ಅಪರಾಧ

ಬಂಧನದಲ್ಲಿದ್ದ ಯುವಕ ಸಾವು: ಪೊಲೀಸರ ಚಿತ್ರಹಿಂಸೆಯೇ ‌ಕಾರಣ ಎಂದು ಕುಟುಂಬಸ್ಥರ ಆರೋಪ

ಮಧುರೈ: ಪ್ರಕರಣವೊಂದಕ್ಕೆ ಸಂಬಂಧಿಸಿದ ಹಾಗೆ ವಿಚಾರಣೆಗಾಗಿ ಪೊಲೀಸರ ಕಸ್ಟಡಿಯಲ್ಲಿದ್ದ ದಲಿತ ಯುವಕನೊಬ್ಬ ಮೃತಪಟ್ಟಿದ್ದು, ಪೊಲೀಸರ ಚಿತ್ರಹಿಂಸೆಯಿಂದ ಈ ಘಟನೆ ನಡೆದಿದೆ ಎಂದು ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ. ಮೃತನನ್ನು ಆಕಾಶ್ (26) ಎಂದು ಗುರುತಿಸಲಾಗಿದೆ. ಶಿವಗಂಗಾದಲ್ಲಿ ‌ನಡೆದ ಹಲ್ಲೆ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಈತನನ್ನು ಪೊಲೀಸರು ಬಂಧಿಸಿದ್ದರು. ಈ ಬಗ್ಗೆ ಆಕಾಶ್ ತಂದೆ ಮಾತನಾಡಿದ್ದು, ಸ್ನೇಹಿತರ ನಡುವೆ ಜಗಳ ನಡೆದಿದ್ದು, ಈ ಪ್ರಕರಣದಲ್ಲಿ ಆಕಾಶ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ‌ವಶಕ್ಕೆ ಪಡೆದಿದ್ದ ನನ್ನ ಪುತ್ರನನ್ನು ಪೊಲೀಸರು ಠಾಣೆಗೆ […]

ಬಂಧನದಲ್ಲಿದ್ದ ಯುವಕ ಸಾವು: ಪೊಲೀಸರ ಚಿತ್ರಹಿಂಸೆಯೇ ‌ಕಾರಣ ಎಂದು ಕುಟುಂಬಸ್ಥರ ಆರೋಪ Read More »

ಬಂಟ್ವಾಳ : ಬಸ್ಸಿನಿಂದ ಲಕ್ಷಾಂತರ ರೂ. ಮೌಲ್ಯದ ಆಭರಣ ಕದ್ದಿದ್ದ ಆರೋಪಿ ಸೆರೆ

ಬಂಟ್ವಾಳ : ಹೋಟೆಲ್‌ ಎದುರು ನಿಲ್ಲಿಸಿದ್ದ ಬಸ್ಸಿನಿಂದ ದಂಪತಿಯ ಲಕ್ಷಾಂತರ ಮೌಲ್ಯದ ಆಭರಣಗಳನ್ನು ಕಳವು ಮಾಡಿದ್ದ ಆರೋಪಿ ಐದು ತಿಂಗಳ ಬಳಿಕ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮಧ್ಯಪ್ರದೇಶದ ನಿವಾಸಿ ಸಮದ್‌ ಖಾನ್‌ (37) ಎಂಬಾತ ಆರೋಪಿ. ಅವನಿಂದ ಕಳವು ಮಾಡಿದ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳೆದ ನವೆಂಬರ್‌ 19ರಂದು ದುರ್ಗಾಂಬಾ ಬಸ್‌ ಕಲ್ಲಡ್ಕ ಸಮೀಪ ಕುದ್ರಬೆಟ್ಟುವಿನಲ್ಲಿರುವ ಸಮುದ್ರ ಹೋಟೆಲ್‌ ಎದುರು ಪ್ರಯಾಣಿಕರಿಗೆ ಉಪಾಹಾರ ಸೇವಿಸಲೆಂದು ನಿಲ್ಲಿಸಿದ್ದ ವೇಳೆ ಬವ್ರಹ್ಮಾವರ ಮೂಲದ ದಂಪತಿಯ ಬ್ಯಾಗಿನಲ್ಲಿದ್ದ ಸುಮಾರು 20 ಲ.ರೂ.

