ಅಪರಾಧ

ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ದ ಪತ್ತೆ

ಉಪ್ಪಿನಂಗಡಿ : ಗುಡ್ಡೆಯೊಂದರಲ್ಲಿ ಹಿಂದೂ ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ಧನೋರ್ವ ಸಿಕ್ಕಿ ಬಿದ್ದ ಘಟನೆ ಉಪ್ಪಿನಂಗಡಿಯ ಇಳಂತಿಲದಲ್ಲಿ ನಡೆದಿದೆ. ಕಾರ್ವೆಲ್ ನಿವಾಸಿಯಾದ ವೃದ್ದ ಹಿಂದೂ ಮಹಿಳೆಯೊಂದಿಗೆ ಇದ್ದುದನ್ನು ಕಂಡ ಸ್ಥಳೀಯರು ಇಬ್ಬರನ್ನು ಹಿಡಿದು ಬೆನ್ನಟ್ಟಿದ್ದಾರೆ. ವೃದ್ಧನಿಗೆ 65 ವರ್ಷ ವಯಸ್ಸಾಗಿದ್ದು ಏಳು ಜನ ಮಕ್ಕಳಿದ್ದಾರೆ ಆದರೂ ಈ ರೀತಿ ಮಾಡುತ್ತಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ದ ಪತ್ತೆ Read More »

ಗಡಿಯಲ್ಲಿ ಐವರು ನುಸುಳುಕೋರರು ಸೇನೆಯ ಗುಂಡಿಗೆ ಬಲಿ

ಕದನ ವಿರಾಮ ಉಲ್ಲಂಘಿಸಿ ಗುಂಡು ಹಾರಿಸಿದ್ದ ಪಾಕ್‌ ಸೈನಿಕರು ಹೊಸದಿಲ್ಲಿ: ಜಮ್ಮು-ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ಗಡಿ ದಾಟಿ ಬರಲು ಯತ್ನಿಸಿದ ಐವರು ಪಾಕಿಸ್ಥಾನಿ ನುಸುಳುಕೋರರನ್ನು ಗಡಿ ಭದ್ರತಾ ಪಡೆಯವರು ಗುಂಡಿಕ್ಕಿ ಸಾಯಿಸಿದ್ದಾರೆ. ಪೂಂಛ್‌ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಷನ್‌ನಲ್ಲಿ ಪಾಕ್‌ ಕಡೆಯಿಂದ ಕದನ ವಿರಾಮ ಉಲ್ಲಂಘಿಸಿ ಗಡಿದಾಟಲು ಯತ್ನಿಸಲಾಗಿತ್ತು. ಅವರನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಿದ್ದೇವೆ. 4-5 ಮಂದಿ ಸತ್ತಿದ್ದಾರೆ ಎಂದು ಸೇನೆಯ ಮೂಲಗಳು ತಿಳಿಸಿವೆ. ನಿನ್ನೆ ಬೆಳಗ್ಗಿನಿಂದ ಗಡಿಯಲ್ಲಿ ಉದ್ವಿಗ್ನ ಸ್ಥಿತಿಯಿತ್ತು. ಅತ್ತ ಕಡೆಯಿಂದ ಪಾಕ್‌ ಸೈನಿಕರು ಗುಂಡು

ಗಡಿಯಲ್ಲಿ ಐವರು ನುಸುಳುಕೋರರು ಸೇನೆಯ ಗುಂಡಿಗೆ ಬಲಿ Read More »

ಗೋಲ್ಡ್‌ ಸ್ಮಗ್ಲಿಂಗ್‌ ಆರೋಪಿ ನಟಿ ರನ್ಯಾಳಿಂದ ವಿಚ್ಚೇದನ ಕೋರಿದ ಪತಿ

ಮದುವೆಯ ಬಳಿಕ ದಾಂಪತ್ಯದಲ್ಲಿ ಒಂದಲ್ಲ ಒಂದು ಸಮಸ್ಯೆ ಎಂದು ಅರ್ಜಿ ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್​ ಕೇಸ್​ನಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಸಂಸಾರವೂ ಈಗ ಸಮಸ್ಯೆಯಲ್ಲಿ ಸಿಲುಕಿದೆ. ರನ್ಯಾಳಿಂದ ವಿಚ್ಛೇದನ ಕೋರಿ‌ ಕೋರ್ಟ್​ಗೆ ಅರ್ಜಿ ಸಲ್ಲಿಸಲು ಪತಿ ಜತಿನ್ ಹುಕ್ಕೇರಿ ಸಿದ್ಧತೆ ನಡೆಸಿದ್ದಾರೆ. ಮದುವೆಯಾದಾಗಿನಿಂದ ರನ್ಯಾ ಜೊತೆಗೆ ಒಂದಲ್ಲ ಒಂದು ತೊಂದರೆಗಳು ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಸದ್ಯ ರನ್ಯಾಳಿಂದ ಪತಿ ಜತಿನ್ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗಿದೆ. 2024 ಅಕ್ಟೋಬರ್ 6ರಂದು ಬೆಂಗಳೂರಿನ ಬಾಸ್ಟಿನ್ ರೆಸ್ಟೋರೆಂಟ್​ನಲ್ಲಿ ರನ್ಯಾ ಮತ್ತು

