ಅಪರಾಧ

ಸೌಜನ್ಯ ಪ್ರಕರಣ ಮರು ತನಿಖೆ ಕುರಿತು ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ವಿಚಾರವಾಗಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ದೇಶಾದ್ಯಂತ ಸದ್ದು ಮಾಡಿ, ಮತ್ತೆ ನ್ಯಾಯಕ್ಕಾಗಿ ಎಲ್ಲೆಡೆ ಸಂಚಲನ ಮೂಡಿಸುತ್ತಿರುವ ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆಗೆ ಆಗ್ರಹಿಸಿ ಇತ್ತೀಚೆಗೆ ಬೆಳ್ತಂಗಡಿ ಕ್ಷೇತ್ರದ ಶಾಸರು ಹಾಗೂ ಕುಟುಂಬದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯನವರು ಮರುತನಿಖೆ […]

ಸೌಜನ್ಯ ಪ್ರಕರಣ ಮರು ತನಿಖೆ ಕುರಿತು ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ Read More »

ಬೆಂಗಳೂರಿನಿಂದ ಪ್ರಯಾಣಿಸುತ್ತಿದ್ದಾಗ ಬ್ಯಾಗ್‍ನಿಂದ ಸಾವಿರಾರು ಮೌಲ್ಯದ ವಸ್ತುಗಳ ಕಳವು | ಪುತ್ತೂರು ಠಾಣೆಗೆ ದೂರು

ಪುತ್ತೂರು: ಬೆಂಗಳೂರಿನಿಂದ ಪುತ್ತೂರಿಗೆ ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಬರುತ್ತಿದ್ದ ಪ್ರಯಾಣಿಕರೊಬ್ಬರ ಬ್ಯಾಗ್‌ನಿಂದ ಸಾವಿರಾರು ರೂ.ಮೌಲ್ಯದ ಸೊತ್ತುಗಳು ಕಳವಾದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಪುಣಚ ಗ್ರಾಮದ ಅಜೇರು ನಿವಾಸಿ ದಿವಾಕರ ನಾಯಕ್ ಎಂಬವರ ಪುತ್ರಿ ದೀಪಿಕಾ ಅವರ ಬ್ಯಾಗ್‌ನಿಂದ ಲ್ಯಾಪ್‌ಟಾಪ್, ಸ್ಯಾಮ್‌ಸಂಗ್ ಕಂಪೆನಿಯ ಮೊಬೈಲ್, ಡೇನಿಯಲ್ ಕ್ಲೀನ್ ಕಂಪೆನಿಯ ವಾಚ್ ಸಹಿತ ಒಟ್ಟು ರೂ.53 ಸಾವಿರ ಮೌಲ್ಯದ ಸೊತ್ತು ಕಳವಾಗಿದೆ. ಅವರು ಬೆಂಗಳೂರಿನ ಟಿಸಿಎಸ್ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದು ಜು.26ರಂದು ರಾತ್ರಿ ಬೆಂಗಳೂರಿನಿಂದ ಪುತ್ತೂರಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸಿದ್ದರು. ಪುತ್ತೂರಿಗೆ

ಬೆಂಗಳೂರಿನಿಂದ ಪ್ರಯಾಣಿಸುತ್ತಿದ್ದಾಗ ಬ್ಯಾಗ್‍ನಿಂದ ಸಾವಿರಾರು ಮೌಲ್ಯದ ವಸ್ತುಗಳ ಕಳವು | ಪುತ್ತೂರು ಠಾಣೆಗೆ ದೂರು Read More »

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಪ್ಪೊಪ್ಪಿಕೊಳ್ಳಲು ಆರೋಪಿಗಳಿಗೆ ಕಿರುಕುಳ ನೀಡಿದ ಇಲಾಖೆ | ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಲು ಕೇಂದ್ರ ಯೋಜನಾ ಸಂಚಾಲಕರು, ತಾಂತ್ರಿಕ ತಂಡಕ್ಕೆ ಹೈಕೋರ್ಟ್ ನಿರ್ದೇಶನ

