ಅಪರಾಧ

ಬ್ಯಾನರ್‌ ಗಲಾಟೆ : ಶಾಸಕ ಭರತ್‌ ರೆಡ್ಡಿ ಸಹಿತ ಹಲವರ ವಿರುದ್ಧ ಕೇಸ್‌

ಬ್ಯಾನರ್‌ ಕಟ್ಟುವ ಗಲಾಟೆಯಲ್ಲಿ ಗುಂಡೇಟಿಗೆ ಯುವಕ ಬಲಿಯಾದ ಪ್ರಕರಣ ಬಳ್ಳಾರಿ : ಬಳ್ಳಾರಿ ಬ್ಯಾನರ್​ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್​​​ಐಆರ್​​ ದಾಖಲು ಮಾಡಲಾಗಿದೆ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​​​ಐಆರ್ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದೆ. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್​​, ನಾರಾ ಪ್ರತಾಪ್ ರೆಡ್ಡಿ, ನಾರಾ […]

ಬ್ಯಾನರ್‌ ಗಲಾಟೆ : ಶಾಸಕ ಭರತ್‌ ರೆಡ್ಡಿ ಸಹಿತ ಹಲವರ ವಿರುದ್ಧ ಕೇಸ್‌ Read More »

ಮೂಲ್ಕಿ : ಹಲ್ಲೆ ಕೃತ್ಯದಿಂದ ಪ್ರಕ್ಷುಬ್ಧ ಪರಿಸ್ಥಿತಿ

ಹಣ ಸುಲಿಯಲು ಯತ್ನಿಸಿ ಕಂಬಳ ಕೋಣಗಳ ಮಾಲೀಕನ ಮೇಲೆ ಹಲ್ಲೆ ಮಂಗಳೂರು : ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಾರಗುಡ್ಡೆ ಎಂಬಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ನಡೆದ ಹಲ್ಲೆ ಕೃತ್ಯ ಪರಿಸ್ಥಿತಿ ಸೂಕ್ಷ್ಮವಾಗುವಂತೆ ಮಾಡಿದೆ. ಹೈನುಗಾರಿಕೆ ಮತ್ತು ಕಂಬಳದ ಕೋಣಗಳನ್ನು ಸಾಕಿರುವ ಅಂಗಾರಗುಡ್ಡೆಯ ನಿವಾಸಿ ಅಬೂಬಕ್ಕರ್ ಎಂಬವರಿಂದ ಹಣ ಸುಲಿಗೆಗೆ ಯತ್ನಿಸಿಮೂವರು ಪುಡಿ ರೌಡಿಗಳು ಈ ಕೃತ್ಯ ಎಸಗಿದ್ದಸರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ. ಅಂಗಾರಗುಡ್ಡೆಯ ಅಬೂಬಕ್ಕರ್ ಅವರ

ಮೂಲ್ಕಿ : ಹಲ್ಲೆ ಕೃತ್ಯದಿಂದ ಪ್ರಕ್ಷುಬ್ಧ ಪರಿಸ್ಥಿತಿ Read More »

ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿದ್ದಾರೆ : ಶ್ರೀರಾಮುಲು ಆರೋಪ

ಸತೀಶ್‌ ರೆಡ್ಡಿ ಗನ್‌ಮ್ಯಾನ್‌ಗಳು ಗುಂಡು ಹಾರಿಸಿದ್ದಾರೆ ಎಂದು ಶ್ರೀರಾಮುಲು ಬಳ್ಳಾರಿ: ಬ್ಯಾನರ್ ಗಲಾಟೆ ವೇಳೆ ಶಾಸಕ ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿ ಪೆಟ್ರೋಲು ಬಾಂಬ್‌ ಎಸೆದಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಗಂಭೀರ ಆರೋಪಿಸಿದ್ದಾರೆ. ಶಾಸಕ ಗಾಲಿ ಜನಾರ್ದನ ರೆಡ್ಡಿ ನಿವಾಸದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಶ್ರೀರಾಮುಲು, ನಿನ್ನೆ ಆದ ಘಟನೆ ನಮ್ಮೆಲ್ಲರಿಗೂ ನೋವು ತರಿಸಿದೆ. ಏನು ನಡೆಯಬಾರದಾಗಿತ್ತೋ ಅದೆಲ್ಲಾ ನಡೆದು ಹೋಗಿದೆ. ಅಮಾಯಕ ರಾಜಶೇಖರ್ ಅನ್ನೋ ಯುವಕನ ಸಾವಾಗಿದೆ. ಆ ಯುವಕ ಯಾವುದೇ ಪಾರ್ಟಿಗೆ

ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿದ್ದಾರೆ : ಶ್ರೀರಾಮುಲು ಆರೋಪ Read More »

ಉಪ್ಪಿನಂಗಡಿ : ಬ್ಯಾಂಕ್‌ ಮ್ಯಾನೇಜರ್‌ ನಾಪತ್ತೆ

ಉಪ್ಪಿನಂಗಡಿ: ಇಲ್ಲಿನ ಪೆರ್ನೆ ಎಂಬಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಉಪಶಾಖಾ ಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ಎಂಬವರು ಡಿ. 17ರಿಂದ ನಾಪತ್ತೆಯಾಗಿರುವ ಕುರಿತು ಅವರ ಸಹೋದರ ದೂರು ನೀಡಿದ್ದಾರೆ. ಬಿ.ಸಿ.ರೋಡಿನಲ್ಲಿ ವಿಷ್ಣು ಎಂಬವರ ಜೊತೆ ರೂಮೊಂದರಲ್ಲಿ ವಾಸ್ತವ್ಯ ಹೊಂದಿದ್ದ ಸುಬ್ರಹ್ಮಣ್ಯಂ ಡಿ.17ರಂದು ತಮ್ಮನಿಗೆ ಹುಷಾರಿಲ್ಲ ಎಂದು ರೂಮಿಗೆ ಹೋಗುತ್ತೇನೆಂದು ಹೇಳಿ ಹೋದವರು ಬಳಿಕ ಕಾಣೆಯಾಗಿದ್ದಾರೆ. ರೂಮ್‌ಮೇಟ್‌ ವಿಷ್ಣುವಿನಲ್ಲಿ ತಾನು ಊರಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದಾನೆನ್ನಲಾಗಿದೆ. ಆದರೆ ಊರಿಗೂ ಹೋಗದೆ ಎಲ್ಲಿಯೂ ಕಾಣಿಸದೆ ನಾಪತ್ತೆಯಾಗಿರುವುದಾಗಿ ದೂರಲಾಗಿದೆ.

ಉಪ್ಪಿನಂಗಡಿ : ಬ್ಯಾಂಕ್‌ ಮ್ಯಾನೇಜರ್‌ ನಾಪತ್ತೆ Read More »

ಬ್ಯಾನರ್‌ ಗಲಾಟೆಯಲ್ಲಿ ಸಿಡಿದ ಗುಂಡಿಗೆ ಕಾಂಗ್ರೆಸ್‌ ಕಾರ್ಯಕರ್ತ ಬಲಿ : ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಕೇಸ್‌

ಬ್ಯಾನರ್‌ ಕಟ್ಟುವ ವಿಚಾರದಲ್ಲಿ ರಣರಂಗವಾದ ಬಳ್ಳಾರಿ, ನಿಷೇಧಾಜ್ಞೆ ಜಾರಿ ಬಳ್ಳಾರಿ : ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆ ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ನಡೆದಿದೆ. ಜನವರಿ 3ರಂದು ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಳ್ಳಾರಿ ನಗರದಾದ್ಯಂತ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ. ಅದೇ ರೀತಿ ಅವಂಬಾವಿಯ ಜನಾರ್ದನ ರೆಡ್ಡಿ ಅವರ ನಿವಾಸದೆದುರು ಬ್ಯಾನರ್ ಅಳವಡಿಸುವುದನ್ನು ಅವರ ಬೆಂಬಲಿಗರು ವಿರೋಧಿಸಿದ್ದಾರೆ. ಈ ವೇಳೆ ಜನಾರ್ದನ ರೆಡ್ಡಿ

