ಅಪರಾಧ

8.50 ಕೋ. ರೂ. ಮೌಲ್ಯದ ಡ್ರಗ್ಸ್ ವಶ – ಐವರು ನೈಜೀರಿಯಾ ಪ್ರಜೆಗಳ ಬಂಧನ

ಬೆಂಗಳೂರು ಪೊಲೀಸರ ಕಾರ್ಯಾಚರಣೆ ಬೆಂಗಳೂರು : ಬೆಂಗಳೂರು ಪೊಲೀಸರು ಇಂದು ವಿದೇಶಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿ 8.50 ಕೋಟಿ ರೂ.ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.ದಕ್ಷಿಣ ವಿಭಾಗದ ವಿವಿ ಪುರಂ ಹಾಗೂ ಜಯನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು 5 ಮಂದಿ ನೈಜೀರಿಯಾ ಪ್ರಜೆಗಳು ಸೆರೆಯಾಗಿದ್ದಾರೆ.7.32 ಕೋಟಿ ರೂ. ಮೌಲ್ಯದ 1 ಕೆಜಿ 850 ಗ್ರಾಂ ಎಂಡಿಎಂಎ, 1 ಕೆಜಿ 150 ಗ್ರಾಂ ಬ್ರೌನ್‍ಶುಗರ್, 310 ಗ್ರಾಂ ಕೊಕೈನ್‍ನನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವೀಸಾ ಅವಧಿ 3 ವರ್ಷಗಳ ಹಿಂದೆಯೇ […]

8.50 ಕೋ. ರೂ. ಮೌಲ್ಯದ ಡ್ರಗ್ಸ್ ವಶ – ಐವರು ನೈಜೀರಿಯಾ ಪ್ರಜೆಗಳ ಬಂಧನ Read More »

1.999 ಕೆಜಿ ಗಾಂಜಾ ವಶ : ಯುವಕನ ಬಂಧನ

ಮಂಗಳೂರು : ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ ಯುವಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಏ. 10 ರಂದು ಮರಕಡ್ಡದ ಪಡುಶೆಡ್ಡೆ ರಸ್ತೆ ಬದಿಯಲ್ಲಿ ಸಂಛವಿಸಿದೆ.ಬಂಧಿತ ಆರೋಪಿಯನ್ನು ಮಲ್ಪೆ ನಿವಾಸಿ ಸುಹಾನ್ ಎಸ್ ಪೂಜಾರಿ (23) ಎಂದು ಗುರುತಿಸಲಾಗಿದೆ. ಸುಹಾನ್ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರಕಡ್ಡದ ಪಡುಶೆಡ್ಡೆ ಬಳಿ ರಸ್ತೆ ಬದಿ ಸ್ಕೂಟರ್‌ನಲ್ಲಿ ಕುಳಿತು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.ಆತನಿಂದ 1.999 ಕೆಜಿ ಗಾಂಜಾ, ಮೊಬೈಲ್ ಮತ್ತು ಸ್ಕೂಟರ್ ಅನ್ನು ಪೊಲೀಸರು ಜಪ್ತಿ

1.999 ಕೆಜಿ ಗಾಂಜಾ ವಶ : ಯುವಕನ ಬಂಧನ Read More »

ಚಾರ್ಮಾಡಿ ಘಾಟಿ : ಕಂದಕಕ್ಕೆ ಉರುಳಿದ ಕಾರು, ಮಹಿಳೆ ಮೃತ

ಉಜಿರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಪ್ರಯಾಣಿಸುತ್ತಿದ್ದ ಕಾರು ಬೆಳ್ತಂಗಡಿ : ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ಕಾರು ಕಂದಕಕ್ಕೆ ಉರುಳಿ ಬಿದ್ದು ಉಜಿರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆಯ ಸಂಬಂಧಿಕ ಮಹಿಳೆಯೋರ್ವರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ಉಜಿರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಪುಷ್ಪಾವತಿ ಆರ್‌.ಶೆಟ್ಟಿಯವರು ಕುಟುಂಬದ ಜತೆ ಕೊಪ್ಪದಲ್ಲಿ ಅಂತ್ಯಕ್ರಿಯೆಯೊಂದರಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದಾಗ ಚಾರ್ಮಾಡಿಯ ಎರಡನೇ ತಿರುವಿನಲ್ಲಿ ಕಾರು ಬ್ರೇಕ್‌ ಫೈಲ್‌ ಆಗಿ ಸುಮಾರು 100 ಅಡಿ ಆಳದ ಕಂದಕಕ್ಕೆ ಉರುಳಿದೆ. ಅಪಘಾತದಲ್ಲಿ ಪುಷ್ಪಾವತಿ ಆರ್‌.

