ಅಪರಾಧ

ತಾಯಿ-ಮಗ ಆತ್ಮಹತ್ಯೆಗೆ ಯತ್ನ | ಮಗ ಮೃತ್ಯು, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಸುಬ್ರಹ್ಮಣ್ಯ: ತಾಯಿ-ಮಗ ಇಬ್ಬರೂ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಮಗ ಮೃತಪಟ್ಟು, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸುಬ್ರಹ್ಮಣ್ಯ ಸಮೀಪದ ನಾಲ್ಕೂರು ಗ್ರಾಮದಲ್ಲಿ ಇಂದು ನಡೆದಿದೆ. ಸುಲೋಚನಾ ಹಾಗೂ ಮಗ ನಿತಿನ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ್ದು, ಮಗ ನಿತಿನ್‍ (35) ಮೃತಪಟ್ಟಿದ್ದಾರೆ. ತಾಯಿ ಸುಲೋಚನಾ ಅವರನ್ನು ಸುಳ್ಯ  ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ. ಮೃತ ನಿತಿನ್ ಐಟಿಐ ವಿದ್ಯಾಭ್ಯಾಸ ಹೊಂದಿದ್ದು, ತಮ್ಮ ಜಮೀನಿನಲ್ಲಿ ಕೃಷಿಕರಾಗಿ ದುಡಿಯುತ್ತಿದ್ದರು. ಕಳೆದ ಒಂದು ವರ್ಷದ […]

ತಾಯಿ-ಮಗ ಆತ್ಮಹತ್ಯೆಗೆ ಯತ್ನ | ಮಗ ಮೃತ್ಯು, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು Read More »

ಕಳ್ಳತನ ಮಾಡಿದ ಬಾಲಕರನ್ನು ಮರಕ್ಕೆ ಕಟ್ಟಿಹಾಕಿ ಚಿತ್ರಹಿಂಸೆ

ಬೆಂಗಳೂರು: ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕರನ್ನು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿ ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆಯೊಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರ ಬಳಿ ಇರುವ ಅಸ್ತಾಪನಹಳ್ಳಿಯಲ್ಲಿ ಏಪ್ರಿಲ್​ 4ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಚಿತ್ರಹಿಂಸೆ ನೀಡಿರುವ ವೀಡಿಯೊ ವೈರಲ್ ಆಗಿದೆ. ಪೊಲೀಸರು 9 ಜನರ ವಿರುದ್ಧ ಎಫ್​ಐಆರ್​ ದಾಖಲಿಸಿದ್ದು, ಸುಭಾಷ್​ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಹಕ್ಕಿಪಿಕ್ಕಿ

ಕಳ್ಳತನ ಮಾಡಿದ ಬಾಲಕರನ್ನು ಮರಕ್ಕೆ ಕಟ್ಟಿಹಾಕಿ ಚಿತ್ರಹಿಂಸೆ Read More »

ಕಾಲೇಜು ವಿದ್ಯಾರ್ಥಿನಿ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ : ಪೋಕ್ಸೋ ಪ್ರಕರಣ ದಾಖಲು

ಪುತ್ತೂರು: ಅಟೋ ಚಾಲಕನೋರ್ವ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಪುತ್ತೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಾಲೇಜಿಗೆ ರಜೆ ಇದ್ದ ಸಂದರ್ಭ ಮನೆಯಲ್ಲಿದ್ದ ವಿದ್ಯಾರ್ಥಿನಿ ಮೇಲೆ ಆಟೋ ಚಾಲಕ ಮಂಜುನಾಥ್ ಕಟ್ಟಿತ್ತಡ್ಕ ಎಂಬಾತ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದಾನೆ. ಕಳೆದ ಆಗಸ್ಟ್ ತಿಂಗಳಲ್ಲಿ ಯುವತಿ ಒಬ್ಬಳೇ ಇದ್ದ ಸಂದರ್ಭ ನೀರು ಕೇಳುವ ಮನೆಗೆ ಬಂದು ಅತ್ಯಾಚಾರ ಎನ್ನಲಾಗಿದೆ. ಈ ವಿಚಾರವನ್ನು ಯಾರಲ್ಲೂ ಹೇಳಬಾರದು ಎಂದು ಬೆದರಿಕೆ ಒಡ್ಡಿದ್ದು, 7-8 ಬಾರಿ ದೈಹಿಕ ಸಂಪರ್ಕ ಹೊಂದಿದ್ದಾನೆ ಎನ್ನಲಾಗಿದೆ. ಯುವತಿಯ

ಕಾಲೇಜು ವಿದ್ಯಾರ್ಥಿನಿ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ : ಪೋಕ್ಸೋ ಪ್ರಕರಣ ದಾಖಲು Read More »