ಬ್ಯಾನರ್‌ ಗಲಾಟೆಯಲ್ಲಿ ಸಿಡಿದ ಗುಂಡಿಗೆ ಕಾಂಗ್ರೆಸ್‌ ಕಾರ್ಯಕರ್ತ ಬಲಿ : ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಕೇಸ್‌ Read More »

ನಿಶ್ಚಿತಾರ್ಥವಾಗಿದ್ದ ಯುವತಿಗೆ ಇನ್ಸ್ಟಾಗ್ರಾಮ್‌ನಲ್ಲಿ ಮೆಸೇಜ್: ಯುವಕನ ಹತ್ಯೆ

ಚಿಕ್ಕಮಗಳೂರು: ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಗೆ ಇನ್ಸ್ಟಾ‌ಗ್ರಾಮ್‌ನಲ್ಲಿ ಯುವಕನೊಬ್ಬ ಮೆಸೇಜ್ ಮಾಡುವ ಮೂಲಕ ಕಾಟ ಕೊಟ್ಟಿದ್ದು, ಆತನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತರೀಕೆರೆಯ ಅತ್ತಿಗನಾಳು ಗ್ರಾಮದ ಬಳಿ ನಡೆದಿದೆ. ಮಂಜುನಾಥ್ (21) ಎಂಬವನೇ ಕೊಲೆಯಾದ ಯುವಕ. ಹತ್ಯೆ ಮಾಡಿದ ಆರೋಪಿಯನ್ನು ವೇಣು ಎಂದು ಗುರುತಿಸಲಾಗಿದೆ. ಮಂಜುನಾಥ್‌ಗೆ ಯುವತಿಯೊಬ್ಬಳ ಪರಿಚಯವಾಗಿತ್ತು. ಆಕೆಗೆ ವೇಣು ಎಂಬಾತನ ಜೊತೆ ವಿವಾಹ ನಿಶ್ಚಯವಾಗಿತ್ತು. ಹಾಗಿದ್ದರೂ ಮಂಜುನಾಥ್ ಪದೇ ಪದೇ ಆಕೆಗೆ ಮೆಸೇಜ್ ಮಾಡಿ ಕಿರಿಕಿರಿ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಮೆಸೇಜ್

ನಿಶ್ಚಿತಾರ್ಥವಾಗಿದ್ದ ಯುವತಿಗೆ ಇನ್ಸ್ಟಾಗ್ರಾಮ್‌ನಲ್ಲಿ ಮೆಸೇಜ್: ಯುವಕನ ಹತ್ಯೆ Read More »