ಚಾರ್ಮಾಡಿ ಘಾಟಿ : ಕಂದಕಕ್ಕೆ ಉರುಳಿದ ಕಾರು, ಮಹಿಳೆ ಮೃತ Read More »

ನೀತಿಸಂಹಿತೆ ಜಾರಿಯಾದ 10 ದಿನದಲ್ಲಿ 100 ಕೋ. ರೂ. ನಗದು, ವಸ್ತುಗಳು ವಶ

ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕಣ್ಗಾವಲು ಬೆಂಗಳೂರು : ಚುನಾವಣಾ ನೀತಿಸಂಹಿತೆ ಜಾರಿಯಾದ ಹತ್ತು ದಿನಗಳಲ್ಲಿ ಪೊಲೀಸರು 99.18 ಕೋಟಿ ರೂ. ಮೌಲ್ಯದ ಹಣ ಮತ್ತು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಚುನಾವಣೆಯಲ್ಲಿ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಅಕ್ರಮ ನಡೆಯದಂತೆ ಹದ್ದಿನ ಕಣ್ಣಿರಿಸಿದೆ. ನಗದು ವಹಿವಾಟುಗಳ ಮೇಲೆ ನಿಗಾ ಇರಿಸಿದ್ದು ಚೆಕ್​ಪೋಸ್ಟ್​​ಗಳನ್ನು ನಿರ್ಮಿಸಲಾಗಿದೆ. ದಾಖಲೆ ರಹಿತ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಮತದಾರರಿಗೆ ಆಮಿಷ ಒಡ್ಡಲು ಸಾಗಿಸುತ್ತಿದ್ದ ಗಿಫ್ಟ್​​ಗಳನ್ನೂ ಆಯೋಗ ಜಪ್ತಿ ಮಾಡಿಕೊಂಡಿದೆ. ಮಾ.29ರಂದು ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಅಂದಿನಿಂದ

ನೀತಿಸಂಹಿತೆ ಜಾರಿಯಾದ 10 ದಿನದಲ್ಲಿ 100 ಕೋ. ರೂ. ನಗದು, ವಸ್ತುಗಳು ವಶ Read More »

5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ವಿಷ ಪ್ರಾಷನ

ಇರಾನ್‌ನಲ್ಲಿ ಶಾಲಾ ಬಾಲಕಿಯರಿಗೆ ವಿಷವುಣ್ಣಿಸುತ್ತಿರುವ ಪ್ರಕರಣ ಹೆಚ್ಚಳ ಟೆಹ್ರಾನ್: ಹಿಜಾಬ್‌ ವಿರೋಧಿ ಪ್ರತಿಭಟನೆಯಿಂದ ಕುಲುಮೆಯಂತಾಗಿರುವ ಇರಾನ್‌ನಲ್ಲಿ ಈಗ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಮಕ್ಕಳಿಗೆ ವಿಷವಿಕ್ಕುವ ಬರ್ಬರ ಕೃತ್ಯ ನಡೆಯುತ್ತಿದೆ. ಕೆಲವು ತಿಂಗಳುಗಳಿಂದ ಇರಾನ್‌ನಲ್ಲಿ ಬೆಚ್ಚಿ ಬೀಳಿಸಿರುವ ನಿಗೂಢ ವಿದ್ಯಮಾನಗಳು ನಡೆಯುತ್ತಿವೆ. ಶನಿವಾರ ಹಲವಾರು ಶಾಲೆಗಳಲ್ಲಿ ಬಾಲಕಿಯರಿಗೆ ನಿಧಾನ ವಿಷ ಪ್ರಾಷನ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ನವೆಂಬರ್ ಅಂತ್ಯದಿಂದ ಅನೇಕ ಶಾಲೆಗಳಲ್ಲಿ ಬಾಲಕಿಯರು ದಿಢೀರನೇ ವಿಷ ಪ್ರಾಷನ ಪ್ರಕರಣಕ್ಕೆ ಒಳಗಾಗುತ್ತಿದ್ದಾರೆ. ಕೆಲವು ಪ್ರಕರಣಗಳಲ್ಲಿ ವಿದ್ಯಾರ್ಥಿಗಳು

5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ವಿಷ ಪ್ರಾಷನ Read More »

ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆ

ಬಂಟ್ವಾಳ: ಬಿ.ಸಿ.ರೋಡ್ ಸಮೀಪದ ಮಿತ್ತಬೈಲು ನಿವಾಸಿ, ಶಾಲಾ ಬಾಲಕನೋರ್ವನ ಮೃತದೇಹ ಶನಿವಾರ ತಡರಾತ್ರಿ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ಕೆರೆಯಲ್ಲಿ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರ, ಬಿ.ಸಿ.ರೋಡಿನ ಖಾಸಗಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಅಝೀಂ (13)  ಮೃತ ಬಾಲಕ. ಶನಿವಾರ ಮಧ್ಯಾಹ್ನದ ವೇಳೆಗೆ ಪಾಣೆಮಂಗಳೂರು ಅಜ್ಜಿ ಮನೆಗೆ ಬಂದಿದ್ದ ಬಾಲಕ ಮಧ್ಯಾಹ್ನದ ಬಳಿಕ ಬಾಲಕ ಕಾಣೆಯಾಗಿದ್ದ. ಹುಡುಕಾಟವೂ ಸಫಲರಾಗಿರಲಿಲ್ಲ ಎನ್ನಲಾಗಿದೆ. ಬಂಟ್ವಾಳ ನಗರ ಠಾಣೆಯಲ್ಲಿ ನಾಪತ್ತೆಯಾದ ಬಗ್ಗೆ ದೂರು

ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆ Read More »

ಡಿವೈಡರ್‌ ಗೆ ಕಾರು ಡಿಕ್ಕಿ : ನಂದರಬೆಟ್ಟು ಸದಾಶಿವ ಆಚಾರ್ಯ ಮೃತ್ಯು

ಬಂಟ್ವಾಳ : ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಎ. 7 ರಂದು ರಾಷ್ಟ್ರೀಯ ಹೆದ್ದಾರಿ ಮಂಗಳೂರು – ಬೆಂಗಳೂರು ರಸ್ತೆಯ ಬಿಸಿರೋಡಿನಲ್ಲಿ ಸಂಭವಿಸಿದೆ. ನಂದರಬೆಟ್ಟು ನಿವಾಸಿ ಸದಾಶಿವ ಆಚಾರ್ಯ (77) ಎಂಬವರೇ ಮೃತಪಟ್ಟ ವ್ಯಕ್ತಿ. ಮಂಗಳೂರು – ಬೆಂಗಳೂರು ರಸ್ತೆಯ ಬಿಸಿರೋಡಿನಲ್ಲಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ, ಸದಾಶಿವ ಆಚಾರ್ಯ ಮೃತಪಟ್ಟು, ಅವರ ಮೊಮ್ಮಗ ಚಾಲಕ ಅಕಾಶ್, ಅಳಿಯ ಸುರೇಶ್ ಆಚಾರ್ಯ, ಮಗ ಗಣೇಶ್ ಆಚಾರ್ಯ ಅವರು ಅಲ್ಪಸ್ವಲ್ಪ

ಡಿವೈಡರ್‌ ಗೆ ಕಾರು ಡಿಕ್ಕಿ : ನಂದರಬೆಟ್ಟು ಸದಾಶಿವ ಆಚಾರ್ಯ ಮೃತ್ಯು Read More »

ಮಂಗಳೂರು : ಮೂರು ಶೂಟೌಟ್‌ ಪ್ರಕರಣದಲ್ಲಿ ಬನ್ನಂಜೆರಾಜ ಖುಲಾಸೆ

ಮಂಗಳೂರು : ಕುಖ್ಯಾತ ಪಾತಕಿ ಬನ್ನಂಜೆರಾಜನ ವಿರುದ್ದ ಮಂಗಳೂರಿನಲ್ಲಿ ದಾಖಲಾಗಿದ್ದ 3 ಶೂಟೌಟ್‌ ಪ್ರಕರಣಗಳಲ್ಲಿ ಖುಲಾಸೆಗೊಂಡಿದೆ. ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೂರೂ ಪ್ರಕರಣಗಳಲ್ಲಿ ಖುಲಾಸೆಗೊಳಿಸಿ ತೀರ್ಪು ನೀಡಿದೆ.ಈತನ ವಿರುದ್ದ ಪಾಂಡೇಶ್ವರ ಪೊಲೀಸ್‌ ಠಾಣೆ, ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಮೂರೂ ಪ್ರಕರಣಗಳಲ್ಲಿ ಪೊಲೀಸರು ತನಿಖೆ ನಡೆಸಿ ಬನ್ನಂಜೆರಾಜ ಮತ್ತು ಆತನ ಸಹಚರರ ಮೇಲೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಘಟನೆಗಳ ವೇಳೆಯಲ್ಲಿ ಬನ್ನಂಜೆರಾಜ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. 2015 ನೇ ಇಸವಿಯಲ್ಲಿ

ಮಂಗಳೂರು : ಮೂರು ಶೂಟೌಟ್‌ ಪ್ರಕರಣದಲ್ಲಿ ಬನ್ನಂಜೆರಾಜ ಖುಲಾಸೆ Read More »