ಪುತ್ತೂರು: ಬೆಳ್ಳಾರೆ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ವಿಚಾರಣೆ ವೇಳೆ ಆರೋಪಿಗಳಿಗೆ ಕಿರುಕುಳ ನೀಡಿ ತಪ್ಪೋಪ್ಪಿಗೆ ಹೇಳಿಕೆ ದಾಖಲಿಸಿದ್ದಾರೆ ಎಂಬ ಆರೋಪದಿಂದ ಅದಕ್ಕೆ ಸಂಬಂಧಪಟ್ಟ ಮತ್ತು ಕಚೇರಿಯಲ್ಲಿನ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಲು ತನ್ನ ಕೇಂದ್ರ ಯೋಜನಾ ಸಂಚಾಲಕರು ಮತ್ತು ತಾಂತ್ರಿಕ ತಂಡಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಜಾಬಿರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ವಿಭಾಗೀಯ ಪೀಠ, ಎಫ್‌ಎಸ್ಎಲ್ ಮತ್ತು ಎನ್ಎಐ ಕಚೇರಿಗಳಲ್ಲಿ 2022ರ ನವೆಂಬರ್ ತಿಂಗಳ ಸಿಸಿಟಿವಿ ದೃಶ್ಯಾವಳಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಪ್ಪೊಪ್ಪಿಕೊಳ್ಳಲು ಆರೋಪಿಗಳಿಗೆ ಕಿರುಕುಳ ನೀಡಿದ ಇಲಾಖೆ | ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಲು ಕೇಂದ್ರ ಯೋಜನಾ ಸಂಚಾಲಕರು, ತಾಂತ್ರಿಕ ತಂಡಕ್ಕೆ ಹೈಕೋರ್ಟ್ ನಿರ್ದೇಶನ Read More »

ಉಡುಪಿ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ : ಮೂವರು ವಿದ್ಯಾರ್ಥಿನಿಯರಿಗೆ ಶರತ್ತುಬದ್ಧ ಜಾಮೀನು ಮಂಜೂರು

ಉಡುಪಿ : ದೇಶದಾದ್ಯಂತ ಸುದ್ದಿಯಲ್ಲಿರುವ ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿ ನ್ಯಾಯಾಲಯವು ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ವಿಧ್ಯಾರ್ಥಿನಿಯರು ಮತ್ತೊಂದು ವಿಧ್ಯಾರ್ಥಿನಿ ವಾಶ್ ರೂಂ ನಲ್ಲಿರು ವೇಳೆ ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾರೆ ಎಂಬ ಆರೋಪ ಇದ್ದು, ಈ ಹಿನ್ನಲೆ ಆರೋಪಿ ವಿದ್ಯಾರ್ಥಿನಿಯರು ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಲಂ: 509,204,175,34 ಐ,ಪಿ,ಸಿ,ಮತ್ತು 66(ಇ) ಐಟಿ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ

ಉಡುಪಿ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ : ಮೂವರು ವಿದ್ಯಾರ್ಥಿನಿಯರಿಗೆ ಶರತ್ತುಬದ್ಧ ಜಾಮೀನು ಮಂಜೂರು Read More »

ಮೊಬೈಲ್ ಖರೀದಿಗೆ 8 ತಿಂಗಳ ಮಗುವನ್ನೇ ಮಾರಿದ ದಂಪತಿ | ಪೊಲೀಸರ ಅತಿಥಿಯಾದ ದಂಪತಿ

ಕೋಲ್ಕತ್ತ : ಹೊಸ ಮೊಬೈಲ್ ಫೋನ್ ಖರೀದಿಸಲು ತಮ್ಮ 8 ತಿಂಗಳ ಮಗುವನ್ನೇ ಮಾರಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ನಡೆದಿರುವುದು ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ಮಗುವನ್ನುಮಾರಿ ಹೊಸ ಫೋನ್ ಖರೀದಿಸಿದ್ದು ಮಾತ್ರವಲ್ಲದೆ ಈ ದಂಪತಿ ಜಾಲಿಟ್ರಿಪ್ ಕೂಡ ಮಾಡಿದ್ದರು. ಅವರ ಕೈಯಲ್ಲಿ ದುಬಾರಿ ಬೆಲೆಯ ಫೋನ್ ಕಂಡು ಸಂಶಯಗೊಂಡ ನೆರೆಹೊರೆಯವರು ಗುಸುಗುಸು ಮಾತನಾಡಲು ತೊಡಗಿದಾಗಲೇ ಖತರ್‌ನಾಕ್ ದಂಪತಿಯ ಗುಟ್ಟು ಬಯಲಾದದ್ದು. ದಂಪತಿಗೆ ಓರ್ವ ಪುತ್ರಿಯೂ ಇದ್ದು, 8 ತಿಂಗಳ ಹಿಂದೆ ಜನಿಸಿದ

