ಅಪರಾಧ

ಮದ್ಯದ ಅಮಲಿನಲ್ಲಿ ವಾಹನ ಚಾಲನೆ | ಸಾರ್ವಜನಿಕರ ಆಕ್ರೋಶ

ಸುಳ್ಯ: ಮದ್ಯಪಾನ ಸೇವಿಸಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಅಡ್ಡಾದಿಡ್ಡಿಯಾಗಿ ಚಲಾಯಿಸಿದ ಘಟನೆ ಸುಳ್ಯದ ಆರಂಬೂರು ಬಳಿ ನಡೆದಿದೆ. ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ವಿಭಾಗದ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಮದ್ಯಪಾನ ಸೇವಿಸಿ ರಾಜ್ಯ ಹೆದ್ದಾರಿಯಲ್ಲಿ ಅಜಾಗರೂಕತೆಯಿಂದ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ವಾಹನ ಚಲಾಯಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯ ಪರಿಚಯ ಕೇಳಿದಾಗ ಕುಡಿದ […]

ಮದ್ಯದ ಅಮಲಿನಲ್ಲಿ ವಾಹನ ಚಾಲನೆ | ಸಾರ್ವಜನಿಕರ ಆಕ್ರೋಶ Read More »

ಅಪಹರಣವಾಗಿದ್ದ ಬಾಲಕಿ 20 ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ!

ತಿರುವನಂತಪುರಂ: ಸೋಮವಾರ ಸಂಜೆ ನಾಪತ್ತೆಯಾಗಿದ್ದ ಕೇರಳದ ಆರು ವರ್ಷದ ಬಾಲಕಿ ಕೊಲ್ಲಂನ ಆಶ್ರಮ ಮೈದಾನದಲ್ಲಿ ಪತ್ತೆಯಾಗಿದ್ದಾಳೆ. 20 ಗಂಟೆಗಳ ಹುಡುಕಾಟದ ಬಳಿಕ ಕೇರಳ ಪೊಲೀಸರು ಬಾಲಕಿಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಸೋಮವಾರ ಸಂಜೆ 6 ವರ್ಷದ ಬಾಲಕಿ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಸಂಜೆ ನಾಲ್ಕು ಗಂಟೆಯ ಹೊತ್ತಿಗೆ ಟ್ಯೂಷನ್‌ಗೆ ತೆರಳುತ್ತಿದ್ದಾಗ ಅಪಹರಣಕಾರರು ಬಾಲಕಿಯನ್ನು ಅಪಹರಣ ಮಾಡಿದ್ದರು. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತ ಪೊಲೀಸರು ರಾಜ್ಯಾದ್ಯಂತ ನಾಕಾ ಬಂದಿ ನಡೆಸಿ ಬಾಲಕಿಯ ಪತ್ತೆ ಕಾರ್ಯಾಚರಣೆಗೆ ಮುಂದಾಗಿದ್ದರು. ಅಲ್ಲದೆ

ಅಪಹರಣವಾಗಿದ್ದ ಬಾಲಕಿ 20 ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ! Read More »

3 ತಿಂಗಳಲ್ಲಿ 242 ಭ್ರೂಣಗಳ ಹತ್ಯೆ!| ಮತ್ತಷ್ಟು ಆತಂಕಕಾರಿ ಮಾಹಿತಿ ಬಿಚ್ಚಿಟ್ಟ ಪೊಲೀಸ್ ಆಯುಕ್ತ | 8ರಿಂದ 10 ಲಕ್ಷ ರೂ.ಗೆ ಮಗು ಮಾರಾಟ ಜಾಲ ಬೆಳಕಿಗೆ!!

ಬೆಂಗಳೂರು: ಮೈಸೂರು ಹಾಗೂ ಮಂಡ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಭ್ರೂಣ ಹತ್ಯೆ ಜಾಲದ ಬಗೆಗಿನ ಸುದ್ದಿ ಇಡೀ ರಾಜ್ಯವನ್ನೇ ಆತಂಕಕ್ಕೊಳಗಾಗುವಂತೆ ಮಾಡಿದೆ. ಜೀವ ಉಳಿಸಬೇಕಾದ ವೈದ್ಯರೇ ಇಂತಹ ಅಮಾನವೀಯ ಕೆಲಸಕ್ಕೆ ಕೈಹಾಕಿದ್ದು ಮನುಕುಲ ತಲೆ ತಗ್ಗಿಸುವಂತಾಗಿತ್ತು. ಇದೀಗ ಪ್ರಕರಣ ಸಂಬಂಧ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಮತ್ತಷ್ಟು ಆತಂಕಕಾರಿ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅ.15ರಂದು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಆರೋಪಿಗಳು ಕಾರು