ದಾವಣಗೆರೆಯಲ್ಲಿ ಬಿಎಂಡಬ್ಲ್ಯು ಕಾರು ಸಮೇತ ಬೆಳ್ಳಿ ವಶ

ನಟಿ ಶ್ರೀದೇವಿ ಪತಿ ಕಾರಿನಲ್ಲಿ ಬೆಳ್ಳಿ ಅಕ್ರಮ ಸಾಗಾಟ ದಾವಣಗೆರೆ : ಬಾಲಿವುಡ್‌ನ ಖ್ಯಾತ ನಟಿಯೊಬ್ಬರ ಪತಿಯ ಕುಟುಂಬಕ್ಕೆ ಸೇರಿದ ಬಿಎಂಡಬ್ಲ್ಯು ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 66 ಕೆಜಿ ಬೆಳ್ಳಿ ಸಾಮಾಗ್ರಿಗಳನ್ನು ದಾವಣಗೆರೆ ತಾಲೂಕಿನ ಹೆಬ್ಬಾಳ ಟೋಲ್ ಬಳಿ ಚುನಾವಣಾಧಿಕಾರಿಯಾಗಿರುವ ತಹಶೀಲ್ದಾರ್‌ ಜಪ್ತಿ ಮಾಡಿದ್ದಾರೆ. ತಹಶೀಲ್ದಾರ್‌ ಡಾ.ಅಶ್ವತ್ಥ್‌ ತಪಾಸಣೆ ವೇಳೆ ಬಿಎಂಡಬ್ಲ್ಯು ಕಾರೊಂದನ್ನು ತಡೆದು ಪರಿಶೀಲನೆ ನಡೆಸಿದಾಗ ಬಾಕ್ಸ್​ಗಳು ಪತ್ತೆಯಾಗಿದ್ದು, ಇನ್ನಷ್ಟು ತಪಾಸಣೆ ನಡೆಸಿದಾಗ ಅದರೊಳಗೆ ಬೆಳ್ಳಿ ಸಾಮಾಗ್ರಿಗಳು ಸಿಕ್ಕಿವೆ. ಅವುಗಳ ಒಟ್ಟು ಮೌಲ್ಯ 39 ಲಕ್ಷ

ದಾವಣಗೆರೆಯಲ್ಲಿ ಬಿಎಂಡಬ್ಲ್ಯು ಕಾರು ಸಮೇತ ಬೆಳ್ಳಿ ವಶ Read More »

ನೈಜೀರಿಯಾದಲ್ಲಿ ಡಕಾಯಿತರ ದಾಳಿಯಿಂದ 46 ನಾಗರಿಕರ ಹತ್ಯೆ

ಎರಡು ದಿನ ನಿರಂತರ ದಾಳಿ ಲಾಗೋಸ್: ನೈಜೀರಿಯಾದ ಬೆನ್ಯೂ ರಾಜ್ಯದಲ್ಲಿ ಸಮುದಾಯವೊಂದರ ಮೇಲೆ ಶಸ್ತ್ರಸಜ್ಜಿತ ಡಕಾಯಿತರು ನಡೆಸಿದ ದಾಳಿಯಲ್ಲಿ ಕನಿಷ್ಠ 46 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೋರ್ವರು ತಿಳಿಸಿದ್ದಾರೆ.ರಾಜ್ಯದ ಉಮೊಗಿಡಿ ಸಮುದಾಯದಲ್ಲಿ ಮಂಗಳವಾರ ಮತ್ತು ಬುಧವಾರದ ನಡುವೆ ಸಂಭವಿಸಿದ ದಾಳಿಯಲ್ಲಿ ನೂರಾರು ನಿವಾಸಿಗಳು ಗಾಯಗೊಂಡಿದ್ದು, ಹಲವರು ತಮ್ಮ ಮನೆಗಳಿಂದ ಓಡಿಹೋದರು ಎಂದು ಸ್ಥಳೀಯ ಸರ್ಕಾರಿ ಅಧಿಕಾರಿ ಖಚಿತಪಡಿಸಿದ್ದಾರೆ. ದಾಳಿಕೋರರು ಬುಧವಾರ ಮನಬಂದಂತೆ ಗುಂಡು ಹಾರಿಸಿ 46 ಜನರನ್ನು ಕೊಂದಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ನೈಜೀರಿಯಾದಲ್ಲಿ ಡಕಾಯಿತರ ದಾಳಿಯಿಂದ 46 ನಾಗರಿಕರ ಹತ್ಯೆ Read More »

error: Content is protected !!
Scroll to Top