ಅಪರಾಧ

ಮುಂಡೂರಿನಲ್ಲಿ ಯುವತಿ ಹತ್ಯೆ: ಮಾಜಿ ಪ್ರಿಯಕರನಿಂದಲೇ ಕೃತ್ಯ ಶಂಕೆ

ಪುತ್ತೂರು: ಇಲ್ಲಿನ ಮುಂಡೂರು ಕಂಪದಲ್ಲಿ ಯುವತಿಯನ್ನು ಇರಿದು ಹತ್ಯೆಗೈದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತ ಯುವತಿ ಜಯಶ್ರೀ (23). ಬಿಎಸ್ಸಿ ಪದವೀಧರೆಯಾಗಿರುವ ಈಕೆಯನ್ನು ಭಗ್ನಪ್ರೇಮಿ ಇರಿದು ಹತ್ಯೆಗೈದಿದ್ದಾನೆ ಎಂದು ಹೇಳಲಾಗಿದೆ. ಮಂಗಳವಾರ ಮಧ್ಯಾಹ್ನ 11.30ಕ್ಕೆ ಮುಂಡೂರಿನ ಯುವತಿ ಮನೆಯಲ್ಲಿ ಘಟನೆ ನಡೆದಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿರುವುದಾಗಿ ತಿಳಿಸಲಾಗಿದೆ. ಮೃತ ಜಯಶ್ರೀ ಅವರು ದಿ. ಗುರುವ ಹಾಗೂ ಗಿರಿಜಾ ಎಂಬವರ ಪುತ್ರಿ. ಕಳೆದ ವರ್ಷ ಗುರುವ ಅವರು ಕೋವಿಡ್ ಸೋಂಕಿಗೆ ಬಲಿಯಾಗಿದ್ದರು. ಘಟನೆ: ಮೃತ ಯುವತಿ […]

ಮುಂಡೂರಿನಲ್ಲಿ ಯುವತಿ ಹತ್ಯೆ: ಮಾಜಿ ಪ್ರಿಯಕರನಿಂದಲೇ ಕೃತ್ಯ ಶಂಕೆ Read More »

ಮೊರಾರ್ಜಿ ವಸತಿ ಶಾಲೆಯ 80 ಮಕ್ಕಳು ಅಸ್ವಸ್ಥ

ಕೆಟ್ಟು ಹೋದ ಆಹಾರ ಸೇವನೆ ಶಂಕೆ ಶಿವಮೊಗ್ಗ: ಇಲ್ಲಿನ ಗೋಂದಿಚಟ್ನ ಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸುಮಾರು ಎಂಬತ್ತು ವಿದ್ಯಾರ್ಥಿಗಳು ಸೋಮವಾರ ಮಧ್ಯಾಹ್ನದ ಊಟ ಮುಗಿಸಿದ ಬಳಿಕ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಕ್ಕಳು ಅಸ್ವಸ್ಥಗೊಳ್ಳಲು ಆಹಾರ ಕಾರಣವೇ ಅಥವಾ ನೀರು ಕಾರಣವೇ ಎನ್ನುವುದು ಸ್ಪಷ್ಟವಾಗಿಲ್ಲ. ಮಧ್ಯಾಹ್ನದ ಚಪಾತಿ, ಅನ್ನ ಸಾಂಬಾರು ಸೇವಿಸಿದ ಬಳಿಕ ಮಕ್ಕಳಲ್ಲಿ ವಾಂತಿ ಮತ್ತು ಬೇಧಿ ಆರಂಭವಾಗಿದೆ.ಸುಮಾರು 250ಕ್ಕೂ ಹೆಚ್ಚು ಮಕ್ಕಳಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ಮಧ್ಯಾಹ್ನ ಚಪಾತಿ

ಮೊರಾರ್ಜಿ ವಸತಿ ಶಾಲೆಯ 80 ಮಕ್ಕಳು ಅಸ್ವಸ್ಥ Read More »

ಭಜನೆ, ಭಜಕರ ನಿಂದಿಸಿದ ಸಂಜೀವ ಪೂಜಾರಿ ಅಮಾನತು: ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ

