ಅಪರಾಧ

ಕರ್ನಾಟಕದ ಕರಾವಳಿಯಿಂದ ಉಗ್ರರಿಗೆ ಕೋಟಿಗಟ್ಟಲೆ ಹಣ ರವಾನೆ

ಮಂಗಳೂರು : ಬಂಟ್ವಾಳದ ನಂದವಾರದಿಂದ ರಾಷ್ಟ್ರೀಯ ತನಿಖಾ ಸಂಸ್ಥೆ ಸೆರೆ ಹಿಡಿದಿರುವ ಮೂವರು ಬಿಹಾರದ ಉಗ್ರರಿಗಾಗಿ ಸುಮಾರು 25 ಕೋ. ರೂ. ರವಾನಿಸಿರುವ ಲೆಕ್ಕ ಸಿಕ್ಕಿದೆ. ನಂದಾವರ, ಪುತ್ತೂರು ಮತ್ತು ಕೇರಳದ ಮಂಜೇಶ್ವರದಿಂದ ಎನ್‌ಐಎ ಐವರನ್ನು ಬಂಧಿಸಿದ್ದು, ಇವರೆಲ್ಲ ನಿಷೇಧಿತ ಪಿಎಫ್‌ಐ ಕಾರ್ಯಕರ್ತರಾಗಿದ್ದರು.ವಿಧ್ವಂಸಕ ಕೃತ್ಯ ಎಸಗಿರುವ ಸಂಚಿನಲ್ಲಿ ಸಕ್ರಿಯವಾಗಿ ಭಾಗಿಯಾದ ಆರೋಪ ಅವರ ಮೇಲಿದೆ. ಕರಾವಳಿಯಿಂದ ಬರೀ ಒಂದು ಕೃತ್ಯಕ್ಕೆ ಸುಮಾರು 25 ಕೋ. ರೂ. ರವಾನೆಯಾಗಿರುವುದನ್ನು ಎನ್‌ಐಎ ಪತ್ತೆ ಹಚ್ಚಿದೆ.ಕರಾವಳಿಯಲ್ಲಿ ಉಗ್ರರಿಗೆ ಹಣಕಾಸಿನ ನೆರವು ಒದಗಿಸುವ […]

ಕರ್ನಾಟಕದ ಕರಾವಳಿಯಿಂದ ಉಗ್ರರಿಗೆ ಕೋಟಿಗಟ್ಟಲೆ ಹಣ ರವಾನೆ Read More »

ಮಂಗಳೂರು ಕುಕ್ಕರ್‌ ಸ್ಫೋಟದ ಉಗ್ರ ಆಸ್ಪತ್ರೆಯಿಂದ ಬಿಡುಗಡೆ

ಎರಡೂವರೆ ತಿಂಗಳು ಸರಕಾರಿ ಖರ್ಚಿನಲ್ಲಿ ಚಿಕಿತ್ಸೆ ಬೆಂಗಳೂರು : ಮಂಗಳೂರು ಆಟೋರಿಕ್ಷಾ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಉಗ್ರ ಮೊಹಮ್ಮದ್ ಶಾರಿಕ್ ಸೋಮವಾರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾನೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅವನನ್ನು ವಶಕ್ಕೆ ತೆಗೆದುಕೊಂಡಿದೆ.ಕಳೆದ ನ.19 ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್‌ನಲ್ಲಿ ಬಾಂಬಿಟ್ಟುಕೊಂಡು ಸಾಗಿಸುತ್ತಿದ್ದಾಗ ಅದು ಸ್ಫೋಟಿಸಿ ಶಾರಿಕ್‌ ಜತೆ ರಿಕ್ಷಾ ಚಾಲಕ ಪುರುಷೋತ್ತಮ್ ಗಾಯಗೊಂಡಿದ್ದರು. 24 ವರ್ಷದ ತೀರ್ಥಹಳ್ಳಿ ಮೂಲದ ಆರೋಪಿ ಶಾರಿಕ್ ಗಂಭೀರ ಸ್ವರೂಪದ ಗಾಯವಾಗಿತ್ತು. ಮಂಗಳೂರಿನ

ಮಂಗಳೂರು ಕುಕ್ಕರ್‌ ಸ್ಫೋಟದ ಉಗ್ರ ಆಸ್ಪತ್ರೆಯಿಂದ ಬಿಡುಗಡೆ Read More »

