ಅಪರಾಧ

ಷೇರು ಮಾರ್ಕೆಟಿಂಗ್ ಹೂಡಿಕೆಯ ನೆಪದಲ್ಲಿ 85.68 ಲ.ರೂ. ಮೋಸ

ಮಂಗಳೂರು : ಷೇರು ಮಾರ್ಕೆಟಿಂಗ್ ಹೂಡಿಕೆಯ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ ಆನ್‌ಲೈನ್ ಮೂಲಕ ಬರೋಬ್ಬರಿ 85,68,387 ರೂ. ವಂಚನೆ ಮಾಡಿರುವ ಪ್ರಕರಣವೊಂದು ಮಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಈ ಕುರಿತು ಸೆನ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದ, ಪ್ರಸ್ತುತ ನಿರುದ್ಯೋಗಿಯಾಗಿರುವ ವ್ಯಕ್ತಿ ಮೋಸ ಹೋಗಿದ್ದಾರೆ. ಇನ್‌ಸ್ಟಾಗ್ರಾಂ ನೋಡುತ್ತಿರುವಾಗ ಷೇರು ಮಾರುಕಟ್ಟೆ ಆನ್‌ಲೈನ್ ಟ್ರೇಡಿಂಗ್ ಕ್ಲಾಸ್‌ಗೆ ಲಿಂಕ್ ಮೂಲಕ ಸೇರ್ಪಡೆಗೊಂಡೆ. ಅ.31ರಂದು ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ತನ್ನ ಮೊಬೈಲ್ ನಂಬರ್ ಸೇರ್ಪಡೆಯಾಗಿದೆ. ಬಳಿಕ ಗ್ರೂಪ್‌ನಲ್ಲಿದ್ದ ಕಾವ್ಯ ಎಂಬಾಕೆ ಅಸಿಸ್ಟೆಂಟ್ ಆಗಿ […]

ಷೇರು ಮಾರ್ಕೆಟಿಂಗ್ ಹೂಡಿಕೆಯ ನೆಪದಲ್ಲಿ 85.68 ಲ.ರೂ. ಮೋಸ Read More »

ಪತಿಯನ್ನು ಕೊಂದರೂ ಪತ್ನಿ ಅಪರಾಧಿಯಲ್ಲ!

ಕೊಲೆ ಪ್ರಕರಣದಲ್ಲಿ ಮಹಿಳೆಯನ್ನು ಖುಲಾಸೆಗೊಳಿಸಿದ ನ್ಯಾಯಾಲಯ ಮಂಗಳೂರು : ಪತಿಯನ್ನು ಪತ್ನಿಯೇ ಕೊಂದಿರುವುದು ಸಾಬೀತಾಗಿದ್ದರೂ ನ್ಯಾಯಾಲಯ ಪತ್ನಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ. ಹೀಗೊಂದು ಅಪರೂಪದ ತೀರ್ಪು ನೀಡಿರುವುದು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ. ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ ನಡೆದ ಪತಿ ಹತ್ಯೆ ಪ್ರಕರಣದಲ್ಲಿ ಈ ಅಪರೂಪದ ನ್ಯಾಯಾಂಗ ನಿರ್ಣಯ ಹೊರಬಿದ್ದಿದೆ. ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮೋಹನ ಜೆ.ಎಸ್. ಅವರು, ಆರೋಪಿಯಾದ ಎಲಿಯಮ್ಮ ಎಂಬವರು ಗಂಡನನ್ನು ಕೊಂದಿರುವುದು ಸಾಬೀತಾದರೂ,

ಪತಿಯನ್ನು ಕೊಂದರೂ ಪತ್ನಿ ಅಪರಾಧಿಯಲ್ಲ! Read More »

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್‌ ಮೂಲಕ 80 ಸಾವಿರ ರೂ. ಎಗರಿಸಿದ ಪಾಪಿಗಳು