ಟಾರ್ಗೆಟ್‌ ರೀಚ್‌ ಮಾಡದ ನೌಕರನಿಗೆ ನಾಯಿಯಂತೆ ನಡೆಯುವ ಶಿಕ್ಷೆ

ಖಾಸಗಿ ಕಂಪನಿ ನೀಡಿದ ಶಿಕ್ಷೆಯ ವೀಡಿಯೊ ವೈರಲ್‌ ಕೊಚ್ಚಿ: ಟಾರ್ಗೆಟ್‌ ರೀಚ್‌ ಮಾಡಲು ಸಾಧ್ಯವಾಗದ ಉದ್ಯೋಗಿಗಳನ್ನು ಕತ್ತಿಗೆ ಸರಪಳಿ ಬಿಗಿದು ನಾಯಿಯಂತೆ ನಡೆಸಿಕೊಂಡು ಹೋದ ಘಟನೆಯೊಂದು ಕೇರಳದಲ್ಲಿ ಸಂಭವಿಸಿದ್ದು, ಕೃತ್ಯದ ವೀಡಿಯೊ ಭಾರಿ ವೈರಲ್‌ ಆಗಿ ಆಕ್ರೋಶಕ್ಕೆ ಗುರಿಯಾಗಿದೆ.ಕೊಚ್ಚಿಯಲ್ಲಿರುವ ಮಾರ್ಕೆಟಿಂಗ್‌ ಕಂಪನಿಯೊಂದು ತನ್ನ ನೌಕರರಿಗೆ ಈ ಶಿಕ್ಷೆ ನೀಡಿದೆ ಎನ್ನಲಾಗಿದೆ. ಕಂಪನಿಯ ಮಾಜಿ ಮ್ಯಾನೇಜರ್‌ ಈ ವೀಡಿಯೊವನ್ನು ಬಹಿರಂಗಪಡಿಸಿದ ಬಳಿಕ ಸರಕಾರದ ಗಮನಕ್ಕೂ ಬಂದಿದೆ. ಟಾರ್ಗೆಟ್‌ ರೀಚ್‌ ಮಾಡಲಾಗದ ನೌಕರರಿಗೆ ಈ ಕಂಪನಿಯ ಮಾಲೀಕ ಈ ರೀತಿಯ

ಟಾರ್ಗೆಟ್‌ ರೀಚ್‌ ಮಾಡದ ನೌಕರನಿಗೆ ನಾಯಿಯಂತೆ ನಡೆಯುವ ಶಿಕ್ಷೆ Read More »

ಯುವತಿ ಮೇಲೆ ಅತ್ಯಾಚಾರ ಎಸಗಿದ ಜೈನ ಮುನಿಗೆ 10 ವರ್ಷ ಜೈಲು

ಗುರು ಎಂದು ಭಾವಿಸಿದಾತನೇ ಎಸಗಿದ ಘೋರ ಕೃತ್ಯ ಅಹಮದಾಬಾದ್: ಎಂಟು ವರ್ಷದ ಹಿಂದೆ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜೈನ ದಿಗಂಬರ ಪಂಥದ ಸನ್ಯಾಸಿ ಶಾಂತಿಸಾಗರ್‌ ಮಹಾರಾಜ್‌ ಎಂಬಾತನಿಗೆ ಸೂರತ್‌ನ ಸೆಶನ್ಸ್ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ 25,000 ರೂ. ದಂಡ ವಿಧಿಸಿದೆ. ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧೀಶ ಎ.ಕೆ. ಶಾ ಅವರು ಅತ್ಯಾಚಾರ ಎಸಗಿದ ಆರೋಪದ ಮೇಲೆ 56 ವರ್ಷದ ದಿಗಂಬರ ಜೈನಮುನಿ ತಪ್ಪಿತಸ್ಥರೆಂದು ತೀರ್ಪು

ಯುವತಿ ಮೇಲೆ ಅತ್ಯಾಚಾರ ಎಸಗಿದ ಜೈನ ಮುನಿಗೆ 10 ವರ್ಷ ಜೈಲು Read More »

