ಅಪರಾಧ

80 ಲ.ರೂ. ಮೌಲ್ಯದ ವಿದೇಶಿ ಕರೆನ್ಸಿ ವಶ : ಇಬ್ಬರು ಮಹಿಳೆಯರ ಸಹಿತ ಮೂವರ ಸೆರೆ

ಮಂಗಳೂರು ವಿಮಾನ ನಿಲ್ದಾಣ ಮೂಲಕ ವಿದೇಶಿ ಕರೆನ್ಸಿ ಸಾಗಿಸಲು ಯತ್ನ ಮಂಗಳೂರು : ಸುಮಾರು 80 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ಬಜಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಸಾಗುತ್ತಿದ್ದ ವೇಳೆ ವಶಪಡಿಸಿಕೊಂಡು ಕೇರಳ ಮೂಲದ ಓರ್ವ ಪುರುಷ ಮತ್ತು ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ ಎಂದು ರೆವೆನ್ಯೂ ಇಂಟಲಿಜೆನ್ಸ್ ನಿರ್ದೇಶನಾಲಯ (ಡಿಆರ್‌ಐ) ಮಂಗಳೂರು ಘಟಕ ತಿಳಿಸಿದೆ. ಫೆ.27ರಂದು ವಿಮಾನ ನಿಲ್ದಾಣದ ನಿರ್ಗಮನ ಹಾಲ್‌ನಲ್ಲಿ ಒಬ್ಬ ಪುರುಷ ಮತ್ತು ಇಬ್ಬರು ಮಹಿಳಾ ಪ್ರಯಾಣಿಕರು ಅಬುಧಾಬಿಗೆ ಪ್ರಯಾಣಿಸಲು […]

80 ಲ.ರೂ. ಮೌಲ್ಯದ ವಿದೇಶಿ ಕರೆನ್ಸಿ ವಶ : ಇಬ್ಬರು ಮಹಿಳೆಯರ ಸಹಿತ ಮೂವರ ಸೆರೆ Read More »

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಖದೀಮರು ಪೊಲೀಸ್ ವಶಕ್ಕೆ

ಮಂಗಳೂರು: MDMA ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ವ್ಯಕ್ತಿಗಳನ್ನು ಸುರತ್ಕಲ್ ಠಾಣಾ ವ್ಯಾಪ್ತಿಯ ಮುಕ್ಕಾ ವೇಯಿಂಗ್ ಬ್ರಿಜ್ ಸಮೀಪ ಪೊಲೀಸರು ಬಂಧಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ ಸಮಯದಲ್ಲಿ ಅಕ್ಕಪಕ್ಕದಲ್ಲಿ ಎರಡು ಕಾರುಗಳು ನಿಂತಿರುವುದು ಕಂಡು ಬಂದಿದೆ. ಒಂದು ಕಾರಿನಲ್ಲಿ ಕಾವು ನಿವಾಸಿ ಜಕರಿಯಾ ಮತ್ತು ಇನ್ನೊಂದು ಕಾರಿನಲ್ಲಿ ಮಿಥುನ್ ಪೂಜಾರಿ ಎಂಬವರು ಇದ್ದರು. ಇವರಿಬ್ಬರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಈ ವೇಳೆ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಡ್ರಗ್ಸ್ ಮಾರಾಟ ಮಾಡಲು ಬಂದಿರುವುದು ತಿಳಿದು ಬಂದಿದೆ. ಆರೋಪಿಗಳನ್ನು ವಶಕ್ಕೆ

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಖದೀಮರು ಪೊಲೀಸ್ ವಶಕ್ಕೆ Read More »

