ಅಪರಾಧ

ಕಾರ್ಕಳ : ರೋಗಿಯ ಸಾವಿಗೆ ಕಾರಣರಾದ ಮೂವರು ವೈದ್ಯರ ವಿರುದ್ಧ ಪೊಲೀಸ್‌ ಕೇಸ್‌

ಆಪರೇಷನ್‌ ಮಾಡುವಾಗ ಮುನ್ನೆಚ್ಚರಿಕೆ ವಹಿಸದ ಕಾರಣ ಮೃತಪಟ್ಟಿರುವ ರೋಗಿ ಕಾರ್ಕಳ : ಕಾರ್ಕಳದ ಖಾಸಗಿ ಆಸ್ಪತ್ರೆಯೊಂದರ ಮೂವರು ವೈದ್ಯರ ವಿರುದ್ಧ ರೋಗಿಯ ಸಾವಿಗೆ ಕಾರಣರಾದ ಪ್ರಕರಣ ದಾಖಲಾಗಿದೆ. ವೈದ್ಯರ ನಿರ್ಲಕ್ಷ್ಯದ ಕುರಿತು ಉಡುಪಿ ಜಿಲ್ಲಾ ಸರ್ಜನ್ ನೀಡಿದ ವರದಿಯ ಆಧಾರದಂತೆ ಕಾರ್ಕಳ ಸ್ಪಂದನಾ ಆಸ್ಪತ್ರೆಯ ಮೂವರು ವೈದ್ಯರ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣಕ್ಕೆ ಝುಬೈದ(52) ಎಂಬವರು ಕಳೆದ ಮೇ 10ರಂದು ಕಾರ್ಕಳ ಸ್ಪಂದನಾ ಆಸ್ಪತ್ರೆಗೆ ಹೋಗಿದ್ದರು. […]

ಕಾರ್ಕಳ : ರೋಗಿಯ ಸಾವಿಗೆ ಕಾರಣರಾದ ಮೂವರು ವೈದ್ಯರ ವಿರುದ್ಧ ಪೊಲೀಸ್‌ ಕೇಸ್‌ Read More »

ಮಗು ಕರುಣಿಸಿದ ಪ್ರಕರಣ : ಕಾನೂನು ಹೋರಾಟಕ್ಕೆ ಮುಂದಾದ ಕುಟುಂಬದವರು

ಮದುವೆಯಾಗುವ ಭರವಸೆ ಉಳಿಸಿಕೊಳ್ಳದ ಹಿನ್ನೆಲೆಯಲ್ಲಿ ಕಾನೂನು ಮೂಲಕ ಪರಿಹಾರ ಕಂಡುಕೊಳ್ಳಲು ಯತ್ನ ಮಂಗಳೂರು : ಪುತ್ತೂರಿನಲ್ಲಿ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ.ರಾವ್ ಯುವತಿಯೊಬ್ಬಳನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಗರ್ಭವತಿಯನ್ನಾಗಿ ಮಾಡಿದ್ದ ಪ್ರಕರಣ ಈಗ ಮತ್ತಷ್ಟು ಜಟಿಲಗೊಂಡಿದ್ದು, ಈಗ ಕಾನೂನು ಹೋರಾಟದತ್ತ ಹೊರಳಿದೆ. ಈ ಕುರಿತು ಸೋಮವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಕರ್ಮ ಸಮುದಾಯದ ಮುಖಂಡ ಹಾಗೂ ಮಾಜಿ ಎಂಎಲ್‌ಸಿ ಕೆ.ಪಿ.ನಂಜುಂಡಿ ಎಲ್ಲ ಸಂಧಾನಗಳು ವಿಫಲವಾಗಿರುವುದರಿಂದ ಈಗ ಕಾನೂನು ಹೋರಾಟವೊಂದೇ ಉಳಿದಿರುವ ದಾರಿ ಎಂದಿದ್ದಾರೆ.

