ಅಪರಾಧ

ನೆಹರುನಗರ ನಿವಾಸಿ ವಸಂತ ಪ್ರಭು ಆತ್ಮಹತ್ಯೆ

ಪುತ್ತೂರು: ನೆಹರೂನಗರ ನಿವಾಸಿ ವಸಂತ ಪ್ರಭು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಮೃತರಿಗೆ ಪತ್ನಿ ಇದ್ದಾರೆ.

ನೆಹರುನಗರ ನಿವಾಸಿ ವಸಂತ ಪ್ರಭು ಆತ್ಮಹತ್ಯೆ Read More »

ವಾಟ್ಸ್ ಪ್ ಮೂಲಕ ವಿದ್ಯಾರ್ಥಿನಿಗೆ ಪ್ರೀತಿಯ ಸಂದೇಶ | ಇಬ್ಬರು ವಿದ್ಯಾರ್ಥಿಗಳನ್ನು ಠಾಣೆಗೆ ಕರೆದೊಯ್ದ ಪೊಲೀಸರು

ಪುತ್ತೂರು: ವಿದ್ಯಾರ್ಥಿಗಳಿಬ್ಬರು ವಾಟ್ಸ್ ಪ್ ಮೂಲಕ ಕಾಲೇಜೊಂದರ ವಿದ್ಯಾರ್ಥಿನಿಗೆ ಪ್ರೀತಿಯ ಸಂದೇಶ ಕಳುಹಿಸಿದ ವಿಷಯಕ್ಕೆ ಸಂಬಂಧಿಸಿ ಪುತ್ತೂರು ಪೊಲೀಸರು ವಿದ್ಯಾರ್ಥಿಗಳಿಬ್ಬರನ್ನು ಬಂಧಿಸಿದ್ದಾರೆ. ಪಡ್ನೂರು ಮೂಲಕ ವಿದ್ಯಾರ್ಥಿಗಳಿಬ್ಬರು ಈ ಸಂದೇಶ ಕಳುಹಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ಇಬ್ಬರನ್ನು ಠಾಣೆಗೆ ಕರೊದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

ವಾಟ್ಸ್ ಪ್ ಮೂಲಕ ವಿದ್ಯಾರ್ಥಿನಿಗೆ ಪ್ರೀತಿಯ ಸಂದೇಶ | ಇಬ್ಬರು ವಿದ್ಯಾರ್ಥಿಗಳನ್ನು ಠಾಣೆಗೆ ಕರೆದೊಯ್ದ ಪೊಲೀಸರು Read More »

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ಧಿ ಬಿತ್ತರಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆಗೆ ಸೂಚನೆ | ಸಾಮಾಜಿಕ ಜಾಲತಾಣದ ಮೇಲೆ ಹದ್ದಿನ ಕಣ್ಣಿಟ್ಟ ಪೊಲೀಸರು

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಬಿತ್ತರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸರಕಾರ ಪೊಲೀಸ್ ಇಲಾಖೆ ಆದೇಶ ನೀಡಿದೆ. ಈಗಾಗಲೇ ಜಗತ್ತಿನಾದ್ಯಂತ ಹಲವಾರು ಸಾಮಾಜಿಕ ಜಾಲತಾಣಗಳಿದ್ದು, ಅವುಗಳ ಪೈಕಿ ವಾಟ್ಸಪ್, ಫೇಸ್ ಬುಕ್, ಇನ್ ಸ್ಟಾ ಗ್ರಾಂ, ಯೂಟ್ಯೂಬ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಅಕೌಂಟ್ ತೆರೆದು ತಮಗೆ ಬೇಕಾದಂತೆ ಸುಳ್ಳು ಸುದ್ದಿಗಳನ್ನು ಹರಿಯಬಿಟ್ಟು ಸಮಾಜದಲ್ಲಿ ಗೊಂದಲ, ದ್ವೇಷ ಉಂಟ ಮಾಡುವುದು ಒಂದೆಡೆಯಾದರೆ, ಇನ್ನೊಂದೆಡೆ ಸಾರ್ವಜನಿಕರಿಗೆ ಉಪಯೋಗವಾಗುವಂತ ಒಳ್ಳೆಯ ಸುದ್ಧಿಗಳನ್ನು ಬಿತ್ತರಿಸುವವರಿದ್ದಾರೆ. ಇನ್ನು ಮುಂದೆ ಪೊಲೀಸ್ ಇಲಾಖೆ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ಧಿ ಬಿತ್ತರಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆಗೆ ಸೂಚನೆ | ಸಾಮಾಜಿಕ ಜಾಲತಾಣದ ಮೇಲೆ ಹದ್ದಿನ ಕಣ್ಣಿಟ್ಟ ಪೊಲೀಸರು Read More »