ಬಂಟ್ವಾಳ : ಬಸ್ಸಿನಿಂದ ಲಕ್ಷಾಂತರ ರೂ. ಮೌಲ್ಯದ ಆಭರಣ ಕದ್ದಿದ್ದ ಆರೋಪಿ ಸೆರೆ Read More »

ಸಹಪಾಠಿಯನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಸಾಯಿಸಿದ ವಿದ್ಯಾರ್ಥಿ ಸೆರೆ

ಸಹಪಾಠಿಗಳು, ವಾರ್ಡನ್‌ ಮೇಲೆ ಹಲ್ಲೆ ಮಾಡಿದ್ದ 9ನೇ ತರಗತಿ ವಿದ್ಯಾರ್ಥಿ ಬಳ್ಳಾರಿ: ಜಿಲ್ಲೆಯ ಗೋನಾಳ ಪ್ರದೇಶದ ವಸತಿ ಶಾಲೆಯಲ್ಲಿ ಸಹಪಾಠಿ ವಿದ್ಯಾರ್ಥಿಯನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದು ಹಾಸ್ಟೆಲ್‌ ವಾರ್ಡನ್‌ ಮತ್ತು ಇತರ ಏಳು ವಿದ್ಯಾರ್ಥಿಗಲ ಮೇಲೆ ಹಲ್ಲೆ ಮಾಡಿ ಓಡಿಹೋಗಿದ್ದ ಒಂಬತ್ತನೇ ತರಗತಿ ವಿದ್ಯಾರ್ಥಿಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಈ ಅಪ್ರಾಪ್ತ ವಯಸ್ಸಿನವನನ್ನು ಬಳ್ಳಾರಿ ನಗರದ ಶ್ರೀರಾಮಪುರ ಕಾಲೊನಿಯ ರೂಪನಗುಡಿಯಲ್ಲಿ ಸೋಮವಾರ ರಾತ್ರಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ

ಸಹಪಾಠಿಯನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಸಾಯಿಸಿದ ವಿದ್ಯಾರ್ಥಿ ಸೆರೆ Read More »

9ನೇ ತರಗತಿ ವಿದ್ಯಾರ್ಥಿಯ ಕ್ರೌರ್ಯ : ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿ ಸಹಪಾಠಿಯ ಕೊಲೆ

ಏಳು ವಿದ್ಯಾರ್ಥಿಗಳು, ವಾರ್ಡನ್‌ಗೆ ಗಂಭೀರ ಗಾಯ ; ರಾಜ್ಯವನ್ನು ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆ ಬಳ್ಳಾರಿ: ಒಂಬತ್ತನೇ ತರಗತಿ ವಿದ್ಯಾರ್ಥಿ ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿ ತನ್ನ ಸಹಪಾಠಿಯನ್ನು ಕೊಂದು, ಇತರ ಏಳು ವಿದ್ಯಾರ್ಥಿಗಳು ಮತ್ತು ಹಾಸ್ಟೆಲ್‌ ವಾರ್ಡನ್‌ನನ್ನು ಗಾಯಗೊಳಿಸಿದ ಬೆಚ್ಚಿಬೀಳಿಸುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ನಗರದ ಹೊರವಲಯದ ಖಾಸಗಿ ಗುರುಕುಲ ಶಾಲೆಯ ಹಾಸ್ಟೆಲ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಕಬ್ಬಿಣದ ರಾಡ್‌ನಿಂದ ಬಲವಾದ ಪೆಟ್ಟು ಬಿದ್ದು ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಹಾಸ್ಟೆಲ್ ವಾರ್ಡನ್ ಮೇಲೆಯೂ ಬಾಲಕ ಹಲ್ಲೆ

