ಅಪರಾಧ

ಯುವತಿ ಜತೆ ಅಸಭ್ಯ ವರ್ತನೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಆಶಾ ತಿಮ್ಮಪ್ಪ | ಆರೋಪಿಗಳ ಬಂಧನಕ್ಕೆ ಆಗ್ರಹ

ಪುತ್ತೂರು: ವಿಟ್ಲದಲ್ಲಿ ಹಿಂದೂ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಶಾ ತಿಮ್ಮಪ್ಪ ಅವರು ಪೊಲೀಸ್ ಠಾಣೆಗೆ ತೆರಳಿ ಆಗ್ರಹಿಸಿದ್ದಾರೆ. ಇದಕ್ಕೆ ಮೊದಲು ಯುವತಿ ಮನೆಗೆ ತೆರಳಿ ಯುವತಿ ಹಾಗೂ ಪೋಷಕರಿಗೆ ಧೈರ್ಯ ತುಂಬಿದ್ದಾರೆ. ಬಡತನದಲ್ಲಿರುವ ಕುಟುಂಬಕ್ಕೆ ತನ್ನ ಕೈಲಾದ ಸಹಾಯ ನೀಡುವುದಾಗಿ ಭರವಸೆ ನೀಡಿರುವ ಅವರು, ಆ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬುವಂತೆ ಸ್ಥಳೀಯರಲ್ಲಿ ಮನವಿ ಮಾಡಿಕೊಂಡರು. ಬಳಿಕ ಪೊಲೀಸ್ ಠಾಣೆಗೆ ತೆರಳಿ ಪೊಲೀಸರ ಜೊತೆ ಮಾತುಕತೆ ನಡೆಸಿದರು. ಆರೋಪಿಗಳನ್ನು ತಕ್ಷಣ ಬಂಧಿಸಿ, […]

ಯುವತಿ ಜತೆ ಅಸಭ್ಯ ವರ್ತನೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಆಶಾ ತಿಮ್ಮಪ್ಪ | ಆರೋಪಿಗಳ ಬಂಧನಕ್ಕೆ ಆಗ್ರಹ Read More »

ಸ್ನಾನಕ್ಕೆ ತೆರಳಿದ ಸಹೋದರಿಯರು ಬಳ್ಪ‌ ಹೊಳೆ ಪಾಲು | ಹಂಸಿತಾ, ಅವಂತಿಕಾ ಮೃತದೇಹ ಪತ್ತೆ

ಸುಳ್ಯ: ಬಳ್ಪ ಸಮೀಪದ ಕೇನ್ಯ ಕಣ್ಕಲ್ ಬಳಿಯ ಹೊಳೆಯಲ್ಲಿ ಮುಳುಗಿ ಸಹೋದರಿಯರಿಬ್ಬರು ನೀರು ಪಾಲಾದ ಘಟನೆ ಸೋಮವಾರ ನಡೆದಿದೆ. ಹಂಸಿತಾ ( 15 ) ಮತ್ತು ಅವಂತಿಕಾ ( 11 ) ಇಬ್ಬರ ಮೃತದೇಹವೂ ಪತ್ತೆಯಾಗಿದೆ. ಸೋಮವಾರ ಸಂಜೆ ದುರ್ಘಟನೆ ಸಂಭವಿಸಿದೆ. ಮೂಲತಃ ಕಣ್ಕಲ್ ನವರಾಗಿದ್ದು, ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರು ಇವರು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಕಾರ್ಯಾಚರಣೆ ಆರಂಭಿಸಿದರು. ರಾತ್ರಿ ವೇಳೆಗೆ ಇಬ್ಬರ ಮೃತದೇಹವೂ ಪತ್ತೆಯಾಗಿದೆ. ಸ್ಥಳೀಯರು

ಸ್ನಾನಕ್ಕೆ ತೆರಳಿದ ಸಹೋದರಿಯರು ಬಳ್ಪ‌ ಹೊಳೆ ಪಾಲು | ಹಂಸಿತಾ, ಅವಂತಿಕಾ ಮೃತದೇಹ ಪತ್ತೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತಿಬ್ಬರು ಆರೋಪಿಗಳ ವಿರುದ್ಧ ಬೆಂಗಳೂರಿನ ವಿಶೇಷ ಎನ್ಐಎ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್

