ಅಪರಾಧ

ಬೇರೆ ಬೇರೆ ಹೆಸರಲ್ಲಿ ಯುವಕರನ್ನು ದೋಚುತ್ತಿದ್ದ ಮಹಿಳೆ ಪೊಲೀಸ್ ವಶಕ್ಕೆ

ಧಾರವಾಡ: ಮೂರು ಹೆಸರುಗಳ ಮೂಲಕ ಮಹಿಳೆಯೊಬ್ಬಳು ಯುವಕರ ಜೊತೆಗೆ ಪ್ರೀತಿಯ ನಾಟಕವಾಡಿ, ಹಣ ದೋಚುತ್ತಿದ್ದ ಘಟನೆ ಧಾರವಾಡದಲ್ಲಿ ನಡೆದಿದೆ. ಆರೋಪಿ ಮಹಿಳೆ ಐಶ್ವರ್ಯ, ರೇಣುಕಾ, ಆರೋಹಿ ಮೊದಲಾದ ಹೆಸರುಗಳಲ್ಲಿ ಯುವಕರನ್ನು ಪರಿಚಯಿಸಿಕೊಂಡು ಪ್ರೀತಿಯ ನಾಟಕವಾಡುತ್ತಿದ್ದಳು. ಆ ಬಳಿಕ ಅವರನ್ನು ಮದುವೆಯಾಗುವುದಾಗಿ ನಂಬಿಸಿ ಅವರಿಂದ ಹಣ ದೋಚುವ ಕೆಲಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಅವಳ ಸುಳ್ಳು ಪ್ರೀತಿಯ ಬಲೆಗೆ ಬಿದ್ದ ಗುರು ಎಂಬಾತ ಆಕೆಗೆ 7 ಲಕ್ಷ ರೂ. ಗಳನ್ನು ನೀಡಿದ್ದ. ಹಣ ಕೈ ಸೇರುತ್ತಿದ್ದ ಹಾಗೆ […]

ಬೇರೆ ಬೇರೆ ಹೆಸರಲ್ಲಿ ಯುವಕರನ್ನು ದೋಚುತ್ತಿದ್ದ ಮಹಿಳೆ ಪೊಲೀಸ್ ವಶಕ್ಕೆ Read More »

ಶಾಲಾ ಬಾವಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆ

ಕಲಬುರ್ಗಿ: ಶಾಲೆಯ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ಬಬಲಾದ ಡಾನ್ ಬಾಸ್ಕೊ ನಗರದಲ್ಲಿ ನಡೆದಿದೆ. ಮೃತನನ್ನು ಚಿಂಚೋಳಿ ನಿವಾಸಿ ಗುರು(15) ಎಂದು ಗುರುತಿಸಲಾಗಿದೆ. ಗುರು ಕಳೆದ ಮೂರು ದಿನಗಳಿಂದ ಶಾಲೆಯಿಂದ ನಾಪತ್ತೆಯಾಗಿದ್ದ. ಇಂದು ಆತನ ಶವ ಶಾಲಾ ಆವರಣದ ಬಾವಿಯಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ವಿವರ: ಗುರು ಶಾಲೆಗೆ ಬೈಕ್ ತೆಗೆದುಕೊಂಡು ಹೋಗಿ ಗೋಡೆಗೆ ಢಿಕ್ಕಿ ಹೊಡೆದಿದ್ದ. ಈ ವೇಳೆ ಬೈಕ್‌ಗೆ ಹಾನಿಯಾಗಿದ್ದು ಸಿಬ್ಬಂದಿ ಶಾಲೆಯ

ಶಾಲಾ ಬಾವಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆ Read More »

