ಅಪರಾಧ

ನಾಪತ್ತೆಯಾದ ವ್ಯಕ್ತಿಯ ಶವ ಪತ್ತೆ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಪುಳುವಾರು ನಿವಾಸಿಯೊಬ್ಬರು ಕಳೆದ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಇದೀಗ ಅವರ ಮೃತದೇಹ ಚಿಕ್ಕಮುಡ್ನೂರು ಗ್ರಾಮದ ಗುತ್ತಿಕಲ್ಸ್  ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಚಿಕ್ಕಮುಡ್ನೂರು ಗ್ರಾಮದ ಪುಳುವಾರು ನಿವಾಸಿ ಶಿವಪ್ಪ ಗೌಡ (45) ಎಂಬವರ ಮೃತದೇಹ ಪತ್ತೆಯಾಗಿದೆ. ಶಿವಪ್ಪ ಗೌಡ ಮಾ.`17 ರಂದು ಕೆಲಸಕ್ಕೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೊರ ಹೋಗಿದ್ದರು. ಬಳಿಕ ವಾಪಾಸು ಬಾರದೆ ನಾಪತ್ತೆಯಾಗಿದ್ದರು. ಇದೀಗ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ನಾಪತ್ತೆಯಾದ ವ್ಯಕ್ತಿಯ ಶವ ಪತ್ತೆ Read More »

ಮೆಡಿಕಲ್‌ ಸೀಟು ಕೊಡಿಸುವುದಾಗಿ ವಂಚಿಸಿದ ಆರೋಪಿಯ ಬಂಧನ

ಮಂಗಳೂರು : ನಗರದ ಖಾಸಗಿ ವೈದ್ಯಕೀಯ ಕಾಲೇಜಿನ ಹೆಸರಿನಲ್ಲಿ ಮೆಡಿಕಲ್‌ ಸೀಟು ಕೊಡಿಸುವುದಾಗಿ ಹೇಳಿ ಮೋಸ ಮಾಡಿದ್ದ ಪ್ರಕರಣದಲ್ಲಿ ನೋಯ್ಡಾ ಮೂಲದ ಆರೋಪಿಯನ್ನು ಮಹಾರಾಷ್ಟ್ರದ ಪೊಲೀಸರು ಮುಂಬೈನ ನೆರೋಲ್ ನಲ್ಲಿ ಏ. 2 ರಂದು ಬಂಧಿಸಿ ಉಳ್ಳಾಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.ಬಂಧಿತನನ್ನು ಇಫ್ತಿಕರ್ ಅಹ್ಮದ್ (31) ಉತ್ತರ ಪ್ರದೇಶದ ನೋಯ್ಡಾ ನಿವಾಸಿಯೆಂದು ಗುರುತಿಸಲಾಗಿದೆ. ಬೀದರ್‌ ಮೂಲದ ವ್ಯಕ್ತಿಯೋರ್ವರು, ತಮ್ಮಿಂದ 22.5 ಲಕ್ಷ ರೂ. ಪಡೆದು ಖಾಸಗಿ ಮೆಡಿಕಲ್‌ ಕಾಲೇಜಿನಲ್ಲಿ ಸೀಟು ದೊರಕಿಸುವುದಾಗಿ ನಂಬಿಸಿ ಇಫ್ತಿಕರ್ ಅಹ್ಮದ್ ಹಾಗೂ ಮತ್ತಿತರರು

ಮೆಡಿಕಲ್‌ ಸೀಟು ಕೊಡಿಸುವುದಾಗಿ ವಂಚಿಸಿದ ಆರೋಪಿಯ ಬಂಧನ Read More »