ಯುವತಿಗೆ ಅಶ್ಲೀಲ ಮೆಸೇಜ್ : ಭೇಟಿಯಾಗಲು ಬಂದು ಯುವಕ  ಸ್ಥಳೀಯರ ವಶಕ್ಕೆ  

ವಿಟ್ಲ: ಯುವತಿಯರ ಮೊಬೈಲ್ ನಂಬರ್ ತೆಗೆದುಕೊಂಡು ಅಶ್ಲೀಲ ಮೆಸೇಜ್ ಮಾಡಿ ಮಾನಸಿಕ ಹಿಂಸೆ ನೀಡುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಹಿಡಿದು, ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಳ್ಳಾಡು ಗ್ರಾಮದ ಕುಡ್ತಮುಗೇರು ಜಂಕ್ಷನ್ ಬಳಿ ನಡೆದಿದೆ. ಯುವತಿರೋರ್ವಳ ನಂಬರ್ ಕೇಳಿದ್ದ ಈತನಿಗೆ ಆಕೆ ಪರಿಚಯದ ಸ್ನೇಹಿತನ ನಂಬರ್‍ ಕೊಟ್ಟಿದ್ದಳು. ಯುವತಿಯ ನಂಬರ್ ಎಂದು ಬಾವಿಸಿ ಯುವಕನಿಗೆ ರಾತ್ರಿಯಿಡಿ ಅಶ್ಲೀಲವಾಗಿ ಮೆಸೆಜ್‍ ಮಾಡಿದ್ದಾನೆ. ಬಳಿಕ ಹುಡುಗಿ ಎಂದು ಭೇಟಿಯಾಗಲು ಬಂದಾಗ ಸ್ಥಳೀಯರು ಆತನನ್ನ ಹಿಡಿದು ಪೊಲೀಸರಿಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ

ಯುವತಿಗೆ ಅಶ್ಲೀಲ ಮೆಸೇಜ್ : ಭೇಟಿಯಾಗಲು ಬಂದು ಯುವಕ  ಸ್ಥಳೀಯರ ವಶಕ್ಕೆ   Read More »

ಪಕ್ಷ ವಿರೋಧಿ ಚಟುವಟಿಕೆ ಆರೋಪ | ಮೂವರು ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯರ ಉಚ್ಚಾಟನೆ

ವಿಟ್ಲ :  ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದಲ್ಲಿ ಬಂಟ್ವಾಳ ತಾಲೂಕಿನ ಕೊಳ್ಳಾಡು ಗ್ರಾಮ ಪಂಚಾಯತ್ ನ ಮೂವರು ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಮುಂದಿನ ಆರು ವರ್ಷದವರೆಗೆ ಉಚ್ಚಾಟನೆ ನಡೆಸಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್ ರವರು ಆದೇಶಿಸಿದ್ದಾರೆ. ಬಂಟ್ವಾಳ ತಾಲೂಕು ಕೊಳ್ಳಾಡು ಗ್ರಾಮ ಪಂಚಾಯತ್ ಸದಸ್ಯರಾದ ಮಹಮ್ಮದ್ ಮಂಚಿ, ರಾಜೇಶ್ ಬಾರಬೆಟ್ಟು, ಎ.ಬಿ.ಅಬ್ದುಲ್ಲಾ ರವರನ್ನು ಪಕ್ಷ ವಿರೋಧಿ ಚಟುವಟಿಕೆಯ ಆರೋಪದಲ್ಲಿ ಉಚ್ಚಾಟಿಸಲ್ಪಟ್ಟವರಾಗಿದ್ದಾರೆ. ಇವರು ನಿರಂತರವಾಗಿ ಪಕ್ಷದ ಹೆಸರನ್ನು ಹೇಳಿಕೊಂಡು ಗ್ರಾಮ

ಪಕ್ಷ ವಿರೋಧಿ ಚಟುವಟಿಕೆ ಆರೋಪ | ಮೂವರು ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯರ ಉಚ್ಚಾಟನೆ Read More »

ಉಡುಪಿ ಲವ್‌ ಜಿಹಾದ್‌ ಪ್ರಕರಣಕ್ಕೆ ತಿರುವು : ಸ್ವಇಚ್ಚೆಯಿಂದ ಹೋಗಿದ್ದೇನೆ ಎಂದ ಯುವತಿ

ಎ.19ರಂದು ರಿಜಿಸ್ಟ್ರರ್‌ ಮದುವೆ ಮಾಡಿಕೊಳ್ಳುವುದಾಗಿ ಹೇಳಿಕೆ ಉಡುಪಿ: ಉಡುಪಿಯಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಲವ್‌ ಜಿಹಾದ್‌ ಪ್ರಕರಣ ಯುವತಿ ನ್ಯಾಯಾಲಯಕ್ಕೆ ಹಾಜರಾಗುವುದರೊಂದಿಗೆ ತಿರುವು ಪಡೆದುಕೊಂಡಿದೆ. ಕ್ರೈಸ್ತ ಸಮುದಾಯದ 19ರ ಹರೆಯದ ಕಾಲೇಜು ವಿದ್ಯಾರ್ಥಿನಿಯನ್ನು ಮುಹಮ್ಮದ್‌ ಅಕ್ರಮ್‌ ಎಂಬಾತ ಅಪಹರಿಸಿ ಬಲವಂತವಾಗಿ ಮದುವೆಯಾಗಲು ತಯಾರಿ ನಡೆಸಿದ್ದಾನೆ. ಈ ವಿಚಾರದಲ್ಲಿ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಯುವತಿಯ ತಾಯಿ ಕೆಲದಿನಗಳ ಹಿಂದೆ ಆರೋಪಿಸಿದ್ದರು. ಇದರ ಬೆನ್ನಿಗೆ ಹಿಂದು ಸಂಘಟನೆಗಳು ಮಧ್ಯೆ ಪ್ರವೇಶಿಸಿ ಲವ್‌ ಜಿಹಾದ್‌ ಅರೋಪ ಮಾಡಿದ್ದವು.ಅಪಹರಣ