ಪುತ್ತೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ ಎನ್ಐಎ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ ಪ್ರಮುಖ ಆರೋಪಿಗಳಾದ. ತುಫೈಲ್ ಎಂ.ಎಚ್. ಹಾಗೂ ಮೊಹಮ್ಮದ್ ಜಬೀರ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ಒಟ್ಟು 21 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದಂತಾಗಿದೆ. ಪಿಎಫ್ಐಯ ಸಕ್ರೀಯ ಸದಸ್ಯನಾಗಿದ್ದ ತುಫೈಲ್ ಕೊಡಗು ಮೂಲದವನಾಗಿದ್ದು, ಮಾಸ್ಟರ್ ಟ್ರೈನರ್ ಆಗಿ ಗುರುತಿಸಿಕೊಂಡಿದ್ದ. ಮಿತ್ತೂರಿನಲ್ಲಿ ಫ್ರೀಡಂ ಕಮ್ಯುನಿಟಿ ಹಾಲ್ ನಲ್ಲಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತಿಬ್ಬರು ಆರೋಪಿಗಳ ವಿರುದ್ಧ ಬೆಂಗಳೂರಿನ ವಿಶೇಷ ಎನ್ಐಎ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ Read More »

ಪುತ್ತೂರು ಮೂಲದ ಯುವತಿ ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ

ಪುತ್ತೂರು: ಪುತ್ತೂರು ಮೂಲದ ಯುವತಿಯೋರ್ವಳು ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವು ಸ್ನಾನತ್ತಾರು ಚಂದ್ರಶೇಖರ ರೈ ಹಾಗೂ ಸೋಮಾವತಿ ರೈ ದಂಪತಿ ಪುತ್ರಿ ಶ್ರುತಿ ಸಿ. ರೈ (22) ಆತ್ಮಹತ್ಯೆ ಮಾಡಿಕೊಂಡವರು. ಶ್ರುತಿ ಬೆಂಗಳೂರಿನಲ್ಲಿ ಎರಡು ವರ್ಷಗಳಿಂದ ಅನಿಮೇಷನ್ ಶಿಕ್ಷಣ ಪಡೆಯುತ್ತಿದ್ದು, ಶಿಕ್ಷಣ ಮುಗಿಸಿ ಕೆಲಸದ ಹುಡುಕಾಟದಲ್ಲಿದ್ದರು. ಅದಕ್ಕಾಗಿ ಅಲ್ಲಿಯೇ ವಾಸ್ತವ್ಯ ಹೂಡಿದ್ದರು. ತನ್ನ ಬಾಡಿಗೆ ರೂಂನಲ್ಲಿ ಕೆಲವು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು,

ಪುತ್ತೂರು ಮೂಲದ ಯುವತಿ ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ Read More »

ದರ್ಬೆ ‘ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್ ಆಕ್ಸಸರೀಸ್’ ಮಾಲಕ ಆತ್ಮಹತ್ಯೆ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಶಾಲಾ ಸಮೀಪದ ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್ ಆಕ್ಸಸರೀಸ್ ಶಾಪ್ ಮಾಲಕ ರಮೇಶ್ (49 ವ.) ತಮ್ಮ ಶಾಪ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಮೇಶ್ ಜೇಸಿಐ ಸದಸ್ಯರಾಗಿಯೂ ಗುರುತಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

ದರ್ಬೆ ‘ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್ ಆಕ್ಸಸರೀಸ್’ ಮಾಲಕ ಆತ್ಮಹತ್ಯೆ Read More »

ಪೋಲೀಸರ ಸೂಚನೆ ಲೆಕ್ಕಿಸದೆ,ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಪಿಕ್ ಅಪ್ ಪರಾರಿ

