ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ : ಆಸ್ಪತ್ರೆಗೆ ದಾಖಲು
ಪುತ್ತೂರು : ರಸ್ತೆ ಬದಿ ನಿಂತಿದ್ದ ಲಿಂಗಪ್ಪ ನಾಯ್ಕ ಅವರಿಗೆ ಬೈಕ್ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಭಾನುವಾರ ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿಯಲ್ಲಿ ನಡೆದಿದೆ. ಬೈಕ್ ಸವಾರ ಲೋಕೇಶ್ ಎಂಬವರು ತನ್ನ ಬೈಕ್ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾರೆ. ಲಿಂಗಪ್ಪ ನಾಯ್ಕರಿಗೆ ಮುಖ, ಭುಜ, ಕಾಲುಗಳಿಗೆ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಿಂಗಪ್ಪ ನಾಯ್ಕರು ನೀಡಿದ ದೂರಿನದಂತೆ ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ : ಆಸ್ಪತ್ರೆಗೆ ದಾಖಲು Read More »