ಹೆಲ್ಮೆಟ್ ಹಾಕಿದ್ದರೂ ತಲೆಗೇ ಬಲವಾದ ಪೆಟ್ಟು ಬಿದ್ದು ಮೃತ್ಯು | ಪೊಲೀಸ್ ಜೀಪ್ ಡಿಕ್ಕಿಯಾಗಿ ಮೃತಪಟ್ಟ ಬೈಕ್ ಸವಾರ ಲಕ್ಷ್ಮಣ್ ನಾಯ್ಕ್ ಅಂತಿಮ ದರ್ಶನ

ಪುತ್ತೂರು: ಎನ್.ಐ.ಎ. ತಂಡಕ್ಕೆ ಬೆಂಗಾವಲು ವಾಹನವಾಗಿ ಸಾಗುತ್ತಿದ್ದ ಪೊಲೀಸ್ ಜೀಪ್ ಡಿಕ್ಕಿಯಾಗಿ ಮೃತಪಟ್ಟ ಬೈಕ್ ಸವಾರ, ಆರ್ಲಪದವಿನ ಪಾಣಾಜೆ ಸಿಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ್ ನಾಯ್ಕ್ (48) ಅವರ ಮೃತದೇಹದ ಅಂತಿಮ ದರ್ಶನ ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ನಡೆಯಿತು. ಬಳಿಕ ಸ್ವಗೃಹ ಕೋಟೆಯಲ್ಲಿ ಅಂತಿಮ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಪುತ್ತೂರು ಸರಕಾರಿ ಆಸ್ಪತ್ರೆಯಿಂದ ಸೋಮವಾರ ಬೆಳಿಗ್ಗೆ ಮೃತದೇಹವನ್ನು ಆ್ಯಂಬುಲೆನ್ಸ್ ಮೂಲಕ ಆರ್ಲಪದವಿಗೆ ತರಲಾಯಿತು. ಪಾಣಾಜೆ, ನಿಡ್ಪಳ್ಳಿ, ಬೆಟ್ಟಂಪಾಡಿ ಗ್ರಾಮದ ನೂರಾರು

ಹೆಲ್ಮೆಟ್ ಹಾಕಿದ್ದರೂ ತಲೆಗೇ ಬಲವಾದ ಪೆಟ್ಟು ಬಿದ್ದು ಮೃತ್ಯು | ಪೊಲೀಸ್ ಜೀಪ್ ಡಿಕ್ಕಿಯಾಗಿ ಮೃತಪಟ್ಟ ಬೈಕ್ ಸವಾರ ಲಕ್ಷ್ಮಣ್ ನಾಯ್ಕ್ ಅಂತಿಮ ದರ್ಶನ Read More »

ನಂದಾವರ, ಬೆಟ್ಟಂಪಾಡಿಯಲ್ಲಿ ಎನ್‌ಐಎ ಶೋಧ

ಹಲವು ಮನೆಗಳಲ್ಲಿ ಶೋಧ ಕಾರ್ಯಾಚರಣೆ ಮಂಗಳೂರು : ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಕಾರ್ಯಾಚರಣೆ ನಡೆಸಿ ಕೆಲವರನ್ನು ವಿಚಾರಣೆಗೊಳಪಡಿಸಿದೆ ಎಂದು ತಿಳಿದು ಬಂದಿದೆ. ಬಿಹಾರದ ಪಟ್ನಾದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ಮೋದಿಯವರ ಚುನಾವಣಾ ರ್ಯಾಲಿಯಲ್ಲಿ ಬಾಂಬ್‌ ಸ್ಫೋಟಿಸಿ ವಿಧ್ವಂಸಕ ಕೃತ್ಯ ಎಸಗಲು ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಈ ಕಾರ್ಯಾಚರಣೆ ನಡೆಸಿದೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಉಗ್ರರಿಗೆ ಹಣಕಾಸಿನ ನೆರವು ನೀಡಿರುವ ವಿಚಾರಕ್ಕೆ ಸಂಬಂಧಿಸಿ ಎನ್‌ಐಎ

ನಂದಾವರ, ಬೆಟ್ಟಂಪಾಡಿಯಲ್ಲಿ ಎನ್‌ಐಎ ಶೋಧ Read More »