ಉಡುಪಿ ಲವ್‌ ಜಿಹಾದ್‌ ಪ್ರಕರಣಕ್ಕೆ ತಿರುವು : ಸ್ವಇಚ್ಚೆಯಿಂದ ಹೋಗಿದ್ದೇನೆ ಎಂದ ಯುವತಿ Read More »

ವಂಚನೆ : ಕ್ರಿಪ್ಟೊ ಕರೆನ್ಸಿ ಹೂಡಿಕೆ ನೆಪದಲ್ಲಿ 70 ಲ.ರೂ. ವಂಚನೆ

ಮಂಗಳೂರು: ಕ್ರಿಪ್ಟೊ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಸಿಗುವ ನಂಬಿಕೆ ಹುಟ್ಟಿಸಿ ಸುಮಾರು 70 ಲ.ರೂ. ವಂಚಿಸಿದ ಕುರಿತು ಮಂಗಳೂರಿನ ವ್ಯಕ್ತಿಯೊಬ್ಬರು ಸೆನ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಫೇಸ್‌ಬುಕ್‌ನಲ್ಲಿ ಪರಿಚಿತನಾದ ರೈಸೆನ್‌ ಎಂಬ ವ್ಯಕ್ತಿ ದೂರುದಾರರ ವಿಶ್ವಾಸ ಸಂಪಾದಿಸಿ ಕ್ರಿಪ್ಟೊ ಕರೆನ್ಸಿ ಹೂಡಿಕೆಯ ಆಶೆ ಹುಟ್ಟಿಸಿದ್ದಾನೆ. ತಾನು ಕ್ರಿಪ್ಟೊ ಕರೆನ್ಸಿ ಟ್ರೇಡಿಂಗ್‌ ಮಾಡುತ್ತಿದ್ದು, ಅದರಲ್ಲಿ ಶೇ.30ರಷ್ಟು ಲಾಭಾಂಶವಿದೆ ಎಂದು ಹೇಳಿದ್ದ. ಅವನ ಮಾತು ನಂಬಿ ದೂರುದಾರರು ಫೆ.2ರಿಂದ 23ರ ವರೆಗೆ ಪ್ರತಿದಿನ ಹೂಡಿಕೆ ಮಾಡುತ್ತಿದ್ದರು. ಒಟ್ಟಾರೆಯಾಗಿ

ವಂಚನೆ : ಕ್ರಿಪ್ಟೊ ಕರೆನ್ಸಿ ಹೂಡಿಕೆ ನೆಪದಲ್ಲಿ 70 ಲ.ರೂ. ವಂಚನೆ Read More »

ಕಾಂಗ್ರೆಸ್‌ ಮುಖಂಡನ ಕಿರುಕುಳದಿಂದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ರಾಜಕೀಯ ಪ್ರೇರಿತ ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಆರೋಪ ಬೆಂಗಳೂರು : ಕಾಂಗ್ರೆಸ್‌ ಶಾಸಕರ ಆಪ್ತನ ಕಿರುಕುಳದಿಂದ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರಿನ ನಾಗವಾರದ ಕಚೇರಿಯಲ್ಲೇ ವಿನಯ್ ಸೋಮಯ್ಯ(35) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಡೆತ್​ನೋಟ್ ಪೋಸ್ಟ್ ಮಾಡಿದ್ದ ವಿನಯ್, ರಾಜಕೀಯ ಪ್ರೇರಿತ ಎಫ್‌ಐಆರ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದರು. ವಿನಯ್​ ವಾಟ್ಸ್​ಆ್ಯಪ್​ ಗ್ರೂಪ್​​ ಒಂದರ ಅಡ್ಮಿನ್ ಆಗಿದ್ದರು. ಆ ಗ್ರೂಪ್​ನಲ್ಲಿ ಇತ್ತೀಚೆಗೆ ಕಾಂಗ್ರೆಸ್​ ಶಾಸಕರೊಬ್ಬರ

ಕಾಂಗ್ರೆಸ್‌ ಮುಖಂಡನ ಕಿರುಕುಳದಿಂದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ Read More »

error: Content is protected !!
Scroll to Top