ಬ್ಯಾನರ್ ವಿಚಾರದಲ್ಲಿ ಯುವಕರ ಮೇಲೆ ಪೊಲೀಸ್  ದೌರ್ಜನ್ಯ | ಡಿವೈಎಸ್‍ ಪಿ ಡಾ.ವೀರಯ್ಯ ಹೀರೇಮಠ ನ್ಯಾಯಾಲಯಕ್ಕೆ ಶರಣು | ಜಾಮೀನಿನ ಮೇಲೆ ಬಿಡುಗಡೆ

ಪುತ್ತೂರು: ಚುನಾವಣೆ ಸಂದರ್ಭ ನಡೆದ  ಬ್ಯಾನರ್ ಪ್ರಕರಣದಲ್ಲಿ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ ಎದುರಿಸುತ್ತಿರುವ ಡಿವೈಎಸ್‍ಪಿ ಡಾ.ವೀರಯ್ಯ ಹಿರೇಮಠ ನ್ಯಾಯಾಲಯಕ್ಕೆ ಶರಣಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣಾ ಎಸ್‍ಐ ಶ್ರೀನಾಥ್ ರೆಡ್ಡಿ ಮತ್ತು ಕಾನ್‍ಸ್ಟೇಬಲ್ ಹರ್ಷಿತ್ ಅವರನ್ನು ಸೇವೆಯಿಂದ ಈಗಾಗಲೇ ಅಮಾನತುಗೊಳಿಸಲಾಗಿದೆ. ವಿಧಾನಸಭಾ ಚುನಾವಣೆ ಬಳಿಕ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವನ್ನೊಳಗೊಂಡ ಶ್ರದ್ಧಾಂಜಲಿ ಬರಹದೊಂದಿಗೆ ಬ್ಯಾನರ್ ಅಳವಡಿಸಿ, 

ಬ್ಯಾನರ್ ವಿಚಾರದಲ್ಲಿ ಯುವಕರ ಮೇಲೆ ಪೊಲೀಸ್  ದೌರ್ಜನ್ಯ | ಡಿವೈಎಸ್‍ ಪಿ ಡಾ.ವೀರಯ್ಯ ಹೀರೇಮಠ ನ್ಯಾಯಾಲಯಕ್ಕೆ ಶರಣು | ಜಾಮೀನಿನ ಮೇಲೆ ಬಿಡುಗಡೆ Read More »

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆಗೆ ಲಂಚ ಸ್ವೀಕಾರ ವರದಿ ಪ್ರಕಟ : ಹೊರಗುತ್ತಿಗೆ ನೌಕರರಿಂದ ಮುಷ್ಕರ

ಪುತ್ತೂರು: ಪುತ್ತೂರು ಸಾರ್ವಜನಿಕ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ಲಂಚ ಕೇಳುತ್ತಿದ್ದಾರೆ ಎಂಬ ಮಾಹಿತಿ ತಿಳಿದ ಸರಕಾರಿ ಆಸ್ಪತ್ರೆ ಹೊರಗುತ್ತಿಗೆ ಸಿಬ್ಬಂದಿಗಳು ಶನಿವಾರ ದಿಢೀರ್ ಮರಣೋತ್ತರ ಪರೀಕ್ಷೆ ನಡೆಸುವುದಿಲ್ಲ ಮುಷ್ಕರ ನಡೆಸಿರುವ ಘಟನೆ ನಡೆದಿದೆ. ಮುಷ್ಕರದ ಪರಿಣಾಮ ಮರಣೋತ್ತರ ಪರೀಕ್ಷೆಗೆ ಬಂದ ಉಪ್ಪಿನಂಗಡಿ ಹಾಗೂ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎರಡು ಶವಗಳು ಮೂರು ಗಂಟೆಗೂ ಅಧಿಕ ಕಾಲ ಶವಾಗಾರದಲ್ಲಿ ಶವ ಪರೀಕ್ಷೆಗಾಗಿ ಕಾಯುವ ಪರಿಸ್ಥಿತಿ ಉಂಟಾಯಿತು. ಮೃತಪಟ್ಟವರ ಕುಟುಂಬಸ್ಥರು ಸೇರಿದಂತೆ ಆಪ್ತರಿಗೆ ಈ ಘಟನೆ