ಪೊಲೀಸ್ ಜೀಪ್ – ಬೈಕ್ ಡಿಕ್ಕಿ: ಆರ್ಲಪದವು ಸಿಎ ಬ್ಯಾಂಕ್ ಮ್ಯಾನೇಜರ್ ಮೃತ್ಯು

ಪುತ್ತೂರು: ಸಂಪ್ಯ ಮಸೀದಿ ಮುಂಭಾಗದಲ್ಲಿ ಪೊಲೀಸ್ ಜೀಪ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ಮೃತಪಟ್ಟವರನ್ನು ಆರ್ಲಪದವು ಸಿಎ ಬ್ಯಾಂಕ್ ಮ್ಯಾನೇಜರ್ ಲಕ್ಷ್ಮಣ್ ನಾಯ್ಕ್ ಎಂದು ಗುರುತಿಸಲಾಗಿದೆ. ಪುತ್ತೂರಿಗೆ ಆಗಮಿಸುತ್ತಿದ್ದ ಪೊಲೀಸ್ ಜೀಪ್ ಹಾಗೂ ಆರ್ಲಪದವು ಕಡೆ ಸಾಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೈಕ್ ಸವಾರ ಲಕ್ಷ್ಮಣ್ ನಾಯ್ಕ್ ಅವರು ಗಂಭೀರ ಗಾಯಗೊಂಡು, ಕೊನೆಯುಸಿರೆಳೆದರು. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸ್ ಜೀಪ್ – ಬೈಕ್ ಡಿಕ್ಕಿ: ಆರ್ಲಪದವು ಸಿಎ ಬ್ಯಾಂಕ್ ಮ್ಯಾನೇಜರ್ ಮೃತ್ಯು Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪಿಎಫ್ಐ ಕಾರ್ಯಕರ್ತ ತುಫೈಲ್ ಎನ್.ಐ.ಎ ವಶ

ಪುತ್ತೂರು: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಲ್ಲಿ ಓರ್ವನಾದ, ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಕಾರ್ಯಕರ್ತ, ಮಡಿಕೇರಿಯ ಎಂ.ಎಚ್‌. ತುಫೈಲ್‌ ಎಂಬಾತನನ್ನು ಎನ್.ಐ.ಎ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಆತನನ್ನು ಸೆರೆ ಹಿಡಿಯಲಾಗಿದೆ ಎಂದು ತಿಳಿದುಬಂದಿದೆ. ತುಫೈಲ್‌ ವಿರುದ್ದ ಲುಕೌಟ್ ನೊಟೀಸ್ ಜಾರಿ ಮಾಡಿದ್ದು, ಮಾಹಿತಿ ನೀಡಿದವರಿಗೆ ತಲಾ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್.ಐ.ಎ ಘೋಷಣೆ ಮಾಡಿತ್ತು. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಬಗ್ಗೆ ತನಿಖೆ ನಡೆಸಿದ್ದ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪಿಎಫ್ಐ ಕಾರ್ಯಕರ್ತ ತುಫೈಲ್ ಎನ್.ಐ.ಎ ವಶ Read More »

ಉಳ್ಳಾಲ : ಯುವಕನಿಗೆ ಚೂರಿ ಇರಿತ

ಮನೆಯಿಂದ ಹೊರಗೆ ಕರೆದು ಮರಣಾಂತಿಕ ಹಲ್ಲೆ ಉಳ್ಳಾಲ: ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರದಲ್ಲಿ ಆತನ ಮನೆಯ ಎದುರೇ ಸಂಭವಿಸಿದೆ. ಶುಕ್ರವಾರ ತಡರಾತ್ರಿ ವೇಳೆ ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಎಂಬವರು ಕೊಲೆಯತ್ನಕ್ಕೆ ಒಳಗಾದವರು. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಛಬ್ಬಿ ಅಲಿಯಾಸ್ ಕಬೀರ್ ಮತ್ತು ರಾಝಿಕ್ ಹಾಗೂ ಇನ್ನಿಬ್ಬರು ಸೇರಿ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ಅವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಸದಕತ್ತುಲ್ಲಾ

ಉಳ್ಳಾಲ : ಯುವಕನಿಗೆ ಚೂರಿ ಇರಿತ Read More »