ಮಗು ಕರುಣಿಸಿದ ಪ್ರಕರಣ : ಕಾನೂನು ಹೋರಾಟಕ್ಕೆ ಮುಂದಾದ ಕುಟುಂಬದವರು Read More »

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಬಂಧನ ವಾರಂಟ್‌ ಜಾರಿ

ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರಂಟ್‌ ಬೆಳ್ತಂಗಡಿ: ಖಾಸಗಿ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್‌ ಜಾರಿಯಾಗಿದೆ. ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ನಿರಂತರ ಗೈರುಹಾಜರಾಗಿರುವ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಇಂದಬೆಟ್ಟುವಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಜಾತಿಯ ಬಗ್ಗೆ ದ್ವೇಷ ಭಾಷಣ ಮಾಡಿದ ವಿಚಾರವಾಗಿ ಬೆಳ್ತಂಗಡಿ ಠಾಣೆಯಲ್ಲಿ ಕಿಶೋರ್ ಕುಮಾರ್ ಎಂಬವರು ದಾಖಲಿಸಿದ್ದ ದೂರಿನಂತೆ

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಬಂಧನ ವಾರಂಟ್‌ ಜಾರಿ Read More »

ಬ್ರಹ್ಮರಕೂಟ್ಲು ಟೋಲ್‌ ಸಿಬ್ಬಂದಿ ಮೇಲೆ ಹಲ್ಲೆ : ಇಬ್ಬರ ಬಂಧನ

ಟೋಲ್‌ ಹಣ ಪಾವತಿಸಲು ನಿರಾಕರಿಸಿ ಹಲ್ಲೆ ಮಾಡಿದ್ದ ಲಾರಿ ಚಾಲಕ, ಕ್ಲೀನರ್‌ ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್‌ಗೇಟ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಲಾರಿ ಚಾಲಕ ಹಾಗೂ ಕ್ಲೀನರ್‌ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಮೂಲದ ನಿವಾಸಿಗಳಾದ ಲಾರಿ ಚಾಲಕ ಭರತ್ (23) ಹಾಗೂ ಕ್ಲೀನರ್ ತೇಜಸ್ (26) ಬಂಧಿತ ಆರೋಪಿಗಳು. ಡಿ.29ರಂದು ಮುಂಜಾನೆ ಲಾರಿಯಲ್ಲಿ ಬಂದ ಆರೋಪಿಗಳು ಬ್ರಹ್ಮರಕೂಟ್ಲು ಟೋಲ್ ಬಳಿ ರಸ್ತೆಯ ವಿರುದ್ದ ದಿಕ್ಕಿನಿಂದ ಬಂದ್ದಿದ್ದು, ಟೋಲ್ ಸಿಬ್ಬಂದಿ ಟೋಲ್ ಹಣ

ಬ್ರಹ್ಮರಕೂಟ್ಲು ಟೋಲ್‌ ಸಿಬ್ಬಂದಿ ಮೇಲೆ ಹಲ್ಲೆ : ಇಬ್ಬರ ಬಂಧನ Read More »

ಕನ್ನಡದ ಕಿರುತೆರೆ ನಟಿ ಆತ್ಮಹತ್ಯೆ

ಡೆತ್‌ನೋಟ್‌ ಬರೆದಿಟ್ಟು ಸಾವಿಗೆ ಶರಣಾದ ನಟಿ ಬೆಂಗಳೂರು : ಕನ್ನಡ ಮತ್ತು ತಮಿಳಿನ ಹಲವು ಧಾರಾವಾಹಿಗಳಲ್ಲಿ ನಟಿಸಿ ಸೈನಿಸಿಕೊಂಡಿದ್ದ ಕಿರುತೆರೆ ನಟಿ ನಂದಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಮೈಲಸಂದ್ರದಲ್ಲಿ ನಡೆದಿದೆ. ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’, ‘ಅಣ್ಣ-ತಂಗಿ’ ಮುಂತಾದ ಸೀರಿಯಲ್​​ಗಳಲ್ಲಿ ಅವರು ನಟಿಸಿದ್ದರು. ಮೂಲತಃ ಕೊಟ್ಟೂರಿನವರಾದ ನಂದಿನಿ ಸಿ.ಎಂ ಬೆಂಗಳೂರಿನಲ್ಲಿ ವಾಸವಿದ್ದರು. ಕನ್ನಡದ ʻಜೀವ ಹೂವಾಗಿದೆʼ, ʻಸಂಘರ್ಷʼ, ʻಮಧುಮಗಳುʼ, ʻನೀನಾದೆ ನಾʼ ಧಾರಾವಾಹಿಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿ

ಕನ್ನಡದ ಕಿರುತೆರೆ ನಟಿ ಆತ್ಮಹತ್ಯೆ Read More »