3 ತಿಂಗಳಲ್ಲಿ 242 ಭ್ರೂಣಗಳ ಹತ್ಯೆ!| ಮತ್ತಷ್ಟು ಆತಂಕಕಾರಿ ಮಾಹಿತಿ ಬಿಚ್ಚಿಟ್ಟ ಪೊಲೀಸ್ ಆಯುಕ್ತ | 8ರಿಂದ 10 ಲಕ್ಷ ರೂ.ಗೆ ಮಗು ಮಾರಾಟ ಜಾಲ ಬೆಳಕಿಗೆ!! Read More »

ಗುಂಡು ಹಾರಿಸಿದ ತಂಡವನ್ನು ಬೆದರಿಸಿ ಓಡಿಸಿದ ಮಹಿಳೆ; ವೈರಲ್ ವೀಡಿಯೋ ಇಲ್ಲಿದೆ |  ಮಹಿಳೆಯ ಧೈರ್ಯಕ್ಕೆ ವ್ಯಾಪಕ ಶ್ಲಾಘನೆ

ನಡುರಸ್ತೆಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರಿಗೆ ಬೈಕಿನಲ್ಲಿ ಬಂದ ನಾಲ್ವರ ತಂಡ ಗುಂಡು ಹಾರಿಸಿದ್ದು, ಇದೇ ಸಂದರ್ಭ ಪಕ್ಕದ ಮನೆಯ ಮಹಿಳೆಯೋರ್ವರು ಕೋಲು ಹಿಡಿದು ಓಡಿಸಿದ ಘಟನೆ ನಡೆದಿದೆ. ಹರ್ಯಾಣದ ಭಿವಾನಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಇದರ ವೀಡಿಯೋ ಇದೀಗ ವೈರಲ್ ಆಗಿದೆ. ನವಂಬರ್ 27ರಂದು ಘಟನೆ ನಡೆದಿದೆ. ಘಟನೆಯ ವೀಡಿಯೋ ಇದೀಗ ಸಕ್ಕತ್ ವೈರಲ್ ಆಗಿದೆ. ಮಹಿಳೆಯ ಧೈರ್ಯಕ್ಕೆ ಶ್ಲಾಘನೆಯೂ ವ್ಯಕ್ತವಾಗಿದೆ. 58 ಸೆಕೆಂಡಿನ ಈ ವೀಡಿಯೋದಲ್ಲಿ, ವ್ಯಕ್ತಿಯೋರ್ವರು ಮನೆ ಹೊರಗಡೆ ರಸ್ತೆ ಬದಿಯಲ್ಲಿ ನಿಂತಿರುವ ದೃಶ್ಯ ಕಾಣುತ್ತದೆ.

ಗುಂಡು ಹಾರಿಸಿದ ತಂಡವನ್ನು ಬೆದರಿಸಿ ಓಡಿಸಿದ ಮಹಿಳೆ; ವೈರಲ್ ವೀಡಿಯೋ ಇಲ್ಲಿದೆ |  ಮಹಿಳೆಯ ಧೈರ್ಯಕ್ಕೆ ವ್ಯಾಪಕ ಶ್ಲಾಘನೆ Read More »

6 ವರ್ಷದ ಬಾಲಕಿ ಅಪಹರಣ; ಶೀಘ್ರ ಪತ್ತೆಗೆ ಕೇರಳ ಸಿಎಂ ಆದೇಶ

ತಿರುವನಂತಪುರಂ: ದಕ್ಷಿಣ ಕೇರಳದ ಪೂಯಪ್ಪಲ್ಲಿಯಿಂದ ಸೋಮವಾರ 6 ವರ್ಷದ ಬಾಲಕಿಯ ಅಪಹರಣದ ಬಗ್ಗೆ ಹೆಚ್ಚುತ್ತಿರುವ ಆತಂಕದ ನಡುವೆ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತನಿಖೆಯನ್ನು ತೀವ್ರಗೊಳಿಸುವಂತೆ ರಾಜ್ಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಅಪಹರಣದ ಕುರಿತು ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ತ್ವರಿತಗತಿಯಲ್ಲಿ ತನಿಖೆ ನಡೆಸುವಂತೆ ನಿರ್ದೇಶನ ನೀಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಪೊಲೀಸರು ಅಪಹರಣವಾದ ಬಾಲಕಿಯ ಪತ್ತೆಗೆ ಪೊಲೀಸರು ತಂಡ ರಚನೆ

6 ವರ್ಷದ ಬಾಲಕಿ ಅಪಹರಣ; ಶೀಘ್ರ ಪತ್ತೆಗೆ ಕೇರಳ ಸಿಎಂ ಆದೇಶ Read More »

