ಪುತ್ತೂರು ದೇವಳ ಮುಂಭಾಗ ಶವ ಪತ್ತೆ!!
ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ವ್ಯಕ್ತಿಯೋರ್ವರ ಶವ ಪತ್ತೆಯಾಗಿದೆ. ಮೃತರನ್ನು ಬಸವರಾಜ ಕಲ್ಲಪ್ಪ ಜಂಲಾಳಿ ಎಂದು ಗುರುತಿಸಿದ್ದು, ಇವರಿಗೆ ಸುಮಾರು 60 ವರ್ಷ ಆಗಿರಬಹುದೆಂದು ಅಂದಾಜಿಸಲಾಗಿದೆ. ಗದಗ ಮೂಲದ ಬಸವರಾಜ ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ರೈಲ್ವೇ ನಿಲ್ದಾಣಗಳಲ್ಲಿ ಭಿಕ್ಷೆ ಬೇಡುತ್ತಿರುವುದನ್ನು ಕಂಡವರಿದ್ದಾರೆ. ಸಾವಿಗೆ ಕಾರಣ ತಿಳಿದುಬಂದಿಲ್ಲ.
ಪುತ್ತೂರು ದೇವಳ ಮುಂಭಾಗ ಶವ ಪತ್ತೆ!! Read More »