ಸಹಾಯ ಮಾಡಲೆಂದು ಬಂದು ಹಣ ವರ್ಗಾಯಿಸಿ ಪರಾರಿಯಾಗಿದ್ದ ಇಬ್ಬರ ಸೆರೆ ಮೈಸೂರು: ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಗೆ ಸಹಾಯ ಮಾಡುವ ನೆಪದಲ್ಲಿ ಬಂದು ಅವರ ಮೊಬೈಲ್‌ನ ಯುಪಿಐ ಬಳಸಿ 80 ಸಾವಿರ ರೂಪಾಯಿ ಎಗರಿಸಿದ ಅಮಾನವೀಯ ಘಟನೆ ಮೈಸೂರಿನಲ್ಲಿ ಸಂಭವಿಸಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಮೇಶ್ ಮತ್ತು ಮನು ಎಂದು ಗುರುತಿಸಲಾಗಿದೆ. ಮೈಸೂರು ತಾಲೂಕಿನ ಕಡಕೊಳದ ಬಳಿ ಡಿ.19ರಂದು ಗಣೇಶ್ ಎಂಬವರು ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿ ಮಧ್ಯರಾತ್ರಿ ಮನೆಗೆ ಬರುವಾಗ ಅಪಘಾತವಾಗಿತ್ತು. ಆಸ್ಪತ್ರೆಗೆ ಸೇರಿಸುವ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್‌ ಮೂಲಕ 80 ಸಾವಿರ ರೂ. ಎಗರಿಸಿದ ಪಾಪಿಗಳು Read More »

ರಾಜ್ಯವನ್ನು ಬೆಚ್ಚಿಬೀಳಿಸಿದ ಹುಬ್ಬಳ್ಳಿಯ ಮರ್ಯಾದಾ ಹತ್ಯೆ ಘಟನೆ

ತುಂಬು ಗರ್ಭಿಣಿ ಮಗಳನ್ನು ಗುದ್ದಲಿಯಿಂದ ಹೊಡೆದು ಕೊಂದ ತಂದೆ ಬೆಂಗಳೂರು : ಅನ್ಯ ಜಾತಿಯ ಯುವಕನನ್ನು ಮದುವೆಯಾದ ಮಗಳನ್ನು ತಂದೆಯೇ ಬರ್ಬರವಾಗಿ ಕೊಲೆ ಮಾಡಿರುವ ಮರ್ಯಾದಾ ಹತ್ಯೆ ಘಟನೆ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ನಡೆದಿದ್ದು, ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಇನಾಂವೀರಾಪುರ ಗ್ರಾಮದ ಮಾನ್ಯಾ (19) ಹತ್ಯೆಯಾದ ಯುವತಿ. ಈಕೆ ಅದೇ ಗ್ರಾಮದ ವಿವೇಕಾನಂದ ಎಂಬವನನ್ನು ಪ್ರೀತಿಸಿ ಮದುವೆಯಾಗಿದ್ದಳು. ಯುವಕ ಅನ್ಯಜಾತಿಯವನು ಎಂಬ ಕಾರಣಕ್ಕೆ ಆಕೆಯ ತಂದೆ ಪ್ರಕಾಶಗೌಡ ಮನೆಗೆ ನುಗ್ಗಿ, ಮಗಳು 7 ತಿಂಗಳ ಗರ್ಭಿಣಿ

ರಾಜ್ಯವನ್ನು ಬೆಚ್ಚಿಬೀಳಿಸಿದ ಹುಬ್ಬಳ್ಳಿಯ ಮರ್ಯಾದಾ ಹತ್ಯೆ ಘಟನೆ Read More »

ಹಾವು ಕಡಿತದಿಂದ ಮಹಿಳೆ ಸಾವು

ಬೆಳ್ತಂಗಡಿ: ಶಿಶಿಲ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಹಾವಿನ ಕಡಿತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಡಿ. 21ರಂದು ನಡೆದಿದೆ. ಇಲ್ಲಿನ ಗುಡ್ಡೆತೋಟ ನಿವಾಸಿ ಪ್ರೇಮ ( ವ. 55) ಮೃತ ಮಹಿಳೆ. ಮಧ್ಯಾಹ್ನದ ವೇಳೆ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಇವರಿಗೆ ನಾಗರಹಾವು ಕಡಿದಿದೆ. ಹಾವು ಕಡಿದ ತಕ್ಷಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆಶೌರ್ಯ ವಿಪತ್ತು ತಂಡದ ಸದಸ್ಯರ ಸಹಾಯದೊಂದೊಂದಿಗೆ ಕರೆದೋಯ್ಯಲಾಯಿತಾದರೂ ವಿಷ ವಿಪರೀತ ಅವರಿಸಿರುವ ಕಾರಣ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಹಾವು ಕಡಿತದಿಂದ ಮಹಿಳೆ ಸಾವು Read More »