ಗೋಲ್ಡ್‌ ಸ್ಮಗ್ಲಿಂಗ್‌ ಆರೋಪಿ ನಟಿ ರನ್ಯಾಳಿಂದ ವಿಚ್ಚೇದನ ಕೋರಿದ ಪತಿ Read More »

ಮಂಗಳೂರು : ಮುಡಾ ಕಮಿಷನರ್‌ಗೇ ವಾಮಾಚಾರ ಯತ್ನ

ಪೊಲೀಸ್‌ ದೂರು ದಾಖಲಿಸಿದ ಕಮಿಷನರ್‌ ನೂರ್ ಝಹರಾ ಖಾನಂ ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಮಿಷನರ್ ಮೇಲೆ ಬ್ರೋಕರ್‌ಗಳು ಮಾಟಮಂತ್ರ ಮಾಡಲು ಮುಂದಾದ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತು ಕಮಿಷನರ್‌ ಇಬ್ಬರು ದಲ್ಲಾಳಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಮುಡಾ ಕಚೇರಿಯಲ್ಲಿ ಬ್ರೋಕರ್‌ಗಳ ಕಾರುಬಾರು ಜೋರಾಗಿದ್ದು, ಅವರನ್ನು ನಿಯಂತ್ರಸಲು ಮುಂದಾದ ಕಮಿಷನರ್‌ ನೂರ್ ಝಹರಾ ಖಾನಂ ಅವರಿಗೆ ಬ್ರೋಕರ್‌ಗಳು ನಾನಾ ರೀತಿಯಲ್ಲಿ ಕಿರುಕುಳ ನೀಡುತ್ತಿದ್ದಾರೆ. ಇತ್ತೀಚೆಗೆ ಒಬ್ಬ ಬ್ರೋಕರ್‌ ಸಿಬ್ಬಂದಿ ಇಲ್ಲದ ವೇಳೆ ಮುಡಾ

ಮಂಗಳೂರು : ಮುಡಾ ಕಮಿಷನರ್‌ಗೇ ವಾಮಾಚಾರ ಯತ್ನ Read More »

ಹೆಂಡತಿ ಬಿಟ್ಟು ಹೋದ ಸಿಟ್ಟು : ಅತ್ತೆ, ನಾದಿನಿ, ಮಗಳನ್ನು ಗುಂಡಿಕ್ಕಿ ಸಾಯಿಸಿ ಆತ್ಮಹತ್ಯೆ ಮಾಡಿಕೊಂಡ ಚಾಲಕ

ಬಾಳೆಹೊನ್ನೂರು: ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪ ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಕುಟುಂಬದ ಮೂವರನ್ನು ಗುಂಡು ಹಾರಿಸಿ ಸಾಯಿಸಿದ್ದು, ಬಳಿಕ ತಾನೂ ಅತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಡಬಗೆರೆಯ ಶಾಲೆಯೊಂದರಲ್ಲಿ ವಾಹನ ಚಾಲಕನಾಗಿದ್ದ ರತ್ನಾಕರ ಗುಂಡು ಹಾರಿಸಿವ. ಈತನ ಹೆಂಡತಿ ಎರಡು ವರ್ಷದ ಹಿಂದೆ ಬಿಟ್ಟು ಹೋಗಿದ್ದು, ಈ ಸಿಟ್ಟಿನಲ್ಲಿ ಅತ್ತೆ ಜ್ಯೋತಿ(50), ಮಗಳು ಮೌಲ್ಯ(6) ಮತ್ತೆ ನಾದಿನಿ ಸಿಂಧು(24)

ಹೆಂಡತಿ ಬಿಟ್ಟು ಹೋದ ಸಿಟ್ಟು : ಅತ್ತೆ, ನಾದಿನಿ, ಮಗಳನ್ನು ಗುಂಡಿಕ್ಕಿ ಸಾಯಿಸಿ ಆತ್ಮಹತ್ಯೆ ಮಾಡಿಕೊಂಡ ಚಾಲಕ Read More »

