಡಿಸಿ ಮಹಿಳೆಯ ಅತ್ಯಾಚಾರಗೈದಾತನ ಬಂಧನ Read More »

ಅಂತರ್ ಜಿಲ್ಲಾ ಕಳ್ಳನ ಬಂಧನ !

ಉಡುಪಿ: ಹಲವು ತಾಲೂಕುಗಳಲ್ಲಿ ಕಳ್ಳತನ ಪ್ರಕರಣ ಹೊಂದಿದ್ದ ಅಂತ‌ರ್ ಜಿಲ್ಲಾ ಕಳ್ಳನೋರ್ವನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಮಲ್ಲಾರು ಗ್ರಾಮದ ತೌಸೀಫ್ ಅಹಮದ್ (34) ಬಂಧಿತ ಆರೋಪಿ. ಬಡಗುಬೆಟ್ಟು ಗ್ರಾಮದ ಶ್ರೀಮತಿ ಎಂಬವರ ಮನೆಗೆ ಕಳ್ಳರು ನುಗ್ಗಿ 188 ಗ್ರಾಂ ತೂಕದ ಚಿನ್ನಾಭರಣ ಹಾಗೂ 15,500ರೂ. ನಗದು ಕಳವು ಮಾಡಿದ್ದರು. ಮನೆಯವರು ದೂರು ನೀಡಿದ ಹಿನ್ನಲೆಯಲ್ಲಿ ಉಡುಪಿ ಠಾಣಾ ಪೊಲೀಸ್ ನಿರೀಕ್ಷಕ ಮಂಜಪ್ಪಡಿ.ಆರ್, ಎಸ್‍ ಐ ಗಳಾದ ಈರಣ್ಣ ಶಿರಗುಂಪಿ, ಭರತೇಶ್ ಕಂಕಣವಾಡಿ, ಪುನೀತ್ ಕುಮಾ‌ರ್ ಮತ್ತು ಸಿಬ್ಬಂದಿಗಳ

ಅಂತರ್ ಜಿಲ್ಲಾ ಕಳ್ಳನ ಬಂಧನ ! Read More »

ಬಂಟ್ವಾಳದಿಂದ ಕಾಣೆಯಾದ ಜೋಡಿ ಕೇರಳದಲ್ಲಿ ಪತ್ತೆ

ಬಂಟ್ವಾಳ: ಬಂಟ್ವಾಳದಲ್ಲಿ ಅಕ್ಕ-ಪಕ್ಕದ ಮನೆಯಿಂದ ಕಾಣೆಯಾದ ಯುವಕ- ಯುವತಿ ಕೇರಳದ ಕಾಂಞಗಾಡ್ ನಲ್ಲಿ ಪೋಲೀಸರು ಪತ್ತೆಹಚ್ಚಿದ್ದು, ಇಬ್ಬರನ್ನು ವಾಪಾಸು ಕರೆದುಕೊಂಡು ಬಂದಿದ್ದಾರೆ. ನ.24 ರಂದು ಮುಂಜಾನೆ ಮನೆಯವರಿಗೆ ಗೊತ್ತಿಲ್ಲದಂತೆ ಪರಾರಿಯಾಗಿದ್ದ ಈ ಯುವಜೋಡಿ ಕೇರಳ ರಾಜ್ಯದ ಕಾಂಞಗಾಡ್ ಎಂಬಲ್ಲಿ ಪೋಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್‌ ಹಮೀದ್ ಅವರ ಮಗಳು ಆಯಿಸತ್ ರಸ್ಮಾ (18) ಹಾಗೂ ಹೈದ‌ರ್ ಎಂಬವರ ಮಗ ಮಹಮ್ಮದ್ ಸಿನಾನ್ (23) ಕಾಣೆಯಾಗಿರುವ ಜೋಡಿಯಾಗಿದ್ದರು. ಆಸ್ಮಾ ಅವರು ದೇರಳಕಟ್ಟೆ ನಡುಪದವು

ಬಂಟ್ವಾಳದಿಂದ ಕಾಣೆಯಾದ ಜೋಡಿ ಕೇರಳದಲ್ಲಿ ಪತ್ತೆ Read More »

error: Content is protected !!
Scroll to Top