ಬೈಕ್‍ನಲ್ಲಿ ತೆರಳುತ್ತಿದ್ದ ಭಿನ್ನ ಕೋಮಿನ ಜೋಡಿ | ಹಲ್ಲೆಗೆ ಯತ್ನಿಸಿದ ಇಬ್ಬರ ಬಂಧನ

ಭಿನ್ನಕೋಮಿನ ಯುವಕ ಹಾಗೂ ಯುವತಿ ಬೈಕ್’ನಲ್ಲಿ ಹೋಗುತ್ತಿದ್ದ ವೇಳೆ, ಹಿಂಬಾಲಿಸಿಕೊಂಡು ಹೋದ ತಂಡ ಹಲ್ಲೆಗೆ ಮುಂದಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕ್ಕಲ್ ಬಂಧಿತರು. ಸೋಮವಾರ ರಾತ್ರಿ 8 ಗಂಟೆಯ ವೇಳೆಗೆ ಮಂಗಳೂರಿನ ಮುಳಿಹಿತ್ಲು ಎಂಬಲ್ಲಿನ ಸ್ಪೋರ್ಟ್ಸ್ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಭಿನ್ನಕೋಮಿನ ಜೋಡಿ ಬೈಕ್’ನಲ್ಲಿ ಜೊತೆಯಾಗಿ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಮೊಬೈಲ್ ರಿಪೇರ್ ಮಾಡಿಸಿಕೊಂಡು ನಗರದ ಮಿಲಾಗ್ರಿಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜದ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು.

ಬೈಕ್‍ನಲ್ಲಿ ತೆರಳುತ್ತಿದ್ದ ಭಿನ್ನ ಕೋಮಿನ ಜೋಡಿ | ಹಲ್ಲೆಗೆ ಯತ್ನಿಸಿದ ಇಬ್ಬರ ಬಂಧನ Read More »

ವಿದ್ಯಾರ್ಥಿಗೆ ಥಳಿಸಿ, ಮೂತ್ರ ವಿಸರ್ಜನೆ: ನಾಲ್ವರ ಬಂಧನ

ವ್ಯಕ್ತಿಯೊಬ್ಬನಿಗೆ ಥಳಿಸಿ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಸಂಬಂಧ ಒಟ್ಟು ನಾಲ್ವರನ್ನು ಬಂಧಿಸಿರುವ ಘಟನೆ ಮೀರತ್’ನಲ್ಲಿ ನಡೆದಿದೆ. ವಿಡಿಯೋ ಶೇರ್ ಮಾಡಿದ್ದಕ್ಕಾಗಿ ನಿನ್ನೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ನವೆಂಬರ್ 13ರಂದು ಘಟನೆ ನಡೆದಿದ್ದು ಯುವಕರ ಗುಂಪೊಂದು ವಿದ್ಯಾರ್ಥಿಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮನಬಂದಂತೆ ಥಳಿಸಿದ್ದಾರೆ ಆ ಬಳಿಕ ವಿದ್ಯಾರ್ಥಿಯ ಮುಖದ ಮೇಲೆ ಓರ್ವ ಮೂತ್ರ ವಿಸರ್ಜನೆ ಮಾಡಿ ಅಮಾನುಷವಾಗಿ ವರ್ತಿಸಿದ್ದಾನೆ. ಇಷ್ಟೆಲ್ಲಾ ಘಟನೆ ನಡೆದಿರುವುದನ್ನು ಗುಂಪಿನ ಓರ್ವ ಸದಸ್ಯ ಚಿತ್ರೀಕರಿಸಿದ್ದಾನೆ. ಹಲ್ಲೆ ಮಾಡಬೇಡಿ ಎಂದು

ವಿದ್ಯಾರ್ಥಿಗೆ ಥಳಿಸಿ, ಮೂತ್ರ ವಿಸರ್ಜನೆ: ನಾಲ್ವರ ಬಂಧನ Read More »

ಯುವಕ-ಯುವತಿ ನಾಪತ್ತೆ ! ಹುಡುಕಿಕೊಡಲು ಹೆತ್ತವರಿಂದ ಮನವಿ

ಬಂಟ್ವಾಳ : ಒಂದೇ ವಠಾರದ ಯುವಕ ಮತ್ತು ಯುವತಿ ನಾಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಉದ್ದೊಟ್ಟು ಎಂಬಲ್ಲಿ ನಡೆದಿದೆ. ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರಿ ಆಯಿಸತ್ ರಸ್ನಾ (18) ಹಾಗೂ ಹೈದರ್ ಎಂಬವರ ಪುತ್ರ ಮಹಮ್ಮದ್ ಸಿನಾನ್ (23) ಕಾಣೆಯಾದವರು. ಇಬ್ಬರೂ ಅಕ್ಕಪಕ್ಕದ ಮನೆಯವರು. ದೇರಳಕಟ್ಟೆಯ ನಡುಪದವು ಪಿ.ಎ.ಕಾಲೇಜಿನಲ್ಲಿ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಆಯಿಸತ್ ರಸ್ಮಾ ಒಂದು ವಾರಗಳ ಕಾಲ ರಜೆಯಿದ್ದ ಹಿನ್ನಲೆಯಲ್ಲಿ ಮನೆಯಲ್ಲಿದ್ದಳು.