ಲಂಚ ಪಡೆದ ಆರೋಪ: ಗ್ರಾಮ ಆಡಳಿತಾಧಿಕಾರಿ ಮಹೇಶ್ ಎಸ್.ಗೆ ಜೈಲು, ದಂಡ

ಪುತ್ತೂರು: ಲಂಚ ಪಡೆದ ಆರೋಪದ ಮೇಲೆ ಗ್ರಾಮ ಆಡಳಿತಾಧಿಕಾರಿ ಮಹೇಶ್ ಎಸ್. ಅವರಿಗೆ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ನೀಡಿದೆ. ಪುತ್ತೂರು ಕಸಬಾ ಹಾಗೂ ನರಿಮೊಗರು ಗ್ರಾಮದ ಗ್ರಾಮ ಆಡಳಿತಾಧಿಕಾರಿಯಾಗಿದ್ದ ಮಹೇಶ್ ಎಸ್. ಅವರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 70 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ದಂಡ ಕಟ್ಟಲು ವಿಫಲವಾದರೆ ಮತ್ತೆ 8 ತಿಂಗಳ ಜೈಲು ಶಿಕ್ಷೆಗೆ ಆದೇಶಿಸಲಾಗಿದೆ. ಅಕ್ರಮ ಸಕ್ರಮದ ಅರ್ಜಿ

ಲಂಚ ಪಡೆದ ಆರೋಪ: ಗ್ರಾಮ ಆಡಳಿತಾಧಿಕಾರಿ ಮಹೇಶ್ ಎಸ್.ಗೆ ಜೈಲು, ದಂಡ Read More »

ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕೆಎಎಸ್‌ ಅಧಿಕಾರಿ

ಬೆಂಗಳೂರು : ಲಂಚ ಪಡೆಯುವ ವೇಳೆ ದಾವಣಗೆರೆಯ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಪ್ರಶಾಂತ್ ಸೇರಿದಂತೆ ಐವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಶಾಂತ್ ಮಾಡಾಳ್ ಕೆಎಎಸ್ ಅಧಿಕಾರಿಯಾಗಿದ್ದು ಜಲಮಂಡಳಿ ಹಾಗೂ ಎಸಿಬಿ ಎರಡಲ್ಲೂ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ ರಾಸಾಯನಿಕ ಪೂರೈಸುವ ಟೆಂಡರ್ ನೀಡುವ ಸಲುವಾಗಿ 81 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದಾಗಿ ಕಚ್ಚಾ ಸಾಮಾಗ್ರಿ ಕಂಪನಿಯನ್ನು ನಡೆಸುತ್ತಿದ್ದ ಶ್ರೇಯಸ್ ಕಶ್ಯಪ್

ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕೆಎಎಸ್‌ ಅಧಿಕಾರಿ Read More »

ಮಂಗಳೂರು : ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ : ಓರ್ವ ಬಾಲಕಿ ಪಾರು!

ಮಂಗಳೂರು: ಕೊಡಿಯಾಲ್ ಬೈಲಿನಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಸಂಭವಿಸಿದೆ. ಮೃತರನ್ನು ವಿಜಯಾ(33) ಮತ್ತು ಶೋಭಿತಾ (4) ಮೃತ ದುರ್ದೈವಿಯಾಗಿದ್ದು, ಅದೃಷ್ಟವಶಾತ್ 12 ವರ್ಷದ ಯಜ್ಞಾ ನೇಣು ಕುಣಿಕೆಯಿಂದ ಪಾರಾಗಿದ್ದಾಳೆ. ವಿಜಯಾ ಅವರ ಪತಿ ಆರು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಹೀಗಾಗಿ ಆಕೆ ಉಮೇಶ್ ಎಂಬುವರನ್ನು ಮರು ಮದುವೆಯಾಗಿದ್ದರು. ಆದರೆ ಉಮೇಶ್ ಇತ್ತೀಚೆಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಆಸರೆಯಾಗಿದ್ದ ಎರಡನೇ ಪತಿಯೂ ಆತ್ಮಹತ್ಯೆಗೆ ಶರಣಾಗಿದ್ದರಿಂದ ನೊಂದ ವಿಜಯಾ ತಮ್ಮ

ಮಂಗಳೂರು : ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ : ಓರ್ವ ಬಾಲಕಿ ಪಾರು! Read More »

error: Content is protected !!
Scroll to Top