ಮೊಬೈಲ್ ಖರೀದಿಗೆ 8 ತಿಂಗಳ ಮಗುವನ್ನೇ ಮಾರಿದ ದಂಪತಿ | ಪೊಲೀಸರ ಅತಿಥಿಯಾದ ದಂಪತಿ Read More »

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ವಿಷಾಹಾರ ಸೇವಿಸಿ 38 ವಿದ್ಯಾರ್ಥಿಗಳು ಅಸ್ವಸ್ಥ

ಬೈಲಹೊಂಗಲ : ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ವಿಷಾಹಾರ ಸೇವಿಸಿ 38 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಅಸ್ವಸ್ಥ ವಿದ್ಯಾರ್ಥಿಗಳಿಗೆ ಸಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡು ಮತ್ತೆ ಶಾಲೆಗೆ ತೆರಳಿದ್ದಾರೆ. ಗುರುವಾರ ರಾತ್ರಿ ಮಕ್ಕಳಿಗೆ ಚಿಕನ್, ಪನೀರ್ ನೀಡಲಾಗಿತ್ತು. ಊಟದ ಬಳಿಕ ಮಕ್ಕಳು ಅಸ್ವಸ್ಥರಾಗಿದ್ದರು. ವಿಷಯ ತಿಳಿದ ಉಪವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪೂರ, ಪ್ರಭಾರಿ ತಹಶೀಲ್ದಾರ್ ಜೆ.ಸಿ.ಅಷ್ಟಗಿಮಠ, ಡಿವೈಎಸ್ ರವಿ ನಾಯ್ಕ, ಸಿಪಿಐ ಪಂಚಾಕ್ಷರಿ ಸಾಲಿಮಠ, ಕಂದಾಯ ನಿರೀಕ್ಷಕ

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ವಿಷಾಹಾರ ಸೇವಿಸಿ 38 ವಿದ್ಯಾರ್ಥಿಗಳು ಅಸ್ವಸ್ಥ Read More »

ಇಂಗು ಗುಂಡಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಪುತ್ತೂರು: ಪಡುವನ್ನೂರು ಗ್ರಾಮದಲ್ಲಿ ಇಂಗು ಗುಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಬುಧವಾರ ಪತ್ತೆಯಾಗಿದೆ. ಪಡುವನ್ನೂರು ಗ್ರಾಮದ ಗುರಿಯಡ್ಕ ನಿವಾಸಿ ಐತ್ತಪ್ಪ ಮೂಲ್ಯ ಎಂಬವರೇ ಮೃತಪಟ್ಟವರು. ಐತ್ತಪ್ಪ ಮೂಲ್ಯ ಸುಮಾರು ಒಂದು ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಚಿಕಿತ್ಸೆ ಫಲಕಾರಿಯಾಗಿರಲಿಲ್ಲ. ರಾತ್ರಿ ಸಮಯದಲ್ಲಿ ಅವರು ಯಾರಿಗೂ ಹೇಳದೆ ಹೊರಗೆ ಹೋಗುತ್ತಿದ್ದರು ಎನ್ನಲಾಗಿದೆ. ಭಾನುವಾರ ರಾತ್ರಿ ಊಟ ಮಾಡಿ ಮಲಗಿದವರು ಸೋಮವಾರ ಬೆಳಗ್ಗೆ ನಾಪತ್ತೆಯಾಗಿದ್ದರು. ಬುಧವಾರ ಮೃತದೇಹ ನೆರೆಮನೆಯ ಶೀನ ಗೌಡ ಮಾಪಳ ಎಂಬವರ ಮನೆ ಬಳಿಯ ಇಂಗು ಗುಂಡಿಯಲ್ಲಿ ಪತ್ತೆಯಾಗಿದೆ.