ಧರ್ಮಸ್ಥಳ ಬುರುಡೆ ಪ್ರಕರಣದ ಇನ್ನಷ್ಟು ರಹಸ್ಯಗಳು ಬಯಲು

ಆರೋಪಿಯ ಹೇಳಿಕೆಯಲ್ಲಿದೆ ಬುರುಡೆ ಷಡ್ಯಂತ್ರದ ಭಯಾನಕ ಸತ್ಯ ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಆರೋಪಿಗಳು ಎಸ್‌ಐಟಿಗೆ ನೀಡಿದ ಹೇಳಿಕೆಯ ಕೆಲವು ಅಂಶಗಳು ಬಯಲಾಗಿದ್ದು, ಇದರಲ್ಲಿ ಯಾವ ರೀತಿ ಷಟ್ಯಂತ್ರ ರೂಪಿಸಲಾಗಿತ್ತು ಎಂಬುದರ ಬಗ್ಗೆ ಇಂಚಿಂಚು ಮಾಹಿತಿ ಇದೆ. ಬುರುಡೆ ನೋಡಿ ನಾನು ಹೆದರಿ ಹೋಗಿದ್ದೆ ಎಂದು ಬುರುಡೆ ಗ್ಯಾಂಗ್‌ನ ಸದಸ್ಯ, ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಜಯಂತ್ ಟಿ. ವಿಶೇಷ ತನಿಖಾ ತಂಡಕ್ಕೆ ಹೇಳಿಕೆ ನೀಡಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. ರೈಲಿನಲ್ಲಿ ದೆಹಲಿಗೆ ಜಯಂತ್‌ ಬುರುಡೆಯನ್ನು ತೆಗೆದುಕೊಂಡು

ಧರ್ಮಸ್ಥಳ ಬುರುಡೆ ಪ್ರಕರಣದ ಇನ್ನಷ್ಟು ರಹಸ್ಯಗಳು ಬಯಲು Read More »

ಮಂಗಳೂರು : ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಎಎಸ್‌ಐ

ಹೆಂಡತಿ, ಮಕ್ಕಳು ಮನೆಯಲ್ಲಿ ಇಲ್ಲದ ವೇಳೆ ಕೃತ್ಯ ಮಂಗಳೂರು: ಪಾಂಡೇಶ್ವರ ಠಾಣೆಯ ಎಎಸ್‌ಐ ತನ್ನ ಮನೆಯಲ್ಲೇ ಮೈಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಕದ್ರಿಯ ವ್ಯಾಸ ನಗರದಲ್ಲಿ ನಡೆದಿದೆ. ಪಾಂಡೇಶ್ವರ ಠಾಣೆಯ ಎಎಸ್‌ಐ ಹರಿಶ್ಚಂದ್ರ ಬೇರಿಕೆ ಆತ್ಮಹತ್ಯೆಗೆ ಯತ್ನಿಸಿದವರು. ಕಾಸರಗೋಡು ಜಿಲ್ಲೆಯ ಮುಳ್ಳೇರಿಯದವರಾದ ಹರಿಶ್ಚಂದ್ರ ಮಂಗಳೂರು, ಉಡುಪಿ ಜಿಲ್ಲೆಯಲ್ಲಿ ಕಳೆದ 27 ವರ್ಷಗಳಿಂದ ಹಲವಾರು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು ಒಂದು ವರ್ಷದ ಹಿಂದೆ ಎಎಸ್‌ಐ ಆಗಿ ಭಡ್ತಿ ಪಡೆದಿದ್ದರು. ಹಿಂದೆ

ಮಂಗಳೂರು : ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಎಎಸ್‌ಐ Read More »

ಎಚ್ಚರ…ಹೊಸ ವರ್ಷದ ಸಂದೇಶದಲ್ಲೂ ಇರಬಹುದು ಮೋಸದ ಜಾಲ!

