ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ
ಪುತ್ತೂರು: ವಿದ್ಯಾರ್ಥಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬನ್ನೂರಿನ ಕರ್ಮಲದಲ್ಲಿ ನಡೆದಿದೆ. ಬನ್ನೂರು ಕರ್ಮಲ ಸನ್ನಿಧಿ ಲೇ ಔಟ್ ನಿವಾಸಿ, ವಿವೇಕಾನಂದ ಕಾಲೇಜಿನ ಅಂತಿಮ ಬಿಸಿಎ ವಿದ್ಯಾರ್ಥಿನಿ ಕೀರ್ತಿಕಾ (19) ಈ ಕೃತ್ಯ ಎಸಗಿದವರು. ಕಿಶೋರ್ ಎಂಬವರ ಪುತ್ರಿಯಾಗಿರುವ ಈಕೆ ಮನೆಯಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣಗಳು ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಸ್ಥಳಕ್ಕೆ ನಗರ ಪೊಲೀಸರು ತೆರಳಿ ಮಾಹಿತಿ ಕಲೆ ಹಾಕಿದ್ದಾರೆ.
ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ Read More »