ಇಂಗು ಗುಂಡಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ Read More »

ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಮಾರಾಟ | ನಗರಸಭೆಯಿಂದ ದಾಳಿ

ಪುತ್ತೂರು: ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ಮಾರಾಟ ಮತ್ತು ಬಳಕೆ ಮಾಡುತ್ತಿದ್ದ ಅಂಗಡಿಗಳಿಗೆ ನಗರಸಭೆ ಅಧಿಕಾರಿಗಳು ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡು ದಂಡ ವಿಧಿಸಿದ್ದಾರೆ. ಪುತ್ತೂರು ನಗರದ ಮುಖ್ಯರಸ್ತೆಯ ಅಂಗಡಿಗಳು, ವಾಣಿಜ್ಯ ಮಳಿಗೆಗಳು ಸೇರಿದಂತೆ ಹಲವು ಕಡೆ ದಾಳಿ ನಡೆಸಿದ ಅಧಿಕಾರಿಗಳು 12 ಕೆಜಿ ಪ್ಲಾಸ್ಟಿಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿಯರಾದ ಶ್ವೇತಾ ಕಿರಣ್, ವರಲಕ್ಷ್ಮೀ, ಸೂಪರ್ ವೈಸರ್ ಗಳಾದ ನಾಗೇಶ್ ಮತ್ತು ಅಮಿತ್, ರಾಧಾಕೃಷ್ಣ ಸಹಿತ ಪೌರ ಕಾರ್ಮಿಕರು ಉಪಸ್ಥಿತರಿದ್ದರು.

ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಮಾರಾಟ | ನಗರಸಭೆಯಿಂದ ದಾಳಿ Read More »

ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಪುತ್ತೂರು: ಪುತ್ತೂರು ನಗರದ ಪಾಂಗ್ಲಾಯಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹವೊಂದು ಗುರುವಾರ ಪತ್ತೆಯಾಗಿದೆ. ಪಾಂಗ್ಲಾಯಿ ಬಳಿ ಪೊದೆಯೊಂದರಲ್ಲಿ ಈ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಆಂಬುಲೆನ್ಸ್ ಮೂಲಕ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತದೇಹ ಯಾರದ್ದೆಂದು, ಮೃತ್ಯುಗೆ ಕಾರಣ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ

ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ Read More »

ಅನುಮತಿ ಇಲ್ಲದೆ ವಿಜಯೋತ್ಸವ | ಪುತ್ತಿಲ ಪರಿವಾರ ಸಂಘಟನೆ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಪುತ್ತೂರು, ಜುಲೈ 27: ಅನುಮತಿ ಇಲ್ಲದೆ ವಿಜಯೋತ್ಸವ ಮಾಡಿದ್ದಕ್ಕಾಗಿ ಪುತ್ತಿಲ ಪರಿವಾರ ಸಂಘಟನೆ ವಿರುದ್ಧ ಪ್ರಕರಣ ದಾಖಲಾಗಿದೆ. ಆರ್ಯಾಪು ಗ್ರಾ.ಪಂ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರದ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯರು ಜಯಗಳಿಸಿದ ಹಿನ್ನಲೆಯಲ್ಲಿ ವಿಜಯೋತ್ಸವ ನಡೆಸಲಾಗಿತ್ತು. ಮಿನಿ ವಿಧಾನಸೌಧದಿಂದ ಮುಕ್ರಂಪಾಡಿವರೆಗೆ ಡಿಜೆ ಮೆರವಣಿಗೆ ನಡೆಸಿದ್ದ ಪುತ್ತಿಲ ಪರಿವಾರ ವಿರುದ್ಧ ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಶಾಂತಿಭಂಗದ ಪ್ರಕರಣ ದಾಖಲಿಸಲಾಗಿದೆ.

ಅನುಮತಿ ಇಲ್ಲದೆ ವಿಜಯೋತ್ಸವ | ಪುತ್ತಿಲ ಪರಿವಾರ ಸಂಘಟನೆ ವಿರುದ್ಧ ಪ್ರಕರಣ ದಾಖಲು Read More »

error: Content is protected !!
Scroll to Top