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆಗೆ ಲಂಚ ಸ್ವೀಕಾರ ವರದಿ ಪ್ರಕಟ : ಹೊರಗುತ್ತಿಗೆ ನೌಕರರಿಂದ ಮುಷ್ಕರ Read More »

ಧರ್ಮಸ್ಥಳ ವಿದ್ಯಾರ್ಥಿನಿ ಸೌಜನ್ಯ ಕೊಲೆ ಆರೋಪಿ ಸಂತೋಷ್ ರಾವ್ ನಿರ್ದೋಷಿ | ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ತೀರ್ಪು

ಧರ್ಮಸ್ಥಳ: ಧರ್ಮಸ್ಥಳ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ವಿಚಾರಣೆಯಲ್ಲಿರುವ ಆರೋಪಿ ಸಂತೋಷ್ ರಾವ್ ನಿರ್ದೋಷಿ ಎಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿದ್ದು, ಪ್ರಕರಣದಿಂದ ಖುಲಾಸೆ ಮಾಡಿದೆ. ಸಂತೋಷ್ ರಾವ್ ವಿರುದ್ಧ ಸಲ್ಲಿಕೆಯಾಗಿರುವ ಸಾಕ್ಷ್ಯಾಧ್ಯಾರಗಳ ಕೊರತೆ ಹಿನ್ನಲೆಯಲ್ಲಿ ಆರೋಪಿಯನ್ನು ದೋಷಮುಕ್ತಿಗೊಳಿಸಲಾಗಿದೆ. ಈ ಕುರಿತು ನ್ಯಾಯಮೂರ್ತಿ ಸಿ.ಬಿ.ಸಂತೋಷ್ ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ. ಧರ್ಮಸ್ಥಳದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಹಾಗೂ ಕುಸುಮಾವತಿ ದಂಪತಿ ಪುತ್ರಿ ಉಜಿರೆ ಎಸ್‍ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳನ್ನು

ಧರ್ಮಸ್ಥಳ ವಿದ್ಯಾರ್ಥಿನಿ ಸೌಜನ್ಯ ಕೊಲೆ ಆರೋಪಿ ಸಂತೋಷ್ ರಾವ್ ನಿರ್ದೋಷಿ | ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ತೀರ್ಪು Read More »

ಬಾಲಕಿಯರಿಗೆ ಕಿರುಕುಳ | ಮದ್ರಸಾ ಶಿಕ್ಷಕನ ಬಂಧನ

ಕಾಸರಗೋಡು: ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪಿ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಇಳಂತಿಲ ಹೌಸ್ ನಿವಾಸಿ ಅಬ್ದುಲ್ ಹಮೀದ್ (55) ಬಂಧಿತ ಆರೋಪಿ. ಕಾಸರಗೋಡಿನಲ್ಲಿ ಮದ್ರಸಾ ಶಿಕ್ಷಕನಾಗಿದ್ದ ಆರೋಪಿ 7-8 ನೇ ತರಗತಿ ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿತ್ತು. ಆದೂರು ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬಾಲಕಿಯರಿಗೆ ಕಿರುಕುಳ | ಮದ್ರಸಾ ಶಿಕ್ಷಕನ ಬಂಧನ Read More »

ಧರ್ಮಸ್ಥಳ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ | ಇಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್‍ನಿಂದ ತೀರ್ಪು ಪ್ರಕಟ

ಧರ್ಮಸ್ಥಳ : 11 ವರ್ಷಗಳ ಹಿಂದೆ ನಡೆದ ದ.ಕ.ಜಿಲ್ಲೆಯ ಧರ್ಮಸ್ಥಳ ಕಾಲೇಜು ವಿದ್ಯಾರ್ಥಿನಿ ಸೌಜನ್ಯ (17) ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣದ ತೀರ್ಪು ಇಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್‍ನಿಂದ ಪ್ರಕಟವಾಗಲಿದೆ. ಧರ್ಮಸ್ಥಳದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಹಾಗೂ ಕುಸುಮಾವತಿ ದಂಪತಿ ಪುತ್ರಿ ಉಜಿರೆ ಎಸ್‍ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳನ್ನು 2012 ಅಕ್ಟೋಬರ್ 9 ರಂದು ಕಾಲೇಜಿನಿಂದ ಮನೆಗೆ ಹೋಗುವಾಗ ನಾಪತ್ತೆಯಾಗಿದ್ದರು. ಮರುದಿನ ರಾತ್ರಿ ಧರ್ಮಸ್ಥಳ ಮಣ್ಣಸಂಕ ಬಳಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಈ

ಧರ್ಮಸ್ಥಳ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ | ಇಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್‍ನಿಂದ ತೀರ್ಪು ಪ್ರಕಟ Read More »

ಪ್ರಿಯಕರನಿಗಾಗಿ 11 ತಿಂಗಳ ಮಗುವನ್ನು ಬಿಟ್ಟು ಬಂದ ಹುಬ್ಬಳಿ ಮಹಿಳೆ | ಜೋಡಿಗಾಗಿ ತಡರಾತ್ರಿ ಕೋಡಿಂಬಾಡಿಯಲ್ಲಿ ಪೊಲೀಸರಿಂದ ಹುಡುಕಾಟ

ಪುತ್ತೂರು: ಹುಬ್ಬಳ್ಳಿಯ ಮಹಿಳೆಯೋರ್ವರು ತನ್ನ 11 ತಿಂಗಳ ಮಗುವನ್ನು ತವರು ಮನೆಯಲ್ಲಿ ಬಿಟ್ಟು ಪುತ್ತೂರಿನಲ್ಲಿರುವ ಪ್ರಯಕರನನ್ನು ಸೇರಿಕೊಂಡ ಘಟನೆ ತಡರಾತ್ರಿ ನಡೆದಿದ್ದು, ಬಳಿಕ ಮಹಿಳೆಯ ಮನೆಯವರು ಪುತ್ತೂರಿನಲ್ಲಿ ಮಹಿಳೆಗಾಗಿ ಹುಡುಕಾಟ ನಡೆಸಿರುವುದಾಗಿ ತಿಳಿದು ಬಂದಿದೆ. ಹುಬ್ಬಳ್ಳಿಯ ಮಹಿಳೆಯೋರ್ವರು ಅದೇ ಊರಿನ ಯುವಕನನ್ನು ಪ್ರೀತಿಸುತ್ತಿದ್ದು, ಆತ ಪುತ್ತೂರಿನ ಕೋಡಿಂಬಾಡಿಯಲ್ಲಿ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಾಹಿತಿ ತಿಳಿದ ಮಹಿಳೆ ತನ್ನ ಮಗುವನ್ನು ತವರು ಮನೆಯಲ್ಲಿ ಬಿಟ್ಟು ಫೋನ್ ಕರೆಯನ್ನು ಸ್ವೀಕರಿಸದೆ ನಾಪತ್ತೆಯಾಗಿದ್ದಳು.  ಪುತ್ತೂರಿನಲ್ಲಿ ತನ್ನ ಪ್ರಿಯಕರನ ಬಳಿ ಬಂದಿರಬಹುದು

ಪ್ರಿಯಕರನಿಗಾಗಿ 11 ತಿಂಗಳ ಮಗುವನ್ನು ಬಿಟ್ಟು ಬಂದ ಹುಬ್ಬಳಿ ಮಹಿಳೆ | ಜೋಡಿಗಾಗಿ ತಡರಾತ್ರಿ ಕೋಡಿಂಬಾಡಿಯಲ್ಲಿ ಪೊಲೀಸರಿಂದ ಹುಡುಕಾಟ Read More »

ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

ತೆಲಂಗಾಣ : ತೆಲಂಗಾಣದಲ್ಲಿ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ಮಗು ಗಂಭೀರ ಗಾಯಗೊಂಡಿದೆ. ತೆಲಂಗಾಣದ ಕಾಮರೆಡ್ಡಿ ಗಾಂಧಾರಿ ಮಂಡಲದ ಮುಧೋಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಾಯಿ ದಾಳಿಯಿಂದ ಬಾಲಕನ ತಲೆ ಹಾಗೂ ಹೊಟ್ಟೆಗೆ ಗಾಯವಾಗಿದೆ. ಗ್ರಾಮದ ಫಂಕ್ಷನ್ ಹಾಲ್‍ನ ಹೊರಗಡೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದೆ. ಗಾಯಗೊಂಡು ನೋವಿನಿಂದ ನರಳುತ್ತಿದ್ದ ಬಾಲಕನನ್ನು ಕಂಡು ಸ್ಥಳೀಯರು ನಾಯಿಯಿಂದ ಬಿಡಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ Read More »

error: Content is protected !!
Scroll to Top