ಕೇಪು ಕೋಳಿಅಂಕ ಅಖಾಡಕ್ಕೆ ಬಿಜೆಪಿ ಎಂಟ್ರಿ : ರಾಜಕೀಯ ಮೇಲಾಟ

ಮಾಜಿ ಶಾಸಕರ ಸಹಿತ 27 ಮಂದಿಯ ವಿರುದ್ಧ ಕೇಸ್‌ ದಾಖಲು ವಿಟ್ಲ: ಕೇಪು ಉಳ್ಳಾಲ್ತಿ ಕಜಂಬು ಉತ್ಸವದಂಗವಾಗಿ ನಡೆಯುವ ಕೋಳಿಅಂಕದ ವಿವಾದ ಈಗ ರಾಜಕೀಯ ಮೇಲಾಟವಾಗಿ ಬದಲಾಗಿದೆ. ಶನಿವಾರ ಶಾಸಕ ಅಶೋಕ್‌ ರೈಯವರು ತಾನೇ ಮುಂದೆ ನಿಂತು ಕೋಳಿಅಂಕ ಮಾಡಿಸಿದ ಬಳಿಕ ಭಾನುವಾರ ಬಿಜೆಪಿಯವರು ಕೋಳಿಅಂಕ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಕೇಪು ಗ್ರಾಮದ ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಭಾನುವಾರವೂ ಕೋಳಿಅಂಕ ನಡೆದಿದ್ದು, ಈ ಕೋಳಿಅಂಕಕ್ಕೆ ಬಿಜೆಪಿ ನಾಯಕರು ರಕ್ಷಣೆ ಕೊಟ್ಟಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ

ಕೇಪು ಕೋಳಿಅಂಕ ಅಖಾಡಕ್ಕೆ ಬಿಜೆಪಿ ಎಂಟ್ರಿ : ರಾಜಕೀಯ ಮೇಲಾಟ Read More »

ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಪೊಲೀಸ್‌ ವಶ

ಜೇನುಕೃಷಿ ಕಲಿಸುವ ನೆಪದಲ್ಲಿ ಮನೆಗೆ ಕರೆದೊಯ್ದು ಅತ್ಯಾಚಾರ ಉಪ್ಪಿನಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಫಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಬ್ದುಲ್ ಗಫೂರ್ ವಶವಾಗಿರುವ ಆರೋಪಿ. ಪ್ರಕರಣದ ದೂರುದಾರರಾದ ಬೆಳಗಾವಿ ಮೂಲದ ಮಹಿಳೆ ತನ್ನ ಗಂಡ ಹಾಗೂ ಅಪ್ರಾಪ್ತ ಪ್ರಾಯದ ಮಗಳೊಂದಿಗೆ ಕೆಲಸದ ನಿಮಿತ್ತ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದಾರೆ. ಆರೋಪಿ ಅಬ್ದುಲ್ ಗಫೂರ್ ಮಗಳಿಗೆ ಜೇನು ಕೃಷಿ ಕಲಿಸುತ್ತೇನೆಂದು ಹೇಳಿದ್ದು, ಅದರಂತೆ

ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಪೊಲೀಸ್‌ ವಶ Read More »

ಕೊಲ್ಲೂರು ದೇವಳದ ನಕಲಿ ವೆಬ್‌ಸೈಟ್‌ ಸೃಷ್ಟಿಸಿ ವಂಚಿಸಿದ ಆರೋಪಿ ಬಂಧನ

ಭಕ್ತಿರಿಗೆ ಲಕ್ಷಗಟ್ಟಲೆ ರೂ. ವಂಚಿಸಿದ್ದ ರಾಜಸ್ಥಾನದ ನಾಸೀರ್‌ ಹುಸೇನ್‌ ಉಡುಪಿ : ಕೊಲ್ಲೂರು ದೇಗುಲದ ನಕಲಿ ವೆಬ್‌ಸೈಟ್ ಸೃಷ್ಟಿಸಿ ಭಕ್ತರನ್ನು ವಂಚಿಸುತ್ತಿದ್ದ ರಾಜಸ್ಥಾನದ ನಾಸೀರ್ ಹುಸೇನ್ ಎಂಬಾತನನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ನಾಸಿರ್‌ ಹುಸೇನ್‌ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ, ರೂಮ್ ಬುಕ್ಕಿಂಗ್ ಹೆಸರಲ್ಲಿ ಭಕ್ತರಿಗೆ ಟೋಪಿ ಹಾಕುತ್ತಿದ್ದ. ​ದೇವಸ್ಥಾನದ ಅಧಿಕೃತ ವೆಬ್‌ಸೈಟ್‌ನಂತೆಯೇ ಕಾಣುವ ನಕಲಿ ಸೈಟ್ ಸೃಷ್ಟಿ ಮಾಡಿ ಭಕ್ತರಿಂದ ಆನ್‌ಲೈನ್‌ ಮೂಲಕ ಮುಂಗಡ ಹಣ ಪಡೆದು ನಕಲಿ

