ಅಂದರ್-ಬಾಹರ್ ಆಡುತ್ತಿದ್ದ ಅಡ್ಡೆಗೆ ಪೊಲೀಸರಿಂದ ದಾಳಿ | ಮೂವರು ಆರೋಪಿಗಳ ಬಂಧನ
ವಿಟ್ಲ: ಅಂದರ್ ಬಾಹರ್ ಇಸ್ಟಿಟ್ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ ನಗದು ಸಹಿತ ಜುಗಾರಿಗೆ ಬಳಸಲಾದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವೀರಕಂಭ ಗ್ರಾಮದ ಎರ್ಮೆಮಜಲಿನಲ್ಲಿ ಈ ಘಟನೆ ನಡೆದಿದ್ದು, ಸರಕಾರಿ ಜಾಗವೊಂದರಲ್ಲಿ ಅಂದರ್ ಬಾಹರ್ ಆಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ 15 ಸಾವಿರ ರೂ. ನಗದು, ಆಡಕ್ಕೆ ಬಳಸಲಾದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಐದು ಮಂದಿ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂದರ್-ಬಾಹರ್ ಆಡುತ್ತಿದ್ದ ಅಡ್ಡೆಗೆ ಪೊಲೀಸರಿಂದ ದಾಳಿ | ಮೂವರು ಆರೋಪಿಗಳ ಬಂಧನ Read More »