ಕಡಬ : ಕಡಬ ಠಾಣಾ ವ್ಯಾಪ್ತಿಯ ಆತೂರು ಚೆಕ್ ಪೋಸ್ಟ್ ನಲ್ಲಿ ಪೋಲೀಸರ ಸೂಚನೆಯನ್ನೂ ಲೆಕ್ಕಿಸದೆ ದನದ ಮಾಂಸ ಸಾಗಾಟ ಮಾಡುತ್ತಿದ್ದ ಎನ್ನಲಾದ ಪಿಕ್ ಅಪ್ ವಾಹನವೊಂದು ಪರಾರಿಯಾದ ಘಟನೆ ಶನಿವಾರ ಮಧ್ಯಾಹ್ನದ ವೇಳೆಗೆ ನಡೆದಿದೆ. ಚೆಕ್ಕ್ ಪೋಸ್ಟ್ ನಲ್ಲಿ ಹಾಕಲಾದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಬದಿಗೆ ತಳ್ಳಿರುವುದಲ್ಲದೆ ಕರ್ತವ್ಯದಲ್ಲಿದ್ದ ಪೋಲೀಸ್ ಸಿಬ್ಬಂದಿಯ ಮೇಲೆಯೂ ಪಿಕ್ ಅಪ್ ಹಾಯಿಸಲು ಹೋಗಿದ್ದು, ಪೋಲೀಸ್ ಸಿಬ್ಬಂದಿ ಬದಿಗೆ ಹಾರಿ ಅಪಾಯನ್ನು ತಪ್ಪಿಸಿಕೊಂಡಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಪರಾರಿಯಾದ

ಪೋಲೀಸರ ಸೂಚನೆ ಲೆಕ್ಕಿಸದೆ,ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಪಿಕ್ ಅಪ್ ಪರಾರಿ Read More »

ಚೆಕ್ ಅಮಾನ್ಯ ಆರೋಪಿ ತೀರ್ಥರಾಮ ಬಂಧನ

ಪುತ್ತೂರು: ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ದರ್ಬೆ ಕಾವೇರಿಕಟ್ಟೆ ನಿವಾಸಿ ಸದಾಶಿವ ಆಚಾರ್ಯ ಎಂಬವರ ಪುತ್ರ ತೀರ್ಥರಾಮ ಹೆಚ್.ಎಸ್. ಬಂಧಿತ ಆರೋಪಿ. ಕುಂದಾಪುರದಲ್ಲಿ ತಂಪು ಪಾನೀಯ ವ್ಯವಹಾರ ನಡೆಸುತ್ತಿದ್ದು ತೀರ್ಥರಾಮ ಅವರು ಏಳು ವರ್ಷಗಳ ಹಿಂದೆ ಪುತ್ತೂರಿನ ಕೆಲವು ಸಂಸ್ಥೆಗಳಿಂದ ಸಾಲ ಪಡೆದುಕೊಂಡು ಚೆಕ್ ನೀಡಿದ್ದರು. ಅದು ಅಮಾನ್ಯಗೊಂಡ ಪರಿಣಾಮ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ತನಿಖೆ ಕೈಗೆತ್ತಿಕೊಂಡ

ಚೆಕ್ ಅಮಾನ್ಯ ಆರೋಪಿ ತೀರ್ಥರಾಮ ಬಂಧನ Read More »

ಪುರುಷರಕಟ್ಟೆ ಮೂಲದ ವಸಂತ್ ಮೃತದೇಹ ಪತ್ತೆ | ಮುಂದಿನ ತಿಂಗಳು 20ನೇ ವಿವಾಹ ವಾರ್ಷಿಕೋತ್ಸವ ಆಚರಿಸಲು ಸಿದ್ಧವಾಗಿದ್ದ ದಂಪತಿ

ಪುತ್ತೂರು: ಪುರುಷರಕಟ್ಟೆಯ ಕುರೆಮಜಲು ಮೂಲದ ವಸಂತ ಅವರ ಮೃತದೇಹ ಸೋಮೇಶ್ವರ ಸಮುದ್ರದಲ್ಲಿ ಗುರುವಾರ ಸಂಜೆ ವೇಳೆ ಪತ್ತೆಯಾಗಿದೆ. ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಬುಧವಾರ ರಾತ್ರಿ ವಸಂತ ಅವರ ಚಪ್ಪಲಿ ಹಾಗೂ ಸಮುದ್ರ ತೀರದಲ್ಲಿ ಕಾರು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಶೋಧ ಕಾರ್ಯ ನಡೆಸಿದ್ದು, ಗುರುವಾರ ಸಂಜೆ ವೇಳೆ ಮೃತದೇಹ ಪತ್ತೆಯಾಗಿದೆ. ವಸಂತ ಅವರು ಉಳ್ಳಾಲದಲ್ಲಿ ವಾಸ್ತವ್ಯ ಹೊಂದಿದ್ದು, ವಿ ಕಾರ್ ಮ್ಯಾಕ್ಸ್ ಹೆಸರಿನ ಸಂಸ್ಥೆಯನ್ನು ನಡೆಸುತ್ತಿದ್ದರು. ಇತ್ತೀಚೆಗಷ್ಟೇ ಐಶಾರಾಮಿ ಮನೆಯೊಂದನ್ನು ನಿರ್ಮಿಸಿದ್ದರು. ಮುಂದಿನ ತಿಂಗಳು 20ನೇ