ಬಜಪೆ : ಮನೆಯ ಲಾಕರ್‌ನಲ್ಲಿದ್ದ 1 ಕೆಜಿ ಚಿನ್ನಾಭರಣ ಕಳ್ಳತನ

16 ಸಿಸಿ ಕ್ಯಾಮರಾ, 8 ನಾಯಿಗಳ ಕಣ್ಣುತಪ್ಪಿಸಿ ಕಳವು ಮಾಡಿದ ಚಾಣಾಕ್ಷ ಕಳ್ಳರು ಮಂಗಳೂರು: ಮನೆಯ ಲಾಕರ್‌ನಲ್ಲಿಟ್ಟ ಸುಮಾರು 1 ಕೆಜಿ ಚಿನ್ನವನ್ನು ಕಳ್ಳರು ಕದ್ದೊಯ್ದ ಘಟನೆ ಮಂಗಳೂರು ಬಜಪೆ ಸಮೀಪದ ಪೆರ್ಮುದೆಯಲ್ಲಿ ಸಂಭವಿಸಿದೆ. ಪೆರ್ಮುದೆಯ ಜಾನ್ವಿನ್‌ ಪಿಂಟೊ ಎಂಬವರ ಮನೆಯಲ್ಲಿ ಕಳ್ಳತನವಾಗಿರುವ ವಿಚಾರ ಮಂಗಳವಾರ ಬೆಳಕಿಗೆ ಬಂದಿದೆ. ಜಾನ್ವಿನ್‌ ಪಿಂಟೊ ಮತ್ತು ಅವರ ಪುತ್ರ ಪ್ರವೀಣ್‌ ಪಿಂಟೊ ಕುವೈಟ್‌ನಲ್ಲಿದ್ದಾರೆ. ಮನೆಗೆ ಬೀಗ ಹಾಕಿದ್ದು, ಮನೆಯ ಸುತ್ತ 16 ಸಿಸಿ ಕ್ಯಾಮರಾ ಅಳವಡಿಸಿದ್ದಾರೆ. ಆದರೆ ಕಳ್ಳರು ಸಿಸಿ

ಬಜಪೆ : ಮನೆಯ ಲಾಕರ್‌ನಲ್ಲಿದ್ದ 1 ಕೆಜಿ ಚಿನ್ನಾಭರಣ ಕಳ್ಳತನ Read More »

ಇಸ್ರೇಲ್‌ ದಾಳಿಗೆ 10 ದಿನದಲ್ಲಿ 300 ಮಕ್ಕಳು ಸಾವು : ಯುನಿಸೆಫ್‌ ವರದಿ

15,000ಕ್ಕೂ ಅಧಿಕ ಮಕ್ಕಳನ್ನು ಬಲಿತೆಗೆದುಕೊಂಡ 18 ತಿಂಗಳ ಯುದ್ಧ ಗಾಜಾ: ಕದನ ವಿರಾಮ ಒಪ್ಪಂದ ಆದ ಬಳಿಕ ಪ್ಯಾಲೆಸ್ತೀನ್‌ ಮೇಲೆ ಇಸ್ರೇಲ್‌ ನಡೆಸಿದ ಎರಡನೇ ಸುತ್ತಿನ ದಾಳಿಯಲ್ಲಿ 300ಕ್ಕೂ ಅಧಿಕ ಮಕ್ಕಳು ಸಾವಿಗೀಡಾಗಿದ್ದಾರೆ ಎಂದು ವಿಶ್ವಸಂಸ್ಥೆಯ ಯುನಿಸೆಫ್‌ ವರದಿ ತಿಳಿಸಿದೆ. ಗಾಜಾದ ಪ್ಯಾಲೆಸ್ತೀಯನ್‌ ಪ್ರದೇಶದಲ್ಲಿ ಕಳೆದ 10 ದಿನಗಳಲ್ಲಿ 322 ಮಕ್ಕಳು ಸಾವನ್ನಪ್ಪಿದ್ದಾರೆ. 609 ಮಕ್ಕಳು ಗಾಯಗೊಂಡಿದ್ದಾರೆ ಎಂದು ಯುನಿಸೆಫ್ ತಿಳಿಸಿದೆ. ಮಾ.23ರಂದು ದಕ್ಷಿಣ ಗಾಜಾದಲ್ಲಿರುವ ಅಲ್ ನಾಸರ್ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ ಮೇಲೆ ನಡೆದ ದಾಳಿಯಲ್ಲಿ

ಇಸ್ರೇಲ್‌ ದಾಳಿಗೆ 10 ದಿನದಲ್ಲಿ 300 ಮಕ್ಕಳು ಸಾವು : ಯುನಿಸೆಫ್‌ ವರದಿ Read More »