ಮನೆ ಯಜಮಾನನಿಗೆ ಹಲ್ಲೆ : ಗೂಗಲ್ ಪೇ ಮೂಲಕ ಹಣ ವರ್ಗಾವಣೆ

ಬೆಳ್ತಂಗಡಿ : ಪಡಂಗಡಿಯಲ್ಲಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕದ್ದು ಪರಾರಿಯಾದ ಘಟನೆ ಮಾ. 30 ರಂದು ಸಂಭವಿಸಿದೆ.ಪಡಂಗಡಿ ಗ್ರಾಮದ ಜಾನೆಬೈಲು ಪುತ್ಯೆ ಮನೆ ಎಂಬಲ್ಲಿ ಮನೆ ಯಜಮಾನ ಜುವಾಮ್‌ ಗೋವಿಯಸ್‌ (64) ಅವರಿಗೆ ಹಲ್ಲೆ ನಡೆಸಿದ್ದಾರೆ. ಪರಿಚಿತರಾದ ರಿಯಾಜ್‌ ಮತ್ತು ಫೈಝಲ್‌ ಎಂಬವರೇ ಹಣ ಎಗರಿಸಿದ ಆರೋಪಿಗಳು. ಜುವಾಮ್‌ ಗೋವಿಯಸ್‌ ಅವರು ತನ್ನ ಮಗನೊಂದಿಗೆ ಫೋನಿನಲ್ಲಿ ಮಾತನಾಡುತ್ತಿದ್ದ ವೇಳೆ ಮನೆಯಲ್ಲಿ ಈ ಹಿಂದೆ ರಬ್ಬರ್‌ ಟ್ಯಾಪಿಂಗ್‌ ಮಾಡುತ್ತಿದ್ದ

ಮನೆ ಯಜಮಾನನಿಗೆ ಹಲ್ಲೆ : ಗೂಗಲ್ ಪೇ ಮೂಲಕ ಹಣ ವರ್ಗಾವಣೆ Read More »

ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಪ್ರಯಾಣಿಕನಿಂದ ಬೆಂಕಿ

ರೈಲು ಹಳಿಯಲ್ಲಿ ಮೂವರ ಶವ ಪತ್ತೆ ಕೋಝಿಕ್ಕೋಡ್‌ : ರೈಲಿನ ಸಹ ಪ್ರಯಾಣಿಕನಿಗೆ ವ್ಯಕ್ತಿಯೋರ್ವ ಬೆಂಕಿ ಹಚ್ಚಿದ ಆಘಾತಕಾರಿ ಘಟನೆ ಕೇರಳದಲ್ಲಿ ಸಂಭವಿಸಿದೆ. ಇದರ ಪರಿಣಾಮವಾಗಿ 8 ಪ್ರಯಾಣಿಕರು ಸುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಲಪ್ಪುಳ-ಕಣ್ಣೂರು ಎಕ್ಸ್‌ಕ್ಯೂಟಿವ್‌ ಎಕ್ಸ್‌ಪ್ರೆಸ್‌ ರೈಲಿನ ಡಿ1 ಬೋಗಿಯಲ್ಲಿ ಭಾನುವಾರ ರಾತ್ರಿ ಈ ಘಟನೆ ಸಂಭವಿಸಿದೆ.ಈ ನಡುವೆ ಈ ಘಟನೆ ಸಂಭವಿಸಿದ 100 ಮೀಟರ್‌ ಅಂತರದಲ್ಲಿ ಮೂರು ಮೃತದೇಹಗಳು ರೈಲು ಹಳಿ ಪಕ್ಕ ಸಿಕ್ಕಿವೆ. ಮೃತ ಮೂವರು ಒಂದೇ ಕುಟುಂಬದವರು ಎಂದು ಪೊಲೀಸರು

ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಪ್ರಯಾಣಿಕನಿಂದ ಬೆಂಕಿ Read More »

ಶಿವಮೊಗ್ಗ ಚೆಕ್‌ಪೋಸ್ಟ್‌ನಲ್ಲಿ 4.5 ಕೋಟಿ ರೂ. ಮೌಲ್ಯದ ಸೀರೆ ವಶ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ಒಂದೇ ದಿನ ಬರೋಬ್ಬರಿ 4.5 ಕೋಟಿ ಮೌಲ್ಯದ ಸೀರೆ, ನಗದು, ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಶಿವಮೊಗ್ಗ ಜಿಲ್ಲೆಯ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ಶುಕ್ರವಾರ ರಾತ್ರಿ ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 4.5 ಕೋಟಿ ಮೌಲ್ಯದ ಸೀರೆ, 1.6 ಕೋಟಿ ನಗದು, 1.56 ಲಕ್ಷ ಮೌಲ್ಯದ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ನಿತ್ಯ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ದೊಡ್ಡಪೇಟೆ ಪೊಲೀಸ್ ಠಾಣಾ

ಶಿವಮೊಗ್ಗ ಚೆಕ್‌ಪೋಸ್ಟ್‌ನಲ್ಲಿ 4.5 ಕೋಟಿ ರೂ. ಮೌಲ್ಯದ ಸೀರೆ ವಶ Read More »