ಪ್ರೀತಿಸಲ್ಲ ಎಂದ ಯುವತಿಗೆ ಬಿಯರ್ ಬಾಟಲಿನಿಂದ ಚುಚ್ಚಿದ ಯುವಕ

ಶಿವಮೊಗ್ಗ: ಯುವತಿಯೊಬ್ಬಳು ತನ್ನ ಪ್ರೇಮ ನಿವೇದನೆಯನ್ನು ‌ತಿರಸ್ಕರಿಸಿದಳು ಎನ್ನುವ ಕಾರಣಕ್ಕೆ ಪಾಗಲ್ ಪ್ರೇಮಿಯೊಬ್ಬ ಆಕೆಗೆ ಬಿಯರ್ ಬಾಟಲಿನಿಂದ ಚುಚ್ಚಿದ ಘಟನೆ ತೀರ್ಥಹಳ್ಳಿಯ ಆಲ್ಮನೆಯಲ್ಲಿ ನಡೆದಿದೆ. ಆರೋಪಿಯನ್ನು ಸ್ವರೂಪ್ ಎಂದು ಗುರುತಿಸಲಾಗಿದೆ. ಆತ ಕೆಲ ದಿನಗಳ ಹಿಂದೆ ಓರ್ವ ಯುವತಿಗೆ ಪ್ರೇಮಿಸುವುದಾಗಿ ತಿಳಿಸಿದ್ದ. ಆದರೆ ಆ ಯುವತಿ ಅದನ್ನು ತಿರಸ್ಕರಿಸಿದ್ದಾಳೆ. ಇದರಿಂದ ಕುಪಿತನಾದ ಆತ ಆಕೆಗೆ ಬಿಯರ್ ಬಾಟಲಿಯಿಂದ ಕೈ ಮತ್ತು ಕುತ್ತಿಗೆಗೆ ಇರಿದಿದ್ದಾನೆ. ಈ ವೇಳೆ ಯುವಕ ಮದ್ಯದ ಅಮಲಿನಲ್ಲಿ ತೇಲಾಡುತ್ತಿದ್ದು ಆತನನ್ನು ತೀರ್ಥಹಳ್ಳಿ ಪೊಲೀಸರು ವಶಕ್ಕೆ

ಪ್ರೀತಿಸಲ್ಲ ಎಂದ ಯುವತಿಗೆ ಬಿಯರ್ ಬಾಟಲಿನಿಂದ ಚುಚ್ಚಿದ ಯುವಕ Read More »

ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ, ಓರ್ವನ ಕೊಲೆ ಮಾಡಿದ್ದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

ಕೊಪ್ಪಳ: ಅಮೆರಿಕ ಮೂಲದ ಪ್ರವಾಸಿಗನ ಕೊಲೆ, ಇಸ್ರೇಲ್ ಮತ್ತು ಭಾರತ ಮೂಲದ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಗಂಗಾವತಿಯ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಆರೋಪಿಗಳಾದ ಮಲ್ಲೇಶ್ ಯಾನೆ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪನಿಗೆ ಗಲ್ಲು ಶಿಕ್ಷೆ ವಿಧಿಸುವ ಮೂಲಕ ಕೋರ್ಟ್ ನ್ಯಾಯವನ್ನು ಎತ್ತಿ ಹಿಡಿದಿರುವುದಾಗಿದೆ. ಕಳೆದ ಫೆ. 6 ರಂದು ಈ ಮೂವರು ಆರೋಪಿಗಳು ದೋಷಿಗಳು ಎಂದು ಕೋರ್ಟ್ ತೀರ್ಪು ನೀಡಿತ್ತು. ಇದೀಗ ಆರೋಪಿಗಳಿಗೆ ಗಲ್ಲು

ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ, ಓರ್ವನ ಕೊಲೆ ಮಾಡಿದ್ದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್ Read More »

ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ : ಪರಿಸ್ಥಿತಿ ಉದ್ವಿಗ್ನ

ಉದ್ದೇಶಪೂರ್ವಕವಾಗಿ ಕಲ್ಲು ತೂರುತ್ತಿರುವ ದುಷ್ಕರ್ಮಿಗಳು ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ವಿಜಯನಗರ ಬಡಾವಣೆಯ ತಿಲಕ್ ಪಾರ್ಕ್ ಸಮೀಪ ಹಿಂದೂಗಳ ಮನೆಯೊಂದರ ಮೇಲೆ ಕಳೆದ ಒಂದು ವಾರದಿಂದ ಕಿಡಿಗೇಡಿಗಳು ರಾತ್ರಿ ವೇಳೆ ನಿರಂತರ ಕಲ್ಲುತೂರಾಟ ನಡೆಸಿದ್ದು, ಘಟನೆಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಘಟನೆ ಬೆನ್ನಲ್ಲೇ ಕೆಲ ಮುಸ್ಲಿಂ ಯುವಕರನ್ನು ಬಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಸೋಮವಾರ ರಾತ್ರಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಮತ್ತೊಂದೆಡೆ, ಘರ್ಷಣೆ ವೇಳೆ ಇಬ್ಬರು ಮುಸ್ಲಿಂ ಯುವಕರು ಗಾಯಗೊಂಡಿದ್ದು, ಅವರನ್ನು ಮಲ್ಲೇಗೌಡ

ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ : ಪರಿಸ್ಥಿತಿ ಉದ್ವಿಗ್ನ Read More »