ಉದ್ಯಮಿಗೆ ಹನಿಟ್ರ್ಯಾಪ್‌ : ಶಿಕ್ಷಕಿ ಸಹಿತ ಮೂವರು ಸೆರೆ

ವಿದ್ಯಾರ್ಥಿಗಳ ತಂದೆಯನ್ನೇ ಬಲೆಗೆ ಕೆಡವಿಕೊಂಡು ಬ್ಲ್ಯಾಕ್‌ಮೇಲ್‌ ಮಾಡಿದ ಟೀಚರ್‌ ಬೆಂಗಳೂರು: ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್‌ ಬಲೆಗೆ ಕೆಡವಿ ಲಕ್ಷಗಟ್ಟಲೆ ಹಣ ವಸೂಲು ಮಾಡಿದ ಶಿಕ್ಷಕಿ ಮತ್ತು ಆಕೆಯ ಇಬ್ಬರು ಸಹಚರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್​ನಲ್ಲಿ ಖಾಸಗಿ ಪ್ರೀಸ್ಕೂಲ್ ನಡೆಸುತ್ತಿದ್ದ ಶ್ರೀದೇವಿ ರುಡಿಗಿ ಎಂಬಾಕೆಯೇ ಹನಿಟ್ರ್ಯಾಪ್ ಮಾಡಿದ ಶಿಕ್ಷಕಿ. ತನ್ನ ಶಾಲೆಗೆ ಬರುತ್ತಿದ್ದ ಮಕ್ಕಳ ತಂದೆಯನ್ನೇ ಬಲೆಗೆ ಕೆಡವಿಕೊಂಡು ಶ್ರೀದೇವಿ ಬ್ಲ್ಯಾಕ್‌ಮೇಲ್‌ ಮಾಡಿದ್ದಳು. ರಾಕೇಶ್ ಎಂಬ ಉದ್ಯಮಿಯ ಮಕ್ಕಳು ಶ್ರೀದೇವಿ ಕಲಿಸುತ್ತಿದ್ದ ಪ್ರೀಸ್ಕೂಲ್‌ಗೆ ಬರುತ್ತಿದ್ದರು.

ಉದ್ಯಮಿಗೆ ಹನಿಟ್ರ್ಯಾಪ್‌ : ಶಿಕ್ಷಕಿ ಸಹಿತ ಮೂವರು ಸೆರೆ Read More »

ಗ್ಯಾಸ್‌ ಸಿಲಿಂಡರ್‌ ಸ್ಫೋಟ : 7 ಮಂದಿ ಸಾವು

ಪಟಾಕಿಯ ಕಿಡಿ ತಗಲಿ ಸ್ಫೋಟಿಸಿದ ಸಿಲಿಂಡರ್‌ ಕೋಲ್ಕತ್ತಾ : ಪಶ್ಚಿಮ ಬಂಗಾಳದ ದಕ್ಷಿಣ ಪರಗಣ ಜಿಲ್ಲೆಯ ದೋಲಾಹಾತ್‌ ಎಂಬಲ್ಲಿ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಮಕ್ಕಳು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ. ಪಟಾಕಿ ಯಿಂದ ಸಿಡಿದ ಕಿಡಿ ಸಿಲಿಂಡರ್​ಗೆ ತಗಲಿ ಬೆಂಕಿಹತ್ತಿಕೊಂಡು ಸ್ಫೋಟಗೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕಟ್ಟಡ ಬೆಂಕಿಗಾಹುತಿಯಾಗಿದೆ. ಬೆಂಕಿ ಅವಘಡದ ಬಳಿಕ ನಾಲ್ವರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಮನೆಯಲ್ಲಿ ಪಟಾಕಿ ತಯಾರಿಸಲಾಗುತ್ತಿತ್ತು, ಈ

ಗ್ಯಾಸ್‌ ಸಿಲಿಂಡರ್‌ ಸ್ಫೋಟ : 7 ಮಂದಿ ಸಾವು Read More »

ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣೆ ನಿರೀಕ್ಷಕರು ಸೋಮವಾರ ಬೆಳಿಗ್ಗೆ ನರಿಮೊಗರು ಗ್ರಾಮದ ಮುಕ್ವೆ ಎಂಬಲ್ಲಿ ತಾತ್ಕಾಲಿಕ ಚೆಕ್‌ ಪಾಯಿಂಟ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯ, ಸುಬ್ರಹಮಣ್ಯ ಕಡೆಯಿಂದ ಬಂದ ಮಾರುತಿ ಸುಝುಕಿ ಆಲ್ಟೋ 800 ಕಾರನ್ನು  ಪರಿಶೀಲಿಸಿದಾಗ ಕಾರಿನ ಡ್ಯಾಶ್ ಬೋರ್ಡ್‌ಲ್ಲಿ ಮಾದಕ ವಸ್ತುಗಳನ್ನು ಸೇದುವ ಸಾಧನಗಳು, ತೂಕ ಮಾಪಕ ಕಂಡುಬಂದಿತ್ತು. ಕಾರಿನ ಚಾಲಕ ಹಾಗೂ ಮತ್ತೊಬ್ಬನಲ್ಲಿ ಈ ಬಗ್ಗೆ

ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ Read More »

error: Content is protected !!
Scroll to Top