ಗೋ ಹತ್ಯೆ, ಮಾಂಸ ಮಾರಾಟ: ಆರೋಪಿಯ ಮನೆ ಸೀಜ್

ಉಪ್ಪಿನಂಗಡಿ: ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಉಪ್ಪಿನಂಗಡಿಯ ಬಾರ್ಯದ ಹೊಸವಕ್ಲು ಎಂಬಲ್ಲಿನ ಮನೆಯೊಂದಕ್ಕೆ ದಾಳಿ ನಡೆಸಿ ಗೋಮಾಂಸ ವಶಕ್ಕೆ ಪಡೆದ ಪೊಲೀಸರು ಆರೋಪಿಯ ಮನೆಯನ್ನು ಜಪ್ತಿ ಮಾಡಿದ್ದಾರೆ. ಅಕ್ರಮ ಗೋ ಹತ್ಯೆ, ಮಾರಾಟದ ಖಚಿತ ಮಾಹಿತಿ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಇಬ್ಬರು ಆರೋಪಿಗಳು ಮನೆಯಿಂದ ಪರಾರಿಯಾಗಿದ್ದಾಗಿ ತಿಳಿದು ಬಂದಿದೆ. ಪರಿಶೀಲನೆ ವೇಳೆ ಗೋಮಾಂಸ‌ವನ್ನು ಪ್ಯಾಕೆಟ್‌ಗಳಾಗಿ ಮಾಡಿಟ್ಟಿರುವುದು ಪತ್ತೆಯಾಗಿದೆ. ಹಾಗೆಯೇ ಸಮೀಪದಲ್ಲೇ ಇದ್ದ ಆಟೋ ರಿಕ್ಷಾದಲ್ಲಿಯೂ

ಗೋ ಹತ್ಯೆ, ಮಾಂಸ ಮಾರಾಟ: ಆರೋಪಿಯ ಮನೆ ಸೀಜ್ Read More »

ಮಾಂಸಕ್ಕಾಗಿ ಅಕ್ರಮ ಗೋ ಸಾಗಾಟ: ವಾಹನ ಜಪ್ತಿ

ಬಂಟ್ವಾಳ: ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ರಮವಾಗಿ ಗೋ ಸಾಗಾಟ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿಯ ಮೇರೆಗೆ ಕಾರ್ಯಪ್ರವೃತ್ತರಾದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಹಿಂಸಾತ್ಮಕ ರೀತಿಯಲ್ಲಿ ಎರಡು ದನಗಳನ್ನು ತುಂಬಿದ್ದ ವಾಹನವೊಂದು ರಸ್ತೆ ಬದಿ ಪತ್ತೆಯಾಗಿದೆ‌. ವಾಹನದ ಚಾಲಕ ಮಂಡ್ಯ ಜಿಲ್ಲೆಯ ನವೀನ್ ಮತ್ತು ಚೇತನ್ ಎಂಬವರನ್ನು ವಿಚಾರಣೆಗೆ ಒಳಪಡಿಸಿದ್ದು, ಆ ಗೋವುಗಳನ್ನು ಚೆನ್ನರಾಯಪಟ್ಟಣದ ಶಂಕರ್ ಎಂಬಾತ ಸಾಲೆತ್ತೂರಿನ ಶಾಫಿಗೆ ಮಾರಾಟ

ಮಾಂಸಕ್ಕಾಗಿ ಅಕ್ರಮ ಗೋ ಸಾಗಾಟ: ವಾಹನ ಜಪ್ತಿ Read More »

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: 16 ಡ್ರಗ್ಸ್ ಪೆಡ್ಲರ್‌ಗಳು ಅಂದರ್

ಬೆಂಗಳೂರು: ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ 16 ಮಂದಿ ಮಾದಕ ವಸ್ತು ಮಾರಾಟಗಾರರನ್ನು ಬಂಧಿಸಲಾಗಿದೆ. ಬೆಂಗಳೂರಿನ ವಿವಿಧ ನಗರಗಳ ಪೊಲೀಸರು ಮತ್ತು ಸಿಸಿಬಿ ‌ನಡೆಸಿದ ಕಾರ್ಯಾಚರಣೆಯಲ್ಲಿ ಡ್ರಗ್ಸ್ ಪೆಡ್ಲರ್‌ಗಳು ಬಲೆಗೆ ಬಿದ್ದಿರುವುದಾಗಿದೆ. ಆರೋಪಿಗಳಲ್ಲಿ ವಿದೇಶಿಗರು, ಹೊರ ರಾಜ್ಯದವರು ಸೇರಿದಂತೆ ಎಂಟು ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರಿಂದ 5.24 ಕೋಟಿ ರೂ. ಗಳ ಮೌಲ್ಯದ, ಮೂರು ಸಾವಿರ ಎಂಡಿಎಂ, ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಹಾಗೆಯೇ ಖಚಿತ ಮಾಹಿತಿ ಪಡೆದು ಮೇರೆಗೆ ದಾಳಿ ನಡೆಸಿದ್ದಸಿಸಿಬಿ