ಭಾರತೀಯ ಕರೆನ್ಸಿ ಬದಲಾಗಿ ಯುಎಇ ದಿರ್ಹಾಮ್ ಕಡಿಮೆ ಬೆಲೆಗೆ ನೀಡುವುದಾಗಿ ವಂಚನೆ : 6 ಮಂದಿ ಸೆರೆ

ಸಾಬೂನು ಪ್ಯಾಕೆಟ್‌ ಕೊಟ್ಟು ಹಣ ಕಸಿದು ಪರಾರಿಯಾಗುತ್ತಿದ್ದ ಖದೀಮರು ಉಡುಪಿ : ಭಾರತೀಯ ಕರೆನ್ಸಿ ಬದಲಾಗಿ ಯುಎಇ ದಿರ್ಹಾಮ್ ಕಡಿಮೆ ಬೆಲೆಗೆ ನೀಡುವುದಾಗಿ ಭರವಸೆ ನೀಡಿ ಹಲವು ವ್ಯಕ್ತಿಗಳಿಗೆ ವಂಚಿಸಿದ ಆರೋಪದಡಿ ಉಡುಪಿ ಪೊಲೀಸರು ಆರು ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ನೆಲಿಸಿದ್ದ ಮೊಹಮ್ಮದ್ ಪೋಲಾಶ್ ಖಾನ್ (42), ಮುಂಬೈ ಮೂಲದ, ಮಹಮ್ಮದ್ ಮಹತಾಬ್ ಬಿಲ್ಲಾಲ್ ಶೇಕ್ (43), ಪಶ್ಚಿಮ ಬಂಗಾಳದ ಮಹಮ್ಮದ್ ಫಿರೋಜ್ (30), ದಿಲ್ಲಿಯಲ್ಲಿ ವಾಸವಾಗಿರುವ ನೂರ್ ಮಹಮ್ಮದ್ (36) ಹರಿಯಾಣದ ಮೀರಜ್

ಭಾರತೀಯ ಕರೆನ್ಸಿ ಬದಲಾಗಿ ಯುಎಇ ದಿರ್ಹಾಮ್ ಕಡಿಮೆ ಬೆಲೆಗೆ ನೀಡುವುದಾಗಿ ವಂಚನೆ : 6 ಮಂದಿ ಸೆರೆ Read More »

ಗೋವುಗಳನ್ನು ಸಾಗಿಸುತ್ತಿದ್ದವನ ಹತ್ಯೆ : ಪುನೀತ್‌ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ಪುನೀತ್‌ ಕೆರೆಹಳ್ಳಿ ನೇತೃತ್ವದ ಗ್ಯಾಂಗ್‌ ಥಳಿಸಿ ಕೊಂದಿದೆ ಎಂಬ ಆರೋಪ ಬೆಂಗಳೂರು : ರಾಮನಗರ ಜಿಲ್ಲೆಯ ಕನಕಪುರ ಸಮೀಪದ ಸಾತನೂರಿನಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಗೋರಕ್ಷಕರ ತಂಡದ ದಾಳಿಗೆ ಸಿಲುಕಿ ದನಗಳನ್ನು ಸಾಗಿಸುತ್ತಿದ್ದ ವಾಹನದ ಚಾಲಕ ಹತ್ಯೆಯಾಗಿದ್ದಾನೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ಇತರ ನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಮಂಡ್ಯ ನಿವಾಸಿ ಇದ್ರೀಸ್ ಪಾಷಾ (39) ಎಂಬವರ ಮೃತದೇಹ ಸಾತನೂರು ಪೊಲೀಸ್ ಠಾಣೆಯಿಂದ ಸ್ವಲ್ಪ ದೂರದಲ್ಲಿ ಪತ್ತೆಯಾಗಿತ್ತು. ಇರ್ಫಾನ್ ಮತ್ತು ಸೈಯದ್

ಗೋವುಗಳನ್ನು ಸಾಗಿಸುತ್ತಿದ್ದವನ ಹತ್ಯೆ : ಪುನೀತ್‌ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು Read More »