ಭಾರತಕ್ಕೂ ಬಂದರಾ ಅನಾಮಿಕ ಶೂಟರ್ಸ್‌? : ಪುಣೆಯಲ್ಲಿ ಬಾಂಬ್‌ ಸ್ಫೋಟ ಆರೋಪಿಯ ಹತ್ಯೆ

ಬೈಕಿನಲ್ಲಿ ಬಂದು ಗುಂಡಿಕ್ಕಿ ಪಲಾಯನ ಮಾಡಿದ ಅಜ್ಞಾತ ದುಷ್ಕರ್ಮಿಗಳು ಪುಣೆ: 2012ರಲ್ಲಿ ಪುಣೆಯಲ್ಲಿ ಸಂಭವಿಸಿದ ಸ್ಫೋಟ ಆರೋಪಿಯನ್ನು ಮಹಾರಾಷ್ಟ್ರದಲ್ಲಿ ಅನಾಮಿಕರು ಗುಂಡಿಕ್ಕಿ ಕೊಂದು ಹಾಕಿದ್ದಾರೆ ಎಂದು ವರದಿಯಾಗಿದೆ. 2012ರ ಪುಣೆ ಸರಣಿ ಸ್ಫೋಟ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಬಂಟಿ ಜಹಗೀರ್ದಾರ್ ಎಂಬಾತನನ್ನು ಬುಧವಾರ ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಶ್ರೀರಾಂಪುರ ಪಟ್ಟಣದಲ್ಲಿ ಅನಾಮಿಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 50 ವರ್ಷದ ಜಹಗೀರ್ದಾರ್ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೊರಾವಕೆ ಕಾಲೇಜು ರಸ್ತೆಯಲ್ಲಿರುವ ಸ್ಮಶಾನದಿಂದ ದ್ವಿಚಕ್ರ ವಾಹನದಲ್ಲಿ

ಭಾರತಕ್ಕೂ ಬಂದರಾ ಅನಾಮಿಕ ಶೂಟರ್ಸ್‌? : ಪುಣೆಯಲ್ಲಿ ಬಾಂಬ್‌ ಸ್ಫೋಟ ಆರೋಪಿಯ ಹತ್ಯೆ Read More »

ಧರ್ಮಸ್ಥಳ ಪ್ರಕರಣಕ್ಕೆ ದಿಢೀರ್‌ ತಿರುವು : ಘಟಾನುಘಟಿ ವಕೀಲರ ಎಂಟ್ರಿ

ದೇವಸ್ಥಾನದ ಪರವಾಗಿ ವಾದ ಮಾಡಲು ನಾಡಿನ ಖ್ಯಾತ ವಕೀಲರಿಂದ ವಕಾಲತ್ತು ಸಲ್ಲಿಕೆ ಬೆಳ್ತಂಗಡಿ: ದೇಶಾದ್ಯಂತ ಭಾರಿ ಸುದ್ದಿಯಾಗಿದ್ದ ಧರ್ಮಸ್ಥಳ ಷಡ್ಯಂತ್ರ ಪ್ರಕರಣಕ್ಕೆ ದಿಢೀರ್‌ ಎಂದು ತಿರುವು ಸಿಕ್ಕಿದ್ದು, ಧರ್ಮಸ್ಥಳ ದೇವಸ್ಥಾನದ ಪರವಾಗಿ ವಾದಿಸಲು ನಾಡಿನ ಖ್ಯಾತ ವಕೀಲರು ಮುಂದೆ ಬಂದಿದ್ದಾರೆ. ಪ್ರಕರಣ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳದ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವಕಾಲತ್ತು ಸಲ್ಲಿಕೆಯಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 39/2025ರ ಸಂಬಂಧ ಬೆಂಗಳೂರಿನ ಹಿರಿಯ ನ್ಯಾಯವಾದಿ ಸಿ.ವಿ. ನಾಗೇಶ್ ಹಾಗೂ ಪುತ್ತೂರಿನ ಮಹೇಶ್ ಕಜೆ

ಧರ್ಮಸ್ಥಳ ಪ್ರಕರಣಕ್ಕೆ ದಿಢೀರ್‌ ತಿರುವು : ಘಟಾನುಘಟಿ ವಕೀಲರ ಎಂಟ್ರಿ Read More »

