ಶರಣ್ ಪಂಪ್ವೆಲ್ ವಿರುದ್ಧ ಮಾನಹಾನಿಕರ ಪೋಸ್ಟ್| ಕ್ರಮ ಕೈಗೊಳ್ಳುವಂತೆ ಬಜರಂಗದಳ, ವಿಹಿಂಪ ವತಿಯಿಂದ ಠಾಣಾಧಿಕಾರಿಗಲಿಗೆ ಮನವಿ
ಪುತ್ತೂರು: ವಿಹಿಂಪ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಅವರ ವಿರುದ್ಧ ಮಾನಹಾನಿಕರ ಪೋಸ್ಟ್ ಹಾಕಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಪುತ್ತೂರು ಗ್ರಾಮಾಂತರ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ವಿಶ್ವ ಹಿಂದೂ ಪರಿಷತ್, ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡದ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಹಿಂಪ ಪ್ರಖಂಡ ಕಾರ್ಯದರ್ಶಿ ರವಿಕುಮಾರ್ ಕೈತಡ್ಕ, ಬಜರಂಗದಳ ಸಂಯೋಜಕ ವಿಶಾಖ್ ಸಸಿಹಿತ್ಲು, ಚಂದ್ರನಾಥ ಮುಕ್ವೆ, ಧನರಾಜ್ ಕೊಡಿಪ್ಪಾಡಿ ಉಪಸ್ಥಿತರಿದ್ದರು.