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: 16 ಡ್ರಗ್ಸ್ ಪೆಡ್ಲರ್‌ಗಳು ಅಂದರ್ Read More »

ಕಳ್ಳತನಕ್ಕೆ ಸಂಬಂಧಿಸಿದ ಅನುಮನಿತ ಆರೋಪಿಯ ಮುಖಚಹರೆ ಪತ್ತೆ

ಬಂಟ್ವಾಳ: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಪ್ರಕರಣ ದಾಖಲಾದ ವಿಷಯಕ್ಕೆ ಸಂಬಂಧಿಸಿದ ಹಾಗೆ ಅನುಮಾನಾಸ್ಪದ ಆರೋಪಿಯ ಮುಖಚಹರೆ ಪತ್ತೆಯಾಗಿದೆ. ಈ ಹಿನ್ನೆಲೆ ಆತನ ಪತ್ತೆಗೆ ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಪ್ರಕರಣದ ತನಿಖಾ ವೇಳೆ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಅನುಮಾನಿತ ಆರೋಪಿಯ ಮುಖಚಹರೆ ಪತ್ತೆಯಾಗಿರುವುದಾಗಿದೆ. ಆ ವ್ಯಕ್ತಿಯ ಬಗ್ಗೆ ಯಾವುದೇ ರೀತಿಯ ಮಾಹಿತಿ ಇದ್ದಲ್ಲಿ ಅಥವಾ ಸುಳಿವು ಸಿಕ್ಕಲ್ಲಿ ಪೊಲೀಸರ ಗಮನಕ್ಕೆ ತರುವಂತೆ ಸೂಚಿಸಲಾಗಿದೆ. ಮಾಹಿತಿ ನೀಡುವವರು ಕೆಳಗಿನ ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು ಎಂದು

ಕಳ್ಳತನಕ್ಕೆ ಸಂಬಂಧಿಸಿದ ಅನುಮನಿತ ಆರೋಪಿಯ ಮುಖಚಹರೆ ಪತ್ತೆ Read More »

ಹಾಲು ಕಲಬೆರಕೆ ದಂಧೆ ನಡೆಸುತ್ತಿದ್ದ ಆರೋಪಿಗಳ ಬಂಧನ

ಕೋಲಾರ: ಹಾಲು ಕಲಬೆರಕೆ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಜಿಲ್ಲೆಗೆ ಹೊಂದಿಕೊಂಡಂತೆ ಇರುವ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ರಾಜ್ಯಗಳ‌ ಕೆಲವು ವ್ಯಕ್ತಿಗಳು ಮತ್ತು ಖಾಸಗಿ ಡೈರಿಗಳು ಹಾಲು ಕಲಬೆರಕೆ ಅಡ್ಡಾಗಳನ್ನು ನಿರ್ಮಾಣ ಮಾಡಿಕೊಂಡು ಜನರ ಜೀವದ ಜೊತೆಗೆ ಚೆಲ್ಲಾಟ ಆಡುತ್ತಿದ್ದರು. ಈ ವಿಷಯ ತಿಳಿದ ಡಿಸಿ ಒಂದೇ ಸಮಯಕ್ಕೆ ಸುಮಾರು 32 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಸುಮಾರು 42 ರಷ್ಟು ಹಾಲಿನ ಮಾದರಿ ಸಂಗ್ರಹ ಮಾಡಿದ್ದರು. ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಎಂಟು ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಹಾಲು ಕಲಬೆರಕೆ ದಂಧೆ ನಡೆಸುತ್ತಿದ್ದ ಆರೋಪಿಗಳ ಬಂಧನ Read More »