ಪುರುಷರಕಟ್ಟೆ ಮೂಲದ ವಸಂತ್ ಮೃತದೇಹ ಪತ್ತೆ | ಮುಂದಿನ ತಿಂಗಳು 20ನೇ ವಿವಾಹ ವಾರ್ಷಿಕೋತ್ಸವ ಆಚರಿಸಲು ಸಿದ್ಧವಾಗಿದ್ದ ದಂಪತಿ Read More »

ಪುರುಷರಕಟ್ಟೆ ವ್ಯಕ್ತಿಯ ಕಾರು ಸೋಮೇಶ್ವರ ಸಮುದ್ರದ ರುದ್ರಪಾದೆಯಲ್ಲಿ ಪತ್ತೆ | ವ್ಯಕ್ತಿಗಾಗಿ ಪೊಲೀಸರಿಂದ ಶೋಧ ಕಾರ್ಯ

ಉಳ್ಳಾಲ: ನಾಪತ್ತೆಯಾದ ವ್ಯಕ್ತಿಯೊಬ್ಬರ ಕಾರು ಹಾಗೂ ಚಪ್ಪಲಿ ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಪತ್ತೆಯಾಗಿದ್ದು, ಸಂಶಯಕ್ಕೆ ಎಡೆಮಾಡಿದೆ. ಪುರುಷರಕಟ್ಟೆ ನಿವಾಸಿ ವಸಂತ ಎಂಬವರೇ ನಾಪತ್ತೆಯಾಗಿದ್ದ ವ್ಯಕಿಯಾಗಿದ್ದು, ಬುಧವಾರ ಮುಂಜಾನೆ ಮನೆಯಿಂದ ಕಾರಿನಲ್ಲಿ ಸೋಮೇಶ್ವರ ಕಡೆ ತೆರಳಿದ್ದರು. ಬೆಳಿಗ್ಗೆಯಿಂದ ಅವರ ಕಾರು ಸೋಮೇಶ್ವರದ ಸಮುದ್ರದ ಬಳಿ  ಕಂಡು ಬಂದಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಕಾರನ್ನು ಪರಿಶೀಲನೆ ನಡೆಸಿದ್ದು, ಕಾರಿನಲ್ಲಿ ಮೊಬೈಲ್, ಶೂ, ಆಧಾರ್ ಕಾಡ ಪತ್ತೆಯಾಗಿದೆ. ವಸಂತರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು

ಪುರುಷರಕಟ್ಟೆ ವ್ಯಕ್ತಿಯ ಕಾರು ಸೋಮೇಶ್ವರ ಸಮುದ್ರದ ರುದ್ರಪಾದೆಯಲ್ಲಿ ಪತ್ತೆ | ವ್ಯಕ್ತಿಗಾಗಿ ಪೊಲೀಸರಿಂದ ಶೋಧ ಕಾರ್ಯ Read More »

ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು

ಪುತ್ತೂರು: ಕಡಬ-ಪಂಜ ರಸ್ತೆಯ ಕಲ್ಲಂತಡ್ಕ ಎಂಬಲ್ಲಿ ಬೈಕೊಂದು ಸ್ಕಿಡ್ ಆಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ದಾವಣಗೆರೆ ಮೂಲಕ, ಕಡಬದ ಕೋಡಿಂಬಾಳದಲ್ಲಿ ವಾಸ್ತವ್ಯವಿರುವ ಮಂಜು ಎಂದು ಗುರುತಿಸಲಾಗಿದೆ. ಮಂಜು ಅವರು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು, ಬೈಕ್‍ನಲ್ಲಿ ಕೋಡಿಂಬಾಳ ಕಡೆಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದಿದೆ. ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು Read More »

error: Content is protected !!
Scroll to Top