ಸುಳ್ಯ : ರಿಕ್ಷಾ ಚಾಲಕನ ಹತ್ಯೆ ಮಾಡಿದ ಇಬ್ಬರ ಬಂಧನ

ಸುಳ್ಯ: ಆಟೋರಿಕ್ಷಾ ಚಾಲಕ ಅಬ್ದುಲ್ ಜಬ್ಬಾರ್ ಎಂಬವರನ್ನು ಕೊಲೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಳ್ಯ ಕಸಬ ನಿವಾಸಿ ಮೊಹಮ್ಮದ್ ರಫೀಕ್ (41) ಮತ್ತು ಸುಳ್ಯ ಸಂಪಾಜೆ ನಿವಾಸಿ ಮನೋಹರ್ ಕೆ.ಎಸ್ ಯಾನೆ ಮನು (42)ಬಂದಿತ ಆರೋಪಿಗಳು. ಅಬ್ದುಲ್ ಜಬ್ಬಾರ್ ಎಂಬವರನ್ನು 2025ರ ಅಕ್ಟೋಬರ್‌ 16ರಂದು ಮಧ್ಯಾಹ್ನ ವೇಳೆ, ಆರೋಪಿಗಳಾದ ಮೊಹಮ್ಮದ್ ರಫೀಕ್ ಮತ್ತು ಇತರರು, ಬಾಡಿಗೆಯ ನೆಪದಲ್ಲಿ ದುಗ್ಗಲಡ್ಕ ಎಂಬಲ್ಲಿಗೆ ಕರೆದುಕೊಂಡು ಹೋಗಿ ಕಿರುಕುಳ ನೀಡಿ, ಅಲ್ಲಿಂದ ಸುಳ್ಯ ಕಲ್ಲುಗುಂಡಿಗೆ ಕರೆತಂದು ಮಾರಣಾಂತಿಕ ಹಲ್ಲೆ

ಸುಳ್ಯ : ರಿಕ್ಷಾ ಚಾಲಕನ ಹತ್ಯೆ ಮಾಡಿದ ಇಬ್ಬರ ಬಂಧನ Read More »

ಪುತ್ತೂರು : ನಿವೃತ್ತ ಪ್ರಾಂಶುಪಾಲರ ಮನೆಯಲ್ಲಿ ದರೋಡೆಗೆ ಯತ್ನಿಸಿದ ದಂಪತಿ ಬಂಧನ

ಪುತ್ತೂರು: ನಿವೃತ್ತ ಪ್ರಾಂಶುಪಾಲರ ಮನೆಗೆ ಮಧ್ಯರಾತ್ರಿ ನುಗ್ಗಿ ದರೋಡೆಗೆ ಯತ್ನಿಸಿ, ದಂಪತಿಯನ್ನು ಬೆದರಿಸಿದ ಪ್ರಕರಣದಲ್ಲಿ ಪುತ್ತೂರು ನಗರ ಪೊಲೀಸರು ಆರೋಪಿಗಳಾದ ಆರ್ಚಕ ಹಾಗೂ ಆತನ ಪತ್ನಿಯನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಕಾರ್ತಿಕ್ ರಾವ್(31) ಹಾಗೂ ಅವನ ಪತ್ನಿ ಸ್ವಾತಿ ರಾವ್ ಬಂಧಿತ ಆರೋಪಿಗಳು. ಪುತ್ತೂರು ಕಸಬಾ ನಿವಾಸಿ ನಿವೃತ್ತ ಪ್ರಾಂಶುಪಾಲ ಎ.ವಿ.ನಾರಾಯಣ(84) ಅವರು ನೀಡಿದ ದೂರಿನಂತೆ ಡಿ.17ರ ಮಧ್ಯರಾತ್ರಿ ಇಬ್ಬರು ಅಪರಿಚಿತರು ಹೆಲೈಟ್ ಧರಿಸಿಕೊಂಡು ಮುಖಚಹರೆಯನ್ನು ಮರೆಮಾಚಿ ಮನೆ ಹಿಂಬಾಗಿಲಿನಿಂದ ಪ್ರವೇಶಿಸಿ

ಪುತ್ತೂರು : ನಿವೃತ್ತ ಪ್ರಾಂಶುಪಾಲರ ಮನೆಯಲ್ಲಿ ದರೋಡೆಗೆ ಯತ್ನಿಸಿದ ದಂಪತಿ ಬಂಧನ Read More »

error: Content is protected !!
Scroll to Top