ರಸ್ತೆ ಅವ್ಯವಸ್ತೆಗೆ ಬಲಿಯಾಯ್ತು 2 ವರ್ಷದ ಕಂದನ ಜೀವ

ಬೆಂಗಳೂರು: ರಸ್ತೆ ಅವ್ಯವಸ್ಥೆಯಿಂದಾಗಿ ಎರಡು ವರ್ಷದ ಕಂದಮ್ಮ ಮೃತಪಟ್ಟ ಘಟನೆ ಮಹದೇವಪುರದಲ್ಲಿ ‌ನಡೆದಿದೆ. ರಸ್ತೆ ದುರಸ್ತಿ ವಿಳಂಬದಿಂದಾಗಿ ಸಂಭವಿಸಿದ ಅಪಘಾತದಲ್ಲಿ ಈ ದುರ್ಘಟನೆ ನಡೆದಿದೆ. ಮಗು ಇದ್ದ ಬೈಕ್‌ಗೆ ಹಿಂದಿನಿಂದ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಮಗು ಕೆಳಕ್ಕೆ ಬಿದ್ದು ಮೃತಪಟ್ಟಿದೆ. ಮೃತ ಮಗುವನ್ನು ತ್ರಿಶೂಲ್ ಎಂದು ಗುರುತಿಸಲಾಗಿದೆ. ಮಗು ಕೆಳಕ್ಕೆ ಬಿದ್ದಾಗ ಅದರ ತಲೆಯ ಮೇಲೆ ಕಾರು ಹರಿದು ಹೋಗಿದೆ. ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಈ ಅಪಘಾತಕ್ಕೆ ಅರೆಪೂರ್ಣವಾದ ರಸ್ತೆಗಳ ಅವ್ಯವಸ್ಥೆ ಎಂದು

ರಸ್ತೆ ಅವ್ಯವಸ್ತೆಗೆ ಬಲಿಯಾಯ್ತು 2 ವರ್ಷದ ಕಂದನ ಜೀವ Read More »

ಹತ್ತನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಚಿತ್ರದುರ್ಗ: ನಗರದ ವಸತಿ ಶಾಲೆಯೊಂದರ ಎಸ್‌ಎಸ್‌ಎಲ್‌ಸಿ ‌ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಚಿತ್ರದುರ್ಗದ ಕರಿಯಣ್ಣನಹಳ್ಳಿ ನಿವಾಸಿ, ಭರಮಸಾಗರದ ‌ಖಾಸಗಿ ವಸತಿ ಶಾಲಾ ವಿದ್ಯಾರ್ಥಿ ಕೊಟ್ರೇಶ್ ಎಂಬವನೇ‌ ಮೃತ ವಿದ್ಯಾರ್ಥಿ. ಈತ ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆಗೆ ಶರಣಾಗಿರುವುದಾಗಿದೆ. ಯಾವ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಕಾರಣ ತಿಳಿದು ಬಂದಿಲ್ಲ. ಈತ ಕಟ್ಟಡದಿಂದ ಜಿಗಿಯುವ ದೃಶ್ಯ ಸಿಸಿಟಿವಿಯಲ್ಲಿ ‌ಸೆರೆಯಾಗಿದೆ. ಪರಮ ಸಾಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಹತ್ತನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ Read More »

400 ಕೋ. ರೂ. ದರೋಡೆ ಕಟ್ಟುಕಥೆ!

ಬೆಳಗಾವಿಯ ಘಾಟಿಯಲ್ಲಿ ಇಂಥ ಘಟನೆಯೇ ನಡೆದಿಲ್ಲ ಎಂದು ತನಿಖೆಯಿಂದ ಸಾಬೀತು ಬೆಳಗಾವಿ : ಕರ್ನಾಟಕ-ಗೋವಾ ಗಡಿಯಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಈಗ ದಿಢೀರ್‌ ತಿರುವು ಪಡೆದುಕೊಂಡಿದ್ದು, ಇಡೀ ಘಟನೆಯೇ ಸುಳ್ಳು ಎನ್ನುವ ಮಾಹಿತಿ ಹೊರಬಿದ್ದಿದೆ. ಘಟನೆ ಕಟ್ಟುಕಥೆ ಎಂಬ ಅನುಮಾನಕ್ಕೆ ಬಲವಾದ ಪುರಾವೆ ಸಿಕ್ಕಿದೆ. ಬೆಳಗಾವಿ ಸಮೀಪದ ಗಡಿ ಪ್ರದೇಶದಲ್ಲಿ ಹಣ ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳನ್ನು ದರೋಡೆ ಮಾಡಲಾಗಿದೆ ಎಂದು ನೀಡಿದ್ದ ದೂರಿನ ಮೇಲೆ ಮಹಾರಾಷ್ಟ್ರ ಸರ್ಕಾರ ಎಸ್‌ಐಟಿ ರಚಿಸಿ ತನಿಖೆ