ಯುವಕ-ಯುವತಿ ನಾಪತ್ತೆ ! ಹುಡುಕಿಕೊಡಲು ಹೆತ್ತವರಿಂದ ಮನವಿ Read More »

ಅಡಕೆ ಕಳವಿಗೆ ಯತ್ನ | ತಡೆಯಲೆತ್ನಿಸಿದಾಗ ತಲವಾರಿನಿಂದ ಗಾಯಗೊಳಿಸಿದ ಕಳ್ಳರು

ಸವಣೂರು: ವಾಹನದಲ್ಲಿ ಆಗಮಿಸಿದ ಕಳ್ಳರ ಗ್ಯಾಂಗೊಂದು ಅಡಕೆ ಕಳವಿಗೆ ಯತ್ನಿಸಿದಾಗ ಮನೆಯಾತ ನೋಡಿದ್ದು, ಕಳ್ಳರನ್ನು ಹಿಡಿಯಲೆತ್ನಿಸಿದಾಗ ಕಳ್ಳರು ತಲವಾರಿನಿಂದ  ದಾಳಿ ನಡೆಸಿದ ಘಟನೆ ಶನಿವಾರ ಮುಂಜಾನೆ ಸವಣೂರಿನ ಫಾರ್ಮ್ಸ್ ಒಂದರಲ್ಲಿ ನಡೆದಿದೆ. ಕಡಬ ತಾಲೂಕಿನ ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಸರ್ವೆ ಸಮೀಪದ ಪಣೆಮಜಲುನಲ್ಲಿರುವ ರಾಮಚಂದ್ರ ಎಡಪತ್ಯ ಮಾಲಕತ್ವದ ಎಡಪತ್ಯ ಫಾರ್ಮ್ಸ್ ನಲ್ಲಿ ಈ ಘಟನೆ ನಡೆದಿದೆ ಕಳ್ಳರ ತಂಡ ಕಾರು ಹಾಗೂ ಸ್ಕೂಟರ್‍ ನಲ್ಲಿ ಬಂದು ಅಡಿಕೆ ದೋಚುತ್ತಿದ್ದಾಗ ತೋಟದ ಮಾಲೀಕನ ಪುತ್ರನ ಕಣ್ಣಿಗೆ ಸಿಕ್ಕಿಬಿದ್ದಿದ್ದು ಕಳ್ಳತನ

ಅಡಕೆ ಕಳವಿಗೆ ಯತ್ನ | ತಡೆಯಲೆತ್ನಿಸಿದಾಗ ತಲವಾರಿನಿಂದ ಗಾಯಗೊಳಿಸಿದ ಕಳ್ಳರು Read More »

ಚಾಕು ತೋರಿಸಿ ದರೋಡೆಗೆ ಯತ್ನ!!

ವಿಟ್ಲ: ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಚಿನ್ನ ಲಪಟಾಯಿಸಲು ಯತ್ನಿಸಿದ ಘಟನೆ ಕುಳ ಗ್ರಾಮದ ನೀರಪಳಿಕೆಯಲ್ಲಿ ನಡೆದಿದೆ. ನೀರಪಳಿಕೆ ಮಹಮ್ಮದ್ ಕುಂಞ ಎಂಬವರ ಮನೆಯಲ್ಲಿ ಘಟನೆ ನಡೆದಿದ್ದು, ಮನೆಯವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದಾಗ ಮನೆಯಲ್ಲಿ ವೃದ್ಧ ಮಹಿಳೆ ಮಾತ್ರ ಇರುವ ಸಂದರ್ಭ ಮನೆಯ ಮುಖ್ಯ ದ್ವಾರದ ಮೂಲಕ ವ್ಯಕ್ತಿಯೋರ್ವ ಮುಖಕ್ಕೆ ಮಾಸ್ಕ್ ಹಾಕಿ ಒಳ ಪ್ರವೇಶಿಸಿ ಒಳಗಿನಿಂದ ಚಿಲಕ ಹಾಕಿ ಮಹಿಳೆಯ ಹತ್ತಿರ ಚಾಕುವಿನೊಂದಿಗೆ ಬಂದು, ಕಿವಿಯಲ್ಲಿ ಇರುವ ಚಿನ್ನ ಕೊಡುವಂತೆ ಕೇಳಿದ್ದಾನೆ. ಬೆದರಿದ ಮಹಿಳೆ ಹಿಂದಿನ

ಚಾಕು ತೋರಿಸಿ ದರೋಡೆಗೆ ಯತ್ನ!! Read More »

error: Content is protected !!
Scroll to Top