ಪುತ್ತೂರು: ಭಜನೆ, ಭಜಕರ ನಿಂದಿಸಿ ಹಿಂದೂ ಸಮಾಜದ, ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರನ್ನು ಅಮಾನತುಗೊಳಿಸಿ ಶಿಸ್ತು ಪ್ರಾಧಿಕಾರಿ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶಿಸಿದ್ದಾರೆ. ಭಜನೆ ಹಾಗೂ ಭಜಕರನ್ನು ಸಾಮಾಜಿಕ ಜಾಲತಾಣದ ನಿಂದಿಸಿ ಅವಮಾನಿಸಿದ್ದ ಸಂಜೀವ ಪೂಜಾರಿ, ಈ ಹಿಂದೆಯೂ ಹಲವಾರು ಬಾರಿ ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಿದ್ದರು. ಕಡಬ ತಾಲೂಕಿನ ಹಿರೇಬಂಡಾಡಿ ಗ್ರಾಮಸಭೆಯಲ್ಲಿ ರೈತರ ಪ್ರಶ್ನೆಗೆ ಉಡಾಫೆಯಾಗಿ ಉತ್ತರಿಸಿದ್ದರು. ಇದು ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಿ, ಇಲಾಖೆಗೂ ದೂರು ನೀಡಲಾಗಿತ್ತು.

ಭಜನೆ, ಭಜಕರ ನಿಂದಿಸಿದ ಸಂಜೀವ ಪೂಜಾರಿ ಅಮಾನತು: ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ Read More »

ಕುಕ್ಕರ್‌ ಸ್ಫೋಟದ ಗಾಯಾಳು ಪುರುಷೋತ್ತಮ ಪೂಜಾರಿಯವರಿಗೆ ಇನ್ನೂ ಸಿಕ್ಕಿಲ್ಲ ಸರಕಾರದ ನೆರವು

ಚಿಕಿತ್ಸೆ ವೆಚ್ಚ ಭರವಸೆ ಹುಸಿ; ಆದಾಯ ಮೂಲವಿಲ್ಲದೆ ಕುಟುಂಬ ಸಂಕಷ್ಟದಲ್ಲಿ ಮಂಗಳೂರು : ಮಂಗಳೂರು ಕುಕ್ಕರ್ ಬ್ಲಾಸ್ಟ್‌ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅವರ ಚಿಕಿತ್ಸೆಯ ವೆಚ್ಚ ಗಗನ ಮುಟ್ಟಿದೆ. ಆದರೆ ಸರಕಾರದಿಂದ ಅವರಿಗೆ ಇನ್ನೂ ಚಿಕ್ಕಾಸಿನ ನೆರವು ಸಿಕ್ಕಿಲ್ಲ. ಚಿಕಿತ್ಸೆ ವೆಚ್ಚ ಭರಿಸುವ ಸರಕಾರದ ಭರವಸೆ ಹುಸಿಯಾಗಿದೆ. ಒಂದೆಡೆ ಬಾಂಬ್‌ ಬ್ಲಾಸ್ಟ್‌ ಮಾಡಿದ ಉಗ್ರ ಮಹಮ್ಮದ್‌ ಶಾರಿಕ್‌ಗೆ ಸರಕಾರದ ವೆಚ್ಚದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಚಿಕಿತ್ಸೆ ನೀಡಲಾಗುತ್ತಿದೆ. ಇದೇ

ಕುಕ್ಕರ್‌ ಸ್ಫೋಟದ ಗಾಯಾಳು ಪುರುಷೋತ್ತಮ ಪೂಜಾರಿಯವರಿಗೆ ಇನ್ನೂ ಸಿಕ್ಕಿಲ್ಲ ಸರಕಾರದ ನೆರವು Read More »

ಕಾಳಿ ಪೋಸ್ಟರ್‌ ವಿವಾದ : ಎಫ್‌ಐಆರ್‌ ರದ್ದುಗೊಳಿಸಲು ನಿರ್ದೇಶಕಿ ಅರ್ಜಿ

ಕಾಳಿ ಮಾತೆಯನ್ನು ಅಸಭ್ಯವಾಗಿ ಚಿತ್ರಿಸಿದ್ದ ನಿರ್ದೇಶಕಿ ಲೀನಾ ಮಣಿಮೇಕಲೈ ಹೊಸದಿಲ್ಲಿ : ಸಾಕ್ಷ್ಯಚಿತ್ರದ ಪೋಸ್ಟರ್‌ನಲ್ಲಿ ಕಾಳಿ ದೇವತೆ ಕೈಯಲ್ಲಿ ಸಿಗರೇಟ್ ಇರುವ ಪೋಸ್ಟರ್‌ ರಚಿಸಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದ ಅನಿವಾಸಿ ಭಾರತೀಯ ಚಿತ್ರ ನಿರ್ದೇಶಕಿ ಲೀನಾ ಮಣಿಮೇಕಲೈ ತನ್ನ ವಿರುದ್ಧ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.ಮಣಿಮೇಕಲೈ ಸ್ವತಃ ಕಾಳಿ ದೇವಿಯ ವೇಷ ಧರಿಸಿ ಬಾವುಟ ಹಿಡಿದು ಸಿಗರೇಟ್ ಸೇದುತ್ತಿರುವ ಪೋಸ್ಟರ್‌ ವಿರುದ್ಧ ದಿಲ್ಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ

ಕಾಳಿ ಪೋಸ್ಟರ್‌ ವಿವಾದ : ಎಫ್‌ಐಆರ್‌ ರದ್ದುಗೊಳಿಸಲು ನಿರ್ದೇಶಕಿ ಅರ್ಜಿ Read More »

ಫೆಮಾ ಉಲ್ಲಂಘನೆ : ಮಂಗಳೂರಿನ ಉದ್ಯಮಿಯ ಕೋಟಿಗಟ್ಟಲೆ ರೂ. ಆಸ್ತಿ ಜಪ್ತಿ

ವಿದೇಶಗಳಲ್ಲಿ ಫ್ಲ್ಯಾಟ್‌ ಸೇರಿ ಅಪಾರ ಆಸ್ತಿ ಖರೀದಿ ಮಂಗಳೂರು : ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಮಂಗಳೂರಿನ ಉದ್ಯಮಿಯೊಬ್ಬರ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿ ಜಾರಿ ನಿರ್ದೇಶನಾಲಯ(ಇಡಿ) ಆದೇಶ ಹೊರಡಿಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ 17 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಮಂಗಳೂರಿನ ಮುಕ್ಕ ಗ್ರೂಪ್ ಆಫ್ ಕಂಪನಿಸ್‌ನ ಮೊಹಮ್ಮದ್ ಹ್ಯಾರಿಸ್ ಹೆಸರಿನಲ್ಲಿದ್ದ 17.34 ಕೋಟಿಯ ಸ್ಥಿರಾಸ್ತಿ ಜಪ್ತಿ ಮಾಡಲಾಗಿದೆ. ಆದಾಯ ತೆರಿಗೆ

ಫೆಮಾ ಉಲ್ಲಂಘನೆ : ಮಂಗಳೂರಿನ ಉದ್ಯಮಿಯ ಕೋಟಿಗಟ್ಟಲೆ ರೂ. ಆಸ್ತಿ ಜಪ್ತಿ Read More »

ಅಜ್ಞಾತ ಸ್ಥಳದಲ್ಲಿ ಸ್ಯಾಂಟ್ರೊ ರವಿ ವಿಚಾರಣೆ

ಇಂದು ನ್ಯಾಯಾಲಯಕ್ಕೆ ಹಾಜರು ಬೆಂಗಳೂರು: ವೇಶ್ಯಾವಾಟಿಕೆ, ಅಕ್ರಮ ವರ್ಗಾವಣೆ, ಅತ್ಯಾಚಾರ ಸೇರಿದಂತೆ ಹಲವು ಆರೋಪಗಳನ್ನು ಎದುರಿಸುತ್ತಿರುವ ಸ್ಯಾಂಟ್ರೊ ರವಿಯನ್ನು ಕರ್ನಾಟಕ ಪೊಲೀಸರು ಗುಜರಾತ್​ನಿಂದ ಬೆಂಗಳೂರಿಗೆ ವಿಮಾನದಲ್ಲಿ ಕರೆತಂದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಣ್ಣುತಪ್ಪಿಸಿ ರವಿಯನ್ನು ಪೊಲೀಸರು ಹೊರಗೆ ಕರೆದೊಯ್ದಿದ್ದಾರೆ. ನಿಲ್ದಾಣದ ಒಂದು ದ್ವಾರದಲ್ಲಿ ಎಲ್ಲರಿಗೂ ಕಾಣಿಸುವಂತೆ, ಮತ್ತೊಂದು ದ್ವಾರದಲ್ಲಿ ಗೌಪ್ಯವಾಗಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ವಿಮಾನ ನಿಲ್ದಾಣದ ಭದ್ರತಾಪಡೆಯ ಗೇಟ್‌ನಿಂದ ಹೊರಗೆ ಕರೆದೊಯ್ಯಲಾಗಿದೆ.ರಾಯಚೂರು, ಮಂಡ್ಯ ಹಾಗೂ ಮೈಸೂರು

ಅಜ್ಞಾತ ಸ್ಥಳದಲ್ಲಿ ಸ್ಯಾಂಟ್ರೊ ರವಿ ವಿಚಾರಣೆ Read More »