ಅಪರಿಚಿತ ನಂಬರ್‌ಗಳಿಂದ ಬಂದ ಲಿಂಕ್‌ಗಳನ್ನು ಓಪನ್‌ ಮಾಡಬೇಡಿ ಬೆಂಗಳೂರು : ಹಬ್ಬಗಳು, ಹೊಸ ವರ್ಷದಂತಹ ವಿಶೇಷ ಸಂದರ್ಭಗಳನ್ನು ಗುರಿಯಾಗಿಸಿಕೊಂಡು ಸೈಬರ್ ವಂಚಕರು ನಕಲಿ ಜಾಲವನ್ನು ಹರಡುತ್ತಿದ್ದಾರೆ. ಆಫರ್‌ಗಳು, ಗಿಫ್ಟ್‌ಗಳು, ಕ್ಯಾಶ್‌ಬ್ಯಾಕ್ ಎನ್ನುವ ಆಕರ್ಷಕ ಸಂದೇಶಗಳನ್ನು ವಾಟ್ಸ್‌ಅಪ್, ಫೇಸ್‌ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಕಳುಹಿಸಲಾಗುತ್ತಿದೆ. ಇಂತಹ ಸಂದೇಶಗಳಲ್ಲಿರುವ ಲಿಂಕ್‌ಗಳನ್ನು ತಿಳಿಯದೆ ಕ್ಲಿಕ್ ಮಾಡಿದರೂ ಬ್ಯಾಂಕ್ ಖಾತೆ ಲೂಟಿ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜನರು ಮೋಸದ ಜಾಲಕ್ಕೆ ಬಲಿಯಾಗದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಅಪರಿಚಿತ

ಎಚ್ಚರ…ಹೊಸ ವರ್ಷದ ಸಂದೇಶದಲ್ಲೂ ಇರಬಹುದು ಮೋಸದ ಜಾಲ! Read More »

ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ

ಹೆಕ್ಟೇರ್‌ಗಟ್ಟಲೆ ಭೂಮಿ ಒತ್ತುವರಿ ಮಾಡಿದ ಆರೋಪ ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ ಎದುರಾಗಿದೆ. ಆಂಧ್ರದ ಪರ್ಮಿಟ್‌ ಬಳಸಿ ಭೂಮಿ ಒತ್ತುವರಿ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ಸುದಾಂಶು ದುಲಿಯಾ ನೇತೃತ್ವದಲ್ಲಿ ಸಮಿತಿ ಮಾಡಲಾಗಿತ್ತು. ಬಳ್ಳಾರಿಗೆ ತಿಂಗಳ ಹಿಂದೆ ಸರ್ವೇಗೆ ಬಂದಿದ್ದ ನಿವೃತ್ತ ನ್ಯಾ.ಸುಧಾಂಶು ದುಲಿಯಾ ನೇತೃತ್ವದ ಸಮಿತಿ ಗಡಿ ಒತ್ತುವರಿ ಬಗ್ಗೆ ವರದಿ ಸಲ್ಲಿಕೆ ಮಾಡಿದೆ. ಆಂಧ್ರದ ರಾಯದುರ್ಗ ತಾಲೂಕಿನ ಮಲಪನಗುಡಿ ಗ್ರಾಮದಲ್ಲಿ ಡ್ರೋನ್‌ ಮೂಲಕ ನಡೆದಿದ್ದ

ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ Read More »

ಮಹಿಳೆಯ ಕತ್ತಿನಿಂದ ಸರ ಕಿತ್ತ ಕಳ್ಳನ ಬಂಧನ

ಮಂಗಳೂರು: ನಗರದ ಕೊಂಚಾಡಿ ಕೊಪ್ಪಳಕಾಡು ಎಂಬಲ್ಲಿ ಮಹಿಳೆಯ ಕುತ್ತಿಗೆಯಿಂದ 32 ಗ್ರಾಂ ತೂಕದ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ರೋಹಿತ್ (25) ಬಂಧಿತ ಆರೋಪಿಯಾಗಿದ್ದಾನೆ. ಡಿ.25ರಂದು ಸಂಜೆ 6.30ಕ್ಕೆ ಕೊಂಚಾಡಿ ಗುರುನಗರದ ನಿವಾಸಿಗಳಾದ ರತ್ನಾವತಿ ಮತ್ತವರ ಮಗಳು ರಶ್ಮಿ ಯೆಯ್ಯಾಡಿಯಲ್ಲಿರುವ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ಕೊಪ್ಪಳಕಾಡು ರಸ್ತೆಯಲ್ಲಿ ಅಪರಿಚಿತ ವ್ಯಕ್ತಿ ರತ್ನಾವತಿಯ ಕುತ್ತಿಗೆಗೆ ಕೈ ಹಾಕಿ ಕರಿಮಣಿ ಸರ ಕಸಿದು ಪರಾರಿಯಾಗಿದ್ದ. ಸಿಸಿ ಕ್ಯಾಮರಾ ದೃಶ್ಯಾವಳಿಯನ್ನು

ಮಹಿಳೆಯ ಕತ್ತಿನಿಂದ ಸರ ಕಿತ್ತ ಕಳ್ಳನ ಬಂಧನ Read More »

error: Content is protected !!
Scroll to Top