ಅಕ್ರಮ ಕೆಂಪು ಕಲ್ಲು ಸಾಗಾಟ: ಚಾಲಕರ ಸಮೇತ ಲಾರಿಗಳು ಪೊಲೀಸರ ವಶಕ್ಕೆ

ವಿಟ್ಲ: ಲೈಸನ್ಸ್ ಇಲ್ಲದೆ ಕೇರಳದಿಂದ ಕೆಂಪು ಕಲ್ಲುಗಳ ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೆರುವಾಯಿ ಮಾರ್ಗವಾಗಿ ಕೇರಳದಿಂದ ‌ಲಾರಿಗಳ ಮೂಲಕ ಕೆಂಪು ಕಲ್ಲುಗಳನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಬಂದಿತ್ತು. ಬಂಟ್ವಾಳ ಬೆರಿಪದವು ಪ್ರದೇಶದಲ್ಲಿ ಕಲ್ಲಿನ ಲೋಡ್ ತುಂಬಿದ್ದ ಲಾರಿಗಳನ್ನು ಪರಿಶೀಲನೆ ನಡೆಸಿ, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲಾರಿ ಚಾಲಕರಾದ ವಿಟ್ಲದ ಸಾಧಿಕ್ ಮತ್ತು ಮೊಹಮ್ಮದ್ ಅವರನ್ನು ವಿಚಾರಣೆ ನಡೆಸಲಾಗಿದ್ದು, ಕೇರಳದ ಧರ್ಮತ್ತಡ್ಕದಿಂದ ಕಲ್ಲುಗಳನ್ನು ತುಂಬಿ ವೇಣು ಎಂಬವರು

ಅಕ್ರಮ ಕೆಂಪು ಕಲ್ಲು ಸಾಗಾಟ: ಚಾಲಕರ ಸಮೇತ ಲಾರಿಗಳು ಪೊಲೀಸರ ವಶಕ್ಕೆ Read More »

ಎರಡು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಇಬ್ರಾಹಿಂ ಬಾತಿಸ್ ಪೊಲೀಸ್ ಬಲೆಗೆ

ವಿಟ್ಲ: ಪ್ರಕರಣವೊಂದಕ್ಕೆ ಸಂಬಂಧಿಸಿದ ಹಾಗೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಎರಡು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ವಿಮಾನ ನಿಲ್ದಾಣದಲ್ಲೇ ಬಂಧಿಸಿದ್ದಾರೆ. ಆರೋಪಿಯನ್ನು ಕನ್ಯಾನ ನಿವಾಸಿ ಇಬ್ರಾಹಿಂ ಬಾತಿಸ್ ಎಂದು ಗುರುತಿಸಲಾಗಿದೆ. ಐಪಿಸಿ ಕಲಂ 427, 504, 394, 341 ಹಾಗೂ 2(A) Prevention of Destruction and Loss of Property Act ದಾಖಲಾಗಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಈತ ವಿದೇಶದಿಂದ ಮರಳಿ ಬರುವಾಗ, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದ ಸಹಕಾರದೊಂದಿಗೆ ವಿಟ್ಲ ಪೊಲೀಸ್

ಎರಡು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಇಬ್ರಾಹಿಂ ಬಾತಿಸ್ ಪೊಲೀಸ್ ಬಲೆಗೆ Read More »

ಸ್ವಯಂ ಘೋಷಿತ ದೇವಮಾನವನ ‌ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಯಾದಗಿರಿ: ಸ್ವಯಂ ಘೋಷಿತ ದೇವ ಮಾನವ ಶಹಾಪುರದ ಮಲ್ಲಿಕಾರ್ಜುನ ಮುತ್ಯಾನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಮಲ್ಲಿಕಾರ್ಜುನ್ ಓರ್ವ ಬಾಲಕಿಯರ ಜೊತೆ ಅಸಂಬದ್ಧ ಎಂಬಂತೆ ನಡೆದುಕೊಳ್ಳುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ‌ಸಾಕಷ್ಟು ವೈರಲ್ ಆಗಿದೆ. ಈ ವಿಡಿಯೋ ತುಣುಕನ್ನು ಆಧಾರವಾಗಿಟ್ಟುಕೊಂಡು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ದೂರು ದಾಖಲು ಮಾಡಿಕೊಂಡಿದೆ. ಈ ವಿಡಿಯೋದ ತುಣುಕುಗಳನ್ನು ಪರಿಶೀಲನೆ ಮಾಡಿ, ಸೂಕ್ತ ಕ್ರಮದ ಬಗ್ಗೆ ಮರು ಟಪಾಲಿನಲ್ಲಿ ಮಾಹಿತಿ ಸಲ್ಲಿಸುವಂತೆ ಆಯೋಗ ಜಿಲ್ಲಾ ಪೋಲೀಸ್

ಸ್ವಯಂ ಘೋಷಿತ ದೇವಮಾನವನ ‌ವಿರುದ್ಧ ಪೋಕ್ಸೋ ಪ್ರಕರಣ ದಾಖಲು Read More »

error: Content is protected !!
Scroll to Top