ಮಹಿಳಾ ಕ್ರಿಕೆಟರ್‌ ಶವ ಕಾಡಿನಲ್ಲಿ ಪತ್ತೆ

ಸಾವಿನ ಸುತ್ತ ಹಲವು ಅನುಮಾನ ಭುವನೇಶ್ವರ: ಒಡಿಶಾದ ಉದಯೋನ್ಮುಖ ಕ್ರಿಕೆಟ್ ಆಟಗಾರ್ತಿಯೊಬ್ಬರ ಶವ ಅರಣ್ಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಸುತ್ತ ಅನುಮಾನ ವ್ಯಕ್ತವಾಗಿದೆ.ಕ್ರಿಕೆಟ್ ಆಟರ್ಗಾತಿ ರಾಜಶ್ರೀ ಸ್ವೈನಿ ಅವರ ಶವ ಕಟಕ್ ಬಳಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಜ.11ರಿಂದ ರಾಜಶ್ರೀ ನಾಪತ್ತೆಯಾಗಿದ್ದರು. ರಾಜಶ್ರೀ ಅವರ ತರಬೇತಿದಾರರು ಗುರುವಾರ ಕಟಕ್‌ನ ಮಂಗಳಬಾಗ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಗುರ್ಡಿ ಜಾಟಿಯಾ ಪೊಲೀಸ್ ಠಾಣೆಯಲ್ಲಿ ರಾಜಶ್ರೀ ಅವರ ಸಾವಿನ ಕುರಿತು ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ.

ಮಹಿಳಾ ಕ್ರಿಕೆಟರ್‌ ಶವ ಕಾಡಿನಲ್ಲಿ ಪತ್ತೆ Read More »

526 ಕೋ.ರೂ. ವಂಚನೆ : ಉದ್ಯಮಿ ಬಂಧನ

ರಿಯಲ್‌ ಎಸ್ಟೇಟ್‌ ಉದ್ಯಮಿಯಿಂದ ಹೂಡಿಕೆದಾರರಿಗೆ ಪಂಗನಾಮ ಬೆಂಗಳೂರು: 500 ಕೋಟಿ ರೂ.ಗೂ ಅಧಿಕ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬಯಿಯ ಕರಣ್ ಗ್ರೂಪ್ ಬಿಲ್ಡರ್ಸ್ & ಡೆವಲಪರ್ಸ್ ಮುಖ್ಯಸ್ಥ ಮಹೇಶ್ ಬಿ.ಓಜಾ ಅವರನ್ನು ಗುರುವಾರ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.ನ್ಯಾಯಾಲಯ ಓಜಾ ಅವರನ್ನು 10 ದಿನಗಳ ಇಡಿ ಕಸ್ಟಡಿಗೆ ಒಪ್ಪಿಸಿದೆ.ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ಹೂಡಿಕೆಯ ಹೆಸರಿನಲ್ಲಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಓಜಾ ವಿರುದ್ಧ ಕರ್ನಾಟಕ ಪೊಲೀಸರು ಹಲವು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ ಎಂದು

526 ಕೋ.ರೂ. ವಂಚನೆ : ಉದ್ಯಮಿ ಬಂಧನ Read More »

ತೀರ್ಥಹಳ್ಳಿ ಕಾಂಗ್ರೆಸ್‌ ಕಚೇರಿಯಲ್ಲಿ ಎನ್‌ಐಎ ಶೋಧ

ಶಂಕಿತ ಉಗ್ರ ಶಾರಿಕ್‌ ಕುಟುಂಬಕ್ಕೆ ಸೇರಿದ ಕಟ್ಟದಲ್ಲಿದೆ ಕಾಂಗ್ರೆಸ್‌ ಕಚೇರಿ ಶಿವಮೊಗ್ಗ: ತೀರ್ಥಹಳ್ಳಿಯಲ್ಲಿರುವ ಕಾಂಗ್ರೆಸ್‌ ಕಚೇರಿ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ನ ಮಾಜಿ ಶಾಸಕ ಹಾಗೂ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌ ಅವರನ್ನು ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಮಂಗಳೂರು ಕುಕ್ಕರ್‌ ಸ್ಫೋಟ ಪ್ರಕರಣದ ಆರೋಪಿ ಮಹಮ್ಮದ್‌ ಶಾರೀಕ್‌ ಕುಟುಂಬದ ಆಸ್ತಿಯನ್ನು ಕಾಂಗ್ರೆಸ್‌ ಲೀಸ್‌ಗೆ ಪಡೆದಿರುವ ಕುರಿತು ವಿಚಾರಣೆ ನಡೆಸಲಾಗಿದೆ.ತೀರ್ಥಹಳ್ಳಿ ಪಟ್ಟಣದಲ್ಲಿರುವ ಕಾಂಗ್ರೆಸ್ ಕಚೇರಿ ಹಾಗೂ ಅದರ ಮೇಲೆ

ತೀರ್ಥಹಳ್ಳಿ ಕಾಂಗ್ರೆಸ್‌ ಕಚೇರಿಯಲ್ಲಿ ಎನ್‌ಐಎ ಶೋಧ Read More »

error: Content is protected !!
Scroll to Top