400 ಕೋ. ರೂ. ದರೋಡೆ ಕಟ್ಟುಕಥೆ! Read More »

ವೃದ್ಧನ ಕೊಲೆ : ಮಗ ಸಹಿತ ಮೂವರ ಬಂಧನ

ನೆಲ್ಯಾಡಿಯ ಕೊಪ್ಪಮಾದೇರಿಯಲ್ಲಿ ಸಂಭವಿಸಿದ ಪ್ರಕರಣ ಉಪ್ಪಿನಂಗಡಿ: ಏಳು ದಿನದ ಹಿಂದೆ ಸಂಭವಿಸಿದ ನೆಲ್ಯಾಡಿ ಗ್ರಾಮದ ಕೊಪ್ಪಮಾದೇರಿ ನಿವಾಸಿ ವೃದ್ಧ ಕೆ.ಸಿ ವರ್ಗೀಸ್ (73) ಅವರ ಅಸಹಜ ಸಾವು ಪ್ರಕರಣ ಕೊಲೆ ಪ್ರಕರಣ‌ ಎಂದು ಖಚಿತ ಪಡಿಸಿದ ಪೊಲೀಸರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತರ ಮಗ ಹಾಗೂ ಸಂಬಂಧಿಕರಾದ ಕೆ.ವಿ. ತೋಮಸ್ (39), ಸಿ.ಟಿ ರಾಜು (59), ಚಾಕೊಚ್ಚ (51) ಬಂಧಿತರು. ಫೆ.9ರಂದು ಉಪ್ಪಿನಂಗಡಿ ಠಾಣೆಯಲ್ಲಿ ಕೆ.ಸಿ.ವರ್ಗೀಸ್ ಸಾವಿಗೆ ಸಂಬಂಧಪಟ್ಟಂತೆ ಅಸಹಜ ಸಾವು ಪ್ರಕರಣ ದಾಖಲಾಗಿತ್ತು.

ವೃದ್ಧನ ಕೊಲೆ : ಮಗ ಸಹಿತ ಮೂವರ ಬಂಧನ Read More »

ನದಿಯಿಂದ ಆಮೆಗಳನ್ನು ಹಿಡಿದು ಸುಟ್ಟ ನಾಲ್ಕು ಮಂದಿ ಸೆರೆ

ಅಜ್ಜಿಯ ತಿಥಿ ಕಾರ್ಯಕ್ಕೆ ಆಮೆ ಮಾಂಸ ಮಾಡಲು ಮುಂದಾಗಿದ್ದ ಆರೋಪಿಗಳು ಬೆಳ್ತಂಗಡಿ : ನದಿಯಲ್ಲಿ ಆಮೆಗಳನ್ನು ಹಿಡಿದು ಸುಟ್ಟು ಬೇಯಿಸುತ್ತಿದ್ದ ನಾಲ್ಕು ಮಂದಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ತಿಥಿ ಕಾರ್ಯಕ್ರಮಕ್ಕೆ ಪದಾರ್ಥ ಮಾಡಿ ಬಡಿಸಲು ಅಜ್ಜಿಗೆ ಇಷ್ಟವಾದ ಆಮೆಯನ್ನು ಸಂಬಂಧಿಕರು ನದಿಯಲ್ಲಿ ಅಕ್ರಮವಾಗಿ ಹಿಡಿದು ನದಿ ದಡದಲ್ಲೇ ಮಾಂಸ ಮಾಡಿ ಸುಡಲು ಯತ್ನಿಸುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ. ಬೆಳ್ತಂಗಡಿ ನಗರದ ಸೋಮವತಿ ನದಿಯಲ್ಲಿ ನಾಲ್ಕು ಆಮೆಯನ್ನು ಹಿಡಿದು ನದಿ ಬದಿಯಲ್ಲಿ ಮಾಂಸ ಮಾಡಲು ಪ್ರಯತ್ನಿಸುತ್ತಿರುವಾಗ ಫೆ.14ರಂದು

ನದಿಯಿಂದ ಆಮೆಗಳನ್ನು ಹಿಡಿದು ಸುಟ್ಟ ನಾಲ್ಕು ಮಂದಿ ಸೆರೆ Read More »

error: Content is protected !!
Scroll to Top