ಕೊಲ್ಲೂರು ದೇವಳದ ನಕಲಿ ವೆಬ್‌ಸೈಟ್‌ ಸೃಷ್ಟಿಸಿ ವಂಚಿಸಿದ ಆರೋಪಿ ಬಂಧನ Read More »

ಚಿನ್ನಯ್ಯನಿಗೆ ಗನ್‌ ಮ್ಯಾನ್‌ ಭದ್ರತೆ ನೀಡಲು ಜಯಂತ್‌ ಎಇಎಂಗೆ ಮನವಿ

ಚಿನ್ನಯ್ಯನ ಮೂಲಕ ದೊಡ್ಡಮಟ್ಟದಲ್ಲಿ ಪಿತೂರಿ ನಡೆಯುತ್ತಿದೆ ಎಂದು ದೂರು ಬೆಂಗಳೂರು: ಬುರುಡೆ ಗ್ಯಾಂಗ್‌ ವಿರುದ್ಧ ಚಿನ್ನಯ್ಯ ದೂರು ನೀಡಿದ ಬೆನ್ನಲ್ಲೇ ಚಿನ್ನಯ್ಯನಿಗೆ ಗನ್‌ಮ್ಯಾನ್‌ ರಕ್ಷಣೆ ನೀಡುವಂತೆ ಜಯಂತ್‌ ಟಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾನವಿ ಮಾಡಿದ್ದಾರೆ. ಚಿನ್ನಯ್ಯನನ್ನು ಬಳಸಿಕೊಂಡು ದೊಡ್ಡ ಪಿತೂರಿ ನಡೆಯತ್ತಿದೆ. ಹೀಗಾಗಿ ಚಿನ್ನಯ್ಯನಿಗೆ ಕೂಡಲೇ ಗನ್ ಮ್ಯಾನ್ ಒದಗಿಸಬೇಕು ಮತ್ತು ಆತನ ಕುಟುಂಬಕ್ಕೂ ಸೂಕ್ತ ಬಂದೋಬಸ್ತ್‌ ಕಲ್ಪಿಸಬೇಕೆಂದು ವಿಶೇಷ ತನಿಖಾ ತಂಡ ಸಲ್ಲಿಸಿದ್ದ ಪ್ರಾಥಮಿಕ ತನಿಖಾ ವರದಿಯಲ್ಲಿ ಆರನೇ ಆರೋಪಿಯಾಗಿರುವ ಜಯಂತ್‌ಗೆ ಮನವಿ ಮಾಡಿದ್ದಾರೆ. ಚಿನ್ನಯ್ಯ

ಚಿನ್ನಯ್ಯನಿಗೆ ಗನ್‌ ಮ್ಯಾನ್‌ ಭದ್ರತೆ ನೀಡಲು ಜಯಂತ್‌ ಎಇಎಂಗೆ ಮನವಿ Read More »

ಪೋಕ್ಸೊ ಪ್ರಕರಣ : ಸ್ವಾಮೀಜಿಗೆ 35 ವರ್ಷ ಜೈಲು

ಮಠಕ್ಕೆ ಬಂದಿದ್ದ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ ಸ್ವಾಮೀಜಿ ಬೆಳಗಾವಿ: ಮಠಕ್ಕೆ ಬಂದ ಅಪ್ರಾಪ್ತ ವಯಸ್ಸಿನ ಯುವತಿಯನ್ನು ಸ್ವಾಮೀಜಿ ತನ್ನ ಕಾರಿನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಪ್ರಕರಣ ಸಾಬೀತಾಗಿದ್ದು, ಅಪರಾಧಿಪಿಗೆ 35 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ಬೆಳಗಾವಿ ಪೋಕ್ಸೊ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ರಾಮಮಂದಿರ ಮಠದ ಹಠಯೋಗಿ ಲೋಕೇಶ್ವರ ಸ್ವಾಮೀಜಿ ಮೇ 13ರಂದು ಮಠಕ್ಕೆ ಬಂದಿದ್ದ ಅಪ್ರಾಪ್ತ ಯುವತಿಯನ್ನು ಪುಸಲಾಯಿಸಿ

ಪೋಕ್ಸೊ ಪ್ರಕರಣ : ಸ್ವಾಮೀಜಿಗೆ 35 ವರ್ಷ ಜೈಲು Read More »

error: Content is protected !!
Scroll to Top