ಜಿಲ್ಲೆಯ 11 ಮಂದಿ ಜಿಲ್ಲೆಯಿಂದ 6 ತಿಂಗಳು ಗಡಿಪಾರು | ಗಡಿಪಾರಿಗೊಳಗಾದವರಲ್ಲಿ ಐವರು ಪುತ್ತೂರಿನವರು | ಚುನಾವಣೆಗೆ ಜಿಲ್ಲಾಡಳಿತದ ತಯಾರಿ ಹೀಗಿದೆ
ಪುತ್ತೂರು: ಚುನಾವಣೆ ಸಮೀಪಿಸುತ್ತಿದ್ದಂತೆ ಪೊಲೀಸರು ಜಾಗೃತರಾಗಿದ್ದಾರೆ. ಅಪರಾಧ ಹಿನ್ನೆಲೆಯುಳ್ಳವರನ್ನು ಗುರುತಿಸಿ, ಅವರನ್ನು ಗಡಿಪಾರುಗೊಳಪಡಿಸುವ ಕೆಲಸ ನಡೆಯುತ್ತಿದೆ. ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪ್ರತಿ ಚುನಾವಣೆ ಎದುರಾದಾಗಲೂ ಈ ಕ್ರಮವನ್ನು ಕೈಗೊಳ್ಳಲಾಗುತ್ತಿದೆ. ಪೊಲೀಸ್ ವರಿಷ್ಠಾಧಿಕಾರಿಗಳ ವರದಿಯ ಆಧಾರದ ಮೇಲೆ ಜಿಲ್ಲಾಧಿಕಾರಿಗಳು ವಿಚಾರಣೆ ನಡೆಸಿ, ಗಡಿಪಾರಿಗೆ ಆದೇಶ ನೀಡುತ್ತಾರೆ. ಈ ಬಾರಿ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಒಟ್ಟು 11 ಮಂದಿಯನ್ನು ಗಡಿಪಾರು ಮಾಡಲಾಗಿದೆ. ಇದರಲ್ಲಿ ಐವರು ಪುತ್ತೂರು ತಾಲೂಕಿನವರು. ಮಾರ್ಚ್ 6ರಿಂದಲೇ […]