ಕೇವಲ 5 ರೂ. ಗಾಗಿ ಬಾಲಕನ ಕೊಲೆ ಮಾಡಿದ ಪಾಪಿ

ಹುಬ್ಬಳ್ಳಿ : ಹುಬ್ಬಳ್ಳಿಯ ಬಂಡಿಗೆರೆಯಲ್ಲಿ 5 ರೂಪಾಯಿ ಕೇಳಿದ್ದಕ್ಕೆ ವ್ಯಕ್ತಿಯೋರ್ವ ಎಂಟು ವರ್ಷದ ಮಗುವಿನ ತಲೆಗೆ ಕಲ್ಲಿನಿಂದ ಚಚ್ಚಿ ಹತ್ಯೆಗೈದ ಘಟನೆ ಏ. 2 ರಂದು ನಡೆದಿದೆ.ಮಾ. 30 ರಂದು ನಡೆದಿದ್ದ ಈ ಭೀಕರ ಕೊಲೆ ಬೇಧಿಸಿದ ಪೊಲೀಸರಿಗೆ ಅಚ್ಚರಿಯಾಗಿದ್ದು, ಎಂಟು ವರ್ಷದ ನದೀಂ ಎನ್ನುವ ಬಾಲಕ ಶಾಲೆ ರಜೆ ಕೊಟ್ಟಿದ್ದರಿಂದ ಬೆಂಡಿಗೇರಿ ಪೊಲೀಸ್ ಠಾಣೆಯ ಹತ್ತಿರವಿರುವ ದೊಡ್ಮನಿ ಕಾಲೋನಿಯಲ್ಲಿನ ಅಜ್ಜಿ ಮನೆಗೆಂದು ಬಂದಿದ್ದ ವೇಳೆ ಸೈಕೋ ಕಿಲ್ಲರ್ ರವಿ ಬಳ್ಳಾರಿ ಎಂಬ ವ್ಯಕ್ತಿ ಕೇವಲ 5

ಕೇವಲ 5 ರೂ. ಗಾಗಿ ಬಾಲಕನ ಕೊಲೆ ಮಾಡಿದ ಪಾಪಿ Read More »

ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ

ಬೀಡಿ, ಸಿಗರೇಟ್, ಪಾನ್ ಮಸಾಲ ಪತ್ತೆ ಮಂಗಳೂರು : ಅಕ್ರಮ ಚಟುವಟಿಕೆ ಮಾಹಿತಿ ಹಿನ್ನೆಲೆ ಮಂಗಳೂರು ನಗರದ ಕೊಡಿಯಾಲಬೈಲ್​​ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ಎ. 2 ರಂದು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ತಪಾಸಣೆ ವೇಳೆ ಬೀಡಿ, ಸಿಗರೇಟ್​​, ಪಾನ್​​ ಮಸಾಲ, ಗುಟ್ಕಾ ಪತ್ತೆಯಾಗಿದೆ. ಜಿಲ್ಲಾ ಕಾರಾಗೃಹಕ್ಕೆ ದಿಢೀರ್ ದಾಳಿ ನಡೆಸಿದ ಸುಮಾರು 300 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸತತ 1 ಗಂಟೆ 15 ನಿಮಿಷಗಳ ಕಾಲ ಕಾರಾಗೃಹ ತಪಾಸಣೆ ನಡೆಸಿದ್ದಾರೆ.

ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ Read More »

66.9 ಕೋಟಿ ಭಾರತೀಯರ ಡೇಟಾ ಕದ್ದಿದ್ದ ಖತರ್‌ನಾಕ್‌ ಚೋರನ ಬಂಧನ

ಅತಿದೊಡ್ಡ ಅಂತರ್‌ಜಾಲ ಮಾಹಿತಿ ಕಳ್ಳತನ ಪ್ರಕರಣ ಹೈದರಾಬಾದ್ : 66.9 ಕೋಟಿ ಭಾರತೀಯರ ಡೇಟಾ ಕದ್ದಿದ್ದ ಖತರ್‌ನಾಕ್‌ ಸೈಬರ್‌ ಚೋರನೊಬ್ಬನನ್ನು ಹೈದರಾಬಾದ್‌ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್‌ನ 56 ಲಕ್ಷ ಜನರು ಸೇರಿ ಎಂಟು ಮೆಟ್ರೋ ನಗರಗಳು, 24 ರಾಜ್ಯಗಳ 44 ವಿಭಾಗಗಳಲ್ಲಿ ಜನರ ಮಾಹಿತಿಯನ್ನು ಕಳ್ಳತನ ಮಾಡಿರುವ ದೇಶದ ಅತಿ ದೊಡ್ಡ ಡೇಟಾ ಕಳವು ಪ್ರಕರಣ ಇದು ಎಂದು ಸೈಬರಾಬಾದ್ ಪೊಲೀಸರು ಹೇಳಿದ್ದಾರೆ. ಒಟ್ಟಾರೆ 66.9 ಕೋಟಿ ಜನರ ಮತ್ತು ಖಾಸಗಿ ಸಂಸ್ಥೆಗಳ ವೈಯಕ್ತಿಕ ಮತ್ತು ಗೌಪ್ಯ

66.9 ಕೋಟಿ ಭಾರತೀಯರ ಡೇಟಾ ಕದ್ದಿದ್ದ ಖತರ್‌ನಾಕ್‌ ಚೋರನ ಬಂಧನ Read More »

error: Content is protected !!
Scroll to Top