9ನೇ ತರಗತಿ ವಿದ್ಯಾರ್ಥಿಯ ಕ್ರೌರ್ಯ : ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿ ಸಹಪಾಠಿಯ ಕೊಲೆ Read More »

ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಸೆರೆ

ಪೊಲೀಸರಿಂದ ತಪ್ಪಿಸಿಕೊಳ್ಳಲು ಮತಾಂತರವಾಗಿದ್ದ ಕಿಲಾಡಿ ಮಂಗಳೂರು: ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಕೊಲೆ ಪ್ರಕರಣವೊಂದರ ಆರೋಪಿ, ಕುಖ್ಯಾತ ರೌಡಿಶೀಟರ್‌ನ ಸಹಚರನನ್ನು ಮಂಗಳೂರು ನಗರ ಅಪರಾಧ ಪತ್ತೆ ದಳ ಪೊಲೀಸರು ಬಂಧಿಸಿ ಮುಂದಿನ ತನಿಖೆಗಾಗಿ ಸುರತ್ಕಲ್ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತನನ್ನು ಬಳ್ಳಾರಿ ಮೂಲದ ಸೂಫೀಯಾನ್ ಹುಸೇನ್ ಅಲಿಯಾಸ್ ಕೊಟ್ರೇಶಿ (31) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಶ್ಯಾಮ ಪುರದ ಬೇಕರಿ ಸಮೀಪ ವಾಸವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಸೂಫೀಯಾನ್ ಕಳೆದ ಹಲವು ವರ್ಷಗಳಿಂದ ಕಲಬುರಗಿ, ಬಳ್ಳಾರಿ, ಮುಂಬೈ ಮತ್ತು

ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಸೆರೆ Read More »

ಗುಡ್ಡದ ಮೇಲಿಂದ ಹಾರಿ ಯುವಕ ಆತ್ಮಹತ್ಯೆ

ಯಲ್ಲಾಪುರ: ಜೇನುಕಲ್ಲು ಗುಡ್ಡದ ಮೇಲಿಂದ ಹಾರಿ ಧಾರವಾಡದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತನನ್ನು ಹೊಸಯಲ್ಲಾಪುರದ ನಿವಾಸಿ ಶ್ರೀನಿಧಿ ಕಡಕೋಳ(23) ಎಂದು ಗುರುತಿಸಲಾಗಿದೆ. ಶ್ರೀನಿಧಿ ಅವರು ತಾವು ಸ್ಕೂಟಿಯಲ್ಲಿ ಗೋಕರ್ಣಕ್ಕೆ ಹೋಗುವುದಾಗಿ ಹೇಳಿ ಬಂದಿದ್ದರು. ಈ ಸಂಬಂಧ ಮೃತರ ತಂದೆ ಕೃಷ್ಣ ಕಡಕೋಳ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ನಮ್ಮ ಮಗ ಯಾವುದೋ ವಿಚಾರವನ್ನು ಗಂಭೀರವಾಗಿ ಮನಸ್ಸಿಗೆ ಹಚ್ಚಿಕೊಂಡಿದ್ದ. ಅವನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರಲ್ಲಿ ನಮಗೆ ಯಾವ ಸಂಶಯ ಸಹ ಇಲ್ಲ ಎಂದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ

ಗುಡ್ಡದ ಮೇಲಿಂದ ಹಾರಿ ಯುವಕ ಆತ್ಮಹತ್ಯೆ Read More »

ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ: ಆರೋಪಿಗಳು ಅಂದರ್

ಬೆಂಗಳೂರು: ಕಾಲು ತಾಗಿತು ಎಂಬ ವಿಷಯಕ್ಕೆ ಆರಂಭವಾದ ಕಲಹ ಕೊಲೆಯಲ್ಲಿ ಅಂತ್ಯವಾದ ಘಟನೆ ಶಿವನಹಳ್ಳಿಯಲ್ಲಿ ‌ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಶಶಿಕುಮಾರ್ ಎಂದು ತಿಳಿದು ಬಂದಿದೆ. ಆರೋಪಿಗಳನ್ನು ಮಂಜುನಾಥ ಮತ್ತು ಭಾಗ್ಯರಾಜ್ ಎಂದು ಗುರುತಿಸಲಾಗಿದೆ. ಶಿವನಹಳ್ಳಿಯ ಹೊಟೇಲ್ ಒಂದರಲ್ಲಿ ಶಶಿಕುಮಾರ್ ತಿಂಡಿ ತಿನ್ನುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಮಂಜುನಾಥನ ಕಾಲನ್ನು ಶಶಿಕುಮಾರ್ ತುಳಿದಿದ್ದಾರೆ. ಈ ಕ್ಷುಲ್ಲಕ ವಿಷಯಕ್ಕೆ ಜಗಳ ಆರಂಭವಾಗಿದೆ. ಇದೇ ಸಮಯದಲ್ಲಿ ಮಂಜುನಾಥ ತನ್ನ ಸಹೋದರ ಭಾಗ್ಯರಾಜ್‌ನನ್ನು ‌ಸ್ಥಳಕ್ಕೆ ಕರೆಸಿಕೊಂಡಿದ್ದಾನೆ. ಜಗಳ ತಾರಕಕ್ಕೇರಿ ಭಾಗ್ಯ ರಾಜ್ ಶಶಿಕುಮಾರ್

ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ: ಆರೋಪಿಗಳು ಅಂದರ್ Read More »

ಫೋನ್ ರಿಪೇರಿ ಮಾಡಿಸಿ ಕೊಡಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಯುವತಿ

ಕಾಸರಗೋಡು: ಮೊಬೈಲ್ ಡಿಸ್ಪ್ಲೇ ರಿಪೇರಿ ಮಾಡಿಸಿಕೊಟ್ಟಿಲ್ಲ ‌ಎನ್ನುವ ಕ್ಷುಲ್ಲಕ ಕಾರಣಕ್ಕೆ ಯುವತಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಕಳತ್ತೂರಿನ ಕಿದೂರು ಎಂಬಲ್ಲಿ ‌ನಡೆದಿದೆ. ಮೃತಳನ್ನು ಎಂ.ಡಿ.‌ ಪೂಜಾ(17) ಎಂದು ಗುರುತಿಸಲಾಗಿದೆ. ಪೂಜಾ ಮಂಗಳೂರಿನ ಕಾಲೇಜೊಂದರಲ್ಲಿ ಪಿಯುಸಿ ಓದುತ್ತಿದ್ದಳು. ಅನಾರೋಗ್ಯದ ಕಾರಣಕ್ಕೆ ಆಕೆಯ ಶಿಕ್ಷಣ ಅರ್ಧಕ್ಕೆ ನಿಂತಿತ್ತು. ಅದನ್ನು ಮುಂದಿನ ವರ್ಷದಿಂದ ಮತ್ತೆ ಮುಂದುವರೆಸುವ ಸಿದ್ಧತೆಯಲ್ಲಿದ್ದಳು. ಕೆಲ ದಿನಗಳ ಹಿಂದೆ ಪೂಜಾಳ ಫೋನ್ ಡಿಸ್ಪ್ಲೇ ಹಾಳಾಗಿದ್ದು, ಅದನ್ನು ರಿಪೇರಿ ಮಾಡಿಸಿ ಕೊಡುವಂತೆ ಮನೆಯವರಲ್ಲಿ ಹೇಳುತ್ತಿದ್ದಳು. ಇಲ್ಲವಾದಲ್ಲಿ

ಫೋನ್ ರಿಪೇರಿ ಮಾಡಿಸಿ ಕೊಡಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಯುವತಿ Read More »

ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ : ಅಂಚೆ ಇಲಾಖೆ ವಿರುದ್ಧ ಕೇಸ್‌

ನೇತ್ರಾವತಿ ನದಿ ತೀರದಲ್ಲಿ ಕಂಡುಬಂದಿದ್ದ ರಾಶಿ ರಾಶಿ ಆಧಾರ್‌ ಕಾರ್ಡ್‌ ಬಂಟ್ವಾಳ : ಎರಡು ದಿನಗಳ ಹಿಂದೆ ಫರಂಗಿಪೇಟೆ ಸಮೀಪ ನೇತ್ರಾವತಿ ನದಿ ದಡದಲ್ಲಿ ಆಧಾರ್‌ ಕಾರ್ಡ್‌ ರಾಶಿ ಪತ್ತೆಯಾದ ಘಟನೆಗೆ ಸಂಬಂಧಿಸಿ ಫರಂಗಿಪೇಟೆ ಅಂಚೆ ಇಲಾಖೆ ವಿರುದ್ಧ ಕೇಸ್‌ ದಾಖಲಿಸಲಾಗಿದೆ. ಪುದು ಗ್ರಾಮದ ಸುಜೀರ್ ಎಂಬಲ್ಲಿ ನೇತ್ರಾವತಿ ನದಿ ದಡದಲ್ಲಿ ಮಾ.3ರಂದು ಸಮಯ ಸಂಜೆ ಸ್ಥಳೀಯ ನಿವಾಸಿಗಳ 2013ರಿಂದ 2023ರವರೇಗಿನ ಅಂದಾಜು 500 ಮೂಲ ಆಧಾರ್ ಕಾರ್ಡ್‌ಗಳು ಪತ್ತೆಯಾಗಿದ್ದವು. ಆಧಾರ್ ಕಾರ್ಡ್ ಪ್ರತಿಗಳಲ್ಲಿ ಫರಂಗಿಪೇಟೆಯ ಪೋಸ್ಟ್

ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ : ಅಂಚೆ ಇಲಾಖೆ ವಿರುದ್ಧ ಕೇಸ್‌ Read More »

ನಾಯಿ ಮೂತ್ರ ವಿಸರ್ಜಿಸಿದ್ದಕ್ಕೆ ಗಲಾಟೆ: ದೂರು ದಾಖಲು

ಬೆಂಗಳೂರು: ನಾಯಿ ಮೂತ್ರ ವಿಸರ್ಜನೆ ಮಾಡಿದ ವಿಷಯಕ್ಕೆ ಹಿರಿಯ ನಾಗರಿಕರು ಮತ್ತು ಕಿರಿಯರ ನಡುವೆ ನೂಕಾಟ ತಳ್ಳಾಟ ನಡೆದ ಘಟನೆ ವರ್ತೂರಿನ ಬ್ರಿಗೇಡ್ ಯುಟೋಪಿಯಾ ಅಪಾರ್ಟ್‌ಮೆಂಟ್‌ನಲ್ಲಿ ‌ನಡೆದಿದೆ. ಅಪಾರ್ಟ್‌ಮೆಂಟಿನಲ್ಲಿ ಹಿರಿಯರಿಗೆಂದೇ ‌ಮೀಸಲಾದ ಪ್ರದೇಶದಲ್ಲಿ ತರುಣ್ ಅರೋರಾ ಎಂಬ ಯುವಕ ನಾಯಿಯನ್ನು ವಾಕಿಂಗ್‌ಗೆ ಕರೆ ತಂದಿದ್ದಾನೆ. ಈ ವೇಳೆ ನಾಯಿ ಮೂತ್ರ ವಿಸರ್ಜನೆ ಮಾಡಿದೆ. ಇದನ್ನು ನೋಡಿದ ಹಿರಿಯರು ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಹಿರಿಯರು ಮತ್ತು ತರುಣ್ ನಡುವೆ ನೂಕಾಟ, ತಳ್ಳಾಟ, ಹೊಡೆದಾಟ ‌ನಡೆದಿದೆ. ಈ

ನಾಯಿ ಮೂತ್ರ ವಿಸರ್ಜಿಸಿದ್ದಕ್ಕೆ ಗಲಾಟೆ: ದೂರು ದಾಖಲು Read More »

error: Content is protected !!
Scroll to Top